Homeಮುಖಪುಟಔಷಧಿ ಪ್ಯಾಕೇಜ್‌ನಲ್ಲಿ ‘ಭಾಜಪ’ ಹೆಸರು: ಪಕ್ಷದ ಪ್ರಚಾರಕ್ಕೆ ಜನರ ಹಣ ದುರ್ಬಳಕೆ?

ಔಷಧಿ ಪ್ಯಾಕೇಜ್‌ನಲ್ಲಿ ‘ಭಾಜಪ’ ಹೆಸರು: ಪಕ್ಷದ ಪ್ರಚಾರಕ್ಕೆ ಜನರ ಹಣ ದುರ್ಬಳಕೆ?

- Advertisement -
- Advertisement -

ಬಿಜೆಪಿ ಎಂದರೆ ‘ಭಾರತೀಯ ಜನತಾ ಪಕ್ಷ’. ಹಾಗೆಯೇ ‘ಭಾರತೀಯ ಜನೌಷಧಿ ಪರಿಯೋಜನ’ ಎಂದೂ ಹೌದು. ಇದು ನರೇಂದ್ರ ಮೋದಿ ಸರ್ಕಾರಕ್ಕೆ ಸಹಕಾರಿಯಾಗಿದೆ.

ಸಾರ್ವಜನಿಕರಿಗೆ ಕೈಗೆಟಕುವ ದರದಲ್ಲಿ ಜೆನೆರಿಕ್ ಔಷಧಗಳನ್ನು ಒದಗಿಸುವ ಯೋಜನೆ- ‘ಭಾರತೀಯ ಜನೌಷಧಿ ಪರಿಯೋಜನಾ’. ಇದನ್ನು 2008ರಲ್ಲಿ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರವು ಜನ್ ಔಷಧಿ ಯೋಜನೆಯಾಗಿ ಪ್ರಾರಂಭಿಸಿತು. 2015ರಲ್ಲಿ ಮೋದಿ ಸರ್ಕಾರವು ‘ಪ್ರಧಾನ ಮಂತ್ರಿ ಜನೌಷಧಿ ಯೋಜನೆ’ ಎಂದು ಮರು ಪ್ಯಾಕೇಜ್ ಮಾಡಿತು. ‘ಬಿಜೆಪಿ’ ಎಂಬ ಸಂಕ್ಷೇಪಿತ ರೂಪವನ್ನು ತೋರಿಸಲು ನವೆಂಬರ್ 2016ರಲ್ಲಿ ಇದನ್ನು ‘ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಪರಿಯೋಜನಾ’ ಎಂದು ಮರುನಾಮಕರಣ ಮಾಡಲಾಯಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಭಾಜಪ’ ಎಂಬುದು ಸ್ಪಷ್ಟವಾಗಿ ಗೋಚರಿಸದಿದ್ದರೂ ಔಷಧಿಗಳ ಪ್ಯಾಕೇಜಿಂಗ್ ನೋಡಿದರೆ ಅದರ ಕಲ್ಪನೆಗೆ ಅವಕಾಶ ನೀಡುತ್ತದೆ. ಪ್ರತಿಯೊಂದು ಪದದ ಮೊದಲ ಅಕ್ಷರವನ್ನು- (‘ಭಾ’, ‘ಜ’, ‘ಪ’) – ವಿಶಿಷ್ಟವಾದ ಕೇಸರಿ ಬಣ್ಣದಿಂದ ಮುದ್ರಿಸಲಾಗಿದೆ. ಉಳಿದ ಅಕ್ಷರಗಳು ಹಸಿರು ಮತ್ತು ನೀಲಿ ಬಣ್ಣದಲ್ಲಿದೆ. ಕೇಸರಿ ಬಣ್ಣವು ಸಹಜವಾಗಿ, ಬಿಜೆಪಿಯನ್ನು ಪ್ರತಿನಿಧಿಸುತ್ತದೆ.

