Homeಮುಖಪುಟಬಿಜೆಪಿ ಕಳ್ಳರ ಪಕ್ಷ, ಅವರಿಗಿಂತ ದೊಡ್ಡ ಕಳ್ಳರು ಎಲ್ಲೂ ಇಲ್ಲ- ಮಮತಾ ಬ್ಯಾನರ್ಜಿ ವಾಗ್ದಾಳಿ

ಬಿಜೆಪಿ ಕಳ್ಳರ ಪಕ್ಷ, ಅವರಿಗಿಂತ ದೊಡ್ಡ ಕಳ್ಳರು ಎಲ್ಲೂ ಇಲ್ಲ- ಮಮತಾ ಬ್ಯಾನರ್ಜಿ ವಾಗ್ದಾಳಿ

”2014, 2019 ರ ಸಾರ್ವತ್ರಿಕ ಚುನಾವಣೆಗಳಲ್ಲಿ ಒಂದು ವರ್ಷದಲ್ಲಿ 2 ಕೋಟಿ ಉದ್ಯೋಗಗಳು ನೀಡುವ ಭರವಸೆ ನೀಡಿದ್ದರು, 2 ಲಕ್ಷ ಉದ್ಯೋಗಗಳನ್ನಾದರೂ ನೀಡಿದ್ದಾರೆಯೇ..?’

- Advertisement -
- Advertisement -

ಭಾರತೀಯ ಜನತಾ ಪಕ್ಷ (ಬಿಜೆಪಿ) ಕಳ್ಳರ ಪಕ್ಷವಾಗಿದ್ದು, ಸಮಾಜದಲ್ಲಿ ವಿವಿಧ ಗುಂಪುಗಳ ನಡುವೆ ಭಿನ್ನಾಭಿಪ್ರಾಯಗಳನ್ನು ಹುಟ್ಟುಹಾಕುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದ್ದಾರೆ.

“ನಾವು ರಾಜ್ಯದ ಜನರಿಗಾಗಿ ಕೆಲಸ ಮಾಡುತ್ತಿದ್ದೇವೆ. ಬಿಜೆಪಿ ಯಾವಾಗಲೂ ನಮ್ಮನ್ನು ಕಳ್ಳರು ಎಂದು ಆರೋಪಿಸುತ್ತಾರೆ. ಆದರೆ, ಬಿಜೆಪಿಗಿಂತ ದೊಡ್ಡ ಕಳ್ಳ ಯಾರು ಇಲ್ಲ. ಅವರು ದೊಡ್ಡ ದರೋಡೆಕೋರರು. ಇಡೀ ಜಲ್ಪೈಗುರಿ-ಅಲಿಪುರ್ದಾರ್ ಪ್ರದೇಶದಲ್ಲಿ ಅವರು ‘ದಂಗಾ’ ಎಂಬ ಹೊಸ ಧರ್ಮವನ್ನು ಪ್ರಾರಂಭಿಸಿದರು. ಇದು  ಸ್ವಾಮಿ ವಿವೇಕಾನಂದ ಅಥವಾ ರಾಮಕೃಷ್ಣ ಪರಮಹಂಸ ಸೂಚಿಸಿದಂತೆ ಹಿಂದೂ ಧರ್ಮವಲ್ಲ” ಎಂದು ಜಲ್ಪೈಗುರಿಯಲ್ಲಿ ನಡೆದ ಸಾರ್ವಜನಿಕ ರ್‍ಯಾಲಿಯಲ್ಲಿ ಬಿಜೆಪಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

“ಬಿಜೆಪಿಯವರು ಹಿಂದೂ, ಮುಸ್ಲಿಂ, ಸಿಖ್ಖರು ಮತ್ತು ಕ್ರಿಶ್ಚಿಯನ್ನರ ನಡುವೆ ದ್ವೇಷವನರ್‍ನು ಎತ್ತಿಕಟ್ಟುತ್ತಾರೆ.  ಬಂಗಾಳಿ-ರಾಜ್‌ಬೋನ್ಶಿ, ಬಂಗಾಳಿ-ಬೋಡೋ ಜನರ ನಡುವೆ, ಬೋಡಿ ಮತ್ತು ಮುಸ್ಲಿಮರ ನಡುವೆ, ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರ ನಡುವೆ ಅಥವಾ ಕ್ರಿಶ್ಚಿಯನ್ನರು ಮತ್ತು ಆದಿವಾಸಿಗಳ ನಡುವೆ ದ್ವೇಷ ಬಿತ್ತುವುದೇ ಅವರ ಕೆಲಸವಾಗಿದೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಬಂಗಾಳವನ್ನು’ಗಲಭೆ ಪೀಡಿತ ಗುಜರಾತ್’ ಮಾಡಲು ಎಂದಿಗೂ ಬಿಡುವುದಿಲ್ಲ- ಮಮತಾ ಬ್ಯಾನರ್ಜಿ

