Homeಮುಖಪುಟಔಷಧಿ ಪ್ಯಾಕೇಜ್‌ನಲ್ಲಿ ‘ಭಾಜಪ’ ಹೆಸರು: ಪಕ್ಷದ ಪ್ರಚಾರಕ್ಕೆ ಜನರ ಹಣ ದುರ್ಬಳಕೆ?

ಔಷಧಿ ಪ್ಯಾಕೇಜ್‌ನಲ್ಲಿ ‘ಭಾಜಪ’ ಹೆಸರು: ಪಕ್ಷದ ಪ್ರಚಾರಕ್ಕೆ ಜನರ ಹಣ ದುರ್ಬಳಕೆ?

- Advertisement -
- Advertisement -

ಬಿಜೆಪಿ ಎಂದರೆ ‘ಭಾರತೀಯ ಜನತಾ ಪಕ್ಷ’. ಹಾಗೆಯೇ ‘ಭಾರತೀಯ ಜನೌಷಧಿ ಪರಿಯೋಜನ’ ಎಂದೂ ಹೌದು. ಇದು ನರೇಂದ್ರ ಮೋದಿ ಸರ್ಕಾರಕ್ಕೆ ಸಹಕಾರಿಯಾಗಿದೆ.

ಸಾರ್ವಜನಿಕರಿಗೆ ಕೈಗೆಟಕುವ ದರದಲ್ಲಿ ಜೆನೆರಿಕ್ ಔಷಧಗಳನ್ನು ಒದಗಿಸುವ ಯೋಜನೆ- ‘ಭಾರತೀಯ ಜನೌಷಧಿ ಪರಿಯೋಜನಾ’. ಇದನ್ನು 2008ರಲ್ಲಿ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರವು ಜನ್ ಔಷಧಿ ಯೋಜನೆಯಾಗಿ ಪ್ರಾರಂಭಿಸಿತು. 2015ರಲ್ಲಿ ಮೋದಿ ಸರ್ಕಾರವು ‘ಪ್ರಧಾನ ಮಂತ್ರಿ ಜನೌಷಧಿ ಯೋಜನೆ’ ಎಂದು ಮರು ಪ್ಯಾಕೇಜ್ ಮಾಡಿತು. ‘ಬಿಜೆಪಿ’ ಎಂಬ ಸಂಕ್ಷೇಪಿತ ರೂಪವನ್ನು ತೋರಿಸಲು ನವೆಂಬರ್ 2016ರಲ್ಲಿ ಇದನ್ನು ‘ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಪರಿಯೋಜನಾ’ ಎಂದು ಮರುನಾಮಕರಣ ಮಾಡಲಾಯಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಭಾಜಪ’ ಎಂಬುದು ಸ್ಪಷ್ಟವಾಗಿ ಗೋಚರಿಸದಿದ್ದರೂ ಔಷಧಿಗಳ ಪ್ಯಾಕೇಜಿಂಗ್ ನೋಡಿದರೆ ಅದರ ಕಲ್ಪನೆಗೆ ಅವಕಾಶ ನೀಡುತ್ತದೆ. ಪ್ರತಿಯೊಂದು ಪದದ ಮೊದಲ ಅಕ್ಷರವನ್ನು- (‘ಭಾ’, ‘ಜ’, ‘ಪ’) – ವಿಶಿಷ್ಟವಾದ ಕೇಸರಿ ಬಣ್ಣದಿಂದ ಮುದ್ರಿಸಲಾಗಿದೆ. ಉಳಿದ ಅಕ್ಷರಗಳು ಹಸಿರು ಮತ್ತು ನೀಲಿ ಬಣ್ಣದಲ್ಲಿದೆ. ಕೇಸರಿ ಬಣ್ಣವು ಸಹಜವಾಗಿ, ಬಿಜೆಪಿಯನ್ನು ಪ್ರತಿನಿಧಿಸುತ್ತದೆ.

