Homeಕರ್ನಾಟಕಮಂಡ್ಯ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಖಾತೆ ತೆರೆದ ಬಿಜೆಪಿ: ಪಕ್ಷ ಪ್ರಾಬಲ್ಯವಿರದ ಕಡೆ ಗೆಲುವು

ಮಂಡ್ಯ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಖಾತೆ ತೆರೆದ ಬಿಜೆಪಿ: ಪಕ್ಷ ಪ್ರಾಬಲ್ಯವಿರದ ಕಡೆ ಗೆಲುವು

- Advertisement -
- Advertisement -

ಇದನ್ನು ಬಿಜೆಪಿ ಬಹುದೊಡ್ಡ ಸಾಧನೆಯೆಂದೇ ಹೇಳಬೇಕು. ಉಪಚುನಾವಣೆಯ 15 ಕ್ಷೇತ್ರಗಳಲ್ಲಿ 13 ಕಡೆ ಅದು ತನ್ನ ಪಾರಮ್ಯ ಮೆರೆದಿದೆ. ಅದರಲ್ಲಿ ವಿಶೇಷವಾದ ಕ್ಷೇತ್ರಗಳೆಂದರೆ ಮಂಡ್ಯ ಜಿಲ್ಲೆಯ ಕೆ.ಆರ್‌ ಪೇಟೆ ಮತ್ತು ಚಿಕ್ಕಬಳ್ಳಾಪುರಗಳಾಗಿವೆ.

ಏಕೆಂದರೆ ಈ ಎರಡೂ ಜಿಲ್ಲೆಗಳಲ್ಲಿ ಇದುವರೆಗೂ ಬಿಜೆಪಿ ಒಂದು ವಿಧಾನಸಭಾವನ್ನು ಗೆಲ್ಲಲ್ಲು ಸಾಧ್ಯವಾಗಿರಲಿಲ್ಲ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರವನ್ನು ಬಿಜೆಪಿ ಗೆದ್ದುಕೊಂಡರೂ, ವಿಧಾನ ಸಭಾ ಕ್ಷೇತ್ರಗಳಲ್ಲಿ ಗೆಲುವು ಮಾತ್ರವಲ್ಲ ಠೇವಣಿ ಸಹ ಪಡೆಯಲಾಗುತ್ತಿರಲಿಲ್ಲ. ಆದರೆ ಈ ಉಪಚುನಾವಣೆ ಆ ಸಾಧ್ಯತೆಯನ್ನು ಬಿಜೆಪಿ ತೆರೆದಿಟ್ಟಿದೆ.

ಕಳೆದ ಲೋಕಸಭಾ ಚುನಾವಣೆಯಲ್ಲಿಯೇ ಇದಕ್ಕೆ ಅಡಿಪಾಯವನ್ನು ಬಿಜೆಪಿ ಹಾಕಿಕೊಂಡಿತ್ತು. ಮಂಡ್ಯದಲ್ಲಿ ಬಿಜೆಪಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸದೇ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್‌ರಿಗೆ ಬೆಂಬಲಿ ನೀಡುವ ಮೂಲಕ ತನ್ನ ಬೇಸ್‌ ಗಟ್ಟಿಗೊಳಿಸಲು ಮುಂದಾಗಿತ್ತು.

ಅಷ್ಟು ಮಾತ್ರವಲ್ಲದೇ ಇದು ಮುಖ್ಯಮಂತ್ರಿ ಯಡಿಯೂರಪ್ಪನವರ ಸ್ವಗ್ರಾಮ ಇರುವ ಕ್ಷೇತ್ರವಾಗಿದೆ. ಹಾಗಾಗಿ ಅವರು ಇದನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಲ್ಲದೇ ತುಂಬಾ ಭಾವನಾತ್ಮಕವಾಗಿ ಮಾತನಾಡಿ ನನ್ನ ಕ್ಷೇತ್ರದಲ್ಲಿ ನಾನು ಒಂದನ್ನು ಗೆಲ್ಲಲ್ಲು ಸಾಧ್ಯವಾಗಿಲ್ಲ ಎಂದು ಮಾತನ್ನಾಡಿದ್ದರು.