ಔಷಧಗಳನ್ನು ಪ್ರಧಾನ್ ಮಂತ್ರಿ ಜನೌಷಧಿ ಕೇಂದ್ರ ಎಂಬ ಔಷಧಾಲಯಗಳ ಮೂಲಕ ಮಾರಾಟ ಮಾಡಲಾಗುತ್ತದೆ. 2016ರಲ್ಲಿ ಮರುಬ್ರಾಂಡ್ ಮಾಡಲಾದ ಸಮಯದಲ್ಲಿ ಪ್ರಧಾನ್ ಮಂತ್ರಿ ಹೆಸರನ್ನು ಸೇರಿಸಲಾಯಿತು. ಇಂದು ದೇಶದಲ್ಲಿ ಸುಮಾರು 8,700 ಔಷಧಿ ಅಂಗಡಿಗಳಿವೆ. ಸಾಮಾನ್ಯವಾಗಿ ಬಳಸುವ 1,600 ಜೆನೆರಿಕ್‌ಗಳು, 240 ಶಸ್ತ್ರಚಿಕಿತ್ಸಾ ವಸ್ತುಗಳನ್ನು ಇಲ್ಲಿ ಸಂಗ್ರಹಿಸಲಾಗುತ್ತಿದೆ. ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುವ ಕೇಂದ್ರೀಯ ಸಂಸ್ಥೆಯಾದ ಫಾರ್ಮಾಸ್ಯುಟಿಕಲ್ಸ್ ಮತ್ತು ಮೆಡಿಕಲ್ ಡಿವೈಸಸ್ ಬ್ಯೂರೋ ಆಫ್ ಇಂಡಿಯಾದ ಪ್ರಕಾರ ದಾಸ್ತಾನು ನಿರಂತರವಾಗಿ ಹೆಚ್ಚಾಗುತ್ತಿದೆ.

‘ಬಿಜೆಪಿ’ ಯೋಜನೆಯು ಕಳೆದ ಹಣಕಾಸು ವರ್ಷದಲ್ಲಿ ಕೇವಲ 4,760 ಕೋಟಿ ರೂ.ಗಳಲ್ಲಿ ಹೆಚ್ಚಿನ ರೋಗಿಗಳನ್ನು ಉಳಿಸಿದೆ ಎಂದು ಅಂದಾಜಿಸಲಾಗಿದೆ. ಏಕೆಂದರೆ ಜೆನೆರಿಕ್ ಔಷಧಗಳು ಬ್ರಾಂಡ್ ಔಷಧಿಗಳಿಗಿಂತ 50-90 ಪ್ರತಿಶತ ಅಗ್ಗವಾಗಿವೆ ಎಂದು ಬ್ಯೂರೋದ ಸಿಇಒ ರವಿ ದಾಧಿಚ್ ಹೇಳಿದ್ದಾರೆ. ಉದಾಹರಣೆಗೆ ರಕ್ತದೊತ್ತಡಕ್ಕೆ ಚಿಕಿತ್ಸೆ ನೀಡಲು ಬಳಸಲಾಗುವ ‘ಅಮ್ಲೋಡಿಪೈನ್’ 10-ಟ್ಯಾಬ್ಲೆಟ್ ಸ್ಟ್ರಿಪ್, ಈ ಯೋಜನೆಯಡಿಯಲ್ಲಿ ರೂ. 5.50 ಸಿಗುತ್ತದೆ. ಮಾರುಕಟ್ಟೆಯಲ್ಲಿ ಈ ಸ್ಟ್ರಿಪ್‌ಗೆ 28 ರೂ.ಗಳನ್ನು ನೀಡಬೇಕಾಗುತ್ತದೆ.

ಮುಂದಿನ ವರ್ಷದ ವೇಳೆಗೆ 10,000 ಜನೌಷಧಿ ಕೇಂದ್ರಗಳನ್ನು ಹೊಂದುವುದು ಸರ್ಕಾರದ ಯೋಜನೆಯಾಗಿದೆ ಎಂದು ದಧಿಚ್ ‘ನ್ಯೂಸ್‌ಲಾಂಡ್ರಿ’ ವೆಬ್‌ಸೈಟ್‌ಗೆ ತಿಳಿಸಿದ್ದಾರೆ.

