Homeಕರ್ನಾಟಕBJP ಎಂದೂ ಸಂವಿಧಾನವನ್ನು ನಂಬುವುದಿಲ್ಲ: ತೇಜಸ್ವಿ ಸೂರ್ಯ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

BJP ಎಂದೂ ಸಂವಿಧಾನವನ್ನು ನಂಬುವುದಿಲ್ಲ: ತೇಜಸ್ವಿ ಸೂರ್ಯ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಎಐಎಂಐಎಂ ಪಕ್ಷ ಅಥವಾ ಇನ್ಯಾವುದೇ ಪಕ್ಷ ದೇಶದ್ರೋಹಿ ಎಂದು ಸಾಬೀತಾಗಿದೆಯೇ? ಹಾಗಿದ್ದರೆ ಅದನ್ನು ಚುನಾವಣೆಯಲ್ಲಿ ಸ್ಪರ್ಧಿಸದಂತೆ ಗೃಹ ಸಚಿವ ಅಮಿತ್‌ ಶಾರವರು ಬ್ಯಾನ್ ಮಾಡಬೇಕಲ್ಲವೇ?

- Advertisement -
- Advertisement -

‘ಅಸಾದುದ್ದೀನ್ ಓವೈಸಿಗೆ ಹಾಕುವ ಪ್ರತಿ ಮತವು, ಭಾರತದ ವಿರುದ್ಧ ಹಾಕುವ ಮತ’ ಎಂಬ ಬೆಂಗಳೂರು ಸಂಸದ ತೇಜಸ್ವಿ ಸೂರ್ಯ ಹೇಳಿಕೆಯನ್ನು ಶಾಸಕ ಪ್ರಿಯಾಂಕ್ ಖರ್ಗೆ ಖಂಡಿಸಿದ್ದಾರೆ. ಸಂವಿಧಾನದ ಪ್ರಕಾರ ಇವಿಎಂ ಸ್ಲಿಪ್ ಮೂಲಕ ಒಂದು ಪಕ್ಷಕ್ಕೆ ಹಾಕುವ ಮತ ಭಾರತದ ವಿರುದ್ಧ ಹೇಗಾಗುತ್ತದೆ ವಿವರಿಸಿ ಎಂದು ತಾಕೀತು ಮಾಡಿದ್ದಾರೆ.

ಎಐಎಂಐಎಂ ಪಕ್ಷ ಅಥವಾ ಇನ್ಯಾವುದೇ ಪಕ್ಷ ದೇಶದ್ರೋಹಿ ಎಂದು ಸಾಬೀತಾಗಿದೆಯೇ? ಹಾಗಿದ್ದರೆ ಅದನ್ನು ಚುನಾವಣೆಯಲ್ಲಿ ಸ್ಪರ್ಧಿಸದಂತೆ ಗೃಹ ಸಚಿವ ಅಮಿತ್‌ ಶಾರವರು ಬ್ಯಾನ್ ಮಾಡಬೇಕಲ್ಲವೇ? ಸಮಸ್ಯೆಯೆಂದರೆ ಬಿಜೆಪಿ ಎಂದೂ ಸಂವಿಧಾನವನ್ನು ನಂಬುವುದಿಲ್ಲ ಎಂದು ಪ್ರಿಯಾಂಕ್ ಖರ್ಗೆ ಟ್ವೀಟ್‌ ಮಾಡಿದ್ದಾರೆ.

ಬಾಬಾಸಾಹೇಬ್ ಅಂಬೇಡ್ಕರ್‌ರವರು ಬರೆದ ‘ರಿಡಲ್ಸ್ ಇನ್ ಹಿಂದೂಯಿಸಂ’ ಎಂಬ ಪುಸ್ತಕವನ್ನು ಶೀಘ್ರದಲ್ಲೇ ಕಳಿಸುತ್ತೇನೆ. ಅದನ್ನು ನಿಮ್ಮ ಸಾಮಾಜಿಕ ಮಾಧ್ಯಮ ಖಾತೆ ಹ್ಯಾಂಡಲ್ ಮಾಡುವವರಿಗೆ ಓದಲು ತಿಳಿಸಿ. ನಾನು ಓದಬೇಕೆಂದು ಶಿಫಾರಸ್ಸು ಮಾಡುತ್ತೇನೆ. ನೀವು ಚುನಾವಣೆ ಗೆಲ್ಲಬೇಕೆಂದರೆ ವಿಭಜನಕಾರಿ ಹೇಳಿಕೆಗಳನ್ನು ನೀಡುವುದನ್ನು ಬಿಟ್ಟು, ಮಾನ್ಯ ನರೇಂದ್ರ ಮೋದಿಯವರು ಈ 6 ವರ್ಷದಲ್ಲಿ ಮಾಡಿದ ಸಾಧನೆಗಳ ಆಧಾರಲ್ಲಿ ಮತ ಕೇಳಬಹುದಲ್ಲವೇ? ನೀವು ಅಭಿವೃದ್ದಿ ಆಧಾರದಲ್ಲಿ ಚುನಾವಣೆ ಗೆಲ್ಲಲ್ಲು ಸಾಧ್ಯವಿಲ್ಲವೇ? ಎಂದು ಮತ್ತೊಂದು ಟ್ವೀಟ್‌ನಲ್ಲಿ ಪ್ರಶ್ನಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ತೇಜಸ್ವಿ ಸೂರ್ಯ “ಓವೈಸಿಯ ಇಸ್ಲಾಮಿಕ್ ಪ್ರಭುತ್ವದ ಸಿದ್ಧಾಂತವನ್ನು ಪವಿತ್ರ ಪುಸ್ತಕ ಸಂವಿಧಾನದ ಮೇಲೆ ಇಡುವುದು ಭಾರತ ವಿರೋಧಿ ಕ್ರಮ. ನಮ್ಮ ಸಂವಿಧಾನಕ್ಕೆ ಇಸ್ಲಾಂ ಧರ್ಮವು ಎಷ್ಟು ಮತಾಂಧವಾಗಿದೆ ಎಂಬುದರ ಕುರಿತು ಬಾಬಾಸಾಹೇಬರು ಬರೆದಿರುವುದನ್ನು ಓದಬೇಕೆಂದು ನಾನು ಸೂಚಿಸುತ್ತೇನೆ” ಎಂದಿದ್ದಾರೆ.

