Homeಮುಖಪುಟಔಷಧಿ ಪ್ಯಾಕೇಜ್‌ನಲ್ಲಿ ‘ಭಾಜಪ’ ಹೆಸರು: ಪಕ್ಷದ ಪ್ರಚಾರಕ್ಕೆ ಜನರ ಹಣ ದುರ್ಬಳಕೆ?

ಔಷಧಿ ಪ್ಯಾಕೇಜ್‌ನಲ್ಲಿ ‘ಭಾಜಪ’ ಹೆಸರು: ಪಕ್ಷದ ಪ್ರಚಾರಕ್ಕೆ ಜನರ ಹಣ ದುರ್ಬಳಕೆ?

- Advertisement -
- Advertisement -

ಬಿಜೆಪಿ ಎಂದರೆ ‘ಭಾರತೀಯ ಜನತಾ ಪಕ್ಷ’. ಹಾಗೆಯೇ ‘ಭಾರತೀಯ ಜನೌಷಧಿ ಪರಿಯೋಜನ’ ಎಂದೂ ಹೌದು. ಇದು ನರೇಂದ್ರ ಮೋದಿ ಸರ್ಕಾರಕ್ಕೆ ಸಹಕಾರಿಯಾಗಿದೆ.

ಸಾರ್ವಜನಿಕರಿಗೆ ಕೈಗೆಟಕುವ ದರದಲ್ಲಿ ಜೆನೆರಿಕ್ ಔಷಧಗಳನ್ನು ಒದಗಿಸುವ ಯೋಜನೆ- ‘ಭಾರತೀಯ ಜನೌಷಧಿ ಪರಿಯೋಜನಾ’. ಇದನ್ನು 2008ರಲ್ಲಿ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರವು ಜನ್ ಔಷಧಿ ಯೋಜನೆಯಾಗಿ ಪ್ರಾರಂಭಿಸಿತು. 2015ರಲ್ಲಿ ಮೋದಿ ಸರ್ಕಾರವು ‘ಪ್ರಧಾನ ಮಂತ್ರಿ ಜನೌಷಧಿ ಯೋಜನೆ’ ಎಂದು ಮರು ಪ್ಯಾಕೇಜ್ ಮಾಡಿತು. ‘ಬಿಜೆಪಿ’ ಎಂಬ ಸಂಕ್ಷೇಪಿತ ರೂಪವನ್ನು ತೋರಿಸಲು ನವೆಂಬರ್ 2016ರಲ್ಲಿ ಇದನ್ನು ‘ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಪರಿಯೋಜನಾ’ ಎಂದು ಮರುನಾಮಕರಣ ಮಾಡಲಾಯಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಭಾಜಪ’ ಎಂಬುದು ಸ್ಪಷ್ಟವಾಗಿ ಗೋಚರಿಸದಿದ್ದರೂ ಔಷಧಿಗಳ ಪ್ಯಾಕೇಜಿಂಗ್ ನೋಡಿದರೆ ಅದರ ಕಲ್ಪನೆಗೆ ಅವಕಾಶ ನೀಡುತ್ತದೆ. ಪ್ರತಿಯೊಂದು ಪದದ ಮೊದಲ ಅಕ್ಷರವನ್ನು- (‘ಭಾ’, ‘ಜ’, ‘ಪ’) – ವಿಶಿಷ್ಟವಾದ ಕೇಸರಿ ಬಣ್ಣದಿಂದ ಮುದ್ರಿಸಲಾಗಿದೆ. ಉಳಿದ ಅಕ್ಷರಗಳು ಹಸಿರು ಮತ್ತು ನೀಲಿ ಬಣ್ಣದಲ್ಲಿದೆ. ಕೇಸರಿ ಬಣ್ಣವು ಸಹಜವಾಗಿ, ಬಿಜೆಪಿಯನ್ನು ಪ್ರತಿನಿಧಿಸುತ್ತದೆ.

