Homeಕರ್ನಾಟಕBJP ಎಂದೂ ಸಂವಿಧಾನವನ್ನು ನಂಬುವುದಿಲ್ಲ: ತೇಜಸ್ವಿ ಸೂರ್ಯ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

BJP ಎಂದೂ ಸಂವಿಧಾನವನ್ನು ನಂಬುವುದಿಲ್ಲ: ತೇಜಸ್ವಿ ಸೂರ್ಯ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಎಐಎಂಐಎಂ ಪಕ್ಷ ಅಥವಾ ಇನ್ಯಾವುದೇ ಪಕ್ಷ ದೇಶದ್ರೋಹಿ ಎಂದು ಸಾಬೀತಾಗಿದೆಯೇ? ಹಾಗಿದ್ದರೆ ಅದನ್ನು ಚುನಾವಣೆಯಲ್ಲಿ ಸ್ಪರ್ಧಿಸದಂತೆ ಗೃಹ ಸಚಿವ ಅಮಿತ್‌ ಶಾರವರು ಬ್ಯಾನ್ ಮಾಡಬೇಕಲ್ಲವೇ?

- Advertisement -
- Advertisement -

‘ಅಸಾದುದ್ದೀನ್ ಓವೈಸಿಗೆ ಹಾಕುವ ಪ್ರತಿ ಮತವು, ಭಾರತದ ವಿರುದ್ಧ ಹಾಕುವ ಮತ’ ಎಂಬ ಬೆಂಗಳೂರು ಸಂಸದ ತೇಜಸ್ವಿ ಸೂರ್ಯ ಹೇಳಿಕೆಯನ್ನು ಶಾಸಕ ಪ್ರಿಯಾಂಕ್ ಖರ್ಗೆ ಖಂಡಿಸಿದ್ದಾರೆ. ಸಂವಿಧಾನದ ಪ್ರಕಾರ ಇವಿಎಂ ಸ್ಲಿಪ್ ಮೂಲಕ ಒಂದು ಪಕ್ಷಕ್ಕೆ ಹಾಕುವ ಮತ ಭಾರತದ ವಿರುದ್ಧ ಹೇಗಾಗುತ್ತದೆ ವಿವರಿಸಿ ಎಂದು ತಾಕೀತು ಮಾಡಿದ್ದಾರೆ.

ಎಐಎಂಐಎಂ ಪಕ್ಷ ಅಥವಾ ಇನ್ಯಾವುದೇ ಪಕ್ಷ ದೇಶದ್ರೋಹಿ ಎಂದು ಸಾಬೀತಾಗಿದೆಯೇ? ಹಾಗಿದ್ದರೆ ಅದನ್ನು ಚುನಾವಣೆಯಲ್ಲಿ ಸ್ಪರ್ಧಿಸದಂತೆ ಗೃಹ ಸಚಿವ ಅಮಿತ್‌ ಶಾರವರು ಬ್ಯಾನ್ ಮಾಡಬೇಕಲ್ಲವೇ? ಸಮಸ್ಯೆಯೆಂದರೆ ಬಿಜೆಪಿ ಎಂದೂ ಸಂವಿಧಾನವನ್ನು ನಂಬುವುದಿಲ್ಲ ಎಂದು ಪ್ರಿಯಾಂಕ್ ಖರ್ಗೆ ಟ್ವೀಟ್‌ ಮಾಡಿದ್ದಾರೆ.

ಬಾಬಾಸಾಹೇಬ್ ಅಂಬೇಡ್ಕರ್‌ರವರು ಬರೆದ ‘ರಿಡಲ್ಸ್ ಇನ್ ಹಿಂದೂಯಿಸಂ’ ಎಂಬ ಪುಸ್ತಕವನ್ನು ಶೀಘ್ರದಲ್ಲೇ ಕಳಿಸುತ್ತೇನೆ. ಅದನ್ನು ನಿಮ್ಮ ಸಾಮಾಜಿಕ ಮಾಧ್ಯಮ ಖಾತೆ ಹ್ಯಾಂಡಲ್ ಮಾಡುವವರಿಗೆ ಓದಲು ತಿಳಿಸಿ. ನಾನು ಓದಬೇಕೆಂದು ಶಿಫಾರಸ್ಸು ಮಾಡುತ್ತೇನೆ. ನೀವು ಚುನಾವಣೆ ಗೆಲ್ಲಬೇಕೆಂದರೆ ವಿಭಜನಕಾರಿ ಹೇಳಿಕೆಗಳನ್ನು ನೀಡುವುದನ್ನು ಬಿಟ್ಟು, ಮಾನ್ಯ ನರೇಂದ್ರ ಮೋದಿಯವರು ಈ 6 ವರ್ಷದಲ್ಲಿ ಮಾಡಿದ ಸಾಧನೆಗಳ ಆಧಾರಲ್ಲಿ ಮತ ಕೇಳಬಹುದಲ್ಲವೇ? ನೀವು ಅಭಿವೃದ್ದಿ ಆಧಾರದಲ್ಲಿ ಚುನಾವಣೆ ಗೆಲ್ಲಲ್ಲು ಸಾಧ್ಯವಿಲ್ಲವೇ? ಎಂದು ಮತ್ತೊಂದು ಟ್ವೀಟ್‌ನಲ್ಲಿ ಪ್ರಶ್ನಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ತೇಜಸ್ವಿ ಸೂರ್ಯ “ಓವೈಸಿಯ ಇಸ್ಲಾಮಿಕ್ ಪ್ರಭುತ್ವದ ಸಿದ್ಧಾಂತವನ್ನು ಪವಿತ್ರ ಪುಸ್ತಕ ಸಂವಿಧಾನದ ಮೇಲೆ ಇಡುವುದು ಭಾರತ ವಿರೋಧಿ ಕ್ರಮ. ನಮ್ಮ ಸಂವಿಧಾನಕ್ಕೆ ಇಸ್ಲಾಂ ಧರ್ಮವು ಎಷ್ಟು ಮತಾಂಧವಾಗಿದೆ ಎಂಬುದರ ಕುರಿತು ಬಾಬಾಸಾಹೇಬರು ಬರೆದಿರುವುದನ್ನು ಓದಬೇಕೆಂದು ನಾನು ಸೂಚಿಸುತ್ತೇನೆ” ಎಂದಿದ್ದಾರೆ.