ಕೇವಲ ಮಾತು ಅಷ್ಟು ಮಾತ್ರವಲ್ಲದೇ ಒಕ್ಕಲಿಗ ಮತ ಪ್ರಾಬಲ್ಯವಿರುವ ಇಲ್ಲಿ ಯಡಿಯೂರಪ್ಪ ತನ್ನ ಮಗ ಬಿ.ವೈ ವಿಜಯೇಂದ್ರನ ಜೊತೆಗೆ ಒಕ್ಕಲಿಗರಾದ ಆರ್‌ ಅಶೋಕ್, ಡಿಸಿಎಂ ಅಶ್ವಥ್‌ ನಾರಾಯಣ್‌ಗೌಡ ಮತ್ತು ಶಾಸಕ ಪ್ರೀತಂ ಗೌಡ ಕ್ಷೇತ್ರದಲ್ಲುಳಿದು ಪ್ರಚಾರ ನಡೆಸಿದ್ದರು.

ಸುಮಲತಾ ಅಂಬರೀಶ್‌ ಬೆಂಬಲಿಗರು ಕೂಡ ಬಿಜೆಪಿಗೆ ಬೆಂಬಲ ನೀಡಿದ್ದರು ಎನ್ನಲಾಗುತ್ತಿತ್ತು. ಜೊತೆಗೆ ಇಲ್ಲಿ ಬಿಜೆಪಿ, ಜೆಡಿಎಸ್‌ ಮತ್ತು ಕಾಂಗ್ರೆಸ್‌ ನಡುವೆ ತ್ರಿಕೋನ ಪೈಪೋಟಿ ಇತ್ತು. ಹಾಗಾಗಿ ಇಲ್ಲಿ ಮೂರು ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಬಿಜೆಪಿ ಗೆಲುವು ತನ್ನದಾಗಿಸಿಕೊಂಡಿದೆ.

ಇನ್ನು ಚಿಕ್ಕಬಳ್ಳಾಪುರದಲ್ಲಿ ಬಚ್ಚೇಗೌಡರನ್ನು ಎಂಪಿಯಾಗಿ ಗೆಲ್ಲಿಸಿದ್ದ ಬಿಜೆಪಿ ಈಗ ಮೊದಲ ಶಾಸಕರನ್ನು ಸಹ ಗೆಲ್ಲಿಸಿಕೊಂಡಿದೆ.

ಡಾ.ಕೆ ಸುಧಾಕರ್‌ ಕಾಂಗ್ರೆಸ್‌ನಿಂದ ಹಾರಿಬಂದು ಬಿಜೆಪಿ ಸೇರಿದ್ದರು. ಅದೇ ಸಂದರ್ಭದಲ್ಲಿ ಕನಕಪುರಕ್ಕೆ ನಿಯೋಜನೆಗೊಂಡಿದ್ದ ಮೆಡಿಕಲ್‌ ಕಾಲೇಜನ್ನು ಚಿಕ್ಕಬಳ್ಳಾಪುರಕ್ಕೆ ತಿರುಗಿಸಿದ್ದು, ಜಿಲ್ಲೆಯಲ್ಲಿ ಹೊಸ ತಾಲ್ಲೂಕುಗಳ ಘೋಷಣೆಗಳ ಭರ್ಜರಿ ಭರವಸೆಯನ್ನು ನೀಡಲಾಗಿತ್ತು. ಅವುಗಳ ಹಿನ್ನೆಲೆಯಲ್ಲಿ ಬಿಜೆಪಿ ಸರಾಗವಾಗಿ ಗೆಲುವು ಸಾಧಿಸಿದೆ.

ಒಟ್ಟಿನಲ್ಲಿ ಬಿಜೆಪಿ ತನ್ನ ಪ್ರಾಬಲ್ಯವನ್ನು ಮತ್ತಷ್ಟು ಹೆಚ್ಚಿಸಿಕೊಂಡಿರುವುದನ್ನು ಈ ಉಪಚುನಾವಣೆ ತೋರಿಸಿಕೊಟ್ಟಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ| ‘ಬಾಂಗ್ಲಾದೇಶಿ’ ಎಂದು ಆರೋಪಿಸಿ ಮುಸ್ಲಿಂ ಕಾರ್ಮಿಕನನ್ನು ಥಳಿಸಿದ ಗುಂಪು

ಬಾಂಗ್ಲಾದೇಶಿ ಎಂದು ಸುಳ್ಳು ಆರೋಪ ಹೊರಿಸಿ ಮುಸ್ಲಿಂ ಕಾರ್ಮಿಕನ ಮೇಲೆ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಬಿಹಾರದ ಮಧುಬನಿ ಜಿಲ್ಲೆಯಲ್ಲಿ ನಡೆದಿದೆ. ಬಲಿಪಶು ಖುರ್ಷಿದ್ ಆಲಂ, ಧಾರ್ಮಿಕ ಘೋಷಣೆಗಳನ್ನು ಪಠಿಸಲು ನಿರಾಕರಿಸಿದ ನಂತರ ಸುಮಾರು...