ಔಷಧಗಳನ್ನು ಪ್ರಧಾನ್ ಮಂತ್ರಿ ಜನೌಷಧಿ ಕೇಂದ್ರ ಎಂಬ ಔಷಧಾಲಯಗಳ ಮೂಲಕ ಮಾರಾಟ ಮಾಡಲಾಗುತ್ತದೆ. 2016ರಲ್ಲಿ ಮರುಬ್ರಾಂಡ್ ಮಾಡಲಾದ ಸಮಯದಲ್ಲಿ ಪ್ರಧಾನ್ ಮಂತ್ರಿ ಹೆಸರನ್ನು ಸೇರಿಸಲಾಯಿತು. ಇಂದು ದೇಶದಲ್ಲಿ ಸುಮಾರು 8,700 ಔಷಧಿ ಅಂಗಡಿಗಳಿವೆ. ಸಾಮಾನ್ಯವಾಗಿ ಬಳಸುವ 1,600 ಜೆನೆರಿಕ್‌ಗಳು, 240 ಶಸ್ತ್ರಚಿಕಿತ್ಸಾ ವಸ್ತುಗಳನ್ನು ಇಲ್ಲಿ ಸಂಗ್ರಹಿಸಲಾಗುತ್ತಿದೆ. ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುವ ಕೇಂದ್ರೀಯ ಸಂಸ್ಥೆಯಾದ ಫಾರ್ಮಾಸ್ಯುಟಿಕಲ್ಸ್ ಮತ್ತು ಮೆಡಿಕಲ್ ಡಿವೈಸಸ್ ಬ್ಯೂರೋ ಆಫ್ ಇಂಡಿಯಾದ ಪ್ರಕಾರ ದಾಸ್ತಾನು ನಿರಂತರವಾಗಿ ಹೆಚ್ಚಾಗುತ್ತಿದೆ.

‘ಬಿಜೆಪಿ’ ಯೋಜನೆಯು ಕಳೆದ ಹಣಕಾಸು ವರ್ಷದಲ್ಲಿ ಕೇವಲ 4,760 ಕೋಟಿ ರೂ.ಗಳಲ್ಲಿ ಹೆಚ್ಚಿನ ರೋಗಿಗಳನ್ನು ಉಳಿಸಿದೆ ಎಂದು ಅಂದಾಜಿಸಲಾಗಿದೆ. ಏಕೆಂದರೆ ಜೆನೆರಿಕ್ ಔಷಧಗಳು ಬ್ರಾಂಡ್ ಔಷಧಿಗಳಿಗಿಂತ 50-90 ಪ್ರತಿಶತ ಅಗ್ಗವಾಗಿವೆ ಎಂದು ಬ್ಯೂರೋದ ಸಿಇಒ ರವಿ ದಾಧಿಚ್ ಹೇಳಿದ್ದಾರೆ. ಉದಾಹರಣೆಗೆ ರಕ್ತದೊತ್ತಡಕ್ಕೆ ಚಿಕಿತ್ಸೆ ನೀಡಲು ಬಳಸಲಾಗುವ ‘ಅಮ್ಲೋಡಿಪೈನ್’ 10-ಟ್ಯಾಬ್ಲೆಟ್ ಸ್ಟ್ರಿಪ್, ಈ ಯೋಜನೆಯಡಿಯಲ್ಲಿ ರೂ. 5.50 ಸಿಗುತ್ತದೆ. ಮಾರುಕಟ್ಟೆಯಲ್ಲಿ ಈ ಸ್ಟ್ರಿಪ್‌ಗೆ 28 ರೂ.ಗಳನ್ನು ನೀಡಬೇಕಾಗುತ್ತದೆ.

ಮುಂದಿನ ವರ್ಷದ ವೇಳೆಗೆ 10,000 ಜನೌಷಧಿ ಕೇಂದ್ರಗಳನ್ನು ಹೊಂದುವುದು ಸರ್ಕಾರದ ಯೋಜನೆಯಾಗಿದೆ ಎಂದು ದಧಿಚ್ ‘ನ್ಯೂಸ್‌ಲಾಂಡ್ರಿ’ ವೆಬ್‌ಸೈಟ್‌ಗೆ ತಿಳಿಸಿದ್ದಾರೆ.

