Homeಮುಖಪುಟಕುಸ್ತಿಪಟುಗಳ ಪ್ರತಿಭಟನೆಗೆ ಬಿಜೆಪಿ ಸಂಸದೆಯರಾದ ಮೇನಕಾ ಗಾಂಧಿ, ಪ್ರೀತಮ್ ಮುಂಡೆ ಬೆಂಬಲ

ಕುಸ್ತಿಪಟುಗಳ ಪ್ರತಿಭಟನೆಗೆ ಬಿಜೆಪಿ ಸಂಸದೆಯರಾದ ಮೇನಕಾ ಗಾಂಧಿ, ಪ್ರೀತಮ್ ಮುಂಡೆ ಬೆಂಬಲ

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಒಂದು ತಿಂಗಳಿನಿಂದ ಕ್ರೀಡಾಪಟುಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಪ್ರತಿಭಟನೆಗೆ ಹರಿಯಾಣದ ಬಿಜೆಪಿ ಸಂಸದ ಬ್ರಿಜೇಂದ್ರ ಸಿಂಗ್ ಬೆಂಬಲ ವ್ಯಕ್ತಪಡಿಸಿದ ನಂತರ ಇದೀಗ ಮಹಾರಾಷ್ಟ್ರದ ಬಿಜೆಪಿ ನಾಯಕಿ ಪ್ರೀತಮ್ ಮುಂಡೆ ಹಾಗೂ ಬಿಜೆಪಿಯ ಹಿರಿಯ ಸಂಸದೆ ಮೇನಕಾ ಗಾಂಧಿ ಅವರು ಬೆಂಬಲ ನೀಡಿದ್ದಾರೆ.

ಬಿಜೆಪಿಯ ಮಹಿಳಾ ಸಂಸದರೂ ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಕುಸ್ತಿಪಟುಗಳಿಗೆ ಪರ ನಿಂತು ನ್ಯಾಯ ಕೇಳಿದ್ದಾರೆ. ಮಹಾರಾಷ್ಟ್ರದ ಬಿಜೆಪಿಯ ಲೋಕಸಭಾ ಸಂಸದೆ ಪ್ರೀತಮ್ ಮುಂಡೆ ಪ್ರತಿಭಟನಾ ನಿರತ ಕುಸ್ತಿಪಟುಗಳನ್ನು ಬೆಂಬಲಿಸಿದ್ದಾರೆ. ಇದಾದ ಒಂದು ದಿನದ ನಂತರ, ಪಕ್ಷದ ಹಿರಿಯ ಸಂಸದೆ ಮೇನಕಾ ಗಾಂಧಿ ಅವರು ಕುಸ್ತಿಪಟುಗಳಿಗೆ ನ್ಯಾಯ ಸಿಗಬೇಕೆಂದು ಒತ್ತಾಯಿಸಿದ್ದಾರೆ.

ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಹೋರಾಟದಲ್ಲಿ ಕುಸ್ತಿಪಟುಗಳಿಗೆ ನ್ಯಾಯ ಸಿಗಬೇಕೆಂದು ಅವರು ಒತ್ತಾಯಿಸಿದ್ದಾರೆ. ”ಅವರಿಗೆ ( ಕುಸ್ತಿಪಟುಗಳಿಗೆ ) ಕೊನೆಯಲ್ಲಿ ನ್ಯಾಯ ಸಿಗುತ್ತದೆ ಎಂಬುದು ನನಗೆ ಖಾತ್ರಿಯಿದೆ” ಎಂದು ಕಾಶ್ಮೀರದ ಶ್ರೀನಗರದಲ್ಲಿ ಮಾಧ್ಯಮಗಳಿಗೆ ಮನೇಕಾ ಗಾಂಧಿ ತಿಳಿಸಿದ್ದಾರೆ.

ಇನ್ನು ಈ ಬಗ್ಗೆ ಮಾತನಾಡಿರುವ ಸಂಸದೆ ಪ್ರೀತಮ್ ಮುಂಡೆ ಅವರು, ”ಮಹಿಳೆಯೊಬ್ಬರು ಈ ರೀತಿಯ ಗಂಭೀರ ದೂರು ನೀಡಿದಾಗ ಅದನ್ನು ನಿಸ್ಸಂದೇಹವಾಗಿ ನಿಜವೆಂದು ಪರಿಗಣಿಸಬೇಕು” ಎಂದು ಪ್ರೀತಮ್ ಮುಂಡೆ ಹೇಳಿದ್ದಾರೆ.

