Homeಮುಖಪುಟಕುಸ್ತಿಪಟುಗಳ ಪ್ರತಿಭಟನೆಗೆ ಬಿಜೆಪಿ ಸಂಸದೆಯರಾದ ಮೇನಕಾ ಗಾಂಧಿ, ಪ್ರೀತಮ್ ಮುಂಡೆ ಬೆಂಬಲ

ಕುಸ್ತಿಪಟುಗಳ ಪ್ರತಿಭಟನೆಗೆ ಬಿಜೆಪಿ ಸಂಸದೆಯರಾದ ಮೇನಕಾ ಗಾಂಧಿ, ಪ್ರೀತಮ್ ಮುಂಡೆ ಬೆಂಬಲ

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಒಂದು ತಿಂಗಳಿನಿಂದ ಕ್ರೀಡಾಪಟುಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಪ್ರತಿಭಟನೆಗೆ ಹರಿಯಾಣದ ಬಿಜೆಪಿ ಸಂಸದ ಬ್ರಿಜೇಂದ್ರ ಸಿಂಗ್ ಬೆಂಬಲ ವ್ಯಕ್ತಪಡಿಸಿದ ನಂತರ ಇದೀಗ ಮಹಾರಾಷ್ಟ್ರದ ಬಿಜೆಪಿ ನಾಯಕಿ ಪ್ರೀತಮ್ ಮುಂಡೆ ಹಾಗೂ ಬಿಜೆಪಿಯ ಹಿರಿಯ ಸಂಸದೆ ಮೇನಕಾ ಗಾಂಧಿ ಅವರು ಬೆಂಬಲ ನೀಡಿದ್ದಾರೆ.

ಬಿಜೆಪಿಯ ಮಹಿಳಾ ಸಂಸದರೂ ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಕುಸ್ತಿಪಟುಗಳಿಗೆ ಪರ ನಿಂತು ನ್ಯಾಯ ಕೇಳಿದ್ದಾರೆ. ಮಹಾರಾಷ್ಟ್ರದ ಬಿಜೆಪಿಯ ಲೋಕಸಭಾ ಸಂಸದೆ ಪ್ರೀತಮ್ ಮುಂಡೆ ಪ್ರತಿಭಟನಾ ನಿರತ ಕುಸ್ತಿಪಟುಗಳನ್ನು ಬೆಂಬಲಿಸಿದ್ದಾರೆ. ಇದಾದ ಒಂದು ದಿನದ ನಂತರ, ಪಕ್ಷದ ಹಿರಿಯ ಸಂಸದೆ ಮೇನಕಾ ಗಾಂಧಿ ಅವರು ಕುಸ್ತಿಪಟುಗಳಿಗೆ ನ್ಯಾಯ ಸಿಗಬೇಕೆಂದು ಒತ್ತಾಯಿಸಿದ್ದಾರೆ.

ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಹೋರಾಟದಲ್ಲಿ ಕುಸ್ತಿಪಟುಗಳಿಗೆ ನ್ಯಾಯ ಸಿಗಬೇಕೆಂದು ಅವರು ಒತ್ತಾಯಿಸಿದ್ದಾರೆ. ”ಅವರಿಗೆ ( ಕುಸ್ತಿಪಟುಗಳಿಗೆ ) ಕೊನೆಯಲ್ಲಿ ನ್ಯಾಯ ಸಿಗುತ್ತದೆ ಎಂಬುದು ನನಗೆ ಖಾತ್ರಿಯಿದೆ” ಎಂದು ಕಾಶ್ಮೀರದ ಶ್ರೀನಗರದಲ್ಲಿ ಮಾಧ್ಯಮಗಳಿಗೆ ಮನೇಕಾ ಗಾಂಧಿ ತಿಳಿಸಿದ್ದಾರೆ.

ಇನ್ನು ಈ ಬಗ್ಗೆ ಮಾತನಾಡಿರುವ ಸಂಸದೆ ಪ್ರೀತಮ್ ಮುಂಡೆ ಅವರು, ”ಮಹಿಳೆಯೊಬ್ಬರು ಈ ರೀತಿಯ ಗಂಭೀರ ದೂರು ನೀಡಿದಾಗ ಅದನ್ನು ನಿಸ್ಸಂದೇಹವಾಗಿ ನಿಜವೆಂದು ಪರಿಗಣಿಸಬೇಕು” ಎಂದು ಪ್ರೀತಮ್ ಮುಂಡೆ ಹೇಳಿದ್ದಾರೆ.

