Homeಕರ್ನಾಟಕBJP ಎಂದೂ ಸಂವಿಧಾನವನ್ನು ನಂಬುವುದಿಲ್ಲ: ತೇಜಸ್ವಿ ಸೂರ್ಯ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

BJP ಎಂದೂ ಸಂವಿಧಾನವನ್ನು ನಂಬುವುದಿಲ್ಲ: ತೇಜಸ್ವಿ ಸೂರ್ಯ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಎಐಎಂಐಎಂ ಪಕ್ಷ ಅಥವಾ ಇನ್ಯಾವುದೇ ಪಕ್ಷ ದೇಶದ್ರೋಹಿ ಎಂದು ಸಾಬೀತಾಗಿದೆಯೇ? ಹಾಗಿದ್ದರೆ ಅದನ್ನು ಚುನಾವಣೆಯಲ್ಲಿ ಸ್ಪರ್ಧಿಸದಂತೆ ಗೃಹ ಸಚಿವ ಅಮಿತ್‌ ಶಾರವರು ಬ್ಯಾನ್ ಮಾಡಬೇಕಲ್ಲವೇ?

- Advertisement -
- Advertisement -

‘ಅಸಾದುದ್ದೀನ್ ಓವೈಸಿಗೆ ಹಾಕುವ ಪ್ರತಿ ಮತವು, ಭಾರತದ ವಿರುದ್ಧ ಹಾಕುವ ಮತ’ ಎಂಬ ಬೆಂಗಳೂರು ಸಂಸದ ತೇಜಸ್ವಿ ಸೂರ್ಯ ಹೇಳಿಕೆಯನ್ನು ಶಾಸಕ ಪ್ರಿಯಾಂಕ್ ಖರ್ಗೆ ಖಂಡಿಸಿದ್ದಾರೆ. ಸಂವಿಧಾನದ ಪ್ರಕಾರ ಇವಿಎಂ ಸ್ಲಿಪ್ ಮೂಲಕ ಒಂದು ಪಕ್ಷಕ್ಕೆ ಹಾಕುವ ಮತ ಭಾರತದ ವಿರುದ್ಧ ಹೇಗಾಗುತ್ತದೆ ವಿವರಿಸಿ ಎಂದು ತಾಕೀತು ಮಾಡಿದ್ದಾರೆ.

ಎಐಎಂಐಎಂ ಪಕ್ಷ ಅಥವಾ ಇನ್ಯಾವುದೇ ಪಕ್ಷ ದೇಶದ್ರೋಹಿ ಎಂದು ಸಾಬೀತಾಗಿದೆಯೇ? ಹಾಗಿದ್ದರೆ ಅದನ್ನು ಚುನಾವಣೆಯಲ್ಲಿ ಸ್ಪರ್ಧಿಸದಂತೆ ಗೃಹ ಸಚಿವ ಅಮಿತ್‌ ಶಾರವರು ಬ್ಯಾನ್ ಮಾಡಬೇಕಲ್ಲವೇ? ಸಮಸ್ಯೆಯೆಂದರೆ ಬಿಜೆಪಿ ಎಂದೂ ಸಂವಿಧಾನವನ್ನು ನಂಬುವುದಿಲ್ಲ ಎಂದು ಪ್ರಿಯಾಂಕ್ ಖರ್ಗೆ ಟ್ವೀಟ್‌ ಮಾಡಿದ್ದಾರೆ.

ಬಾಬಾಸಾಹೇಬ್ ಅಂಬೇಡ್ಕರ್‌ರವರು ಬರೆದ ‘ರಿಡಲ್ಸ್ ಇನ್ ಹಿಂದೂಯಿಸಂ’ ಎಂಬ ಪುಸ್ತಕವನ್ನು ಶೀಘ್ರದಲ್ಲೇ ಕಳಿಸುತ್ತೇನೆ. ಅದನ್ನು ನಿಮ್ಮ ಸಾಮಾಜಿಕ ಮಾಧ್ಯಮ ಖಾತೆ ಹ್ಯಾಂಡಲ್ ಮಾಡುವವರಿಗೆ ಓದಲು ತಿಳಿಸಿ. ನಾನು ಓದಬೇಕೆಂದು ಶಿಫಾರಸ್ಸು ಮಾಡುತ್ತೇನೆ. ನೀವು ಚುನಾವಣೆ ಗೆಲ್ಲಬೇಕೆಂದರೆ ವಿಭಜನಕಾರಿ ಹೇಳಿಕೆಗಳನ್ನು ನೀಡುವುದನ್ನು ಬಿಟ್ಟು, ಮಾನ್ಯ ನರೇಂದ್ರ ಮೋದಿಯವರು ಈ 6 ವರ್ಷದಲ್ಲಿ ಮಾಡಿದ ಸಾಧನೆಗಳ ಆಧಾರಲ್ಲಿ ಮತ ಕೇಳಬಹುದಲ್ಲವೇ? ನೀವು ಅಭಿವೃದ್ದಿ ಆಧಾರದಲ್ಲಿ ಚುನಾವಣೆ ಗೆಲ್ಲಲ್ಲು ಸಾಧ್ಯವಿಲ್ಲವೇ? ಎಂದು ಮತ್ತೊಂದು ಟ್ವೀಟ್‌ನಲ್ಲಿ ಪ್ರಶ್ನಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ತೇಜಸ್ವಿ ಸೂರ್ಯ “ಓವೈಸಿಯ ಇಸ್ಲಾಮಿಕ್ ಪ್ರಭುತ್ವದ ಸಿದ್ಧಾಂತವನ್ನು ಪವಿತ್ರ ಪುಸ್ತಕ ಸಂವಿಧಾನದ ಮೇಲೆ ಇಡುವುದು ಭಾರತ ವಿರೋಧಿ ಕ್ರಮ. ನಮ್ಮ ಸಂವಿಧಾನಕ್ಕೆ ಇಸ್ಲಾಂ ಧರ್ಮವು ಎಷ್ಟು ಮತಾಂಧವಾಗಿದೆ ಎಂಬುದರ ಕುರಿತು ಬಾಬಾಸಾಹೇಬರು ಬರೆದಿರುವುದನ್ನು ಓದಬೇಕೆಂದು ನಾನು ಸೂಚಿಸುತ್ತೇನೆ” ಎಂದಿದ್ದಾರೆ.

