Homeಮುಖಪುಟಕುಸ್ತಿಪಟುಗಳ ಪ್ರತಿಭಟನೆಗೆ ಬಿಜೆಪಿ ಸಂಸದೆಯರಾದ ಮೇನಕಾ ಗಾಂಧಿ, ಪ್ರೀತಮ್ ಮುಂಡೆ ಬೆಂಬಲ

ಕುಸ್ತಿಪಟುಗಳ ಪ್ರತಿಭಟನೆಗೆ ಬಿಜೆಪಿ ಸಂಸದೆಯರಾದ ಮೇನಕಾ ಗಾಂಧಿ, ಪ್ರೀತಮ್ ಮುಂಡೆ ಬೆಂಬಲ

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಒಂದು ತಿಂಗಳಿನಿಂದ ಕ್ರೀಡಾಪಟುಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಪ್ರತಿಭಟನೆಗೆ ಹರಿಯಾಣದ ಬಿಜೆಪಿ ಸಂಸದ ಬ್ರಿಜೇಂದ್ರ ಸಿಂಗ್ ಬೆಂಬಲ ವ್ಯಕ್ತಪಡಿಸಿದ ನಂತರ ಇದೀಗ ಮಹಾರಾಷ್ಟ್ರದ ಬಿಜೆಪಿ ನಾಯಕಿ ಪ್ರೀತಮ್ ಮುಂಡೆ ಹಾಗೂ ಬಿಜೆಪಿಯ ಹಿರಿಯ ಸಂಸದೆ ಮೇನಕಾ ಗಾಂಧಿ ಅವರು ಬೆಂಬಲ ನೀಡಿದ್ದಾರೆ.

ಬಿಜೆಪಿಯ ಮಹಿಳಾ ಸಂಸದರೂ ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಕುಸ್ತಿಪಟುಗಳಿಗೆ ಪರ ನಿಂತು ನ್ಯಾಯ ಕೇಳಿದ್ದಾರೆ. ಮಹಾರಾಷ್ಟ್ರದ ಬಿಜೆಪಿಯ ಲೋಕಸಭಾ ಸಂಸದೆ ಪ್ರೀತಮ್ ಮುಂಡೆ ಪ್ರತಿಭಟನಾ ನಿರತ ಕುಸ್ತಿಪಟುಗಳನ್ನು ಬೆಂಬಲಿಸಿದ್ದಾರೆ. ಇದಾದ ಒಂದು ದಿನದ ನಂತರ, ಪಕ್ಷದ ಹಿರಿಯ ಸಂಸದೆ ಮೇನಕಾ ಗಾಂಧಿ ಅವರು ಕುಸ್ತಿಪಟುಗಳಿಗೆ ನ್ಯಾಯ ಸಿಗಬೇಕೆಂದು ಒತ್ತಾಯಿಸಿದ್ದಾರೆ.

ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಹೋರಾಟದಲ್ಲಿ ಕುಸ್ತಿಪಟುಗಳಿಗೆ ನ್ಯಾಯ ಸಿಗಬೇಕೆಂದು ಅವರು ಒತ್ತಾಯಿಸಿದ್ದಾರೆ. ”ಅವರಿಗೆ ( ಕುಸ್ತಿಪಟುಗಳಿಗೆ ) ಕೊನೆಯಲ್ಲಿ ನ್ಯಾಯ ಸಿಗುತ್ತದೆ ಎಂಬುದು ನನಗೆ ಖಾತ್ರಿಯಿದೆ” ಎಂದು ಕಾಶ್ಮೀರದ ಶ್ರೀನಗರದಲ್ಲಿ ಮಾಧ್ಯಮಗಳಿಗೆ ಮನೇಕಾ ಗಾಂಧಿ ತಿಳಿಸಿದ್ದಾರೆ.

ಇನ್ನು ಈ ಬಗ್ಗೆ ಮಾತನಾಡಿರುವ ಸಂಸದೆ ಪ್ರೀತಮ್ ಮುಂಡೆ ಅವರು, ”ಮಹಿಳೆಯೊಬ್ಬರು ಈ ರೀತಿಯ ಗಂಭೀರ ದೂರು ನೀಡಿದಾಗ ಅದನ್ನು ನಿಸ್ಸಂದೇಹವಾಗಿ ನಿಜವೆಂದು ಪರಿಗಣಿಸಬೇಕು” ಎಂದು ಪ್ರೀತಮ್ ಮುಂಡೆ ಹೇಳಿದ್ದಾರೆ.

