Homeಮುಖಪುಟಬಾಬರಿ ಮಸೀದಿ ಧ್ವಂಸದಲ್ಲಿ ಪಾಲ್ಗೊಂಡಿದ್ದ ಅಜಿತ್ ಗೋಪ್ಚಾಡೆಯನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ ಬಿಜೆಪಿ

ಬಾಬರಿ ಮಸೀದಿ ಧ್ವಂಸದಲ್ಲಿ ಪಾಲ್ಗೊಂಡಿದ್ದ ಅಜಿತ್ ಗೋಪ್ಚಾಡೆಯನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ ಬಿಜೆಪಿ

- Advertisement -
- Advertisement -

ರಾಜ್ಯಸಭಾ ಚುನಾವಣೆಗೆ ಮಹಾರಾಷ್ಟ್ರದಿಂದ ಭಾರತೀಯ ಜನತಾ ಪಕ್ಷ (ಬಿಜೆಪಿ) ಬುಧವಾರ ಮೂವರು ಅಭ್ಯರ್ಥಿಗಳನ್ನು ಘೋಷಿಸಿದೆ. ಮೇಲ್ಮನೆಯಲ್ಲಿ ಮಹಾರಾಷ್ಟ್ರವನ್ನು ಪ್ರತಿನಿಧಿಸಲು ಮಾಜಿ ಸಿಎಂ ಅಶೋಕ್ ಚವ್ಹಾಣ್ ಮತ್ತು ಕೊತ್ರೂಡ್ ಮಾಜಿ ಶಾಸಕಿ ಮೇಧಾ ಕುಲಕರ್ಣಿ ಜೊತೆಗೆ ಡಾ.ಅಜಿತ್ ಗೋಪ್ಚಾಡೆ ಅವರನ್ನು ನಾಮನಿರ್ದೇಶನ ಮಾಡಲಾಗಿದೆ.

ಗೋಪ್ಚಾಡೆ ಅವರ ನಾಮ ನಿರ್ದೇಶನದ ನಂತರ, ಅವರ ಹಳೆಯ ಫೋಟೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಲು ಪ್ರಾರಂಭಿಸಿವೆ. 1992ರಲ್ಲಿ ರಾಮ ಜನ್ಮಭೂಮಿ ಆಂದೋಲನದ ಭಾಗವಾಗಿ ಅಯೋಧ್ಯೆಯಲ್ಲಿ ನಡೆದ ಬಾಬರಿ ಮಸೀದಿ ಧ್ವಂಸ ಕಾರ್ಯದಲ್ಲಿ ಈ ಅಜಿತ್ ಗೋಪ್ಚಾಡೆ ಭಾಗವಹಿಸಿದ್ದರು. ಬಾಬರಿ ಮಸೀದಿಯ ಗುಂಬಝಿನ ಮೇಲೆ ಹತ್ತಿ ನಿಂತಿದ್ದವರ ಗುಂಪಿನಲ್ಲಿದ್ದ ಗೋಪ್ಚಾಡೆಯವರ ಫೋಟೋ ಅಂದು ವೈರಲ್ ಆಗಿತ್ತು. ಈಗ ಗೋಪ್ಚಾಡೆ ರಾಜ್ಯಸಭೆಗೆ ನಾಮ ನಿರ್ದೇಶನವಾಗುತ್ತಿದ್ದಂತೆ, ಆ ಹಳೆಯ ಫೋಟೋ ಮತ್ತೊಮ್ಮೆ ಮುನ್ನಲೆಗೆ ಬಂದಿದೆ.

ಅಜಿತ್ ಗೋಪ್ಚಾಡೆ ಯಾರು?

ಡಾ. ಅಜಿತ್ ಗೋಪ್ಚಾಡೆ ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್)ದ ಸಕ್ರಿಯ ಕಾರ್ಯಕರ್ತರಾಗಿದ್ದಾರೆ. ಸಂಘಟನೆಯ ಮೇಲಿನ ನಿಷ್ಠೆಗೆ ಅವರು ಹೆಸರುವಾಸಿಯಾಗಿದ್ದಾರೆ. ಈ ಹಿಂದೆ ಮಹಾರಾಷ್ಟ್ರ ಬಿಜೆಪಿಯ ಉಪಾಧ್ಯಕ್ಷ ಸ್ಥಾನದ ಜವಾಬ್ದಾರಿಯನ್ನು ಅವರಿಗೆ ವಹಿಸಲಾಗಿತ್ತು. ನಾಂದೇಡ್ ಲೋಕಸಭಾ ಕ್ಷೇತ್ರ, ನಾಂದೇಡ್ ಮತ್ತು ನೈಗಾಂವ್ ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಅವರ ಹೆಸರು ಆಗಾಗ ಚರ್ಚೆಯಾಗುತ್ತಿರುತ್ತದೆ. ಸಾಮಾಜಿಕ ಮತ್ತು ಶೈಕ್ಷಣಿಕ ಚಟುವಟಿಕೆಗಳಲ್ಲಿ ಕೂಡ ಅವರು ಗುರುತಿಸಿಕೊಂಡಿದ್ದಾರೆ.

