Homeಮುಖಪುಟಸೋನಿಯಾ ಗಾಂಧಿ ವಿರುದ್ಧ ಹಕ್ಕುಚ್ಯುತಿ ನಿರ್ಣಯ ಮಂಡಿಸಿದ ಬಿಜೆಪಿ ಸಂಸದರು

ಸೋನಿಯಾ ಗಾಂಧಿ ವಿರುದ್ಧ ಹಕ್ಕುಚ್ಯುತಿ ನಿರ್ಣಯ ಮಂಡಿಸಿದ ಬಿಜೆಪಿ ಸಂಸದರು

- Advertisement -
- Advertisement -

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕುರಿತ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿಯವರ ವಿರುದ್ಧ ಸೋಮವಾರ ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದರು ಹಕ್ಕುಚ್ಯುತಿ ನಿರ್ಣಯ ಮಂಡಿಸಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಜನವರಿ 31 ರಂದು ಸಂಸತ್ತಿನ ಜಂಟಿ ಸದನವನ್ನು ಉದ್ದೇಶಿಸಿ ಮಾತನಾಡಿದ ಸಂದರ್ಭದಲ್ಲಿ ಅಧ್ಯಕ್ಷೆ ಮುಮು ಅವರನ್ನು “ಪೂರ್ ಲೇಡಿ” ಎಂಬ ಹೇಳಿಕೆಯು ವಿವಾದಕ್ಕೆ ಕಾರಣವಾಗಿದೆ.

“ಭಾರತದ ಗೌರವಾನ್ವಿತ ರಾಷ್ಟ್ರಪತಿಗಳ ವಿರುದ್ಧ ರಾಜ್ಯಸಭಾ ಸದಸ್ಯೆ ಶ್ರೀಮತಿ ಸೋನಿಯಾ ಗಾಂಧಿ ಇತ್ತೀಚೆಗೆ ಮಾಡಿದ ಕೆಲವು ಅಸಂಸದೀಯ, ಅವಹೇಳನಕಾರಿ ಹೇಳಿಕೆಗಳ ಬಗ್ಗೆ ನಾವು ತೀವ್ರ ನಿರಾಶೆಯಿಂದ ಇದನ್ನು ಬರೆಯುತ್ತಿದ್ದೇವೆ, ಇದು ಗಂಭೀರ ಪರಿಗಣನೆ ಮತ್ತು ಶಿಸ್ತು ಕ್ರಮಕ್ಕೆ ಅರ್ಹವಾಗಿದೆ” ಎಂದು ಸಂಸದರು ರಾಜ್ಯಸಭಾ ಅಧ್ಯಕ್ಷರಿಗೆ ಬರೆದಿದ್ದಾರೆ.

ಈ ಹೇಳಿಕೆಯು, “ಸೋನಿಯಾ ಗಾಂಧಿಯವರ ಬುಡಕಟ್ಟು ವಿರೋಧಿ ಮನಸ್ಥಿತಿಯ ಸ್ಪಷ್ಟ ಅಭಿವ್ಯಕ್ತಿಯಾಗಿದೆ. ಅವರು ಬುಡಕಟ್ಟು ಬಡವರ ಹೋರಾಟ ಮತ್ತು ಸೂಕ್ಷ್ಮತೆಯನ್ನು ಇನ್ನೂ ಅರ್ಥಮಾಡಿಕೊಳ್ಳಲಾಗಿಲ್ಲ” ಎಂದು ಹೇಳಿದ್ದಾರೆ.

“ಈ ವಿಷಯದ ಗಂಭೀರತೆಯನ್ನು ಗಮನಿಸಿ, ಸೋನಿಯಾ ಗಾಂಧಿ ವಿರುದ್ಧ ಸೂಕ್ತ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ನಾವು ವಿನಮ್ರವಾಗಿ ಒತ್ತಾಯಿಸುತ್ತೇವೆ” ಎಂದು ಸಂಸದರು ಅಧ್ಯಕ್ಷರಿಗೆ ತಿಳಿಸಿದ್ದಾರೆ ಎಂದು ವರದಿಯಾಗಿದೆ.

“ಸಂಸದೀಯ ನಿಯಮಗಳ ಪಾವಿತ್ರ್ಯವನ್ನು ಎತ್ತಿಹಿಡಿಯಲು ಮಾತ್ರವಲ್ಲದೆ ನಮ್ಮ ಪ್ರಜಾಪ್ರಭುತ್ವ ಸಂಸ್ಥೆಗಳ ಪರಿಣಾಮಕಾರಿ ಕಾರ್ಯನಿರ್ವಹಣೆಗೆ ಅಡಿಪಾಯವಾಗಿರುವ ಸಭ್ಯತೆ ಮತ್ತು ಪರಸ್ಪರ ಗೌರವದ ತತ್ವಗಳನ್ನು ಬಲಪಡಿಸಲು ಇಂತಹ ಕ್ರಮ ಅತ್ಯಗತ್ಯ” ಎಂದು ಅವರು ಹೇಳಿದರು.

ಸೋನಿಯಾ ಗಾಂಧಿ ಹೇಳಿದ್ದೇನು?

ಜನವರಿ 31 ರಂದು ಸಂಸತ್ತಿನ ಬಜೆಟ್ ಅಧಿವೇಶನವನ್ನು ಅಧ್ಯಕ್ಷರು ಉದ್ಘಾಟಿಸಿದ ನಂತರ, ಮುರ್ಮು ಅವರ ಸುಮಾರು ಒಂದು ಗಂಟೆಯ ಭಾಷಣದ ಬಗ್ಗೆ ಸದನದ ಹೊರಗೆ ವರದಿಗಾರರು ಸೋನಿಯಾ ಗಾಂಧಿ ಅವರನ್ನು ಪ್ರರ್ಶನಿಸಿದರು.