”ಯಾವುದೇ ಸರ್ಕಾರ ಅಥವಾ ಯಾವುದೇ ಪಕ್ಷವಾಗಿರಬಹುದು, ಈ ಮಟ್ಟದ ಚಳುವಳಿಯನ್ನು ಗಮನಿಸದೆ ಹೋದರೆ ಅದು ನ್ಯಾಯೋಚಿತವಲ್ಲ. ಇಂತಹ ಪ್ರತಿಭಟನೆಗಳು ನಡೆದಾಗ ಸರ್ಕಾರಗಳು ಗಮನಿಸದೆ ಇರಬಾರದು, ಅದರ ಬಗ್ಗೆ ಅಗತ್ಯ ಗಮನ ನೀಡಬೇಕು” ಎಂದು ಪ್ರೀತಮ್ ಮುಂಡೆ ಹೇಳಿದರು.

”ನಾನು ಈ ಸರ್ಕಾರದ ಭಾಗವಾಗಿದ್ದರೂ, ನಾವು ಕುಸ್ತಿಪಟುಗಳೊಂದಿಗೆ ಸಂವಹನ ನಡೆಸಬೇಕಾದ ರೀತಿಯಲ್ಲಿ ನಡೆದಿಲ್ಲ ಎಂಬುದನ್ನು ಒಪ್ಪಿಕೊಳ್ಳಬೇಕು” ಎಂದು ಪ್ರೀತಮ್ ಮುಂಡೆ ಹೇಳಿದರು.

ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಹೋರಾಟದಲ್ಲಿ ಕುಸ್ತಿಪಟುಗಳಿಗೆ ನ್ಯಾಯ ಸಿಗಬೇಕೆಂದು ಅವರು ಒತ್ತಾಯಿಸಿದ್ದಾರೆ. ‘ಅವರಿಗೆ ( ಕುಸ್ತಿಪಟುಗಳಿಗೆ ) ಕೊನೆಯಲ್ಲಿ ನ್ಯಾಯ ಸಿಗುತ್ತದೆ ಎಂಬುದು ನನಗೆ ಖಾತ್ರಿಯಿದೆ’ ಎಂದು ಕಾಶ್ಮೀರದ ಶ್ರೀನಗರದಲ್ಲಿ ಮಾಧ್ಯಮಗಳಿಗೆ ಮನೇಕಾ ಗಾಂಧಿ ತಿಳಿಸಿದ್ದಾರೆ.

ಇದನ್ನೂ ಓದಿ: ಬ್ರಿಜ್‌ಭೂಷಣ್ ಸಿಂಗ್ ವಿರುದ್ಧದ ಎಫ್‌ಐಆರ್‌ನಲ್ಲಿ ಕ್ರೀಡಾಪಟುಗಳು ಉಲ್ಲೇಖಿಸಿದ ಅಂಶಗಳು ಇಲ್ಲಿವೆ..

ಪ್ರೀತಮ್ ಮುಂಡೆಗಿಂತ ಮುಂಚಿತವಾಗಿ ಕ್ರೀಡಾಪಟುಗಳಿಗೆ ಹರಿಯಾಣದ ಬಿಜೆಪಿ ಸಂಸದ ಬ್ರಿಜೇಂದ್ರ ಸಿಂಗ್ ಅವರು ಬೆಂಬಲ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಕ್ರೀಡಾಪಟುಗಳು ಪ್ರತಿಭಟನೆಯ ಭಾಗವಾಗಿ ತಮ್ಮ ಪದಕಗಳನ್ನು ಹರಿದ್ವಾರದ ಗಂಗಾದಲ್ಲಿ ಎಸೆಯಲು ಹೋದಾಗ, ಇದು ‘ಸಂಪೂರ್ಣ ಹೃದಯವಿದ್ರಾವಕ’ ಎಂದು ಬ್ರಿಜೇಂದ್ರ ಸಿಂಗ್ ಕರೆದರು. ರೈತ ಸಂಘದ ನಾಯಕ ನರೇಶ್ ಟಿಕಾಯತ್ ಅವರು ಈ ವೇಳೆ ಕ್ರೀಡಾಪಟುಗಳನ್ನು ತಡೆದರು.