”ಯಾವುದೇ ಸರ್ಕಾರ ಅಥವಾ ಯಾವುದೇ ಪಕ್ಷವಾಗಿರಬಹುದು, ಈ ಮಟ್ಟದ ಚಳುವಳಿಯನ್ನು ಗಮನಿಸದೆ ಹೋದರೆ ಅದು ನ್ಯಾಯೋಚಿತವಲ್ಲ. ಇಂತಹ ಪ್ರತಿಭಟನೆಗಳು ನಡೆದಾಗ ಸರ್ಕಾರಗಳು ಗಮನಿಸದೆ ಇರಬಾರದು, ಅದರ ಬಗ್ಗೆ ಅಗತ್ಯ ಗಮನ ನೀಡಬೇಕು” ಎಂದು ಪ್ರೀತಮ್ ಮುಂಡೆ ಹೇಳಿದರು.

”ನಾನು ಈ ಸರ್ಕಾರದ ಭಾಗವಾಗಿದ್ದರೂ, ನಾವು ಕುಸ್ತಿಪಟುಗಳೊಂದಿಗೆ ಸಂವಹನ ನಡೆಸಬೇಕಾದ ರೀತಿಯಲ್ಲಿ ನಡೆದಿಲ್ಲ ಎಂಬುದನ್ನು ಒಪ್ಪಿಕೊಳ್ಳಬೇಕು” ಎಂದು ಪ್ರೀತಮ್ ಮುಂಡೆ ಹೇಳಿದರು.

ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಹೋರಾಟದಲ್ಲಿ ಕುಸ್ತಿಪಟುಗಳಿಗೆ ನ್ಯಾಯ ಸಿಗಬೇಕೆಂದು ಅವರು ಒತ್ತಾಯಿಸಿದ್ದಾರೆ. ‘ಅವರಿಗೆ ( ಕುಸ್ತಿಪಟುಗಳಿಗೆ ) ಕೊನೆಯಲ್ಲಿ ನ್ಯಾಯ ಸಿಗುತ್ತದೆ ಎಂಬುದು ನನಗೆ ಖಾತ್ರಿಯಿದೆ’ ಎಂದು ಕಾಶ್ಮೀರದ ಶ್ರೀನಗರದಲ್ಲಿ ಮಾಧ್ಯಮಗಳಿಗೆ ಮನೇಕಾ ಗಾಂಧಿ ತಿಳಿಸಿದ್ದಾರೆ.

ಇದನ್ನೂ ಓದಿ: ಬ್ರಿಜ್‌ಭೂಷಣ್ ಸಿಂಗ್ ವಿರುದ್ಧದ ಎಫ್‌ಐಆರ್‌ನಲ್ಲಿ ಕ್ರೀಡಾಪಟುಗಳು ಉಲ್ಲೇಖಿಸಿದ ಅಂಶಗಳು ಇಲ್ಲಿವೆ..

ಪ್ರೀತಮ್ ಮುಂಡೆಗಿಂತ ಮುಂಚಿತವಾಗಿ ಕ್ರೀಡಾಪಟುಗಳಿಗೆ ಹರಿಯಾಣದ ಬಿಜೆಪಿ ಸಂಸದ ಬ್ರಿಜೇಂದ್ರ ಸಿಂಗ್ ಅವರು ಬೆಂಬಲ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಕ್ರೀಡಾಪಟುಗಳು ಪ್ರತಿಭಟನೆಯ ಭಾಗವಾಗಿ ತಮ್ಮ ಪದಕಗಳನ್ನು ಹರಿದ್ವಾರದ ಗಂಗಾದಲ್ಲಿ ಎಸೆಯಲು ಹೋದಾಗ, ಇದು ‘ಸಂಪೂರ್ಣ ಹೃದಯವಿದ್ರಾವಕ’ ಎಂದು ಬ್ರಿಜೇಂದ್ರ ಸಿಂಗ್ ಕರೆದರು. ರೈತ ಸಂಘದ ನಾಯಕ ನರೇಶ್ ಟಿಕಾಯತ್ ಅವರು ಈ ವೇಳೆ ಕ್ರೀಡಾಪಟುಗಳನ್ನು ತಡೆದರು.

