Homeಮುಖಪುಟಬಿಜೆಪಿಯ ಮುಸ್ಲಿಮರ ಪರ 'ಕಾಳಜಿ' ಜಿನ್ನಾಗೆ ಮುಜುಗರ ತರಿಸುತ್ತದೆ: ಉದ್ಧವ್ ಠಾಕ್ರೆ

ಬಿಜೆಪಿಯ ಮುಸ್ಲಿಮರ ಪರ ‘ಕಾಳಜಿ’ ಜಿನ್ನಾಗೆ ಮುಜುಗರ ತರಿಸುತ್ತದೆ: ಉದ್ಧವ್ ಠಾಕ್ರೆ

- Advertisement -
- Advertisement -

ವಕ್ಫ್ ತಿದ್ದುಪಡಿ ಮಸೂದೆಯ ಚರ್ಚೆಯ ಸಂದರ್ಭದಲ್ಲಿ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಮುಸ್ಲಿಮರ ಬಗ್ಗೆ ತೋರಿಸಿರುವ “ಕಳವಳ” ಪಾಕಿಸ್ತಾನದ ಸ್ಥಾಪಕ ಮುಹಮ್ಮದ್ ಅಲಿ ಜಿನ್ನಾ ಅವರನ್ನೂ ನಾಚಿಕೆ ಪಡುವಂತೆ ಮಾಡುತ್ತದೆ ಎಂದು ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಗುರುವಾರ ವ್ಯಂಗ್ಯವಾಡಿದ್ದಾರೆ. ಬಿಜೆಪಿಯ ಮುಸ್ಲಿಮರ ಪರ

ಮಸೂದೆಯ ಮೇಲಿನ ಬಿಜೆಪಿಯ ಮೋಸದ ನಿಲುವನ್ನು ಮತ್ತು ಭೂಮಿಯನ್ನು ಕಿತ್ತುಕೊಂಡು ತನ್ನ ಕೈಗಾರಿಕೋದ್ಯಮಿ ಸ್ನೇಹಿತರಿಗೆ ನೀಡುವ ಬಿಜೆಪಿಯ ತಂತ್ರವನ್ನು ತಮ್ಮ ಪಕ್ಷ ವಿರೋಧಿಸಿದೆ ಎಂದು ಲೋಕಸಭೆಯು ಮಸೂದೆಯನ್ನು ಅಂಗೀಕರಿಸಿದ ಗಂಟೆಗಳ ನಂತರ ಮುಂಬೈಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಉದ್ಧವ್ ಹೇಳಿದ್ದಾರೆ.

ಬಿಜೆಪಿ ಕೇಂದ್ರದಲ್ಲಿ ಮೂರನೇ ಅವಧಿಗೆ ಗೆದ್ದಿದೆ ಮತ್ತು ವಿಷಯಗಳು ಚೆನ್ನಾಗಿ ನಡೆಯುತ್ತಿವೆ. ಆದರೂ ಅದು ಹಿಂದೂ-ಮುಸ್ಲಿಂ ಸಮಸ್ಯೆಗಳನ್ನು ಎತ್ತುತ್ತಿದೆ ಎಂದು ಬಿಜೆಪಿಯ ಮಾಜಿ ಮಿತ್ರಪಕ್ಷದ ನಾಯಕನಾದ ಉದ್ಧವ್ ಠಾಕ್ರೆ, ಹೇಳಿದ್ದಾರೆ. ಬಿಜೆಪಿ ಮುಸ್ಲಿಮರನ್ನು ಇಷ್ಟಪಡದಿದ್ದರೆ ತನ್ನ ಪಕ್ಷದ ಧ್ವಜದಿಂದ ಹಸಿರು ಬಣ್ಣವನ್ನು ತೆಗೆದುಹಾಕಲಿ ಎಂದು ಅವರು ಸವಾಲು ಹಾಕಿದ್ದಾರೆ.

2025ರ ಏಪ್ರಿಲ್ 3ರಂದು, ಲೋಕಸಭೆಯಲ್ಲಿ ವಕ್ಫ್ (ತಿದ್ದುಪಡಿ) ಮಸೂದೆ 2025 ಅನ್ನು ಅಂಗೀಕರಿಸಲಾಯಿತು. ಮಸೂದೆಗೆ 288 ಸದಸ್ಯರು ಬೆಂಬಲ ಸೂಚಿಸಿದರೆ, 232 ಸದಸ್ಯರು ವಿರೋಧಿಸಿದರು. ಚರ್ಚೆಯು ಬೆಳಗಿನ ಜಾವ 1:15ರವರೆಗೆ ನಡೆದು, ತೀವ್ರ ಚರ್ಚೆಗೆ ಕಾರಣವಾಯಿತು.