ರಾಜ್ಯ ಸರ್ಕಾರದ ಸಮೀಕ್ಷೆಯಲ್ಲಿ ಇವಿಎಂ ಮೇಲೆ ಜನ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದ ವರದಿ : ಅಲ್ಲಗಳೆದ ಸಚಿವ ಪ್ರಿಯಾಂಕ್ ಖರ್ಗೆ

ಹೆಚ್ಚಿನ ನಾಗರಿಕರು ಭಾರತದಲ್ಲಿ ಚುನಾವಣೆಗಳು ಮುಕ್ತ ಮತ್ತು ನ್ಯಾಯಯುತವಾಗಿ ನಡೆಯುತ್ತಿವೆ ಎಂದು ನಂಬುತ್ತಾರೆ ಹಾಗೂ ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಮೇಲಿನ ನಂಬಿಕೆ ಹೆಚ್ಚಾಗಿದೆ ಎಂದು ಕರ್ನಾಟಕದ ಕಾಂಗ್ರೆಸ್ ಸರ್ಕಾರ ಪ್ರಕಟಿಸಿದ ರಾಜ್ಯವ್ಯಾಪಿ ಸಮೀಕ್ಷೆಯ...

ಉಡುಗೊರೆಯಾಗಿ ನೀಡಿದ್ದ ಮೊಬೈಲ್ ಫೋನ್‌ಗಳನ್ನು ಅಸ್ಸಾಂ ಸರ್ಕಾರಕ್ಕೆ ಹಿಂದಿರುಗಿಸಿದ ಪತ್ರಕರ್ತರು

ಅಸ್ಸಾಂ ಸರ್ಕಾರದಿಂದ ಹೊಸ ವರ್ಷದ ಉಡುಗೊರೆಯಾಗಿ ಪಡೆದ ಮೊಬೈಲ್ ಫೋನ್‌ಗಳನ್ನು ಕನಿಷ್ಠ ಇಬ್ಬರು ಪತ್ರಕರ್ತರು ಗುರುವಾರ ಹಿಂದಿರುಗಿಸಿದ್ದಾರೆ ಎಂದು 'ಸ್ಕ್ರೋಲ್' ವರದಿ ಮಾಡಿದೆ. ಅಸ್ಸಾಂನ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ನಿರ್ದೇಶನಾಲಯದಲ್ಲಿ ನೋಂದಾಯಿಸಲಾದ 2,200...

ಕೋಗಿಲು ಬಡಾವಣೆ ಮನೆಗಳ ತೆರವು : ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

ಬೆಂಗಳೂರಿನ ಕೋಗಿಲು ಬಡಾವಣೆಯ ವಾಸಿಂ ಹಾಗೂ ಫಕೀರ್ ಕಾಲೊನಿಗಳ ಸುಮಾರು ‌300 ಮನೆಗಳನ್ನು ನೆಲಸಮ ಮಾಡಿ, ಮೂರು ಸಾವಿರಕ್ಕೂ ಹೆಚ್ಚು ಜನರನ್ನು ಬೀದಿಗೆ ತಳ್ಳಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್​ಗೆ ಸಾರ್ವಜನಿಕ...

