Homeಕರ್ನಾಟಕBJP ಎಂದೂ ಸಂವಿಧಾನವನ್ನು ನಂಬುವುದಿಲ್ಲ: ತೇಜಸ್ವಿ ಸೂರ್ಯ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

BJP ಎಂದೂ ಸಂವಿಧಾನವನ್ನು ನಂಬುವುದಿಲ್ಲ: ತೇಜಸ್ವಿ ಸೂರ್ಯ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಎಐಎಂಐಎಂ ಪಕ್ಷ ಅಥವಾ ಇನ್ಯಾವುದೇ ಪಕ್ಷ ದೇಶದ್ರೋಹಿ ಎಂದು ಸಾಬೀತಾಗಿದೆಯೇ? ಹಾಗಿದ್ದರೆ ಅದನ್ನು ಚುನಾವಣೆಯಲ್ಲಿ ಸ್ಪರ್ಧಿಸದಂತೆ ಗೃಹ ಸಚಿವ ಅಮಿತ್‌ ಶಾರವರು ಬ್ಯಾನ್ ಮಾಡಬೇಕಲ್ಲವೇ?

- Advertisement -
- Advertisement -

‘ಅಸಾದುದ್ದೀನ್ ಓವೈಸಿಗೆ ಹಾಕುವ ಪ್ರತಿ ಮತವು, ಭಾರತದ ವಿರುದ್ಧ ಹಾಕುವ ಮತ’ ಎಂಬ ಬೆಂಗಳೂರು ಸಂಸದ ತೇಜಸ್ವಿ ಸೂರ್ಯ ಹೇಳಿಕೆಯನ್ನು ಶಾಸಕ ಪ್ರಿಯಾಂಕ್ ಖರ್ಗೆ ಖಂಡಿಸಿದ್ದಾರೆ. ಸಂವಿಧಾನದ ಪ್ರಕಾರ ಇವಿಎಂ ಸ್ಲಿಪ್ ಮೂಲಕ ಒಂದು ಪಕ್ಷಕ್ಕೆ ಹಾಕುವ ಮತ ಭಾರತದ ವಿರುದ್ಧ ಹೇಗಾಗುತ್ತದೆ ವಿವರಿಸಿ ಎಂದು ತಾಕೀತು ಮಾಡಿದ್ದಾರೆ.

ಎಐಎಂಐಎಂ ಪಕ್ಷ ಅಥವಾ ಇನ್ಯಾವುದೇ ಪಕ್ಷ ದೇಶದ್ರೋಹಿ ಎಂದು ಸಾಬೀತಾಗಿದೆಯೇ? ಹಾಗಿದ್ದರೆ ಅದನ್ನು ಚುನಾವಣೆಯಲ್ಲಿ ಸ್ಪರ್ಧಿಸದಂತೆ ಗೃಹ ಸಚಿವ ಅಮಿತ್‌ ಶಾರವರು ಬ್ಯಾನ್ ಮಾಡಬೇಕಲ್ಲವೇ? ಸಮಸ್ಯೆಯೆಂದರೆ ಬಿಜೆಪಿ ಎಂದೂ ಸಂವಿಧಾನವನ್ನು ನಂಬುವುದಿಲ್ಲ ಎಂದು ಪ್ರಿಯಾಂಕ್ ಖರ್ಗೆ ಟ್ವೀಟ್‌ ಮಾಡಿದ್ದಾರೆ.

ಬಾಬಾಸಾಹೇಬ್ ಅಂಬೇಡ್ಕರ್‌ರವರು ಬರೆದ ‘ರಿಡಲ್ಸ್ ಇನ್ ಹಿಂದೂಯಿಸಂ’ ಎಂಬ ಪುಸ್ತಕವನ್ನು ಶೀಘ್ರದಲ್ಲೇ ಕಳಿಸುತ್ತೇನೆ. ಅದನ್ನು ನಿಮ್ಮ ಸಾಮಾಜಿಕ ಮಾಧ್ಯಮ ಖಾತೆ ಹ್ಯಾಂಡಲ್ ಮಾಡುವವರಿಗೆ ಓದಲು ತಿಳಿಸಿ. ನಾನು ಓದಬೇಕೆಂದು ಶಿಫಾರಸ್ಸು ಮಾಡುತ್ತೇನೆ. ನೀವು ಚುನಾವಣೆ ಗೆಲ್ಲಬೇಕೆಂದರೆ ವಿಭಜನಕಾರಿ ಹೇಳಿಕೆಗಳನ್ನು ನೀಡುವುದನ್ನು ಬಿಟ್ಟು, ಮಾನ್ಯ ನರೇಂದ್ರ ಮೋದಿಯವರು ಈ 6 ವರ್ಷದಲ್ಲಿ ಮಾಡಿದ ಸಾಧನೆಗಳ ಆಧಾರಲ್ಲಿ ಮತ ಕೇಳಬಹುದಲ್ಲವೇ? ನೀವು ಅಭಿವೃದ್ದಿ ಆಧಾರದಲ್ಲಿ ಚುನಾವಣೆ ಗೆಲ್ಲಲ್ಲು ಸಾಧ್ಯವಿಲ್ಲವೇ? ಎಂದು ಮತ್ತೊಂದು ಟ್ವೀಟ್‌ನಲ್ಲಿ ಪ್ರಶ್ನಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ತೇಜಸ್ವಿ ಸೂರ್ಯ “ಓವೈಸಿಯ ಇಸ್ಲಾಮಿಕ್ ಪ್ರಭುತ್ವದ ಸಿದ್ಧಾಂತವನ್ನು ಪವಿತ್ರ ಪುಸ್ತಕ ಸಂವಿಧಾನದ ಮೇಲೆ ಇಡುವುದು ಭಾರತ ವಿರೋಧಿ ಕ್ರಮ. ನಮ್ಮ ಸಂವಿಧಾನಕ್ಕೆ ಇಸ್ಲಾಂ ಧರ್ಮವು ಎಷ್ಟು ಮತಾಂಧವಾಗಿದೆ ಎಂಬುದರ ಕುರಿತು ಬಾಬಾಸಾಹೇಬರು ಬರೆದಿರುವುದನ್ನು ಓದಬೇಕೆಂದು ನಾನು ಸೂಚಿಸುತ್ತೇನೆ” ಎಂದಿದ್ದಾರೆ.