ಯೋಜನೆಯ “ಬಿಜೆಪಿ” ಬ್ರ್ಯಾಂಡಿಂಗ್‌ಗೆ ಸಂಬಂಧಿಸಿದಂತೆ, ದಧಿಚ್ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ಆದಾಗ್ಯೂ ಮರುಬ್ರಾಂಡಿಂಗ್‌ನಲ್ಲಿ ಭಾಗಿಯಾದ ‘ರಾಸಾಯನಿಕಗಳು ಮತ್ತು ರಸಗೊಬ್ಬರಗಳ ಸಚಿವಾಲಯ’ದ ಉನ್ನತ ಅಧಿಕಾರಿಯೊಬ್ಬರು ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. “ರಾಜಕೀಯ ಪ್ರತಿನಿಧಿಗಳು” ಹೀಗೆ ಸೂಚಿಸಿರುವುದಾಗಿ ಅವರು ತಿಳಿಸಿದ್ದಾರೆ. ರಾಸಾಯನಿಕಗಳು ಮತ್ತು ರಸಗೊಬ್ಬರಗಳ ಸಚಿವ ಮನ್ಸುಖ್ ಮಾಂಡವಿಯಾ ಈ ಕುರಿತು ಪ್ರತಿಕ್ರಿಯೆಯನ್ನು ನೀಡಿಲ್ಲ.

ಆದಾಗ್ಯೂ, ಈ ರೀತಿಯ ಬ್ರಾಂಡಿಂಗ್‌ ನಿಷೇಧಿಸಲಾಗಿಲ್ಲ. ತಾಂತ್ರಿಕವಾಗಿ ನೋಡಿದರೆ ರಾಜಕೀಯ ಜಾಹೀರಾತಿನ ವ್ಯಾಪ್ತಿಯೊಳಗೆ ಇದು ಬರುವುದಿಲ್ಲ. ಸರ್ಕಾರಿ ಜಾಹೀರಾತಿನಲ್ಲಿನ ವಿಷಯಗಳನ್ನು ನಿಯಂತ್ರಿಸಲೆಂದೇ ಸಮಿತಿಯೂ ಇದೆ.

“ತೆರಿಗೆದಾರರ ಹಣದಿಂದ ಪಾವತಿಸಿದ ಜಾಹೀರಾತುಗಳು ಸರ್ಕಾರಿ ಜವಾಬ್ದಾರಿಗಳಿಗೆ ಮಾತ್ರ ಸಂಬಂಧಿಸಿವೆ, ವಸ್ತುನಿಷ್ಠ ವಿಷಯವನ್ನು ಒಳಗೊಂಡಿರುತ್ತವೆ, ರಾಜಕೀಯ ಹಿತಾಸಕ್ತಿಗಳನ್ನು ಉತ್ತೇಜಿಸುವುದಿಲ್ಲ” ಎಂದು ಖಚಿತಪಡಿಸಿಕೊಳ್ಳಲು ಸುಪ್ರೀಂ ಕೋರ್ಟ್‌ನ ನಿರ್ದೇಶನದ ಮೇರೆಗೆ 2016ರಲ್ಲಿ ಸಮಿತಿ ರಚನೆಯಾಗಿದೆ.

ಸಮಿತಿಯು ಈ ಪಕ್ಷಪಾತಗಳನ್ನು ತಡೆದಿಲ್ಲ ಎಂದು ಆರೋಪಗಳು ಬಂದಿವೆ. “ಬಿಜೆಪಿಯ ಜಾಹೀರಾತುಗಳಿಗೆ ಸಮಿತಿ ಕಣ್ಣು ಮುಚ್ಚಿದೆ” ಎಂದು ಎಎಪಿ ದೂರಿದೆ.

ಡಿಸೆಂಬರ್ 2021ರವರೆಗೆ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಮಾಜಿ ಮುಖ್ಯ ಚುನಾವಣಾ ಆಯುಕ್ತ ಒ.ಪಿ. ರಾವತ್, ಆರೋಪಗಳನ್ನು ನಿರಾಕರಿಸಿದ್ದಾರೆ. “ಸುಪ್ರೀಂ ಕೋರ್ಟ್‌ನ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಹಲವು ಬಿಜೆಪಿ ಸರ್ಕಾರಗಳಿಗೆ ನೋಟಿಸ್‌ಗಳನ್ನು ನೀಡಲಾಗಿದೆ” ಎಂದಿದ್ದಾರೆ.

