Homeಕರ್ನಾಟಕBJP ಎಂದೂ ಸಂವಿಧಾನವನ್ನು ನಂಬುವುದಿಲ್ಲ: ತೇಜಸ್ವಿ ಸೂರ್ಯ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

BJP ಎಂದೂ ಸಂವಿಧಾನವನ್ನು ನಂಬುವುದಿಲ್ಲ: ತೇಜಸ್ವಿ ಸೂರ್ಯ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಎಐಎಂಐಎಂ ಪಕ್ಷ ಅಥವಾ ಇನ್ಯಾವುದೇ ಪಕ್ಷ ದೇಶದ್ರೋಹಿ ಎಂದು ಸಾಬೀತಾಗಿದೆಯೇ? ಹಾಗಿದ್ದರೆ ಅದನ್ನು ಚುನಾವಣೆಯಲ್ಲಿ ಸ್ಪರ್ಧಿಸದಂತೆ ಗೃಹ ಸಚಿವ ಅಮಿತ್‌ ಶಾರವರು ಬ್ಯಾನ್ ಮಾಡಬೇಕಲ್ಲವೇ?

- Advertisement -
- Advertisement -

‘ಅಸಾದುದ್ದೀನ್ ಓವೈಸಿಗೆ ಹಾಕುವ ಪ್ರತಿ ಮತವು, ಭಾರತದ ವಿರುದ್ಧ ಹಾಕುವ ಮತ’ ಎಂಬ ಬೆಂಗಳೂರು ಸಂಸದ ತೇಜಸ್ವಿ ಸೂರ್ಯ ಹೇಳಿಕೆಯನ್ನು ಶಾಸಕ ಪ್ರಿಯಾಂಕ್ ಖರ್ಗೆ ಖಂಡಿಸಿದ್ದಾರೆ. ಸಂವಿಧಾನದ ಪ್ರಕಾರ ಇವಿಎಂ ಸ್ಲಿಪ್ ಮೂಲಕ ಒಂದು ಪಕ್ಷಕ್ಕೆ ಹಾಕುವ ಮತ ಭಾರತದ ವಿರುದ್ಧ ಹೇಗಾಗುತ್ತದೆ ವಿವರಿಸಿ ಎಂದು ತಾಕೀತು ಮಾಡಿದ್ದಾರೆ.

ಎಐಎಂಐಎಂ ಪಕ್ಷ ಅಥವಾ ಇನ್ಯಾವುದೇ ಪಕ್ಷ ದೇಶದ್ರೋಹಿ ಎಂದು ಸಾಬೀತಾಗಿದೆಯೇ? ಹಾಗಿದ್ದರೆ ಅದನ್ನು ಚುನಾವಣೆಯಲ್ಲಿ ಸ್ಪರ್ಧಿಸದಂತೆ ಗೃಹ ಸಚಿವ ಅಮಿತ್‌ ಶಾರವರು ಬ್ಯಾನ್ ಮಾಡಬೇಕಲ್ಲವೇ? ಸಮಸ್ಯೆಯೆಂದರೆ ಬಿಜೆಪಿ ಎಂದೂ ಸಂವಿಧಾನವನ್ನು ನಂಬುವುದಿಲ್ಲ ಎಂದು ಪ್ರಿಯಾಂಕ್ ಖರ್ಗೆ ಟ್ವೀಟ್‌ ಮಾಡಿದ್ದಾರೆ.

ಬಾಬಾಸಾಹೇಬ್ ಅಂಬೇಡ್ಕರ್‌ರವರು ಬರೆದ ‘ರಿಡಲ್ಸ್ ಇನ್ ಹಿಂದೂಯಿಸಂ’ ಎಂಬ ಪುಸ್ತಕವನ್ನು ಶೀಘ್ರದಲ್ಲೇ ಕಳಿಸುತ್ತೇನೆ. ಅದನ್ನು ನಿಮ್ಮ ಸಾಮಾಜಿಕ ಮಾಧ್ಯಮ ಖಾತೆ ಹ್ಯಾಂಡಲ್ ಮಾಡುವವರಿಗೆ ಓದಲು ತಿಳಿಸಿ. ನಾನು ಓದಬೇಕೆಂದು ಶಿಫಾರಸ್ಸು ಮಾಡುತ್ತೇನೆ. ನೀವು ಚುನಾವಣೆ ಗೆಲ್ಲಬೇಕೆಂದರೆ ವಿಭಜನಕಾರಿ ಹೇಳಿಕೆಗಳನ್ನು ನೀಡುವುದನ್ನು ಬಿಟ್ಟು, ಮಾನ್ಯ ನರೇಂದ್ರ ಮೋದಿಯವರು ಈ 6 ವರ್ಷದಲ್ಲಿ ಮಾಡಿದ ಸಾಧನೆಗಳ ಆಧಾರಲ್ಲಿ ಮತ ಕೇಳಬಹುದಲ್ಲವೇ? ನೀವು ಅಭಿವೃದ್ದಿ ಆಧಾರದಲ್ಲಿ ಚುನಾವಣೆ ಗೆಲ್ಲಲ್ಲು ಸಾಧ್ಯವಿಲ್ಲವೇ? ಎಂದು ಮತ್ತೊಂದು ಟ್ವೀಟ್‌ನಲ್ಲಿ ಪ್ರಶ್ನಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ತೇಜಸ್ವಿ ಸೂರ್ಯ “ಓವೈಸಿಯ ಇಸ್ಲಾಮಿಕ್ ಪ್ರಭುತ್ವದ ಸಿದ್ಧಾಂತವನ್ನು ಪವಿತ್ರ ಪುಸ್ತಕ ಸಂವಿಧಾನದ ಮೇಲೆ ಇಡುವುದು ಭಾರತ ವಿರೋಧಿ ಕ್ರಮ. ನಮ್ಮ ಸಂವಿಧಾನಕ್ಕೆ ಇಸ್ಲಾಂ ಧರ್ಮವು ಎಷ್ಟು ಮತಾಂಧವಾಗಿದೆ ಎಂಬುದರ ಕುರಿತು ಬಾಬಾಸಾಹೇಬರು ಬರೆದಿರುವುದನ್ನು ಓದಬೇಕೆಂದು ನಾನು ಸೂಚಿಸುತ್ತೇನೆ” ಎಂದಿದ್ದಾರೆ.