ವಾಸ್ತವವಾಗಿ ನೀವು ‘ಪಾಕಿಸ್ತಾನ ಅಥವಾ ಭಾರತದ ವಿಭಜನೆ’ ಕುರಿತು ಉಲ್ಲೇಖಿಸಿದ ಅದೇ ಪುಸ್ತಕದಲ್ಲಿ ಬಾಬಾಸಾಹೇಬರು ಎಲ್ಲಾ ರೀತಿಯ ಮತಾಂಧತೆಯನ್ನು ವಿರೋಧಿಸಿದ್ದಾರೆ. ಅಲ್ಲದೆ ಹಿಂದುತ್ವದ ಬಗ್ಗೆ ಎಚ್ಚರಿಕೆಗಳು ಪುಸ್ತಕದಲ್ಲಿವೆ ಗಮನಿಸಿ ಎಂದು ಪ್ರಿಯಾಂಕ್ ಖರ್ಗೆ ಮರು ಟ್ವೀಟ್‌ ಮಾಡಿದ್ದಾರೆ.

ಈ ಸಂವಾದಕ್ಕೆ ಹಲವು ನೆಟ್ಟಿಗರು ಜೊತೆಗೂಡಿದ್ದಾರೆ. ವಕೀಲರು ಮತ್ತು ಸಾಮಾಜಿಕ ಕಾರ್ಯಕರ್ತರಾದ ವಿನಯ್ ಶ್ರೀನಿವಾಸನ್ ಟ್ವೀಟ್‌ ಮಾಡಿ “ತೇಜಸ್ವಿ ಸೂರ್ಯರವರೆ ನೀವು ಏಕೆ ಅಂಬೇಡ್ಕರ್‌ರವರ ‘ಜಾತಿವಿನಾಶ’ ಪುಸ್ತಕವನ್ನು ಉಲ್ಲೇಖಿಸುವುದಿಲ್ಲ? ನಿಮಗಾಗಿ ಕೆಲವು ಆಯ್ದ ಭಾಗಗಳು ಇಲ್ಲಿವೆ. ‘ಹಿಂದೂ’ ಎಂಬ ಪದವನ್ನು ಸಹ ಮಹಮ್ಮದೀಯರು ನೀಡುತ್ತಾರೆ, ಏಕೆಂದರೆ ಹಿಂದೂ ಸಮಾಜವೆಂಬುದೇ ಇರಲಿಲ್ಲ. ಅದು ಕೇವಲ ಜಾತಿಗಳ ಕೊಂಪೆಯಾಗಿತ್ತು” ಎಂದಿದ್ದಾರೆ.

ತೇಜಸ್ವಿ ಅರ್ಹತೆಗಳನ್ನು ಹೊಂದಿರಬಹುದು. ಆದರೆ ಅವರಿಗೆ ಶಿಕ್ಷಣದ ಕೊರತೆ ಇದೆ. ಕೆಟ್ಟದಾಗಿ, ಅವನಿಗೆ ಮಾನವೀಯತೆಯ ಕೊರತೆಯಿದೆ. ಈ ಮನುಷ್ಯನಿಗೆ ದಲಿತರ ನೋವು ಅರ್ಥವಾಗುವುದಿಲ್ಲ. ಆದರೆ, ಅವರು ತಮ್ಮ ಬಾಸ್‌ನ ಆಜ್ಞೆಗಳನ್ನು ಕುರುಡಾಗಿ ಅನುಸರಿಸಿ, ವಿಭಜಿಸುವ ಹಿಂದುತ್ವ ಸಿದ್ಧಾಂತಕ್ಕೆ ಅನುಕೂಲವಾಗುವಂತೆ ದಲಿತರನ್ನು ಬಳಸುತ್ತಾರೆ ಎಂದು ಪರಿಸರ ಕಾರ್ಯಕರ್ತ ಲಿಯೋ ಸಾಲ್ಡಾನಾ ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಗೃಹ ಸಚಿವ ಅಮಿತ್ ಶಾ ಏನು ಮಾಡುತ್ತಿದ್ದಾರೆ? ನಿದ್ದೆ ಮಾಡುತ್ತಿದ್ದಾರೆಯೆ?: ಓವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...