ವಾಸ್ತವವಾಗಿ ನೀವು ‘ಪಾಕಿಸ್ತಾನ ಅಥವಾ ಭಾರತದ ವಿಭಜನೆ’ ಕುರಿತು ಉಲ್ಲೇಖಿಸಿದ ಅದೇ ಪುಸ್ತಕದಲ್ಲಿ ಬಾಬಾಸಾಹೇಬರು ಎಲ್ಲಾ ರೀತಿಯ ಮತಾಂಧತೆಯನ್ನು ವಿರೋಧಿಸಿದ್ದಾರೆ. ಅಲ್ಲದೆ ಹಿಂದುತ್ವದ ಬಗ್ಗೆ ಎಚ್ಚರಿಕೆಗಳು ಪುಸ್ತಕದಲ್ಲಿವೆ ಗಮನಿಸಿ ಎಂದು ಪ್ರಿಯಾಂಕ್ ಖರ್ಗೆ ಮರು ಟ್ವೀಟ್‌ ಮಾಡಿದ್ದಾರೆ.

ಈ ಸಂವಾದಕ್ಕೆ ಹಲವು ನೆಟ್ಟಿಗರು ಜೊತೆಗೂಡಿದ್ದಾರೆ. ವಕೀಲರು ಮತ್ತು ಸಾಮಾಜಿಕ ಕಾರ್ಯಕರ್ತರಾದ ವಿನಯ್ ಶ್ರೀನಿವಾಸನ್ ಟ್ವೀಟ್‌ ಮಾಡಿ “ತೇಜಸ್ವಿ ಸೂರ್ಯರವರೆ ನೀವು ಏಕೆ ಅಂಬೇಡ್ಕರ್‌ರವರ ‘ಜಾತಿವಿನಾಶ’ ಪುಸ್ತಕವನ್ನು ಉಲ್ಲೇಖಿಸುವುದಿಲ್ಲ? ನಿಮಗಾಗಿ ಕೆಲವು ಆಯ್ದ ಭಾಗಗಳು ಇಲ್ಲಿವೆ. ‘ಹಿಂದೂ’ ಎಂಬ ಪದವನ್ನು ಸಹ ಮಹಮ್ಮದೀಯರು ನೀಡುತ್ತಾರೆ, ಏಕೆಂದರೆ ಹಿಂದೂ ಸಮಾಜವೆಂಬುದೇ ಇರಲಿಲ್ಲ. ಅದು ಕೇವಲ ಜಾತಿಗಳ ಕೊಂಪೆಯಾಗಿತ್ತು” ಎಂದಿದ್ದಾರೆ.

ತೇಜಸ್ವಿ ಅರ್ಹತೆಗಳನ್ನು ಹೊಂದಿರಬಹುದು. ಆದರೆ ಅವರಿಗೆ ಶಿಕ್ಷಣದ ಕೊರತೆ ಇದೆ. ಕೆಟ್ಟದಾಗಿ, ಅವನಿಗೆ ಮಾನವೀಯತೆಯ ಕೊರತೆಯಿದೆ. ಈ ಮನುಷ್ಯನಿಗೆ ದಲಿತರ ನೋವು ಅರ್ಥವಾಗುವುದಿಲ್ಲ. ಆದರೆ, ಅವರು ತಮ್ಮ ಬಾಸ್‌ನ ಆಜ್ಞೆಗಳನ್ನು ಕುರುಡಾಗಿ ಅನುಸರಿಸಿ, ವಿಭಜಿಸುವ ಹಿಂದುತ್ವ ಸಿದ್ಧಾಂತಕ್ಕೆ ಅನುಕೂಲವಾಗುವಂತೆ ದಲಿತರನ್ನು ಬಳಸುತ್ತಾರೆ ಎಂದು ಪರಿಸರ ಕಾರ್ಯಕರ್ತ ಲಿಯೋ ಸಾಲ್ಡಾನಾ ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಗೃಹ ಸಚಿವ ಅಮಿತ್ ಶಾ ಏನು ಮಾಡುತ್ತಿದ್ದಾರೆ? ನಿದ್ದೆ ಮಾಡುತ್ತಿದ್ದಾರೆಯೆ?: ಓವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....