Homeಮುಖಪುಟಕುಸ್ತಿಪಟುಗಳ ಪ್ರತಿಭಟನೆಗೆ ಬಿಜೆಪಿ ಸಂಸದೆಯರಾದ ಮೇನಕಾ ಗಾಂಧಿ, ಪ್ರೀತಮ್ ಮುಂಡೆ ಬೆಂಬಲ

ಕುಸ್ತಿಪಟುಗಳ ಪ್ರತಿಭಟನೆಗೆ ಬಿಜೆಪಿ ಸಂಸದೆಯರಾದ ಮೇನಕಾ ಗಾಂಧಿ, ಪ್ರೀತಮ್ ಮುಂಡೆ ಬೆಂಬಲ

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಒಂದು ತಿಂಗಳಿನಿಂದ ಕ್ರೀಡಾಪಟುಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಪ್ರತಿಭಟನೆಗೆ ಹರಿಯಾಣದ ಬಿಜೆಪಿ ಸಂಸದ ಬ್ರಿಜೇಂದ್ರ ಸಿಂಗ್ ಬೆಂಬಲ ವ್ಯಕ್ತಪಡಿಸಿದ ನಂತರ ಇದೀಗ ಮಹಾರಾಷ್ಟ್ರದ ಬಿಜೆಪಿ ನಾಯಕಿ ಪ್ರೀತಮ್ ಮುಂಡೆ ಹಾಗೂ ಬಿಜೆಪಿಯ ಹಿರಿಯ ಸಂಸದೆ ಮೇನಕಾ ಗಾಂಧಿ ಅವರು ಬೆಂಬಲ ನೀಡಿದ್ದಾರೆ.

ಬಿಜೆಪಿಯ ಮಹಿಳಾ ಸಂಸದರೂ ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಕುಸ್ತಿಪಟುಗಳಿಗೆ ಪರ ನಿಂತು ನ್ಯಾಯ ಕೇಳಿದ್ದಾರೆ. ಮಹಾರಾಷ್ಟ್ರದ ಬಿಜೆಪಿಯ ಲೋಕಸಭಾ ಸಂಸದೆ ಪ್ರೀತಮ್ ಮುಂಡೆ ಪ್ರತಿಭಟನಾ ನಿರತ ಕುಸ್ತಿಪಟುಗಳನ್ನು ಬೆಂಬಲಿಸಿದ್ದಾರೆ. ಇದಾದ ಒಂದು ದಿನದ ನಂತರ, ಪಕ್ಷದ ಹಿರಿಯ ಸಂಸದೆ ಮೇನಕಾ ಗಾಂಧಿ ಅವರು ಕುಸ್ತಿಪಟುಗಳಿಗೆ ನ್ಯಾಯ ಸಿಗಬೇಕೆಂದು ಒತ್ತಾಯಿಸಿದ್ದಾರೆ.

ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಹೋರಾಟದಲ್ಲಿ ಕುಸ್ತಿಪಟುಗಳಿಗೆ ನ್ಯಾಯ ಸಿಗಬೇಕೆಂದು ಅವರು ಒತ್ತಾಯಿಸಿದ್ದಾರೆ. ”ಅವರಿಗೆ ( ಕುಸ್ತಿಪಟುಗಳಿಗೆ ) ಕೊನೆಯಲ್ಲಿ ನ್ಯಾಯ ಸಿಗುತ್ತದೆ ಎಂಬುದು ನನಗೆ ಖಾತ್ರಿಯಿದೆ” ಎಂದು ಕಾಶ್ಮೀರದ ಶ್ರೀನಗರದಲ್ಲಿ ಮಾಧ್ಯಮಗಳಿಗೆ ಮನೇಕಾ ಗಾಂಧಿ ತಿಳಿಸಿದ್ದಾರೆ.

ಇನ್ನು ಈ ಬಗ್ಗೆ ಮಾತನಾಡಿರುವ ಸಂಸದೆ ಪ್ರೀತಮ್ ಮುಂಡೆ ಅವರು, ”ಮಹಿಳೆಯೊಬ್ಬರು ಈ ರೀತಿಯ ಗಂಭೀರ ದೂರು ನೀಡಿದಾಗ ಅದನ್ನು ನಿಸ್ಸಂದೇಹವಾಗಿ ನಿಜವೆಂದು ಪರಿಗಣಿಸಬೇಕು” ಎಂದು ಪ್ರೀತಮ್ ಮುಂಡೆ ಹೇಳಿದ್ದಾರೆ.