’ಬಿಜೆಪಿಗಿಂತ ದೊಡ್ಡ ಕಳ್ಳರ ಪಕ್ಷ ಯಾವುದು ಇಲ್ಲ. ಅವರು ಚಂಬಲ್‌ನ ದರೋಡೆಕೋರರು ಎಂದಿರುವ ಮಮತಾ ಬ್ಯಾನರ್ಜಿ, ಬಿಜೆಪಿಗರು 2014, 2016, 2019 ರ ಚುನಾವಣೆಗಳಲ್ಲಿ ಜಲ್ಪೈಗುರಿ-ಅಲಿಪುರ್ದಾರ್ ಪ್ರದೇಶದಲ್ಲಿ ಏಳು ಚಹಾ ತೋಟಗಳನ್ನು ಮತ್ತೆ ತೆರೆಯಲಾಗುವುದು, ಕೇಂದ್ರವು ಅವುಗಳನ್ನು ವಹಿಸಿಕೊಳ್ಳಲಿದೆ ಎಂದು ಭರವಸೆ ನೀಡಿದ್ದರು. ಅವರು ತಮ್ಮ ಭರವಸೆಯನ್ನು ಪೂರೈಸಿದ್ದಾರೆಯೇ?’ ಎಂದು ಪ್ರಶ್ನೆಸಿದ್ದಾರೆ.

2014 ಮತ್ತು 2019 ರ ಸಾರ್ವತ್ರಿಕ ಚುನಾವಣೆಗಳಲ್ಲಿ ಒಂದು ವರ್ಷದಲ್ಲಿ 2 ಕೋಟಿ ಉದ್ಯೋಗಗಳು ನೀಡುವ ಭರವಸೆ ನೀಡಿದ್ದರು, ಆದರೆ ಅವರು ಕೇವಲ 2 ಲಕ್ಷ ಉದ್ಯೋಗಗಳನ್ನಾದರೂ ನೀಡಿದ್ದಾರೆಯೇ..? ಇನ್ನೂ, 2014 ರ ಸಾರ್ವತ್ರಿಕ ಚುನಾವಣೆಯಲ್ಲಿ ಅವರು ಪ್ರತಿ ಖಾತೆಯಲ್ಲೂ 15 ಲಕ್ಷ ರೂ. ಹಾಕುವ ಭರವಸೆ ನೀಡಿದರು. ಅವರು ಆ ಭರವಸೆಯನ್ನಾದರೂ ಉಳಿಸಿಕೊಂಡಿದ್ದಾರೆಯೇ? ಅವರು ಬರೀ ಸುಳ್ಳು ಭರವಸೆಗಳನ್ನು ಮಾತ್ರ ನೀಡುತ್ತಾರೆ” ಎಂದು ಬಿಜೆಪಿಯನ್ನು ತೀವ್ರವಾಗಿ ಟೀಕಿಸಿದ್ದಾರೆ.

ಇದನ್ನೂ ಓದಿ: ಜನರಿಗೆ ಪ್ರಯೋಜನ ಆಗುವುದಾದರೇ ರಜನಿಕಾಂತ್ ಜೊತೆಗೆ ಮೈತ್ರಿಗೆ ಸಿದ್ಧ- ಕಮಲ್ ಹಾಸನ್

ಗೂರ್ಖಾಲ್ಯಾಂಡ್ ವಿಷಯದ ಕುರಿತು ಮಾತನಾಡಿದ ಮುಖ್ಯಮಂತ್ರಿ, “ಪ್ರತಿ ಚುನಾವಣೆಯಲ್ಲೂ ಅವರು ಗೂರ್ಖಾಲ್ಯಾಂಡ್‌ ಭರವಸೆ ನೀಡುತ್ತಾರೆ. ಆದರೆ ಈಡೇರಿಸುವುದಿಲ್ಲ. ಈ ವಿಷಯವನ್ನು ಡಾರ್ಜಿಲಿಂಗ್‌ನ ಜನರು ಈಗ ಅರಿತುಕೊಂಡಿದ್ದಾರೆ. ನಾವು ಮಾತ್ರ ಡಾರ್ಜಿಲಿಂಗ್‌ಗೆ ಶಾಶ್ವತ ಪರಿಹಾರವನ್ನು ನೀಡಬಲ್ಲೆವು’ ಎಂದು ಭರವಸೆ ನೀಡಿದ್ದಾರೆ.

ಗೂರ್ಖಾ ಜನಮುಕ್ತಿ ಮೋರ್ಚಾದ (GJM) ಹಿರಿಯ ನಾಯಕ ಬಿಮಲ್ ಗುರುಂಗ್ ಬಣದ ರೋಶನ್ ಗಿರಿ ಕೂಡ ಮುಂದಿನ ವರ್ಷದ ಪಶ್ಚಿಮ ಬಂಗಾಳ ವಿಧಾನಸಭ ಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಟಿಎಂಸಿ ಪಕ್ಷವನ್ನು ಬೆಂಬಲಿಸುವುದಾಗಿ ಘೋಷಿಸಿದ್ದಾರೆ.

“ನಾವು ಬಿಜೆಪಿಯನ್ನು ನಂಬುವುದಿಲ್ಲ ಆದರೆ ತೃಣಮೂಲ ಕಾಂಗ್ರೆಸ್ ಮೇಲೆ ನಮಗೆ ನಂಬಿಕೆ ಇದೆ” ಎಂದು ಗೂರ್ಖಾ ಜನಮುಕ್ತಿ ಮೋರ್ಚಾದ  ರೋಶನ್ ಗಿರಿ ಹೇಳಿದ್ದರು.


ಇದನ್ನೂ ಓದಿ: ಬಿಜೆಪಿ ನನ್ನ ಜೈಲಿಗೆ ಹಾಕಿದರೂ, ಅಲ್ಲಿಂದಲೇ ಪಕ್ಷವನ್ನು ಗೆಲ್ಲಿಸುವೆ-ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....