ಔಷಧಗಳನ್ನು ಪ್ರಧಾನ್ ಮಂತ್ರಿ ಜನೌಷಧಿ ಕೇಂದ್ರ ಎಂಬ ಔಷಧಾಲಯಗಳ ಮೂಲಕ ಮಾರಾಟ ಮಾಡಲಾಗುತ್ತದೆ. 2016ರಲ್ಲಿ ಮರುಬ್ರಾಂಡ್ ಮಾಡಲಾದ ಸಮಯದಲ್ಲಿ ಪ್ರಧಾನ್ ಮಂತ್ರಿ ಹೆಸರನ್ನು ಸೇರಿಸಲಾಯಿತು. ಇಂದು ದೇಶದಲ್ಲಿ ಸುಮಾರು 8,700 ಔಷಧಿ ಅಂಗಡಿಗಳಿವೆ. ಸಾಮಾನ್ಯವಾಗಿ ಬಳಸುವ 1,600 ಜೆನೆರಿಕ್‌ಗಳು, 240 ಶಸ್ತ್ರಚಿಕಿತ್ಸಾ ವಸ್ತುಗಳನ್ನು ಇಲ್ಲಿ ಸಂಗ್ರಹಿಸಲಾಗುತ್ತಿದೆ. ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುವ ಕೇಂದ್ರೀಯ ಸಂಸ್ಥೆಯಾದ ಫಾರ್ಮಾಸ್ಯುಟಿಕಲ್ಸ್ ಮತ್ತು ಮೆಡಿಕಲ್ ಡಿವೈಸಸ್ ಬ್ಯೂರೋ ಆಫ್ ಇಂಡಿಯಾದ ಪ್ರಕಾರ ದಾಸ್ತಾನು ನಿರಂತರವಾಗಿ ಹೆಚ್ಚಾಗುತ್ತಿದೆ.

‘ಬಿಜೆಪಿ’ ಯೋಜನೆಯು ಕಳೆದ ಹಣಕಾಸು ವರ್ಷದಲ್ಲಿ ಕೇವಲ 4,760 ಕೋಟಿ ರೂ.ಗಳಲ್ಲಿ ಹೆಚ್ಚಿನ ರೋಗಿಗಳನ್ನು ಉಳಿಸಿದೆ ಎಂದು ಅಂದಾಜಿಸಲಾಗಿದೆ. ಏಕೆಂದರೆ ಜೆನೆರಿಕ್ ಔಷಧಗಳು ಬ್ರಾಂಡ್ ಔಷಧಿಗಳಿಗಿಂತ 50-90 ಪ್ರತಿಶತ ಅಗ್ಗವಾಗಿವೆ ಎಂದು ಬ್ಯೂರೋದ ಸಿಇಒ ರವಿ ದಾಧಿಚ್ ಹೇಳಿದ್ದಾರೆ. ಉದಾಹರಣೆಗೆ ರಕ್ತದೊತ್ತಡಕ್ಕೆ ಚಿಕಿತ್ಸೆ ನೀಡಲು ಬಳಸಲಾಗುವ ‘ಅಮ್ಲೋಡಿಪೈನ್’ 10-ಟ್ಯಾಬ್ಲೆಟ್ ಸ್ಟ್ರಿಪ್, ಈ ಯೋಜನೆಯಡಿಯಲ್ಲಿ ರೂ. 5.50 ಸಿಗುತ್ತದೆ. ಮಾರುಕಟ್ಟೆಯಲ್ಲಿ ಈ ಸ್ಟ್ರಿಪ್‌ಗೆ 28 ರೂ.ಗಳನ್ನು ನೀಡಬೇಕಾಗುತ್ತದೆ.

ಮುಂದಿನ ವರ್ಷದ ವೇಳೆಗೆ 10,000 ಜನೌಷಧಿ ಕೇಂದ್ರಗಳನ್ನು ಹೊಂದುವುದು ಸರ್ಕಾರದ ಯೋಜನೆಯಾಗಿದೆ ಎಂದು ದಧಿಚ್ ‘ನ್ಯೂಸ್‌ಲಾಂಡ್ರಿ’ ವೆಬ್‌ಸೈಟ್‌ಗೆ ತಿಳಿಸಿದ್ದಾರೆ.