ವಾಸ್ತವವಾಗಿ ನೀವು ‘ಪಾಕಿಸ್ತಾನ ಅಥವಾ ಭಾರತದ ವಿಭಜನೆ’ ಕುರಿತು ಉಲ್ಲೇಖಿಸಿದ ಅದೇ ಪುಸ್ತಕದಲ್ಲಿ ಬಾಬಾಸಾಹೇಬರು ಎಲ್ಲಾ ರೀತಿಯ ಮತಾಂಧತೆಯನ್ನು ವಿರೋಧಿಸಿದ್ದಾರೆ. ಅಲ್ಲದೆ ಹಿಂದುತ್ವದ ಬಗ್ಗೆ ಎಚ್ಚರಿಕೆಗಳು ಪುಸ್ತಕದಲ್ಲಿವೆ ಗಮನಿಸಿ ಎಂದು ಪ್ರಿಯಾಂಕ್ ಖರ್ಗೆ ಮರು ಟ್ವೀಟ್‌ ಮಾಡಿದ್ದಾರೆ.

ಈ ಸಂವಾದಕ್ಕೆ ಹಲವು ನೆಟ್ಟಿಗರು ಜೊತೆಗೂಡಿದ್ದಾರೆ. ವಕೀಲರು ಮತ್ತು ಸಾಮಾಜಿಕ ಕಾರ್ಯಕರ್ತರಾದ ವಿನಯ್ ಶ್ರೀನಿವಾಸನ್ ಟ್ವೀಟ್‌ ಮಾಡಿ “ತೇಜಸ್ವಿ ಸೂರ್ಯರವರೆ ನೀವು ಏಕೆ ಅಂಬೇಡ್ಕರ್‌ರವರ ‘ಜಾತಿವಿನಾಶ’ ಪುಸ್ತಕವನ್ನು ಉಲ್ಲೇಖಿಸುವುದಿಲ್ಲ? ನಿಮಗಾಗಿ ಕೆಲವು ಆಯ್ದ ಭಾಗಗಳು ಇಲ್ಲಿವೆ. ‘ಹಿಂದೂ’ ಎಂಬ ಪದವನ್ನು ಸಹ ಮಹಮ್ಮದೀಯರು ನೀಡುತ್ತಾರೆ, ಏಕೆಂದರೆ ಹಿಂದೂ ಸಮಾಜವೆಂಬುದೇ ಇರಲಿಲ್ಲ. ಅದು ಕೇವಲ ಜಾತಿಗಳ ಕೊಂಪೆಯಾಗಿತ್ತು” ಎಂದಿದ್ದಾರೆ.

ತೇಜಸ್ವಿ ಅರ್ಹತೆಗಳನ್ನು ಹೊಂದಿರಬಹುದು. ಆದರೆ ಅವರಿಗೆ ಶಿಕ್ಷಣದ ಕೊರತೆ ಇದೆ. ಕೆಟ್ಟದಾಗಿ, ಅವನಿಗೆ ಮಾನವೀಯತೆಯ ಕೊರತೆಯಿದೆ. ಈ ಮನುಷ್ಯನಿಗೆ ದಲಿತರ ನೋವು ಅರ್ಥವಾಗುವುದಿಲ್ಲ. ಆದರೆ, ಅವರು ತಮ್ಮ ಬಾಸ್‌ನ ಆಜ್ಞೆಗಳನ್ನು ಕುರುಡಾಗಿ ಅನುಸರಿಸಿ, ವಿಭಜಿಸುವ ಹಿಂದುತ್ವ ಸಿದ್ಧಾಂತಕ್ಕೆ ಅನುಕೂಲವಾಗುವಂತೆ ದಲಿತರನ್ನು ಬಳಸುತ್ತಾರೆ ಎಂದು ಪರಿಸರ ಕಾರ್ಯಕರ್ತ ಲಿಯೋ ಸಾಲ್ಡಾನಾ ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಗೃಹ ಸಚಿವ ಅಮಿತ್ ಶಾ ಏನು ಮಾಡುತ್ತಿದ್ದಾರೆ? ನಿದ್ದೆ ಮಾಡುತ್ತಿದ್ದಾರೆಯೆ?: ಓವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...