ಮೋದಿ ಸರ್ಕಾರವು ತನ್ನ ನಾಯಕರು ಮತ್ತು ಪಕ್ಷವನ್ನು ಪ್ರಚಾರ ಮಾಡಲು ಸಾರ್ವಜನಿಕ ಯೋಜನೆಗಳನ್ನು ಬಳಸಿದ ದಾಖಲೆಯನ್ನು ಹೊಂದಿದೆ. ದೀನದಯಾಳ್ ಉಪಾಧ್ಯಾಯರಂತಹ ಸಂಘ ಪರಿವಾರದ ನಾಯಕರ ಹೆಸರನ್ನು ಯೋಜನೆಗಳಿಗೆ ಮರುನಾಮಕರಣ ಮಾಡಿದ್ದಿದೆ.

ಇದನ್ನೂ ಓದಿರಿ: ಸರಿಯಾದ ನಿರ್ಧಾರಕ್ಕೆ ಬಂದಿಲ್ಲವೆಂದರೆ ಬೃಹತ್ ಪ್ರತಿಭಟನೆ: ಪಠ್ಯಪುಸ್ತಕ ಹಗರಣದ ವಿರುದ್ಧ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಲಿಂಗಾಯತ ಸ್ವಾಮೀಜಿಗಳು

ಹೀಗೆ ಯೋಜನೆಗಳ ದುರ್ಬಳಕೆ ಮಾಡಿಕೊಂಡಿದ್ದು ಬಿಜೆಪಿಯಷ್ಟೇ ಅಲ್ಲ. ಮಾಯಾವತಿಯವರು ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದಾಗ, ತಮ್ಮ ಮತ್ತು ಬಹುಜನ ಸಮಾಜ ಪಕ್ಷದ ಆನೆಯ ಚಿಹ್ನೆಯ ಪ್ರತಿಮೆಗಳನ್ನು ಬಳಸಿದ್ದು ವಿವಾದಕ್ಕೆ ಕಾರಣವಾಗಿತ್ತು. ಸಮಾಜವಾದಿ ಪಕ್ಷದ ಅಖಿಲೇಶ್‌ ಯಾದವ್ ಅವರು “ಸಮಾಜವಾದಿ” ಹೆಸರಿನಲ್ಲಿ ಯೋಜನೆಗಳನ್ನು ಪ್ರಾರಂಭಿಸಿದ್ದರು. ಹಾಲಿ ಮುಖ್ಯಮಂತ್ರಿ ಬಿಜೆಪಿಯ ಆದಿತ್ಯನಾಥ್ ಅವರು ಸಾರ್ವಜನಿಕ ಬಸ್‌ಗಳು, ಶೌಚಾಲಯಗಳು ಮತ್ತು ಶಾಲಾ ಬ್ಯಾಗ್‌ಗಳಿಗೆ ಕೇಸರಿ ಬಣ್ಣ ಬಳಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರವು ತನ್ನ ತೃಣಮೂಲ ಕಾಂಗ್ರೆಸ್ ಪಕ್ಷದ ನೀಲಿ ಮತ್ತು ಬಿಳಿ ಬಣ್ಣಗಳನ್ನು ಫ್ಲೈಓವರ್‌ಗಳಿಗೆ ಬಳಿಸಿದೆ. ರಾಜ್ಯದ ಶಾಲೆಗಳಲ್ಲಿ ನೀಲಿ ಮತ್ತು ಬಿಳಿ ಸಮವಸ್ತ್ರವನ್ನು ಪರಿಚಯಿಸಿದ್ದಾರೆ.

ಅರವಿಂದ್ ಕೇಜ್ರಿವಾಲ್ ಸರ್ಕಾರವು ಟಿವಿ ಜಾಹೀರಾತುಗಳಲ್ಲಿ ಸಾರ್ವಜನಿಕ ಹಣವನ್ನು ಬಳಸುತ್ತಿದೆ ಎಂದು 2016ರಲ್ಲಿ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ಆರೋಪಿಸಿದ್ದರು.

(ಮೂಲ: ನ್ಯೂಸ್‌ಲಾಂಡ್ರಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...