Homeಕರ್ನಾಟಕBJP ಎಂದೂ ಸಂವಿಧಾನವನ್ನು ನಂಬುವುದಿಲ್ಲ: ತೇಜಸ್ವಿ ಸೂರ್ಯ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

BJP ಎಂದೂ ಸಂವಿಧಾನವನ್ನು ನಂಬುವುದಿಲ್ಲ: ತೇಜಸ್ವಿ ಸೂರ್ಯ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಎಐಎಂಐಎಂ ಪಕ್ಷ ಅಥವಾ ಇನ್ಯಾವುದೇ ಪಕ್ಷ ದೇಶದ್ರೋಹಿ ಎಂದು ಸಾಬೀತಾಗಿದೆಯೇ? ಹಾಗಿದ್ದರೆ ಅದನ್ನು ಚುನಾವಣೆಯಲ್ಲಿ ಸ್ಪರ್ಧಿಸದಂತೆ ಗೃಹ ಸಚಿವ ಅಮಿತ್‌ ಶಾರವರು ಬ್ಯಾನ್ ಮಾಡಬೇಕಲ್ಲವೇ?

- Advertisement -
- Advertisement -

‘ಅಸಾದುದ್ದೀನ್ ಓವೈಸಿಗೆ ಹಾಕುವ ಪ್ರತಿ ಮತವು, ಭಾರತದ ವಿರುದ್ಧ ಹಾಕುವ ಮತ’ ಎಂಬ ಬೆಂಗಳೂರು ಸಂಸದ ತೇಜಸ್ವಿ ಸೂರ್ಯ ಹೇಳಿಕೆಯನ್ನು ಶಾಸಕ ಪ್ರಿಯಾಂಕ್ ಖರ್ಗೆ ಖಂಡಿಸಿದ್ದಾರೆ. ಸಂವಿಧಾನದ ಪ್ರಕಾರ ಇವಿಎಂ ಸ್ಲಿಪ್ ಮೂಲಕ ಒಂದು ಪಕ್ಷಕ್ಕೆ ಹಾಕುವ ಮತ ಭಾರತದ ವಿರುದ್ಧ ಹೇಗಾಗುತ್ತದೆ ವಿವರಿಸಿ ಎಂದು ತಾಕೀತು ಮಾಡಿದ್ದಾರೆ.

ಎಐಎಂಐಎಂ ಪಕ್ಷ ಅಥವಾ ಇನ್ಯಾವುದೇ ಪಕ್ಷ ದೇಶದ್ರೋಹಿ ಎಂದು ಸಾಬೀತಾಗಿದೆಯೇ? ಹಾಗಿದ್ದರೆ ಅದನ್ನು ಚುನಾವಣೆಯಲ್ಲಿ ಸ್ಪರ್ಧಿಸದಂತೆ ಗೃಹ ಸಚಿವ ಅಮಿತ್‌ ಶಾರವರು ಬ್ಯಾನ್ ಮಾಡಬೇಕಲ್ಲವೇ? ಸಮಸ್ಯೆಯೆಂದರೆ ಬಿಜೆಪಿ ಎಂದೂ ಸಂವಿಧಾನವನ್ನು ನಂಬುವುದಿಲ್ಲ ಎಂದು ಪ್ರಿಯಾಂಕ್ ಖರ್ಗೆ ಟ್ವೀಟ್‌ ಮಾಡಿದ್ದಾರೆ.

ಬಾಬಾಸಾಹೇಬ್ ಅಂಬೇಡ್ಕರ್‌ರವರು ಬರೆದ ‘ರಿಡಲ್ಸ್ ಇನ್ ಹಿಂದೂಯಿಸಂ’ ಎಂಬ ಪುಸ್ತಕವನ್ನು ಶೀಘ್ರದಲ್ಲೇ ಕಳಿಸುತ್ತೇನೆ. ಅದನ್ನು ನಿಮ್ಮ ಸಾಮಾಜಿಕ ಮಾಧ್ಯಮ ಖಾತೆ ಹ್ಯಾಂಡಲ್ ಮಾಡುವವರಿಗೆ ಓದಲು ತಿಳಿಸಿ. ನಾನು ಓದಬೇಕೆಂದು ಶಿಫಾರಸ್ಸು ಮಾಡುತ್ತೇನೆ. ನೀವು ಚುನಾವಣೆ ಗೆಲ್ಲಬೇಕೆಂದರೆ ವಿಭಜನಕಾರಿ ಹೇಳಿಕೆಗಳನ್ನು ನೀಡುವುದನ್ನು ಬಿಟ್ಟು, ಮಾನ್ಯ ನರೇಂದ್ರ ಮೋದಿಯವರು ಈ 6 ವರ್ಷದಲ್ಲಿ ಮಾಡಿದ ಸಾಧನೆಗಳ ಆಧಾರಲ್ಲಿ ಮತ ಕೇಳಬಹುದಲ್ಲವೇ? ನೀವು ಅಭಿವೃದ್ದಿ ಆಧಾರದಲ್ಲಿ ಚುನಾವಣೆ ಗೆಲ್ಲಲ್ಲು ಸಾಧ್ಯವಿಲ್ಲವೇ? ಎಂದು ಮತ್ತೊಂದು ಟ್ವೀಟ್‌ನಲ್ಲಿ ಪ್ರಶ್ನಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ತೇಜಸ್ವಿ ಸೂರ್ಯ “ಓವೈಸಿಯ ಇಸ್ಲಾಮಿಕ್ ಪ್ರಭುತ್ವದ ಸಿದ್ಧಾಂತವನ್ನು ಪವಿತ್ರ ಪುಸ್ತಕ ಸಂವಿಧಾನದ ಮೇಲೆ ಇಡುವುದು ಭಾರತ ವಿರೋಧಿ ಕ್ರಮ. ನಮ್ಮ ಸಂವಿಧಾನಕ್ಕೆ ಇಸ್ಲಾಂ ಧರ್ಮವು ಎಷ್ಟು ಮತಾಂಧವಾಗಿದೆ ಎಂಬುದರ ಕುರಿತು ಬಾಬಾಸಾಹೇಬರು ಬರೆದಿರುವುದನ್ನು ಓದಬೇಕೆಂದು ನಾನು ಸೂಚಿಸುತ್ತೇನೆ” ಎಂದಿದ್ದಾರೆ.