”ಯಾವುದೇ ಸರ್ಕಾರ ಅಥವಾ ಯಾವುದೇ ಪಕ್ಷವಾಗಿರಬಹುದು, ಈ ಮಟ್ಟದ ಚಳುವಳಿಯನ್ನು ಗಮನಿಸದೆ ಹೋದರೆ ಅದು ನ್ಯಾಯೋಚಿತವಲ್ಲ. ಇಂತಹ ಪ್ರತಿಭಟನೆಗಳು ನಡೆದಾಗ ಸರ್ಕಾರಗಳು ಗಮನಿಸದೆ ಇರಬಾರದು, ಅದರ ಬಗ್ಗೆ ಅಗತ್ಯ ಗಮನ ನೀಡಬೇಕು” ಎಂದು ಪ್ರೀತಮ್ ಮುಂಡೆ ಹೇಳಿದರು.

”ನಾನು ಈ ಸರ್ಕಾರದ ಭಾಗವಾಗಿದ್ದರೂ, ನಾವು ಕುಸ್ತಿಪಟುಗಳೊಂದಿಗೆ ಸಂವಹನ ನಡೆಸಬೇಕಾದ ರೀತಿಯಲ್ಲಿ ನಡೆದಿಲ್ಲ ಎಂಬುದನ್ನು ಒಪ್ಪಿಕೊಳ್ಳಬೇಕು” ಎಂದು ಪ್ರೀತಮ್ ಮುಂಡೆ ಹೇಳಿದರು.

ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಹೋರಾಟದಲ್ಲಿ ಕುಸ್ತಿಪಟುಗಳಿಗೆ ನ್ಯಾಯ ಸಿಗಬೇಕೆಂದು ಅವರು ಒತ್ತಾಯಿಸಿದ್ದಾರೆ. ‘ಅವರಿಗೆ ( ಕುಸ್ತಿಪಟುಗಳಿಗೆ ) ಕೊನೆಯಲ್ಲಿ ನ್ಯಾಯ ಸಿಗುತ್ತದೆ ಎಂಬುದು ನನಗೆ ಖಾತ್ರಿಯಿದೆ’ ಎಂದು ಕಾಶ್ಮೀರದ ಶ್ರೀನಗರದಲ್ಲಿ ಮಾಧ್ಯಮಗಳಿಗೆ ಮನೇಕಾ ಗಾಂಧಿ ತಿಳಿಸಿದ್ದಾರೆ.

ಇದನ್ನೂ ಓದಿ: ಬ್ರಿಜ್‌ಭೂಷಣ್ ಸಿಂಗ್ ವಿರುದ್ಧದ ಎಫ್‌ಐಆರ್‌ನಲ್ಲಿ ಕ್ರೀಡಾಪಟುಗಳು ಉಲ್ಲೇಖಿಸಿದ ಅಂಶಗಳು ಇಲ್ಲಿವೆ..

ಪ್ರೀತಮ್ ಮುಂಡೆಗಿಂತ ಮುಂಚಿತವಾಗಿ ಕ್ರೀಡಾಪಟುಗಳಿಗೆ ಹರಿಯಾಣದ ಬಿಜೆಪಿ ಸಂಸದ ಬ್ರಿಜೇಂದ್ರ ಸಿಂಗ್ ಅವರು ಬೆಂಬಲ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಕ್ರೀಡಾಪಟುಗಳು ಪ್ರತಿಭಟನೆಯ ಭಾಗವಾಗಿ ತಮ್ಮ ಪದಕಗಳನ್ನು ಹರಿದ್ವಾರದ ಗಂಗಾದಲ್ಲಿ ಎಸೆಯಲು ಹೋದಾಗ, ಇದು ‘ಸಂಪೂರ್ಣ ಹೃದಯವಿದ್ರಾವಕ’ ಎಂದು ಬ್ರಿಜೇಂದ್ರ ಸಿಂಗ್ ಕರೆದರು. ರೈತ ಸಂಘದ ನಾಯಕ ನರೇಶ್ ಟಿಕಾಯತ್ ಅವರು ಈ ವೇಳೆ ಕ್ರೀಡಾಪಟುಗಳನ್ನು ತಡೆದರು.