ಕಾಲೇಜಿನಲ್ಲಿದ್ದಾಗಲೇ ವಿವಿಧ ವಿದ್ಯಾರ್ಥಿ ಚಳವಳಿಗಳನ್ನು ಸಂಘಟಿಸುವಲ್ಲಿ ಮುಂದಾಳತ್ವ ವಹಿಸಿದ್ದ ಅಜಿತ್ ಅವರು, ಬಿಜೆಪಿ ನಾಯಕರಾದ ಪ್ರಮೋದ್ ಮಹಾಜನ್, ಗೋಪಿನಾಥ್ ಮುಂಡೆ ಮತ್ತು ನಿತಿನ್ ಗಡ್ಕರಿ ಅವರೊಂದಿಗಿನ ಒಡನಾಟದ ಮೂಲಕ ಬಿಜೆಪಿಯ ವಿದ್ಯಾರ್ಥಿ ಘಟಕ ಎಬಿವಿಪಿಯಲ್ಲಿ ಗುರುತಿಸಿಕೊಂಡಿದ್ದರು. ಆರೋಗ್ಯ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ಅವರ ಕೆಲಸವೂ ಗಮನಾರ್ಹವಾಗಿದೆ. ಎಂಬಿಬಿಎಸ್ ಮತ್ತು ಎಂಡಿ ಪದವಿ ಪಡೆದಿರುವ ಡಾ. ಅಜಿತ್ ಗೋಪ್ಚಾಡೆ ಅವರು ಮಕ್ಕಳ ಕಾಯಿಲೆಗಳ ಚಿಕಿತ್ಸೆಯಲ್ಲಿ ಪರಿಣತಿ ಹೊಂದಿದ್ದಾರೆ.

ಮಹಾರಾಷ್ಟ್ರ ಬಿಜೆಪಿ ವೈದ್ಯರ ಘಟಕದ ಮುಖ್ಯಸ್ಥರಾಗಿರುವ ಗೋಪ್ಚಾಡೆ, ಜಿ-20 ಶೃಂಗಸಭೆ ಕಾರ್ಯಕ್ರಮದ ಸಮಿತಿಯಲ್ಲೂ ಇದ್ದರು. ಬಿಜೆಪಿಯು 2020ರ ಮೇನಲ್ಲಿ ಮಹಾರಾಷ್ಟ್ರ ರಾಜ್ಯ ವಿಧಾನ ಪರಿಷತ್ತಿನ ಚುನಾವಣೆಗೆ ಗೋಪ್ಚಾಡೆ ಅವರನ್ನು ನಾಮನಿರ್ದೇಶನ ಮಾಡಿತ್ತು. ಗೋಪ್ಚಾಡೆ ಅವರು ನಾಮಪತ್ರ ಸಲ್ಲಿಸಿದ್ದರು. ಆದರೆ, ಇದಾಗಿ ಕೆಲವೇ ಗಂಟೆಗಳಲ್ಲಿ ಪಕ್ಷ ತನ್ನ ನಿರ್ಧಾರ ಬದಲಾಯಿಸಿತ್ತು. ಗೋಪ್ಚಾಡೆ ಬದಲಿಗೆ ದಿವಂಗತ ಗೋಪಿನಾಥ್ ಮುಂಡೆ ಮತ್ತು ಅವರ ಪುತ್ರಿ ಪಂಕಜಾ ಮುಂಡೆ ಅವರ ನಿಕಟವರ್ತಿ ರಮೇಶ್ ಕರಾಡ್‌ಗೆ ಅವಕಾಶ ನೀಡಿತ್ತು.

ರಾಜ್ಯಸಭೆಗೆ ನಾಮನಿರ್ದೇಶನ ಗೋಪ್ಚಾಡೆ ಹೇಳಿದ್ದೇನು?

ತನ್ನನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವ ಪಕ್ಷದ ನಿರ್ಧಾರದ ಬಗ್ಗೆ ಪ್ರತಿಕ್ರಿಯಿಸಿದ ಅಜಿತ್ ಗೋಪ್ಚಾಡೆ, “ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ತಮ್ಮ ಸಮಿತಿಯ ಮೂಲಕ ನಿರ್ಧಾರ ಕೈಗೊಂಡಿದ್ದಾರೆ. ಈ ಮೂಲಕ ಪಕ್ಷದ ಸಂಘಟನೆಯನ್ನು ಹೆಚ್ಚಿಸುವುದು ನನ್ನ ಜವಬ್ದಾರಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ : ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್; ಕರ್ನಾಟಕದಿಂದ ಮಾಕೇನ್‌ಗೆ ಟಿಕೆಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...