ಯೋಜನೆಯ “ಬಿಜೆಪಿ” ಬ್ರ್ಯಾಂಡಿಂಗ್‌ಗೆ ಸಂಬಂಧಿಸಿದಂತೆ, ದಧಿಚ್ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ಆದಾಗ್ಯೂ ಮರುಬ್ರಾಂಡಿಂಗ್‌ನಲ್ಲಿ ಭಾಗಿಯಾದ ‘ರಾಸಾಯನಿಕಗಳು ಮತ್ತು ರಸಗೊಬ್ಬರಗಳ ಸಚಿವಾಲಯ’ದ ಉನ್ನತ ಅಧಿಕಾರಿಯೊಬ್ಬರು ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. “ರಾಜಕೀಯ ಪ್ರತಿನಿಧಿಗಳು” ಹೀಗೆ ಸೂಚಿಸಿರುವುದಾಗಿ ಅವರು ತಿಳಿಸಿದ್ದಾರೆ. ರಾಸಾಯನಿಕಗಳು ಮತ್ತು ರಸಗೊಬ್ಬರಗಳ ಸಚಿವ ಮನ್ಸುಖ್ ಮಾಂಡವಿಯಾ ಈ ಕುರಿತು ಪ್ರತಿಕ್ರಿಯೆಯನ್ನು ನೀಡಿಲ್ಲ.

ಆದಾಗ್ಯೂ, ಈ ರೀತಿಯ ಬ್ರಾಂಡಿಂಗ್‌ ನಿಷೇಧಿಸಲಾಗಿಲ್ಲ. ತಾಂತ್ರಿಕವಾಗಿ ನೋಡಿದರೆ ರಾಜಕೀಯ ಜಾಹೀರಾತಿನ ವ್ಯಾಪ್ತಿಯೊಳಗೆ ಇದು ಬರುವುದಿಲ್ಲ. ಸರ್ಕಾರಿ ಜಾಹೀರಾತಿನಲ್ಲಿನ ವಿಷಯಗಳನ್ನು ನಿಯಂತ್ರಿಸಲೆಂದೇ ಸಮಿತಿಯೂ ಇದೆ.

“ತೆರಿಗೆದಾರರ ಹಣದಿಂದ ಪಾವತಿಸಿದ ಜಾಹೀರಾತುಗಳು ಸರ್ಕಾರಿ ಜವಾಬ್ದಾರಿಗಳಿಗೆ ಮಾತ್ರ ಸಂಬಂಧಿಸಿವೆ, ವಸ್ತುನಿಷ್ಠ ವಿಷಯವನ್ನು ಒಳಗೊಂಡಿರುತ್ತವೆ, ರಾಜಕೀಯ ಹಿತಾಸಕ್ತಿಗಳನ್ನು ಉತ್ತೇಜಿಸುವುದಿಲ್ಲ” ಎಂದು ಖಚಿತಪಡಿಸಿಕೊಳ್ಳಲು ಸುಪ್ರೀಂ ಕೋರ್ಟ್‌ನ ನಿರ್ದೇಶನದ ಮೇರೆಗೆ 2016ರಲ್ಲಿ ಸಮಿತಿ ರಚನೆಯಾಗಿದೆ.

ಸಮಿತಿಯು ಈ ಪಕ್ಷಪಾತಗಳನ್ನು ತಡೆದಿಲ್ಲ ಎಂದು ಆರೋಪಗಳು ಬಂದಿವೆ. “ಬಿಜೆಪಿಯ ಜಾಹೀರಾತುಗಳಿಗೆ ಸಮಿತಿ ಕಣ್ಣು ಮುಚ್ಚಿದೆ” ಎಂದು ಎಎಪಿ ದೂರಿದೆ.

ಡಿಸೆಂಬರ್ 2021ರವರೆಗೆ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಮಾಜಿ ಮುಖ್ಯ ಚುನಾವಣಾ ಆಯುಕ್ತ ಒ.ಪಿ. ರಾವತ್, ಆರೋಪಗಳನ್ನು ನಿರಾಕರಿಸಿದ್ದಾರೆ. “ಸುಪ್ರೀಂ ಕೋರ್ಟ್‌ನ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಹಲವು ಬಿಜೆಪಿ ಸರ್ಕಾರಗಳಿಗೆ ನೋಟಿಸ್‌ಗಳನ್ನು ನೀಡಲಾಗಿದೆ” ಎಂದಿದ್ದಾರೆ.

