Homeಕರ್ನಾಟಕನ್ಯಾಯಾಧೀಶರು ಸರ್ವಜ್ಞರಲ್ಲ ಎಂಬ ಸಿಟಿ ರವಿ ಹೇಳಿಕೆಗೆ ವ್ಯಾಪಕ ಆಕ್ರೋಶ: ಮತ್ತೆ ಹೇಳಿಕೆ ಸಮರ್ಥಿಸಿಕೊಂಡ ಮಾಜಿ...

ನ್ಯಾಯಾಧೀಶರು ಸರ್ವಜ್ಞರಲ್ಲ ಎಂಬ ಸಿಟಿ ರವಿ ಹೇಳಿಕೆಗೆ ವ್ಯಾಪಕ ಆಕ್ರೋಶ: ಮತ್ತೆ ಹೇಳಿಕೆ ಸಮರ್ಥಿಸಿಕೊಂಡ ಮಾಜಿ ಸಚಿವ!

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ ನಿರ್ವಹಣೆ ಬಗ್ಗೆ, ಲಸಿಕೆ ನೀಡುವಲ್ಲಿ ವಿಫಲತೆ, ಚಾಮರಾಜನಗರ ದುರಂತ ಪ್ರಕರಣ ಸೇರಿದಂತೆ ಹಲವು ವಿಚಾರಗಳಲ್ಲಿ ಹೈಕೋರ್ಟ್ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಹೈಕೋರ್ಟ್ ನ್ಯಾಯಾಧೀಶರ ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದಶಿ ಸಿಟಿ ರವಿ ನ್ಯಾಯಾಧೀಶರು ಸರ್ವಜ್ಞರಲ್ಲ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಇತ್ತೀಚೆಗಷ್ಟೇ ಆಕ್ಸಿಜನ್ ಪೂರೈಕೆ ಕುರಿತು ಕೇಂದ್ರ ಸರ್ಕಾರಕ್ಕೆ ಚಾಟಿ ಬೀಸಿದ್ದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಮತ್ತು ನ್ಯಾಯಮೂರ್ತಿ ಅರವಿಂದ ಕುಮಾರ್, ಲಸಿಕೆ ವಿಚಾರದಲ್ಲೂ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ತರಾಟೆಗೆ ತೆಗೆದುಕೊಂಡಿದ್ದಾರೆ. ಕೊರೊನಾ ಎರಡನೇ ಅಲೆ ನಿಯಂತ್ರಣದಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದಿದ್ದಾರೆ.

ನ್ಯಾಯಾಧೀಶರು ಸರ್ವಜ್ಞರಲ್ಲ ಎಂಬ ಹೇಳಿಕೆಗೆ ಸಾರ್ವಜನಿಕ ವಲಯ, ವಿಪಕ್ಷ ನಾಯಕರು, ಮತ್ತು ವಕೀಲರು ವ್ಯಾಪಲ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಲೆಕ್ಕಕ್ಕೆ ತೆಗೆದುಕೊಳ್ಳದ ಮಾಜಿ ಸಚಿವ ಸಿಟಿ ರವಿ ಮತ್ತೆ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ: ಸಾಲದ ವಿಚಾರದಲ್ಲಿ ಸುಳ್ಳು ಹೇಳುವುದು ಬಿಟ್ಟು, ಬಡವರಿಗೆ ಆಹಾರ, ಪ್ಯಾಕೇಜ್ ಘೋಷಿಸಿ- ಸಿದ್ದರಾಮಯ್ಯ

ಸಿಟಿ ರವಿ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಮೊದಲು ಮನುಷ್ಯರಾಗಿ ಎಂದು ಕಿಡಿಕಾರಿದ್ದಾರೆ. “ಸಿಟಿ ರವಿ ಅವರೇ ಜನರ ಸಂಕಟಕ್ಕೆ ದನಿಯಾಗಲು ಸರ್ವಜ್ಞನಾಗಬೇಕಿಲ್ಲ, ಮಾನವೀಯತೆಯುಳ್ಳ ಮನುಷ್ಯನಾಗಿದ್ದರೆ ಸಾಕು. ಅಧಿಕಾರದ ದುರಹಂಕಾರ ಬಿಟ್ಟು ಮೊದಲು ಮನುಷ್ಯರಾಗಿ. ನ್ಯಾಯಾಧೀಶರ ನಿಂದನೆ ನ್ಯಾಯಾಲಯದ ನಿಂದನೆ ಕೂಡಾ ಆಗುತ್ತದೆ ಎಂದು ಗೊತ್ತಿಲ್ಲದ ನಿಮ್ಮಂತಹವರನ್ನು ಸರ್ವಜ್ಞ ಎನ್ನುವುದಿಲ್ಲ, ಮೂರ್ಖ ಎನ್ನುತ್ತಾರೆ” ಎಂದು ಟ್ವೀಟ್ ಮಾಡಿದ್ದಾರೆ.

ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ನಾಯಕ ಸಿಟಿ ರವಿ ವಿರುದ್ಧ ವಕೀಲರ ಸಂಘ, ಹೈಕೋರ್ಟ್ ವಕೀಲರು ಆಕ್ರೋಶ ಹೊರಹಾಕಿದ್ದಾರೆ.

ಕೊರೊನಾ ಎರಡನೇ ಅಲೆ ಇಡೀ ದೇಶದ ನಾಗರಿಕರನ್ನು ಕಂಗೆಡಿಸಿರುವಾಗ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿರುವುದು ತಪ್ಪೇ ಎಂದು ವಕೀಲರ ಸಂಘದ ಅಧ್ಯಕ್ಷ ಎ.ಪಿ. ರಂಗನಾಥ್ ಪ್ರಶ್ನಿಸಿದ್ದಾರೆ.

ಹೈಕೋರ್ಟ್ ತೀರ್ಪು ನೀಡಿದ ಕೂಡಲೇ ಲಸಿಕೆ ಉತ್ಪಾದನೆ ಇಲ್ಲದೇ ನಾವು ನೇಣು ಹಾಕಿಕೊಳ್ಳುವುದಾ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಕೂಡ ಆಕ್ರೋಶ ವ್ಯಕ್ತಪಡಿಸಿದ್ದರು. ಹೀಗಾಗಿ ಸಿಟಿ ರವಿ ಮತ್ತು ಸದಾನಂದಗೌಡ ಇಬ್ಬರ ವಿಡಿಯೋ ತುಣುಕು ಆಧರಿಸಿ ದೂರು ನೀಡಿರುವ ವಕೀಲ ಜಿ.ಆರ್. ಮೋಹನ್ ಸ್ವಯಂ ಪ್ರೇರಿತ ಕೇಸು ದಾಖಲಿಸಿಕೊಂಡು ತನಿಖೆ ನಡೆಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಚಾಮರಾಜನಗರ ದುರಂತಕ್ಕೆ ಆಮ್ಲಜನಕದ ಕೊರತೆ ಕಾರಣ: ಸಮಿತಿ ವರದಿ

ಇಷ್ಟಾದರೂ ಬಿಜೆಪಿ ಪ್ರಧಾನ ಕಾರ್ಯದಶೀ ಸಿಟಿ ರವಿ ನನ್ನ ಹೇಳಿಕೆಯಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸುವ ಮೂಲಕ ತಮ್ಮ ಹೇಳಿಕೆಯನ್ನು ಮತ್ತೆ ಸಮರ್ಥಿಸಿಕೊಂಡಿದ್ದಾರೆ.

ಟ್ವೀಟ್ ಮಾಡಿರುವ ಅವರು, “ನಾನು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾದರೂ ಏನು..? ನ್ಯಾಯಾಧೀಶರು ಸರ್ವಜ್ಞರಲ್ಲ , ಅವರೂ ತಾಂತ್ರಿಕ ಸಮಿತಿಯ ಸಲಹೆ ಮೇರೆಗೆ ನಿರ್ದೇಶನ ನೀಡುತ್ತಾರೆ ಎಂದಿದ್ದೇನೆ, ಸರ್ವೋಚ್ಚ ನ್ಯಾಯಾಲಯವೂ ಇದನ್ನೇ ಹೇಳಿದೆ. ಇದರಲ್ಲಿ ತಪ್ಪೇನಿದೆ…? ಮೊಸರಲ್ಲಿ ಕಲ್ಲು ಹುಡುಕುವ ಮನೋಭಾವದವರು ಎಲ್ಲದರಲ್ಲೂ ತಪ್ಪು ಹುಡುಕುತ್ತಾರೆ” ಎಂದಿದ್ದಾರೆ.


ಇದನ್ನೂ ಓದಿ: ಸೆಂಟ್ರಲ್ ವಿಸ್ತಾ ಯೋಜನೆಗೆ ವ್ಯಾಪಕ ವಿರೋಧ: ಪೋಟೋ, ವಿಡಿಯೊ ನಿಷೇಧಿಸಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Kuppa CT Ravi. Don’t have basic knowledge. Slap contempt of the court case on him.
    Sadananda Gowda a decent politician also bexome fool like other bhakts.

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...