Homeಮುಖಪುಟಈಶಾನ್ಯ ರಾಜ್ಯಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಬಿಜೆಪಿ ಹಿಂದೇಟು: ಜನಾಕ್ರೋಶದ ಭಯ?

ಈಶಾನ್ಯ ರಾಜ್ಯಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಬಿಜೆಪಿ ಹಿಂದೇಟು: ಜನಾಕ್ರೋಶದ ಭಯ?

- Advertisement -
- Advertisement -

ಮತ್ತೊಮ್ಮೆ ದೇಶದ ಆಡಳಿತ ಚುಕ್ಕಾಣಿ ಹಿಡಿಯುವ ಉತ್ಸಾಹದಲ್ಲಿರುವ ಭಾರತೀಯ ಜನತಾ ಪಕ್ಷ (ಬಿಜೆಪಿ) ವಿವಿಧ ರಾಜ್ಯಗಳ ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಆದರೆ, ಈಶಾನ್ಯ ರಾಜ್ಯಗಳಲ್ಲಿ ನೇರವಾಗಿ ಕಣಕ್ಕಿಳಿಯಲು ಹಿಂದೇಟು ಹಾಕಿದೆ.

ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಮೇಘಾಲಯದ ಎರಡೂ ಲೋಕಸಭಾ ಕ್ಷೇತ್ರಗಳಲ್ಲಿ ಆಡಳಿತಾರೂಢ ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ), ಮಣಿಪುರದ ಎರಡು ಲೋಕಸಭಾ ಕ್ಷೇತ್ರಗಳ ಪೈಕಿ ಒಂದರಲ್ಲಿ ನಾಗಾ ಪೀಪಲ್ಸ್ ಫ್ರಂಟ್ (ಎನ್‌ಪಿಎಫ್) ಗೆ ಮತ್ತು ನಾಗಾಲ್ಯಾಂಡ್‌ನ ಏಕೈಕ ಲೋಕಸಭಾ ಕ್ಷೇತ್ರದಲ್ಲಿ ಆಡಳಿತ ಪಕ್ಷವಾದ ನ್ಯಾಷನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ (ಎನ್‌ಡಿಪಿಪಿ) ಯನ್ನು ಬೆಂಬಲಿಸಲು ಬಿಜೆಪಿ ನಿರ್ಧಿರಿಸಿದೆ.

ಈ ಕುರಿತು ಬಿಜೆಪಿಯ ಈಶಾನ್ಯ ರಾಜ್ಯಗಳ ಉಸ್ತುವಾರಿ ಸಂಬೀತ್ ಪಾತ್ರಾ ಅವರು ಎಕ್ಸ್‌ನಲ್ಲಿ ಘೋಷಣೆ ಮಾಡಿದ್ದಾರೆ. “ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಜಿ ಅವರ ಸೂಚನೆಯಂತೆ, ಮೇಘಾಲಯದ (ಶಿಲ್ಲಾಂಗ್ ಮತ್ತು ತುರಾ) ಎರಡೂ ಸ್ಥಾನಗಳಲ್ಲಿ ಎನ್‌ಪಿಪಿಯ ಲೋಕಸಭಾ ಅಭ್ಯರ್ಥಿಗಳಿಗೆ ಬಿಜೆಪಿ ತನ್ನ ಬೆಂಬಲವನ್ನು ನೀಡಲಿದೆ. ಹೊರ ಮಣಿಪುರ ಕ್ಷೇತ್ರದಲ್ಲಿ ಎನ್‌ಪಿಎಫ್‌ಗೆ ಮತ್ತು ನಾಗಾಲ್ಯಾಂಡ್‌ನಲ್ಲಿ ಎನ್‌ಡಿಪಿಪಿಯನ್ನು ಬೆಂಬಲಿಸಲು ನಿರ್ಧರಿಸಲಾಗಿದೆ ಎಂದಿದ್ದಾರೆ.

2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮೇಘಾಲಯದ ಎರಡು ಕ್ಷೇತ್ರಗಳಲ್ಲಿ ಮತ್ತು ಮಣಿಪುರದ ಒಂದು ಕ್ಷೇತ್ರದಲ್ಲಿ ಅಭ್ಯರ್ಥಿಗಳನ್ನು ಹಾಕಿದ್ದ ಬಿಜೆಪಿ ಸೋಲನುಭವಿಸಿತ್ತು. ಎನ್‌ಪಿಎಫ್ ಮತ್ತು ಎನ್‌ಡಿಪಿಪಿಗೆ ಬಿಜೆಪಿ ಬೆಂಬಲ ನೀಡಿದ ಸ್ಥಾನಗಳನ್ನು 2019 ರ ಲೋಕಸಭೆ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷಗಳು ಗೆದ್ದಿತ್ತು. ಮೇಘಾಲಯದ ಎರಡು ಸ್ಥಾನಗಳಲ್ಲಿ ಒಂದನ್ನು ಎನ್‌ಪಿಪಿ ಗೆದ್ದಿತ್ತು.