ಪ್ರೀತಮ್ ಮುಂಡೆ ಕುಸ್ತಿಪಟುಗಳ ಪ್ರತಿಭಟನೆಯ ಬಗ್ಗೆ ಪಕ್ಷದ ನಿಲುವಿನಿಂದ ಭಿನ್ನವಾಗಿದ್ದರೆ, ಅವರ ಸಹೋದರಿ ಪಂಕಜಾ ಮುಂಡೆ ಅವರು ಈ ಬಗ್ಗೆ ಪ್ರತಿಕ್ರಿಯಿಸಿ, ಪ್ರೀತಮ್ ಅವರು ಬಿಜೆಪಿಗೆ ಸೇರಿದವರು, ಬಿಜೆಪಿಯೇ ಅವರಿಗೆ ಸೇರಿಲ್ಲ ಎಂದು ಹೇಳಿದರು.

ಪಂಕಜಾ ಮತ್ತು ಪ್ರೀತಮ್ ಮುಂಡೆ ಅವರು, ಈ ಹಿಂದೆ 2014ರಲ್ಲಿ ಕಾರು ಅಪಘಾತದಲ್ಲಿ ನಿಧನರಾದ ಮಾಜಿ ಕೇಂದ್ರ ಸಚಿವ ಗೋಪಿನಾಥ್ ಮುಂಡೆ ಅವರ ಪುತ್ರಿಯರು. ಪ್ರೀತಮ್ ಮುಂಡೆಗೆ ಕೇಂದ್ರದಲ್ಲಿ ಮಂತ್ರಿಗಿರಿ ಸಿಗಲಿಲ್ಲ, ಏಕನಾಥ್ ಶಿಂಧೆ-ದೇವೇಂದ್ರ ಫಡ್ನವಿಸ್ ಸಂಪುಟದಲ್ಲಿ ಪಂಕಜಾ ಅವರನ್ನು ಕಡೆಗಣಿಸಲಾಯಿತು.

ಈ ವಿಚಾರವಾಗಿ ಸಾರ್ವಜನಿಕರು, ರೈತ ಮುಖಂಡರು ಹಾಗೂ ವಿರೋಧ ಪಕ್ಷಗಳ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನ್ಯಾಯ ಸಿಗುವವರೆಗೂ ಕುಸ್ತಿಪಟುಗಳ ಬೆಂಬಲಕ್ಕೆ ನಿಲ್ಲುವುದಾಗಿ ಹೇಳಿದ್ದಾರೆ. ಒಲಿಂಪಿಕ್ಸ್‌ ಮೆಡಲ್‌ಗಳನ್ನು ಗೆದ್ದಿರುವ ಕುಸ್ತಿಪಟುಗಳಿಗೆ ಈ ಸ್ಥಿತಿ ಬಂದಿರುವುದಕ್ಕೆ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ದೇಶದ ಅಗ್ರ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ಭಜರಂಗ್ ಪುನಿಯಾ ಮತ್ತು ವಿನೇಶ್ ಫೋಗಟ್ ತಮ್ಮ ಬೆಂಬಲಿಗರೊಂದಿಗೆ ಹರಿದ್ವಾರಕ್ಕೆ ತೆರಳಿದ್ದರು. ತಮ್ಮ ಪದಕಗಳನ್ನು ಗಂಗಾ ನದಿಗೆ ಎಸೆಯಲು ಹೋಗಿದ್ದರು. ಖಾಪ್‌ಗಳು ಮತ್ತು ರೈತ ಮುಖಂಡರು ಅದನ್ನು ತಡೆಯಲು ಯಶಸ್ವಿಯಾದರು. ಕೇಂದ್ರ ಸರ್ಕಾರಕ್ಕೆ ಐದು ದಿನಗಳ ಕಾಲ ಗಡುವು ನೀಡಿದರು. ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ದೆಹಲಿ ಪೊಲೀಸರು ಎರಡು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ. ಮೊದಲ ಎಫ್‌ಐಆರ್ ಅಪ್ರಾಪ್ತ ಕುಸ್ತಿಪಟುವಿನ ಆರೋಪಗಳಿಗೆ ಸಂಬಂಧಿಸಿದೆ ಇದೆ. ಇದು ಪೋಕ್ಸೊ ಕಾಯ್ದೆಯಡಿಯಲ್ಲಿ ದಾಖಲಾಗಿದೆ. ಎರಡನೆಯದು ಕುಸ್ತಿಪಟುಗಳ ಆರೋಪದ ಮೇಲೆ ದಾಖಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...