”ಯಾವುದೇ ಸರ್ಕಾರ ಅಥವಾ ಯಾವುದೇ ಪಕ್ಷವಾಗಿರಬಹುದು, ಈ ಮಟ್ಟದ ಚಳುವಳಿಯನ್ನು ಗಮನಿಸದೆ ಹೋದರೆ ಅದು ನ್ಯಾಯೋಚಿತವಲ್ಲ. ಇಂತಹ ಪ್ರತಿಭಟನೆಗಳು ನಡೆದಾಗ ಸರ್ಕಾರಗಳು ಗಮನಿಸದೆ ಇರಬಾರದು, ಅದರ ಬಗ್ಗೆ ಅಗತ್ಯ ಗಮನ ನೀಡಬೇಕು” ಎಂದು ಪ್ರೀತಮ್ ಮುಂಡೆ ಹೇಳಿದರು.

”ನಾನು ಈ ಸರ್ಕಾರದ ಭಾಗವಾಗಿದ್ದರೂ, ನಾವು ಕುಸ್ತಿಪಟುಗಳೊಂದಿಗೆ ಸಂವಹನ ನಡೆಸಬೇಕಾದ ರೀತಿಯಲ್ಲಿ ನಡೆದಿಲ್ಲ ಎಂಬುದನ್ನು ಒಪ್ಪಿಕೊಳ್ಳಬೇಕು” ಎಂದು ಪ್ರೀತಮ್ ಮುಂಡೆ ಹೇಳಿದರು.

ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಹೋರಾಟದಲ್ಲಿ ಕುಸ್ತಿಪಟುಗಳಿಗೆ ನ್ಯಾಯ ಸಿಗಬೇಕೆಂದು ಅವರು ಒತ್ತಾಯಿಸಿದ್ದಾರೆ. ‘ಅವರಿಗೆ ( ಕುಸ್ತಿಪಟುಗಳಿಗೆ ) ಕೊನೆಯಲ್ಲಿ ನ್ಯಾಯ ಸಿಗುತ್ತದೆ ಎಂಬುದು ನನಗೆ ಖಾತ್ರಿಯಿದೆ’ ಎಂದು ಕಾಶ್ಮೀರದ ಶ್ರೀನಗರದಲ್ಲಿ ಮಾಧ್ಯಮಗಳಿಗೆ ಮನೇಕಾ ಗಾಂಧಿ ತಿಳಿಸಿದ್ದಾರೆ.

ಇದನ್ನೂ ಓದಿ: ಬ್ರಿಜ್‌ಭೂಷಣ್ ಸಿಂಗ್ ವಿರುದ್ಧದ ಎಫ್‌ಐಆರ್‌ನಲ್ಲಿ ಕ್ರೀಡಾಪಟುಗಳು ಉಲ್ಲೇಖಿಸಿದ ಅಂಶಗಳು ಇಲ್ಲಿವೆ..

ಪ್ರೀತಮ್ ಮುಂಡೆಗಿಂತ ಮುಂಚಿತವಾಗಿ ಕ್ರೀಡಾಪಟುಗಳಿಗೆ ಹರಿಯಾಣದ ಬಿಜೆಪಿ ಸಂಸದ ಬ್ರಿಜೇಂದ್ರ ಸಿಂಗ್ ಅವರು ಬೆಂಬಲ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಕ್ರೀಡಾಪಟುಗಳು ಪ್ರತಿಭಟನೆಯ ಭಾಗವಾಗಿ ತಮ್ಮ ಪದಕಗಳನ್ನು ಹರಿದ್ವಾರದ ಗಂಗಾದಲ್ಲಿ ಎಸೆಯಲು ಹೋದಾಗ, ಇದು ‘ಸಂಪೂರ್ಣ ಹೃದಯವಿದ್ರಾವಕ’ ಎಂದು ಬ್ರಿಜೇಂದ್ರ ಸಿಂಗ್ ಕರೆದರು. ರೈತ ಸಂಘದ ನಾಯಕ ನರೇಶ್ ಟಿಕಾಯತ್ ಅವರು ಈ ವೇಳೆ ಕ್ರೀಡಾಪಟುಗಳನ್ನು ತಡೆದರು.

