Homeಕರ್ನಾಟಕBJP ಎಂದೂ ಸಂವಿಧಾನವನ್ನು ನಂಬುವುದಿಲ್ಲ: ತೇಜಸ್ವಿ ಸೂರ್ಯ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

BJP ಎಂದೂ ಸಂವಿಧಾನವನ್ನು ನಂಬುವುದಿಲ್ಲ: ತೇಜಸ್ವಿ ಸೂರ್ಯ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಎಐಎಂಐಎಂ ಪಕ್ಷ ಅಥವಾ ಇನ್ಯಾವುದೇ ಪಕ್ಷ ದೇಶದ್ರೋಹಿ ಎಂದು ಸಾಬೀತಾಗಿದೆಯೇ? ಹಾಗಿದ್ದರೆ ಅದನ್ನು ಚುನಾವಣೆಯಲ್ಲಿ ಸ್ಪರ್ಧಿಸದಂತೆ ಗೃಹ ಸಚಿವ ಅಮಿತ್‌ ಶಾರವರು ಬ್ಯಾನ್ ಮಾಡಬೇಕಲ್ಲವೇ?

- Advertisement -
- Advertisement -

‘ಅಸಾದುದ್ದೀನ್ ಓವೈಸಿಗೆ ಹಾಕುವ ಪ್ರತಿ ಮತವು, ಭಾರತದ ವಿರುದ್ಧ ಹಾಕುವ ಮತ’ ಎಂಬ ಬೆಂಗಳೂರು ಸಂಸದ ತೇಜಸ್ವಿ ಸೂರ್ಯ ಹೇಳಿಕೆಯನ್ನು ಶಾಸಕ ಪ್ರಿಯಾಂಕ್ ಖರ್ಗೆ ಖಂಡಿಸಿದ್ದಾರೆ. ಸಂವಿಧಾನದ ಪ್ರಕಾರ ಇವಿಎಂ ಸ್ಲಿಪ್ ಮೂಲಕ ಒಂದು ಪಕ್ಷಕ್ಕೆ ಹಾಕುವ ಮತ ಭಾರತದ ವಿರುದ್ಧ ಹೇಗಾಗುತ್ತದೆ ವಿವರಿಸಿ ಎಂದು ತಾಕೀತು ಮಾಡಿದ್ದಾರೆ.

ಎಐಎಂಐಎಂ ಪಕ್ಷ ಅಥವಾ ಇನ್ಯಾವುದೇ ಪಕ್ಷ ದೇಶದ್ರೋಹಿ ಎಂದು ಸಾಬೀತಾಗಿದೆಯೇ? ಹಾಗಿದ್ದರೆ ಅದನ್ನು ಚುನಾವಣೆಯಲ್ಲಿ ಸ್ಪರ್ಧಿಸದಂತೆ ಗೃಹ ಸಚಿವ ಅಮಿತ್‌ ಶಾರವರು ಬ್ಯಾನ್ ಮಾಡಬೇಕಲ್ಲವೇ? ಸಮಸ್ಯೆಯೆಂದರೆ ಬಿಜೆಪಿ ಎಂದೂ ಸಂವಿಧಾನವನ್ನು ನಂಬುವುದಿಲ್ಲ ಎಂದು ಪ್ರಿಯಾಂಕ್ ಖರ್ಗೆ ಟ್ವೀಟ್‌ ಮಾಡಿದ್ದಾರೆ.

ಬಾಬಾಸಾಹೇಬ್ ಅಂಬೇಡ್ಕರ್‌ರವರು ಬರೆದ ‘ರಿಡಲ್ಸ್ ಇನ್ ಹಿಂದೂಯಿಸಂ’ ಎಂಬ ಪುಸ್ತಕವನ್ನು ಶೀಘ್ರದಲ್ಲೇ ಕಳಿಸುತ್ತೇನೆ. ಅದನ್ನು ನಿಮ್ಮ ಸಾಮಾಜಿಕ ಮಾಧ್ಯಮ ಖಾತೆ ಹ್ಯಾಂಡಲ್ ಮಾಡುವವರಿಗೆ ಓದಲು ತಿಳಿಸಿ. ನಾನು ಓದಬೇಕೆಂದು ಶಿಫಾರಸ್ಸು ಮಾಡುತ್ತೇನೆ. ನೀವು ಚುನಾವಣೆ ಗೆಲ್ಲಬೇಕೆಂದರೆ ವಿಭಜನಕಾರಿ ಹೇಳಿಕೆಗಳನ್ನು ನೀಡುವುದನ್ನು ಬಿಟ್ಟು, ಮಾನ್ಯ ನರೇಂದ್ರ ಮೋದಿಯವರು ಈ 6 ವರ್ಷದಲ್ಲಿ ಮಾಡಿದ ಸಾಧನೆಗಳ ಆಧಾರಲ್ಲಿ ಮತ ಕೇಳಬಹುದಲ್ಲವೇ? ನೀವು ಅಭಿವೃದ್ದಿ ಆಧಾರದಲ್ಲಿ ಚುನಾವಣೆ ಗೆಲ್ಲಲ್ಲು ಸಾಧ್ಯವಿಲ್ಲವೇ? ಎಂದು ಮತ್ತೊಂದು ಟ್ವೀಟ್‌ನಲ್ಲಿ ಪ್ರಶ್ನಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ತೇಜಸ್ವಿ ಸೂರ್ಯ “ಓವೈಸಿಯ ಇಸ್ಲಾಮಿಕ್ ಪ್ರಭುತ್ವದ ಸಿದ್ಧಾಂತವನ್ನು ಪವಿತ್ರ ಪುಸ್ತಕ ಸಂವಿಧಾನದ ಮೇಲೆ ಇಡುವುದು ಭಾರತ ವಿರೋಧಿ ಕ್ರಮ. ನಮ್ಮ ಸಂವಿಧಾನಕ್ಕೆ ಇಸ್ಲಾಂ ಧರ್ಮವು ಎಷ್ಟು ಮತಾಂಧವಾಗಿದೆ ಎಂಬುದರ ಕುರಿತು ಬಾಬಾಸಾಹೇಬರು ಬರೆದಿರುವುದನ್ನು ಓದಬೇಕೆಂದು ನಾನು ಸೂಚಿಸುತ್ತೇನೆ” ಎಂದಿದ್ದಾರೆ.