ಮಣಿಪುರದಲ್ಲಿ ನಡೆದ ಜನಾಂಗೀಯ ಸಂಘರ್ಷ ಮತ್ತು ಅದಕ್ಕೆ ಕೇಂದ್ರದ ಬಿಜೆಪಿ ಸರ್ಕಾರ ಸ್ಪಂದಿಸಿದ ರೀತಿ ಈ ಬಾರಿಯ ಚುನಾವಣೆಯಲ್ಲಿ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆಯಿದೆ. ಹಾಗಾಗಿ, ಕ್ರಿಶ್ಚಿಯನ್ ಜನಸಂಖ್ಯೆ ಹೆಚ್ಚಿರುವ ಕ್ಷೇತ್ರಗಳಲ್ಲಿ ಬಿಜೆಪಿ ಪ್ರಾದೇಶಿಕ ಪಕ್ಷಗಳನ್ನು ಬೆಂಬಲಿಸಿದೆ ಎಂದು ಹೇಳಲಾಗುತ್ತಿದೆ.

ಬಲಿಷ್ಠ ಪಕ್ಷಕ್ಕೆ ಜನಾಕ್ರೋಶದ ಭಯ?

ಆದಿವಾಸಿಗಳು, ಅಲ್ಪ ಸಂಖ್ಯಾತರು ಹೆಚ್ಚಿರುವ ಈಶಾನ್ಯ ರಾಜ್ಯಗಳ ರಾಜಕೀಯವೇ ಬೇರೆ. ಅಲ್ಲಿ ಬಿಜೆಪಿ ದೇಶದ ಇತರ ಭಾಗಗಳಲ್ಲಿ ಪ್ರಯೋಗಿಸಿದಂತೆ ಹಿಂದುತ್ವದ ಭಾವನಾತ್ಮಕ ಅಜೆಂಡಾ ಪ್ರಯೋಗಿಸಲು ಸಾಧ್ಯವಿಲ್ಲ. ಮಣಿಪುರದಲ್ಲಿ ಕಳೆದ ಒಂದು ವರ್ಷದಿಂದ ಸಂಘರ್ಷ ನಡೆಯುತ್ತಿದ್ದರೂ, ಒಂದೇ ಒಂದು ಬಾರಿ ಭೇಟಿ ನೀಡದ ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಅಲ್ಲಿನ ಜನರಿಗೆ ಆಕ್ರೋಶ ಇರುವುದನ್ನು ಅಲ್ಲಗಳೆಯುವಂತಿಲ್ಲ. ಹಾಗಾಗಿ, ತನ್ನನ್ನು ತಾನು ಬಲಿಷ್ಠ ಪಕ್ಷ ಎಂದು ಹೇಳಿಕೊಳ್ಳುವ ಬಿಜೆಪಿಗೆ ಈಶಾನ್ಯ ರಾಜ್ಯಗಳ ಜನರ ಆಕ್ರೋಶದ ಭಯವಿದೆ. ಹಾಗಾಗಿ, ನೇರವಾಗಿ ಅಭ್ಯರ್ಥಿಗಳನ್ನು ಕಣಕ್ಕಿಳಿಸದೆ ಪ್ರಾದೇಶಿಕ ಪಕ್ಷಗಳಿಗೆ ಬೆಂಬಲ ನೀಡಿ ಸುಮ್ಮನಾಗಿವೆ ಎಂದು ಹೇಳಲಾಗ್ತಿದೆ.

ಇದನ್ನೂ ಓದಿ : ‘ನಿಮಗೆ ದೈತ್ಯ ಗಾತ್ರದ ವಾಷಿಂಗ್ ಮೆಷಿನ್ ಅಗತ್ಯವಿದೆ..’; ನವೀನ್ ಜಿಂದಾಲ್ ಬಿಜೆಪಿ ಸೇರ್ಪಡೆಗೆ ಜೈರಾಮ್ ಲೇವಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...