ವಾಸ್ತವವಾಗಿ ನೀವು ‘ಪಾಕಿಸ್ತಾನ ಅಥವಾ ಭಾರತದ ವಿಭಜನೆ’ ಕುರಿತು ಉಲ್ಲೇಖಿಸಿದ ಅದೇ ಪುಸ್ತಕದಲ್ಲಿ ಬಾಬಾಸಾಹೇಬರು ಎಲ್ಲಾ ರೀತಿಯ ಮತಾಂಧತೆಯನ್ನು ವಿರೋಧಿಸಿದ್ದಾರೆ. ಅಲ್ಲದೆ ಹಿಂದುತ್ವದ ಬಗ್ಗೆ ಎಚ್ಚರಿಕೆಗಳು ಪುಸ್ತಕದಲ್ಲಿವೆ ಗಮನಿಸಿ ಎಂದು ಪ್ರಿಯಾಂಕ್ ಖರ್ಗೆ ಮರು ಟ್ವೀಟ್‌ ಮಾಡಿದ್ದಾರೆ.

ಈ ಸಂವಾದಕ್ಕೆ ಹಲವು ನೆಟ್ಟಿಗರು ಜೊತೆಗೂಡಿದ್ದಾರೆ. ವಕೀಲರು ಮತ್ತು ಸಾಮಾಜಿಕ ಕಾರ್ಯಕರ್ತರಾದ ವಿನಯ್ ಶ್ರೀನಿವಾಸನ್ ಟ್ವೀಟ್‌ ಮಾಡಿ “ತೇಜಸ್ವಿ ಸೂರ್ಯರವರೆ ನೀವು ಏಕೆ ಅಂಬೇಡ್ಕರ್‌ರವರ ‘ಜಾತಿವಿನಾಶ’ ಪುಸ್ತಕವನ್ನು ಉಲ್ಲೇಖಿಸುವುದಿಲ್ಲ? ನಿಮಗಾಗಿ ಕೆಲವು ಆಯ್ದ ಭಾಗಗಳು ಇಲ್ಲಿವೆ. ‘ಹಿಂದೂ’ ಎಂಬ ಪದವನ್ನು ಸಹ ಮಹಮ್ಮದೀಯರು ನೀಡುತ್ತಾರೆ, ಏಕೆಂದರೆ ಹಿಂದೂ ಸಮಾಜವೆಂಬುದೇ ಇರಲಿಲ್ಲ. ಅದು ಕೇವಲ ಜಾತಿಗಳ ಕೊಂಪೆಯಾಗಿತ್ತು” ಎಂದಿದ್ದಾರೆ.

ತೇಜಸ್ವಿ ಅರ್ಹತೆಗಳನ್ನು ಹೊಂದಿರಬಹುದು. ಆದರೆ ಅವರಿಗೆ ಶಿಕ್ಷಣದ ಕೊರತೆ ಇದೆ. ಕೆಟ್ಟದಾಗಿ, ಅವನಿಗೆ ಮಾನವೀಯತೆಯ ಕೊರತೆಯಿದೆ. ಈ ಮನುಷ್ಯನಿಗೆ ದಲಿತರ ನೋವು ಅರ್ಥವಾಗುವುದಿಲ್ಲ. ಆದರೆ, ಅವರು ತಮ್ಮ ಬಾಸ್‌ನ ಆಜ್ಞೆಗಳನ್ನು ಕುರುಡಾಗಿ ಅನುಸರಿಸಿ, ವಿಭಜಿಸುವ ಹಿಂದುತ್ವ ಸಿದ್ಧಾಂತಕ್ಕೆ ಅನುಕೂಲವಾಗುವಂತೆ ದಲಿತರನ್ನು ಬಳಸುತ್ತಾರೆ ಎಂದು ಪರಿಸರ ಕಾರ್ಯಕರ್ತ ಲಿಯೋ ಸಾಲ್ಡಾನಾ ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಗೃಹ ಸಚಿವ ಅಮಿತ್ ಶಾ ಏನು ಮಾಡುತ್ತಿದ್ದಾರೆ? ನಿದ್ದೆ ಮಾಡುತ್ತಿದ್ದಾರೆಯೆ?: ಓವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...