ಪ್ರೀತಮ್ ಮುಂಡೆ ಕುಸ್ತಿಪಟುಗಳ ಪ್ರತಿಭಟನೆಯ ಬಗ್ಗೆ ಪಕ್ಷದ ನಿಲುವಿನಿಂದ ಭಿನ್ನವಾಗಿದ್ದರೆ, ಅವರ ಸಹೋದರಿ ಪಂಕಜಾ ಮುಂಡೆ ಅವರು ಈ ಬಗ್ಗೆ ಪ್ರತಿಕ್ರಿಯಿಸಿ, ಪ್ರೀತಮ್ ಅವರು ಬಿಜೆಪಿಗೆ ಸೇರಿದವರು, ಬಿಜೆಪಿಯೇ ಅವರಿಗೆ ಸೇರಿಲ್ಲ ಎಂದು ಹೇಳಿದರು.

ಪಂಕಜಾ ಮತ್ತು ಪ್ರೀತಮ್ ಮುಂಡೆ ಅವರು, ಈ ಹಿಂದೆ 2014ರಲ್ಲಿ ಕಾರು ಅಪಘಾತದಲ್ಲಿ ನಿಧನರಾದ ಮಾಜಿ ಕೇಂದ್ರ ಸಚಿವ ಗೋಪಿನಾಥ್ ಮುಂಡೆ ಅವರ ಪುತ್ರಿಯರು. ಪ್ರೀತಮ್ ಮುಂಡೆಗೆ ಕೇಂದ್ರದಲ್ಲಿ ಮಂತ್ರಿಗಿರಿ ಸಿಗಲಿಲ್ಲ, ಏಕನಾಥ್ ಶಿಂಧೆ-ದೇವೇಂದ್ರ ಫಡ್ನವಿಸ್ ಸಂಪುಟದಲ್ಲಿ ಪಂಕಜಾ ಅವರನ್ನು ಕಡೆಗಣಿಸಲಾಯಿತು.

ಈ ವಿಚಾರವಾಗಿ ಸಾರ್ವಜನಿಕರು, ರೈತ ಮುಖಂಡರು ಹಾಗೂ ವಿರೋಧ ಪಕ್ಷಗಳ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನ್ಯಾಯ ಸಿಗುವವರೆಗೂ ಕುಸ್ತಿಪಟುಗಳ ಬೆಂಬಲಕ್ಕೆ ನಿಲ್ಲುವುದಾಗಿ ಹೇಳಿದ್ದಾರೆ. ಒಲಿಂಪಿಕ್ಸ್‌ ಮೆಡಲ್‌ಗಳನ್ನು ಗೆದ್ದಿರುವ ಕುಸ್ತಿಪಟುಗಳಿಗೆ ಈ ಸ್ಥಿತಿ ಬಂದಿರುವುದಕ್ಕೆ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ದೇಶದ ಅಗ್ರ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ಭಜರಂಗ್ ಪುನಿಯಾ ಮತ್ತು ವಿನೇಶ್ ಫೋಗಟ್ ತಮ್ಮ ಬೆಂಬಲಿಗರೊಂದಿಗೆ ಹರಿದ್ವಾರಕ್ಕೆ ತೆರಳಿದ್ದರು. ತಮ್ಮ ಪದಕಗಳನ್ನು ಗಂಗಾ ನದಿಗೆ ಎಸೆಯಲು ಹೋಗಿದ್ದರು. ಖಾಪ್‌ಗಳು ಮತ್ತು ರೈತ ಮುಖಂಡರು ಅದನ್ನು ತಡೆಯಲು ಯಶಸ್ವಿಯಾದರು. ಕೇಂದ್ರ ಸರ್ಕಾರಕ್ಕೆ ಐದು ದಿನಗಳ ಕಾಲ ಗಡುವು ನೀಡಿದರು. ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ದೆಹಲಿ ಪೊಲೀಸರು ಎರಡು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ. ಮೊದಲ ಎಫ್‌ಐಆರ್ ಅಪ್ರಾಪ್ತ ಕುಸ್ತಿಪಟುವಿನ ಆರೋಪಗಳಿಗೆ ಸಂಬಂಧಿಸಿದೆ ಇದೆ. ಇದು ಪೋಕ್ಸೊ ಕಾಯ್ದೆಯಡಿಯಲ್ಲಿ ದಾಖಲಾಗಿದೆ. ಎರಡನೆಯದು ಕುಸ್ತಿಪಟುಗಳ ಆರೋಪದ ಮೇಲೆ ದಾಖಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...