Homeಮುಖಪುಟಬಾಬರಿ ಮಸೀದಿ ಧ್ವಂಸದಲ್ಲಿ ಪಾಲ್ಗೊಂಡಿದ್ದ ಅಜಿತ್ ಗೋಪ್ಚಾಡೆಯನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ ಬಿಜೆಪಿ

ಬಾಬರಿ ಮಸೀದಿ ಧ್ವಂಸದಲ್ಲಿ ಪಾಲ್ಗೊಂಡಿದ್ದ ಅಜಿತ್ ಗೋಪ್ಚಾಡೆಯನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ ಬಿಜೆಪಿ

- Advertisement -
- Advertisement -

ರಾಜ್ಯಸಭಾ ಚುನಾವಣೆಗೆ ಮಹಾರಾಷ್ಟ್ರದಿಂದ ಭಾರತೀಯ ಜನತಾ ಪಕ್ಷ (ಬಿಜೆಪಿ) ಬುಧವಾರ ಮೂವರು ಅಭ್ಯರ್ಥಿಗಳನ್ನು ಘೋಷಿಸಿದೆ. ಮೇಲ್ಮನೆಯಲ್ಲಿ ಮಹಾರಾಷ್ಟ್ರವನ್ನು ಪ್ರತಿನಿಧಿಸಲು ಮಾಜಿ ಸಿಎಂ ಅಶೋಕ್ ಚವ್ಹಾಣ್ ಮತ್ತು ಕೊತ್ರೂಡ್ ಮಾಜಿ ಶಾಸಕಿ ಮೇಧಾ ಕುಲಕರ್ಣಿ ಜೊತೆಗೆ ಡಾ.ಅಜಿತ್ ಗೋಪ್ಚಾಡೆ ಅವರನ್ನು ನಾಮನಿರ್ದೇಶನ ಮಾಡಲಾಗಿದೆ.

ಗೋಪ್ಚಾಡೆ ಅವರ ನಾಮ ನಿರ್ದೇಶನದ ನಂತರ, ಅವರ ಹಳೆಯ ಫೋಟೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಲು ಪ್ರಾರಂಭಿಸಿವೆ. 1992ರಲ್ಲಿ ರಾಮ ಜನ್ಮಭೂಮಿ ಆಂದೋಲನದ ಭಾಗವಾಗಿ ಅಯೋಧ್ಯೆಯಲ್ಲಿ ನಡೆದ ಬಾಬರಿ ಮಸೀದಿ ಧ್ವಂಸ ಕಾರ್ಯದಲ್ಲಿ ಈ ಅಜಿತ್ ಗೋಪ್ಚಾಡೆ ಭಾಗವಹಿಸಿದ್ದರು. ಬಾಬರಿ ಮಸೀದಿಯ ಗುಂಬಝಿನ ಮೇಲೆ ಹತ್ತಿ ನಿಂತಿದ್ದವರ ಗುಂಪಿನಲ್ಲಿದ್ದ ಗೋಪ್ಚಾಡೆಯವರ ಫೋಟೋ ಅಂದು ವೈರಲ್ ಆಗಿತ್ತು. ಈಗ ಗೋಪ್ಚಾಡೆ ರಾಜ್ಯಸಭೆಗೆ ನಾಮ ನಿರ್ದೇಶನವಾಗುತ್ತಿದ್ದಂತೆ, ಆ ಹಳೆಯ ಫೋಟೋ ಮತ್ತೊಮ್ಮೆ ಮುನ್ನಲೆಗೆ ಬಂದಿದೆ.

ಅಜಿತ್ ಗೋಪ್ಚಾಡೆ ಯಾರು?

ಡಾ. ಅಜಿತ್ ಗೋಪ್ಚಾಡೆ ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್)ದ ಸಕ್ರಿಯ ಕಾರ್ಯಕರ್ತರಾಗಿದ್ದಾರೆ. ಸಂಘಟನೆಯ ಮೇಲಿನ ನಿಷ್ಠೆಗೆ ಅವರು ಹೆಸರುವಾಸಿಯಾಗಿದ್ದಾರೆ. ಈ ಹಿಂದೆ ಮಹಾರಾಷ್ಟ್ರ ಬಿಜೆಪಿಯ ಉಪಾಧ್ಯಕ್ಷ ಸ್ಥಾನದ ಜವಾಬ್ದಾರಿಯನ್ನು ಅವರಿಗೆ ವಹಿಸಲಾಗಿತ್ತು. ನಾಂದೇಡ್ ಲೋಕಸಭಾ ಕ್ಷೇತ್ರ, ನಾಂದೇಡ್ ಮತ್ತು ನೈಗಾಂವ್ ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಅವರ ಹೆಸರು ಆಗಾಗ ಚರ್ಚೆಯಾಗುತ್ತಿರುತ್ತದೆ. ಸಾಮಾಜಿಕ ಮತ್ತು ಶೈಕ್ಷಣಿಕ ಚಟುವಟಿಕೆಗಳಲ್ಲಿ ಕೂಡ ಅವರು ಗುರುತಿಸಿಕೊಂಡಿದ್ದಾರೆ.