ಕೇಂದ್ರ ಸಚಿವ ಕಿರಣ್ ರಿಜಿಜು ಅವರು ಈ ಮಸೂದೆಯನ್ನು ಮಂಡಿಸಿದ್ದು, ಇದು ವಕ್ಫ್ ಮಂಡಳಿಗಳನ್ನು ಒಳಗೊಳ್ಳುವ ಮತ್ತು ಜಾತ್ಯತೀತವಾಗಿಸುವ ಗುರಿಯನ್ನು ಹೊಂದಿದೆ ಎಂದು ಹೇಳಿದ್ದಾರೆ. ಇದರ ಜೊತೆಗೆ, ಮುಸಲ್ಮಾನ್ ವಕ್ಫ್ (ರದ್ದತಿ) ಮಸೂದೆ 2024 ಕೂಡ ಅಂಗೀಕಾರಗೊಂಡಿತು, ಇದು 1923ರ ಮುಸಲ್ಮಾನ್ ವಕ್ಫ್ ಕಾಯಿದೆಯನ್ನು ರದ್ದುಗೊಳಿಸಿತು.

ವಕ್ಫ್ ಮಸೂದೆಯ ವಿರುದ್ಧ ವಿರೋಧ ಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ. ಕಾಂಗ್ರೆಸ್‌ನ ಗೌರವ್ ಗೊಗೊಯ್ ಇದನ್ನು ಸಂವಿಧಾನ ವಿರೋಧಿ ಎಂದು ಕರೆದರೆ, ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಇದರ ಹಿಂದಿನ ಉದ್ದೇಶವು ಒಳ್ಳೆಯದಲ್ಲ ಎಂದು ಆರೋಪಿಸಿದ್ದಾರೆ.

ಎಐಎಂಐಎಂನ ಅಸಾದುದ್ದೀನ್ ಓವೈಸಿ ಅವರು ಈ ಮಸೂದೆಯು ಸಂವಿಧಾನದ 14, 25, 26 ಮತ್ತು 29ನೇ ವಿಧಿಗಳನ್ನು ಉಲ್ಲಂಘಿಸುತ್ತದೆ ಎಂದು ದೂರಿದ್ದಾರೆ. ಅದೇ ರೀತಿ, ನ್ಯಾಷನಲ್ ಕಾನ್ಫರೆನ್ಸ್‌ನ ಒಮರ್ ಅಬ್ದುಲ್ಲಾ ಅವರು ಈ ಮಸೂದೆಯನ್ನು ಸ್ವೀಕಾರಾರ್ಹವಲ್ಲ ಎಂದು ಹೇಳಿದ್ದು, ಅದನ್ನು ಯಾವಾಗಲೂ ವಿರೋಧಿಸುವುದಾಗಿ ಘೋಷಿಸಿದ್ದಾರೆ. ಅಲ್ಲದೆ, ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (AIMPLB) ಈ ಮಸೂದೆಯ ವಿರುದ್ಧ ಕಾನೂನು ಹೋರಾಟಕ್ಕೆ ಮುಂದಾಗಿದೆ ಎಂದು ತಿಳಿಸಿದೆ. ಬಿಜೆಪಿಯ ಮುಸ್ಲಿಮರ ಪರ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ವಕ್ಫ್ ತಿದ್ದುಪಡಿ ಮಸೂದೆ ಸಂವಿಧಾನದ ಮೇಲಿನ ‘ಲಜ್ಜೆಗೆಟ್ಟ ದಾಳಿ’: ಸೋನಿಯಾ ಗಾಂಧಿ

ವಕ್ಫ್ ತಿದ್ದುಪಡಿ ಮಸೂದೆ ಸಂವಿಧಾನದ ಮೇಲಿನ ‘ಲಜ್ಜೆಗೆಟ್ಟ ದಾಳಿ’: ಸೋನಿಯಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...

ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿ ರಚಿಸುವಂತೆ ಇರಾನಿನ ಯುವಕರಿಗೆ ಮನವಿ

ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆದರಿಕೆ ದಾಳಿಗಳಿಗೆ ಮುಂಚಿತವಾಗಿ ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿಗಳನ್ನು ರಚಿಸುವಂತೆ ಇರಾನ್ ಸರ್ಕಾರ 'ಕ್ರೀಡಾಪಟುಗಳು, ಕಲಾವಿದರು, ವಿದ್ಯಾರ್ಥಿಗಳು, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಅವರ...