ಯೋಜನೆಯ “ಬಿಜೆಪಿ” ಬ್ರ್ಯಾಂಡಿಂಗ್‌ಗೆ ಸಂಬಂಧಿಸಿದಂತೆ, ದಧಿಚ್ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ಆದಾಗ್ಯೂ ಮರುಬ್ರಾಂಡಿಂಗ್‌ನಲ್ಲಿ ಭಾಗಿಯಾದ ‘ರಾಸಾಯನಿಕಗಳು ಮತ್ತು ರಸಗೊಬ್ಬರಗಳ ಸಚಿವಾಲಯ’ದ ಉನ್ನತ ಅಧಿಕಾರಿಯೊಬ್ಬರು ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. “ರಾಜಕೀಯ ಪ್ರತಿನಿಧಿಗಳು” ಹೀಗೆ ಸೂಚಿಸಿರುವುದಾಗಿ ಅವರು ತಿಳಿಸಿದ್ದಾರೆ. ರಾಸಾಯನಿಕಗಳು ಮತ್ತು ರಸಗೊಬ್ಬರಗಳ ಸಚಿವ ಮನ್ಸುಖ್ ಮಾಂಡವಿಯಾ ಈ ಕುರಿತು ಪ್ರತಿಕ್ರಿಯೆಯನ್ನು ನೀಡಿಲ್ಲ.

ಆದಾಗ್ಯೂ, ಈ ರೀತಿಯ ಬ್ರಾಂಡಿಂಗ್‌ ನಿಷೇಧಿಸಲಾಗಿಲ್ಲ. ತಾಂತ್ರಿಕವಾಗಿ ನೋಡಿದರೆ ರಾಜಕೀಯ ಜಾಹೀರಾತಿನ ವ್ಯಾಪ್ತಿಯೊಳಗೆ ಇದು ಬರುವುದಿಲ್ಲ. ಸರ್ಕಾರಿ ಜಾಹೀರಾತಿನಲ್ಲಿನ ವಿಷಯಗಳನ್ನು ನಿಯಂತ್ರಿಸಲೆಂದೇ ಸಮಿತಿಯೂ ಇದೆ.

“ತೆರಿಗೆದಾರರ ಹಣದಿಂದ ಪಾವತಿಸಿದ ಜಾಹೀರಾತುಗಳು ಸರ್ಕಾರಿ ಜವಾಬ್ದಾರಿಗಳಿಗೆ ಮಾತ್ರ ಸಂಬಂಧಿಸಿವೆ, ವಸ್ತುನಿಷ್ಠ ವಿಷಯವನ್ನು ಒಳಗೊಂಡಿರುತ್ತವೆ, ರಾಜಕೀಯ ಹಿತಾಸಕ್ತಿಗಳನ್ನು ಉತ್ತೇಜಿಸುವುದಿಲ್ಲ” ಎಂದು ಖಚಿತಪಡಿಸಿಕೊಳ್ಳಲು ಸುಪ್ರೀಂ ಕೋರ್ಟ್‌ನ ನಿರ್ದೇಶನದ ಮೇರೆಗೆ 2016ರಲ್ಲಿ ಸಮಿತಿ ರಚನೆಯಾಗಿದೆ.

ಸಮಿತಿಯು ಈ ಪಕ್ಷಪಾತಗಳನ್ನು ತಡೆದಿಲ್ಲ ಎಂದು ಆರೋಪಗಳು ಬಂದಿವೆ. “ಬಿಜೆಪಿಯ ಜಾಹೀರಾತುಗಳಿಗೆ ಸಮಿತಿ ಕಣ್ಣು ಮುಚ್ಚಿದೆ” ಎಂದು ಎಎಪಿ ದೂರಿದೆ.

ಡಿಸೆಂಬರ್ 2021ರವರೆಗೆ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಮಾಜಿ ಮುಖ್ಯ ಚುನಾವಣಾ ಆಯುಕ್ತ ಒ.ಪಿ. ರಾವತ್, ಆರೋಪಗಳನ್ನು ನಿರಾಕರಿಸಿದ್ದಾರೆ. “ಸುಪ್ರೀಂ ಕೋರ್ಟ್‌ನ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಹಲವು ಬಿಜೆಪಿ ಸರ್ಕಾರಗಳಿಗೆ ನೋಟಿಸ್‌ಗಳನ್ನು ನೀಡಲಾಗಿದೆ” ಎಂದಿದ್ದಾರೆ.