ಪ್ರೀತಮ್ ಮುಂಡೆ ಕುಸ್ತಿಪಟುಗಳ ಪ್ರತಿಭಟನೆಯ ಬಗ್ಗೆ ಪಕ್ಷದ ನಿಲುವಿನಿಂದ ಭಿನ್ನವಾಗಿದ್ದರೆ, ಅವರ ಸಹೋದರಿ ಪಂಕಜಾ ಮುಂಡೆ ಅವರು ಈ ಬಗ್ಗೆ ಪ್ರತಿಕ್ರಿಯಿಸಿ, ಪ್ರೀತಮ್ ಅವರು ಬಿಜೆಪಿಗೆ ಸೇರಿದವರು, ಬಿಜೆಪಿಯೇ ಅವರಿಗೆ ಸೇರಿಲ್ಲ ಎಂದು ಹೇಳಿದರು.

ಪಂಕಜಾ ಮತ್ತು ಪ್ರೀತಮ್ ಮುಂಡೆ ಅವರು, ಈ ಹಿಂದೆ 2014ರಲ್ಲಿ ಕಾರು ಅಪಘಾತದಲ್ಲಿ ನಿಧನರಾದ ಮಾಜಿ ಕೇಂದ್ರ ಸಚಿವ ಗೋಪಿನಾಥ್ ಮುಂಡೆ ಅವರ ಪುತ್ರಿಯರು. ಪ್ರೀತಮ್ ಮುಂಡೆಗೆ ಕೇಂದ್ರದಲ್ಲಿ ಮಂತ್ರಿಗಿರಿ ಸಿಗಲಿಲ್ಲ, ಏಕನಾಥ್ ಶಿಂಧೆ-ದೇವೇಂದ್ರ ಫಡ್ನವಿಸ್ ಸಂಪುಟದಲ್ಲಿ ಪಂಕಜಾ ಅವರನ್ನು ಕಡೆಗಣಿಸಲಾಯಿತು.

ಈ ವಿಚಾರವಾಗಿ ಸಾರ್ವಜನಿಕರು, ರೈತ ಮುಖಂಡರು ಹಾಗೂ ವಿರೋಧ ಪಕ್ಷಗಳ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನ್ಯಾಯ ಸಿಗುವವರೆಗೂ ಕುಸ್ತಿಪಟುಗಳ ಬೆಂಬಲಕ್ಕೆ ನಿಲ್ಲುವುದಾಗಿ ಹೇಳಿದ್ದಾರೆ. ಒಲಿಂಪಿಕ್ಸ್‌ ಮೆಡಲ್‌ಗಳನ್ನು ಗೆದ್ದಿರುವ ಕುಸ್ತಿಪಟುಗಳಿಗೆ ಈ ಸ್ಥಿತಿ ಬಂದಿರುವುದಕ್ಕೆ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ದೇಶದ ಅಗ್ರ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ಭಜರಂಗ್ ಪುನಿಯಾ ಮತ್ತು ವಿನೇಶ್ ಫೋಗಟ್ ತಮ್ಮ ಬೆಂಬಲಿಗರೊಂದಿಗೆ ಹರಿದ್ವಾರಕ್ಕೆ ತೆರಳಿದ್ದರು. ತಮ್ಮ ಪದಕಗಳನ್ನು ಗಂಗಾ ನದಿಗೆ ಎಸೆಯಲು ಹೋಗಿದ್ದರು. ಖಾಪ್‌ಗಳು ಮತ್ತು ರೈತ ಮುಖಂಡರು ಅದನ್ನು ತಡೆಯಲು ಯಶಸ್ವಿಯಾದರು. ಕೇಂದ್ರ ಸರ್ಕಾರಕ್ಕೆ ಐದು ದಿನಗಳ ಕಾಲ ಗಡುವು ನೀಡಿದರು. ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ದೆಹಲಿ ಪೊಲೀಸರು ಎರಡು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ. ಮೊದಲ ಎಫ್‌ಐಆರ್ ಅಪ್ರಾಪ್ತ ಕುಸ್ತಿಪಟುವಿನ ಆರೋಪಗಳಿಗೆ ಸಂಬಂಧಿಸಿದೆ ಇದೆ. ಇದು ಪೋಕ್ಸೊ ಕಾಯ್ದೆಯಡಿಯಲ್ಲಿ ದಾಖಲಾಗಿದೆ. ಎರಡನೆಯದು ಕುಸ್ತಿಪಟುಗಳ ಆರೋಪದ ಮೇಲೆ ದಾಖಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...