ವಾಸ್ತವವಾಗಿ ನೀವು ‘ಪಾಕಿಸ್ತಾನ ಅಥವಾ ಭಾರತದ ವಿಭಜನೆ’ ಕುರಿತು ಉಲ್ಲೇಖಿಸಿದ ಅದೇ ಪುಸ್ತಕದಲ್ಲಿ ಬಾಬಾಸಾಹೇಬರು ಎಲ್ಲಾ ರೀತಿಯ ಮತಾಂಧತೆಯನ್ನು ವಿರೋಧಿಸಿದ್ದಾರೆ. ಅಲ್ಲದೆ ಹಿಂದುತ್ವದ ಬಗ್ಗೆ ಎಚ್ಚರಿಕೆಗಳು ಪುಸ್ತಕದಲ್ಲಿವೆ ಗಮನಿಸಿ ಎಂದು ಪ್ರಿಯಾಂಕ್ ಖರ್ಗೆ ಮರು ಟ್ವೀಟ್‌ ಮಾಡಿದ್ದಾರೆ.

ಈ ಸಂವಾದಕ್ಕೆ ಹಲವು ನೆಟ್ಟಿಗರು ಜೊತೆಗೂಡಿದ್ದಾರೆ. ವಕೀಲರು ಮತ್ತು ಸಾಮಾಜಿಕ ಕಾರ್ಯಕರ್ತರಾದ ವಿನಯ್ ಶ್ರೀನಿವಾಸನ್ ಟ್ವೀಟ್‌ ಮಾಡಿ “ತೇಜಸ್ವಿ ಸೂರ್ಯರವರೆ ನೀವು ಏಕೆ ಅಂಬೇಡ್ಕರ್‌ರವರ ‘ಜಾತಿವಿನಾಶ’ ಪುಸ್ತಕವನ್ನು ಉಲ್ಲೇಖಿಸುವುದಿಲ್ಲ? ನಿಮಗಾಗಿ ಕೆಲವು ಆಯ್ದ ಭಾಗಗಳು ಇಲ್ಲಿವೆ. ‘ಹಿಂದೂ’ ಎಂಬ ಪದವನ್ನು ಸಹ ಮಹಮ್ಮದೀಯರು ನೀಡುತ್ತಾರೆ, ಏಕೆಂದರೆ ಹಿಂದೂ ಸಮಾಜವೆಂಬುದೇ ಇರಲಿಲ್ಲ. ಅದು ಕೇವಲ ಜಾತಿಗಳ ಕೊಂಪೆಯಾಗಿತ್ತು” ಎಂದಿದ್ದಾರೆ.

ತೇಜಸ್ವಿ ಅರ್ಹತೆಗಳನ್ನು ಹೊಂದಿರಬಹುದು. ಆದರೆ ಅವರಿಗೆ ಶಿಕ್ಷಣದ ಕೊರತೆ ಇದೆ. ಕೆಟ್ಟದಾಗಿ, ಅವನಿಗೆ ಮಾನವೀಯತೆಯ ಕೊರತೆಯಿದೆ. ಈ ಮನುಷ್ಯನಿಗೆ ದಲಿತರ ನೋವು ಅರ್ಥವಾಗುವುದಿಲ್ಲ. ಆದರೆ, ಅವರು ತಮ್ಮ ಬಾಸ್‌ನ ಆಜ್ಞೆಗಳನ್ನು ಕುರುಡಾಗಿ ಅನುಸರಿಸಿ, ವಿಭಜಿಸುವ ಹಿಂದುತ್ವ ಸಿದ್ಧಾಂತಕ್ಕೆ ಅನುಕೂಲವಾಗುವಂತೆ ದಲಿತರನ್ನು ಬಳಸುತ್ತಾರೆ ಎಂದು ಪರಿಸರ ಕಾರ್ಯಕರ್ತ ಲಿಯೋ ಸಾಲ್ಡಾನಾ ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಗೃಹ ಸಚಿವ ಅಮಿತ್ ಶಾ ಏನು ಮಾಡುತ್ತಿದ್ದಾರೆ? ನಿದ್ದೆ ಮಾಡುತ್ತಿದ್ದಾರೆಯೆ?: ಓವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...