ಕಾಲೇಜಿನಲ್ಲಿದ್ದಾಗಲೇ ವಿವಿಧ ವಿದ್ಯಾರ್ಥಿ ಚಳವಳಿಗಳನ್ನು ಸಂಘಟಿಸುವಲ್ಲಿ ಮುಂದಾಳತ್ವ ವಹಿಸಿದ್ದ ಅಜಿತ್ ಅವರು, ಬಿಜೆಪಿ ನಾಯಕರಾದ ಪ್ರಮೋದ್ ಮಹಾಜನ್, ಗೋಪಿನಾಥ್ ಮುಂಡೆ ಮತ್ತು ನಿತಿನ್ ಗಡ್ಕರಿ ಅವರೊಂದಿಗಿನ ಒಡನಾಟದ ಮೂಲಕ ಬಿಜೆಪಿಯ ವಿದ್ಯಾರ್ಥಿ ಘಟಕ ಎಬಿವಿಪಿಯಲ್ಲಿ ಗುರುತಿಸಿಕೊಂಡಿದ್ದರು. ಆರೋಗ್ಯ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ಅವರ ಕೆಲಸವೂ ಗಮನಾರ್ಹವಾಗಿದೆ. ಎಂಬಿಬಿಎಸ್ ಮತ್ತು ಎಂಡಿ ಪದವಿ ಪಡೆದಿರುವ ಡಾ. ಅಜಿತ್ ಗೋಪ್ಚಾಡೆ ಅವರು ಮಕ್ಕಳ ಕಾಯಿಲೆಗಳ ಚಿಕಿತ್ಸೆಯಲ್ಲಿ ಪರಿಣತಿ ಹೊಂದಿದ್ದಾರೆ.

ಮಹಾರಾಷ್ಟ್ರ ಬಿಜೆಪಿ ವೈದ್ಯರ ಘಟಕದ ಮುಖ್ಯಸ್ಥರಾಗಿರುವ ಗೋಪ್ಚಾಡೆ, ಜಿ-20 ಶೃಂಗಸಭೆ ಕಾರ್ಯಕ್ರಮದ ಸಮಿತಿಯಲ್ಲೂ ಇದ್ದರು. ಬಿಜೆಪಿಯು 2020ರ ಮೇನಲ್ಲಿ ಮಹಾರಾಷ್ಟ್ರ ರಾಜ್ಯ ವಿಧಾನ ಪರಿಷತ್ತಿನ ಚುನಾವಣೆಗೆ ಗೋಪ್ಚಾಡೆ ಅವರನ್ನು ನಾಮನಿರ್ದೇಶನ ಮಾಡಿತ್ತು. ಗೋಪ್ಚಾಡೆ ಅವರು ನಾಮಪತ್ರ ಸಲ್ಲಿಸಿದ್ದರು. ಆದರೆ, ಇದಾಗಿ ಕೆಲವೇ ಗಂಟೆಗಳಲ್ಲಿ ಪಕ್ಷ ತನ್ನ ನಿರ್ಧಾರ ಬದಲಾಯಿಸಿತ್ತು. ಗೋಪ್ಚಾಡೆ ಬದಲಿಗೆ ದಿವಂಗತ ಗೋಪಿನಾಥ್ ಮುಂಡೆ ಮತ್ತು ಅವರ ಪುತ್ರಿ ಪಂಕಜಾ ಮುಂಡೆ ಅವರ ನಿಕಟವರ್ತಿ ರಮೇಶ್ ಕರಾಡ್‌ಗೆ ಅವಕಾಶ ನೀಡಿತ್ತು.

ರಾಜ್ಯಸಭೆಗೆ ನಾಮನಿರ್ದೇಶನ ಗೋಪ್ಚಾಡೆ ಹೇಳಿದ್ದೇನು?

ತನ್ನನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವ ಪಕ್ಷದ ನಿರ್ಧಾರದ ಬಗ್ಗೆ ಪ್ರತಿಕ್ರಿಯಿಸಿದ ಅಜಿತ್ ಗೋಪ್ಚಾಡೆ, “ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ತಮ್ಮ ಸಮಿತಿಯ ಮೂಲಕ ನಿರ್ಧಾರ ಕೈಗೊಂಡಿದ್ದಾರೆ. ಈ ಮೂಲಕ ಪಕ್ಷದ ಸಂಘಟನೆಯನ್ನು ಹೆಚ್ಚಿಸುವುದು ನನ್ನ ಜವಬ್ದಾರಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ : ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್; ಕರ್ನಾಟಕದಿಂದ ಮಾಕೇನ್‌ಗೆ ಟಿಕೆಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...