ಮೋದಿ ಸರ್ಕಾರವು ತನ್ನ ನಾಯಕರು ಮತ್ತು ಪಕ್ಷವನ್ನು ಪ್ರಚಾರ ಮಾಡಲು ಸಾರ್ವಜನಿಕ ಯೋಜನೆಗಳನ್ನು ಬಳಸಿದ ದಾಖಲೆಯನ್ನು ಹೊಂದಿದೆ. ದೀನದಯಾಳ್ ಉಪಾಧ್ಯಾಯರಂತಹ ಸಂಘ ಪರಿವಾರದ ನಾಯಕರ ಹೆಸರನ್ನು ಯೋಜನೆಗಳಿಗೆ ಮರುನಾಮಕರಣ ಮಾಡಿದ್ದಿದೆ.

ಇದನ್ನೂ ಓದಿರಿ: ಸರಿಯಾದ ನಿರ್ಧಾರಕ್ಕೆ ಬಂದಿಲ್ಲವೆಂದರೆ ಬೃಹತ್ ಪ್ರತಿಭಟನೆ: ಪಠ್ಯಪುಸ್ತಕ ಹಗರಣದ ವಿರುದ್ಧ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಲಿಂಗಾಯತ ಸ್ವಾಮೀಜಿಗಳು

ಹೀಗೆ ಯೋಜನೆಗಳ ದುರ್ಬಳಕೆ ಮಾಡಿಕೊಂಡಿದ್ದು ಬಿಜೆಪಿಯಷ್ಟೇ ಅಲ್ಲ. ಮಾಯಾವತಿಯವರು ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದಾಗ, ತಮ್ಮ ಮತ್ತು ಬಹುಜನ ಸಮಾಜ ಪಕ್ಷದ ಆನೆಯ ಚಿಹ್ನೆಯ ಪ್ರತಿಮೆಗಳನ್ನು ಬಳಸಿದ್ದು ವಿವಾದಕ್ಕೆ ಕಾರಣವಾಗಿತ್ತು. ಸಮಾಜವಾದಿ ಪಕ್ಷದ ಅಖಿಲೇಶ್‌ ಯಾದವ್ ಅವರು “ಸಮಾಜವಾದಿ” ಹೆಸರಿನಲ್ಲಿ ಯೋಜನೆಗಳನ್ನು ಪ್ರಾರಂಭಿಸಿದ್ದರು. ಹಾಲಿ ಮುಖ್ಯಮಂತ್ರಿ ಬಿಜೆಪಿಯ ಆದಿತ್ಯನಾಥ್ ಅವರು ಸಾರ್ವಜನಿಕ ಬಸ್‌ಗಳು, ಶೌಚಾಲಯಗಳು ಮತ್ತು ಶಾಲಾ ಬ್ಯಾಗ್‌ಗಳಿಗೆ ಕೇಸರಿ ಬಣ್ಣ ಬಳಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರವು ತನ್ನ ತೃಣಮೂಲ ಕಾಂಗ್ರೆಸ್ ಪಕ್ಷದ ನೀಲಿ ಮತ್ತು ಬಿಳಿ ಬಣ್ಣಗಳನ್ನು ಫ್ಲೈಓವರ್‌ಗಳಿಗೆ ಬಳಿಸಿದೆ. ರಾಜ್ಯದ ಶಾಲೆಗಳಲ್ಲಿ ನೀಲಿ ಮತ್ತು ಬಿಳಿ ಸಮವಸ್ತ್ರವನ್ನು ಪರಿಚಯಿಸಿದ್ದಾರೆ.

ಅರವಿಂದ್ ಕೇಜ್ರಿವಾಲ್ ಸರ್ಕಾರವು ಟಿವಿ ಜಾಹೀರಾತುಗಳಲ್ಲಿ ಸಾರ್ವಜನಿಕ ಹಣವನ್ನು ಬಳಸುತ್ತಿದೆ ಎಂದು 2016ರಲ್ಲಿ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ಆರೋಪಿಸಿದ್ದರು.

(ಮೂಲ: ನ್ಯೂಸ್‌ಲಾಂಡ್ರಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...