ಪಶ್ಚಿಮ ಬಂಗಾಳ| ಎಸ್‌ಐಆರ್ ಬಳಿಕ ಮತದಾರರ ಪಟ್ಟಿಯಿಂದ ಸುಮಾರು 91 ಲಕ್ಷ ಹೆಸರುಗಳು ಡಿಲೀಟ್

ಚುನಾವಣಾ ಆಯೋಗ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಸುಮಾರು 91 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ. ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ನಂತರ...

ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ‘ಪ್ರಜ್ಞಾಹೀನ’, ಕೋಮ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ: ವರದಿ

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಅವರು ಕೋಮ್‌ನಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಪ್ರಜ್ಞಾಹೀನರಾಗಿದ್ದಾರೆ ಎಂದು ನಂಬಲಾಗಿದೆ ಎಂದು ಗುಪ್ತಚರ ಆಧಾರಿತ ರಾಜತಾಂತ್ರಿಕ ಜ್ಞಾಪಕ ಪತ್ರವನ್ನು ಉಲ್ಲೇಖಿಸಿ ದಿ ಟೈಮ್ಸ್ ವರದಿ...

ಪ. ಬಂಗಾಳ : ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಟ್ಟಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ವೇಳೆ (ಎಸ್‌ಐಆರ್‌) ತೆಗೆದು ಹಾಕಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಮತದಾರರ ಪಟ್ಟಿಗೆ ಮರು ಸೇರ್ಪಡೆಗೊಳಿಸುವಂತೆ ಮೇಲ್ಮನವಿ ನ್ಯಾಯಮಂಡಳಿ ಸೋಮವಾರ (ಏ.6) ಆದೇಶಿಸಿರುವುದಾಗಿ ವರದಿಯಾಗಿದೆ. ರತುವಾ...

ಹೈದರಾಬಾದ್| ಐಪಿಎಲ್ ಪಂದ್ಯದಿಂದ ಭಾರೀ ಸಂಚಾರ ದಟ್ಟಣೆ; ಆಂಬ್ಯುಲೆನ್ಸ್‌ನಲ್ಲಿದ್ದ ಮಹಿಳೆ ಸಾವು

ಏಪ್ರಿಲ್ 5 ರ ಭಾನುವಾರ ಉಪ್ಪಳದಲ್ಲಿ ಉಂಟಾದ ಭಾರೀ ಸಂಚಾರ ದಟ್ಟಣೆಯಿಂದಾಗಿ ಒಂದು ಗಂಟೆಗೂ ಹೆಚ್ಚು ಕಾಲ ಆಂಬ್ಯುಲೆನ್ಸ್‌ನಲ್ಲಿ ಸಿಲುಕಿಕೊಂಡಿದ್ದ ಬಿಷ್ಣಾ ಎಂಬ 30 ವರ್ಷದ ಮಹಿಳೆ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಉಪ್ಪಳದ...

ಪಶ್ಚಿಮ ಬಂಗಾಳ: ನಂದಿಗ್ರಾಮದಲ್ಲಿ ಎಸ್‌ಐಆರ್ ಪೂರಕ ಪಟ್ಟಿಯಿಂದ 95% ಮುಸ್ಲಿಂ ಮತದಾರರ ಹೆಸರು ತೆಗೆದುಹಾಕಲಾಗಿದೆ: ವರದಿ 

ಸುವೇಂದು ಅಧಿಕಾರಿ ಪ್ರತಿನಿಧಿಸುವ ಪೂರ್ವ ಮಿಡ್ನಾಪುರ ವಿಧಾನಸಭಾ ಕ್ಷೇತ್ರವಾದ ನಂದಿಗ್ರಾಮದಲ್ಲಿ ಒಂದು ಅಧ್ಯಯನವು ಆತಂಕಕಾರಿ ಅಸಮಾನತೆಯನ್ನು ಎತ್ತಿ ತೋರಿಸಿದೆ, ಅಲ್ಲಿ ಮತದಾರರಲ್ಲಿ ಕಡಿಮೆ ಪಾಲು ಇದ್ದರೂ ಎಸ್‌ಐಆರ್ ಪೂರಕ ಪಟ್ಟಿಯಿಂದ ಅಳಿಸಲಾದ ಮತದಾರರಲ್ಲಿ...