“ಅಧ್ಯಕ್ಷರು ಕೊನೆಯವರೆಗೂ ತುಂಬಾ ದಣಿದಿದ್ದರು, ಅವರು ಮಾತನಾಡಲು ಕಷ್ಟಪಡುತ್ತಿದ್ದರು, ಪೂರ್ ಲೇಡಿ” ಎಂದು ಹೇಳಿದ್ದರು.

ಸೋನಿಯಾ ಗಾಂಧಿಯವರ ಹೇಳಿಕೆಗೆ ತಕ್ಷಣವೇ ಬಿಜೆಪಿ ನಾಯಕರಿಂದ ಖಂಡನೆ ವ್ಯಕ್ತವಾಯಿತು. ರಾಷ್ಟ್ರಪತಿ ಭವನವು ಈ ಹೇಳಿಕೆಯನ್ನು ‘ಸ್ವೀಕಾರಾರ್ಹವಲ್ಲ’ ಎಂದು ಕರೆದು, ಮುರ್ಮು ದಣಿದಿಲ್ಲ ಎಂದು ಹೇಳಿಕೆ ನೀಡಿತು.

ನಂತರ, ಪ್ರಧಾನಿ ನರೇಂದ್ರ ಮೋದಿ ಕೂಡ ದೆಹಲಿಯಲ್ಲಿ ನಡೆದ ರ್ಯಾಲಿಯಲ್ಲಿ ಕಾಂಗ್ರೆಸ್ ಮೇಲೆ ದಾಳಿ ಮಾಡಿ, ಸೋನಿಯಾ ಅವರ ಹೇಳಿಕೆ ಬುಡಕಟ್ಟು ಸಮುದಾಯಗಳನ್ನು ಅವಮಾನಿಸಿದೆ ಎಂದು ಆರೋಪಿಸಿದರು.

“ದ್ರೌಪದಿ ಮುರ್ಮು ಬುಡಕಟ್ಟು ಕುಟುಂಬದಿಂದ ಇಲ್ಲಿಗೆ ಬಂದಿದ್ದಾರೆ. ಅವರು ಇಂದು ಸಂಸತ್ತನ್ನು ಅದ್ಭುತ ರೀತಿಯಲ್ಲಿ ಪ್ರೇರೇಪಿಸಿದರು ಮತ್ತು ಭಾಷಣ ಮಾಡಿದರು. ಆದರೆ ಕಾಂಗ್ರೆಸ್ ರಾಜಮನೆತನ ಅವರನ್ನು ಅವಮಾನಿಸಲು ಪ್ರಾರಂಭಿಸಿದೆ. ಬುಡಕಟ್ಟು ಮಗಳು ನೀರಸ ಭಾಷಣ ಮಾಡಿದರು ಎಂದು ರಾಜಮನೆತನದ ಸದಸ್ಯರೊಬ್ಬರು ಹೇಳಿದರು. ಮತ್ತೊಬ್ಬ ಸದಸ್ಯರು ಒಂದು ಹೆಜ್ಜೆ ಮುಂದೆ ಹೋಗಿ ಅಧ್ಯಕ್ಷರನ್ನು ಕಳಪೆ ವಿಷಯ ಎಂದು ಕರೆದರು. ಬುಡಕಟ್ಟು ಮಗಳ ಭಾಷಣವನ್ನು ಅವರು ನೀರಸವೆಂದು ಕಂಡುಕೊಳ್ಳುತ್ತಾರೆ” ಎಂದು ಮೋದಿ ದ್ವಾರಕಾದಲ್ಲಿ ಹೇಳಿದ್ದರು.

ಕಾಂಗ್ರೆಸ್ ಪಕ್ಷವು, ಸೋನಿಯಾ ಗಾಂಧಿಯವರ ಹೇಳಿಕೆಗಳನ್ನು ಸಮರ್ಥಿಸಿಕೊಂಡಿತು, ಬಿಜೆಪಿ ಮುಗ್ಧ ಹೇಳಿಕೆಯನ್ನು ತಿರುಚಲು ಪ್ರಯತ್ನಿಸುತ್ತಿದೆ ಎಂದು ಹೇಳಿತು.

“ನನ್ನ ತಾಯಿಗೆ 78 ವರ್ಷ ವಯಸ್ಸಾಗಿದೆ, ಅವರು ‘ಅಧ್ಯಕ್ಷರು ಇಷ್ಟು ದೀರ್ಘ ಭಾಷಣವನ್ನು ಓದಿದ್ದಾರೆ ಮತ್ತು ಅವರು ದಣಿದಿರಬೇಕು ಎಂದು ಹೇಳಿದ್ದಾರೆ… ಅವರು (ಭಾರತದ ರಾಷ್ಟ್ರಪತಿಯನ್ನು) ಸಂಪೂರ್ಣವಾಗಿ ಗೌರವಿಸುತ್ತಾರೆ. ಈ ರೀತಿಯ ವಿಷಯವನ್ನು ತಿರುಚುವುದು ತುಂಬಾ ದುರದೃಷ್ಟಕರ ಎಂದು ನಾನು ಭಾವಿಸುತ್ತೇನೆ” ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದರು.

ಇದನ್ನೂ ಒದಿ; ರಾಜೀವ್ ಚಂದ್ರಶೇಖರ್ ಮಾನನಷ್ಟ ಮೊಕದ್ದಮೆ ಪ್ರಕರಣ: ಕಾಂಗ್ರೆಸ್ ಸಂಸದ ಶಶಿ ತರೂರ್‌ಗೆ ಕೋರ್ಟ್‌ನಿಂದ ಸಮನ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...