ವಾಸ್ತವವಾಗಿ ನೀವು ‘ಪಾಕಿಸ್ತಾನ ಅಥವಾ ಭಾರತದ ವಿಭಜನೆ’ ಕುರಿತು ಉಲ್ಲೇಖಿಸಿದ ಅದೇ ಪುಸ್ತಕದಲ್ಲಿ ಬಾಬಾಸಾಹೇಬರು ಎಲ್ಲಾ ರೀತಿಯ ಮತಾಂಧತೆಯನ್ನು ವಿರೋಧಿಸಿದ್ದಾರೆ. ಅಲ್ಲದೆ ಹಿಂದುತ್ವದ ಬಗ್ಗೆ ಎಚ್ಚರಿಕೆಗಳು ಪುಸ್ತಕದಲ್ಲಿವೆ ಗಮನಿಸಿ ಎಂದು ಪ್ರಿಯಾಂಕ್ ಖರ್ಗೆ ಮರು ಟ್ವೀಟ್‌ ಮಾಡಿದ್ದಾರೆ.

ಈ ಸಂವಾದಕ್ಕೆ ಹಲವು ನೆಟ್ಟಿಗರು ಜೊತೆಗೂಡಿದ್ದಾರೆ. ವಕೀಲರು ಮತ್ತು ಸಾಮಾಜಿಕ ಕಾರ್ಯಕರ್ತರಾದ ವಿನಯ್ ಶ್ರೀನಿವಾಸನ್ ಟ್ವೀಟ್‌ ಮಾಡಿ “ತೇಜಸ್ವಿ ಸೂರ್ಯರವರೆ ನೀವು ಏಕೆ ಅಂಬೇಡ್ಕರ್‌ರವರ ‘ಜಾತಿವಿನಾಶ’ ಪುಸ್ತಕವನ್ನು ಉಲ್ಲೇಖಿಸುವುದಿಲ್ಲ? ನಿಮಗಾಗಿ ಕೆಲವು ಆಯ್ದ ಭಾಗಗಳು ಇಲ್ಲಿವೆ. ‘ಹಿಂದೂ’ ಎಂಬ ಪದವನ್ನು ಸಹ ಮಹಮ್ಮದೀಯರು ನೀಡುತ್ತಾರೆ, ಏಕೆಂದರೆ ಹಿಂದೂ ಸಮಾಜವೆಂಬುದೇ ಇರಲಿಲ್ಲ. ಅದು ಕೇವಲ ಜಾತಿಗಳ ಕೊಂಪೆಯಾಗಿತ್ತು” ಎಂದಿದ್ದಾರೆ.

ತೇಜಸ್ವಿ ಅರ್ಹತೆಗಳನ್ನು ಹೊಂದಿರಬಹುದು. ಆದರೆ ಅವರಿಗೆ ಶಿಕ್ಷಣದ ಕೊರತೆ ಇದೆ. ಕೆಟ್ಟದಾಗಿ, ಅವನಿಗೆ ಮಾನವೀಯತೆಯ ಕೊರತೆಯಿದೆ. ಈ ಮನುಷ್ಯನಿಗೆ ದಲಿತರ ನೋವು ಅರ್ಥವಾಗುವುದಿಲ್ಲ. ಆದರೆ, ಅವರು ತಮ್ಮ ಬಾಸ್‌ನ ಆಜ್ಞೆಗಳನ್ನು ಕುರುಡಾಗಿ ಅನುಸರಿಸಿ, ವಿಭಜಿಸುವ ಹಿಂದುತ್ವ ಸಿದ್ಧಾಂತಕ್ಕೆ ಅನುಕೂಲವಾಗುವಂತೆ ದಲಿತರನ್ನು ಬಳಸುತ್ತಾರೆ ಎಂದು ಪರಿಸರ ಕಾರ್ಯಕರ್ತ ಲಿಯೋ ಸಾಲ್ಡಾನಾ ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಗೃಹ ಸಚಿವ ಅಮಿತ್ ಶಾ ಏನು ಮಾಡುತ್ತಿದ್ದಾರೆ? ನಿದ್ದೆ ಮಾಡುತ್ತಿದ್ದಾರೆಯೆ?: ಓವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...