ಪ್ರೀತಮ್ ಮುಂಡೆ ಕುಸ್ತಿಪಟುಗಳ ಪ್ರತಿಭಟನೆಯ ಬಗ್ಗೆ ಪಕ್ಷದ ನಿಲುವಿನಿಂದ ಭಿನ್ನವಾಗಿದ್ದರೆ, ಅವರ ಸಹೋದರಿ ಪಂಕಜಾ ಮುಂಡೆ ಅವರು ಈ ಬಗ್ಗೆ ಪ್ರತಿಕ್ರಿಯಿಸಿ, ಪ್ರೀತಮ್ ಅವರು ಬಿಜೆಪಿಗೆ ಸೇರಿದವರು, ಬಿಜೆಪಿಯೇ ಅವರಿಗೆ ಸೇರಿಲ್ಲ ಎಂದು ಹೇಳಿದರು.

ಪಂಕಜಾ ಮತ್ತು ಪ್ರೀತಮ್ ಮುಂಡೆ ಅವರು, ಈ ಹಿಂದೆ 2014ರಲ್ಲಿ ಕಾರು ಅಪಘಾತದಲ್ಲಿ ನಿಧನರಾದ ಮಾಜಿ ಕೇಂದ್ರ ಸಚಿವ ಗೋಪಿನಾಥ್ ಮುಂಡೆ ಅವರ ಪುತ್ರಿಯರು. ಪ್ರೀತಮ್ ಮುಂಡೆಗೆ ಕೇಂದ್ರದಲ್ಲಿ ಮಂತ್ರಿಗಿರಿ ಸಿಗಲಿಲ್ಲ, ಏಕನಾಥ್ ಶಿಂಧೆ-ದೇವೇಂದ್ರ ಫಡ್ನವಿಸ್ ಸಂಪುಟದಲ್ಲಿ ಪಂಕಜಾ ಅವರನ್ನು ಕಡೆಗಣಿಸಲಾಯಿತು.

ಈ ವಿಚಾರವಾಗಿ ಸಾರ್ವಜನಿಕರು, ರೈತ ಮುಖಂಡರು ಹಾಗೂ ವಿರೋಧ ಪಕ್ಷಗಳ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನ್ಯಾಯ ಸಿಗುವವರೆಗೂ ಕುಸ್ತಿಪಟುಗಳ ಬೆಂಬಲಕ್ಕೆ ನಿಲ್ಲುವುದಾಗಿ ಹೇಳಿದ್ದಾರೆ. ಒಲಿಂಪಿಕ್ಸ್‌ ಮೆಡಲ್‌ಗಳನ್ನು ಗೆದ್ದಿರುವ ಕುಸ್ತಿಪಟುಗಳಿಗೆ ಈ ಸ್ಥಿತಿ ಬಂದಿರುವುದಕ್ಕೆ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ದೇಶದ ಅಗ್ರ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ಭಜರಂಗ್ ಪುನಿಯಾ ಮತ್ತು ವಿನೇಶ್ ಫೋಗಟ್ ತಮ್ಮ ಬೆಂಬಲಿಗರೊಂದಿಗೆ ಹರಿದ್ವಾರಕ್ಕೆ ತೆರಳಿದ್ದರು. ತಮ್ಮ ಪದಕಗಳನ್ನು ಗಂಗಾ ನದಿಗೆ ಎಸೆಯಲು ಹೋಗಿದ್ದರು. ಖಾಪ್‌ಗಳು ಮತ್ತು ರೈತ ಮುಖಂಡರು ಅದನ್ನು ತಡೆಯಲು ಯಶಸ್ವಿಯಾದರು. ಕೇಂದ್ರ ಸರ್ಕಾರಕ್ಕೆ ಐದು ದಿನಗಳ ಕಾಲ ಗಡುವು ನೀಡಿದರು. ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ದೆಹಲಿ ಪೊಲೀಸರು ಎರಡು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ. ಮೊದಲ ಎಫ್‌ಐಆರ್ ಅಪ್ರಾಪ್ತ ಕುಸ್ತಿಪಟುವಿನ ಆರೋಪಗಳಿಗೆ ಸಂಬಂಧಿಸಿದೆ ಇದೆ. ಇದು ಪೋಕ್ಸೊ ಕಾಯ್ದೆಯಡಿಯಲ್ಲಿ ದಾಖಲಾಗಿದೆ. ಎರಡನೆಯದು ಕುಸ್ತಿಪಟುಗಳ ಆರೋಪದ ಮೇಲೆ ದಾಖಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...