ಮೋದಿ ಸರ್ಕಾರವು ತನ್ನ ನಾಯಕರು ಮತ್ತು ಪಕ್ಷವನ್ನು ಪ್ರಚಾರ ಮಾಡಲು ಸಾರ್ವಜನಿಕ ಯೋಜನೆಗಳನ್ನು ಬಳಸಿದ ದಾಖಲೆಯನ್ನು ಹೊಂದಿದೆ. ದೀನದಯಾಳ್ ಉಪಾಧ್ಯಾಯರಂತಹ ಸಂಘ ಪರಿವಾರದ ನಾಯಕರ ಹೆಸರನ್ನು ಯೋಜನೆಗಳಿಗೆ ಮರುನಾಮಕರಣ ಮಾಡಿದ್ದಿದೆ.

ಇದನ್ನೂ ಓದಿರಿ: ಸರಿಯಾದ ನಿರ್ಧಾರಕ್ಕೆ ಬಂದಿಲ್ಲವೆಂದರೆ ಬೃಹತ್ ಪ್ರತಿಭಟನೆ: ಪಠ್ಯಪುಸ್ತಕ ಹಗರಣದ ವಿರುದ್ಧ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಲಿಂಗಾಯತ ಸ್ವಾಮೀಜಿಗಳು

ಹೀಗೆ ಯೋಜನೆಗಳ ದುರ್ಬಳಕೆ ಮಾಡಿಕೊಂಡಿದ್ದು ಬಿಜೆಪಿಯಷ್ಟೇ ಅಲ್ಲ. ಮಾಯಾವತಿಯವರು ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದಾಗ, ತಮ್ಮ ಮತ್ತು ಬಹುಜನ ಸಮಾಜ ಪಕ್ಷದ ಆನೆಯ ಚಿಹ್ನೆಯ ಪ್ರತಿಮೆಗಳನ್ನು ಬಳಸಿದ್ದು ವಿವಾದಕ್ಕೆ ಕಾರಣವಾಗಿತ್ತು. ಸಮಾಜವಾದಿ ಪಕ್ಷದ ಅಖಿಲೇಶ್‌ ಯಾದವ್ ಅವರು “ಸಮಾಜವಾದಿ” ಹೆಸರಿನಲ್ಲಿ ಯೋಜನೆಗಳನ್ನು ಪ್ರಾರಂಭಿಸಿದ್ದರು. ಹಾಲಿ ಮುಖ್ಯಮಂತ್ರಿ ಬಿಜೆಪಿಯ ಆದಿತ್ಯನಾಥ್ ಅವರು ಸಾರ್ವಜನಿಕ ಬಸ್‌ಗಳು, ಶೌಚಾಲಯಗಳು ಮತ್ತು ಶಾಲಾ ಬ್ಯಾಗ್‌ಗಳಿಗೆ ಕೇಸರಿ ಬಣ್ಣ ಬಳಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರವು ತನ್ನ ತೃಣಮೂಲ ಕಾಂಗ್ರೆಸ್ ಪಕ್ಷದ ನೀಲಿ ಮತ್ತು ಬಿಳಿ ಬಣ್ಣಗಳನ್ನು ಫ್ಲೈಓವರ್‌ಗಳಿಗೆ ಬಳಿಸಿದೆ. ರಾಜ್ಯದ ಶಾಲೆಗಳಲ್ಲಿ ನೀಲಿ ಮತ್ತು ಬಿಳಿ ಸಮವಸ್ತ್ರವನ್ನು ಪರಿಚಯಿಸಿದ್ದಾರೆ.

ಅರವಿಂದ್ ಕೇಜ್ರಿವಾಲ್ ಸರ್ಕಾರವು ಟಿವಿ ಜಾಹೀರಾತುಗಳಲ್ಲಿ ಸಾರ್ವಜನಿಕ ಹಣವನ್ನು ಬಳಸುತ್ತಿದೆ ಎಂದು 2016ರಲ್ಲಿ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ಆರೋಪಿಸಿದ್ದರು.

(ಮೂಲ: ನ್ಯೂಸ್‌ಲಾಂಡ್ರಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...