ವಾಸ್ತವವಾಗಿ ನೀವು ‘ಪಾಕಿಸ್ತಾನ ಅಥವಾ ಭಾರತದ ವಿಭಜನೆ’ ಕುರಿತು ಉಲ್ಲೇಖಿಸಿದ ಅದೇ ಪುಸ್ತಕದಲ್ಲಿ ಬಾಬಾಸಾಹೇಬರು ಎಲ್ಲಾ ರೀತಿಯ ಮತಾಂಧತೆಯನ್ನು ವಿರೋಧಿಸಿದ್ದಾರೆ. ಅಲ್ಲದೆ ಹಿಂದುತ್ವದ ಬಗ್ಗೆ ಎಚ್ಚರಿಕೆಗಳು ಪುಸ್ತಕದಲ್ಲಿವೆ ಗಮನಿಸಿ ಎಂದು ಪ್ರಿಯಾಂಕ್ ಖರ್ಗೆ ಮರು ಟ್ವೀಟ್‌ ಮಾಡಿದ್ದಾರೆ.

ಈ ಸಂವಾದಕ್ಕೆ ಹಲವು ನೆಟ್ಟಿಗರು ಜೊತೆಗೂಡಿದ್ದಾರೆ. ವಕೀಲರು ಮತ್ತು ಸಾಮಾಜಿಕ ಕಾರ್ಯಕರ್ತರಾದ ವಿನಯ್ ಶ್ರೀನಿವಾಸನ್ ಟ್ವೀಟ್‌ ಮಾಡಿ “ತೇಜಸ್ವಿ ಸೂರ್ಯರವರೆ ನೀವು ಏಕೆ ಅಂಬೇಡ್ಕರ್‌ರವರ ‘ಜಾತಿವಿನಾಶ’ ಪುಸ್ತಕವನ್ನು ಉಲ್ಲೇಖಿಸುವುದಿಲ್ಲ? ನಿಮಗಾಗಿ ಕೆಲವು ಆಯ್ದ ಭಾಗಗಳು ಇಲ್ಲಿವೆ. ‘ಹಿಂದೂ’ ಎಂಬ ಪದವನ್ನು ಸಹ ಮಹಮ್ಮದೀಯರು ನೀಡುತ್ತಾರೆ, ಏಕೆಂದರೆ ಹಿಂದೂ ಸಮಾಜವೆಂಬುದೇ ಇರಲಿಲ್ಲ. ಅದು ಕೇವಲ ಜಾತಿಗಳ ಕೊಂಪೆಯಾಗಿತ್ತು” ಎಂದಿದ್ದಾರೆ.

ತೇಜಸ್ವಿ ಅರ್ಹತೆಗಳನ್ನು ಹೊಂದಿರಬಹುದು. ಆದರೆ ಅವರಿಗೆ ಶಿಕ್ಷಣದ ಕೊರತೆ ಇದೆ. ಕೆಟ್ಟದಾಗಿ, ಅವನಿಗೆ ಮಾನವೀಯತೆಯ ಕೊರತೆಯಿದೆ. ಈ ಮನುಷ್ಯನಿಗೆ ದಲಿತರ ನೋವು ಅರ್ಥವಾಗುವುದಿಲ್ಲ. ಆದರೆ, ಅವರು ತಮ್ಮ ಬಾಸ್‌ನ ಆಜ್ಞೆಗಳನ್ನು ಕುರುಡಾಗಿ ಅನುಸರಿಸಿ, ವಿಭಜಿಸುವ ಹಿಂದುತ್ವ ಸಿದ್ಧಾಂತಕ್ಕೆ ಅನುಕೂಲವಾಗುವಂತೆ ದಲಿತರನ್ನು ಬಳಸುತ್ತಾರೆ ಎಂದು ಪರಿಸರ ಕಾರ್ಯಕರ್ತ ಲಿಯೋ ಸಾಲ್ಡಾನಾ ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಗೃಹ ಸಚಿವ ಅಮಿತ್ ಶಾ ಏನು ಮಾಡುತ್ತಿದ್ದಾರೆ? ನಿದ್ದೆ ಮಾಡುತ್ತಿದ್ದಾರೆಯೆ?: ಓವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...