ರ‍್ಯಾಗಿಂಗ್ ದೈಹಿಕ ಹಿಂಸೆ; ಎರಡು ತಿಂಗಳ ಬಳಿಕ 19 ವರ್ಷದ ವಿದ್ಯಾರ್ಥಿನಿ ಸಾವು

ಹಿಮಾಚಲ ಪ್ರದೇಶದ ಧರ್ಮಶಾಲಾದ ಸರ್ಕಾರಿ ಪದವಿ ಕಾಲೇಜಿನಲ್ಲಿ ನಡೆದ ಘಟನೆಯು ಇಡೀ ರಾಜ್ಯವನ್ನೇ ಆಘಾತಕ್ಕೆ ದೂಡಿದೆ. 19 ವರ್ಷದ ಬಾಲಕಿಯ ಸಾವಿನ ಗಂಭೀರ ಪ್ರಕರಣಗಳಲ್ಲಿ ಕಾಲೇಜಿನ ಅಧ್ಯಾಪಕರು ಮತ್ತು ಮೂವರು ವಿದ್ಯಾರ್ಥಿನಿಯರ ಹೆಸರಿದೆ....

ಮುಸ್ಲಿಂ ಲೀಗ್‌ ಚಂದ್ರಿಕಾದ ಸಂಪಾದಕೀಯ ಪ್ರಕಟಿಸಿದ ಜನ್ಮಭೂಮಿ ಪತ್ರಿಕೆ : ಮುಜುಗರಕ್ಕೊಳಗಾದ ಬಿಜೆಪಿಯ ಮುಖವಾಣಿ

ವರ್ಷದ ಆರಂಭದಲ್ಲಿ ಅಚ್ಚರಿ ಎಂಬಂತೆ, ಕೇರಳ ಬಿಜೆಪಿಯ ಮುಖವಾಣಿಯಾದ ಮಲಯಾಳಂ ದಿನಪತ್ರಿಕೆ 'ಜನ್ಮಭೂಮಿ', ಪ್ರತಿಸ್ಪರ್ಧಿ ಪತ್ರಿಕೆಯಾದ ಇಂಡಿಯನ್‌ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್‌) ಪಕ್ಷದ ಮುಖವಾಣಿ 'ಚಂದ್ರಿಕಾ'ದ ಸಂಪಾದಕೀಯ ಪ್ರಕಟಿಸಿ ಮುಜುಗರಕ್ಕೀಡಾಗಿದೆ. 'ಜನ್ಮಭೂಮಿ' ಪತ್ರಿಕೆಯ...

ಕೆಕೆಆರ್ ತಂಡಕ್ಕೆ ಬಾಂಗ್ಲಾ ಕ್ರಿಕೆಟಿಗ ಮುಸ್ತಾಫಿಜುರ್ ರೆಹಮಾನ್ ಖರೀದಿ; ಶಾರುಖ್ ಖಾನ್ ಅವರನ್ನು ‘ದೇಶದ್ರೋಹಿ’ ಎಂದ ರಾಮಭದ್ರಾಚಾರ್ಯ

ಇಂಡಿಯನ್ ಪ್ರೀಮಿಯರ್ ಲೀಗ್ 2026 ರ ಸೀಸನ್‌ಗಾಗಿ ಕೋಲ್ಕತ್ತಾ ನೈಟ್ ರೈಡರ್ಸ್ ಬಾಂಗ್ಲಾದೇಶದ ಕ್ರಿಕೆಟಿಗ ಮುಸ್ತಾಫಿಜುರ್ ರೆಹಮಾನ್ ಅವರನ್ನು ಖರೀದಿ ಮಾಡಿದ್ದಕ್ಕಾಗಿ ಬಾಲಿವುಡ್ ನಟ ಶಾರುಖ್ ಖಾನ್ ಅವರನ್ನು ಹಿಂದೂ ಆಧ್ಯಾತ್ಮಿಕ ನಾಯಕ...

“ನಾವೆಲ್ಲರೂ ನಿಮ್ಮ ಬಗ್ಗೆ ಯೋಚಿಸುತ್ತಿದ್ದೇವೆ”: ನ್ಯೂಯಾರ್ಕ್‌ನ ನೂತನ ಮೇಯರ್ ಝೊಹ್ರಾನ್ ಮಮ್ದಾನಿಯಿಂದ ಉಮರ್ ಖಾಲಿದ್‌ಗೆ ಪತ್ರ

ಜೈಲಿನಲ್ಲಿರುವ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಅವರಿಗೆ ನ್ಯೂಯಾರ್ಕ್‌ ನಗರದ ನೂತನ ಮೇಯರ್ ಝೊಹ್ರಾನ್ ಮಮ್ದಾನಿ ಅವರು ಕೈಬರಹದ ಪತ್ರವೊಂದನ್ನು ಬರೆದಿದ್ದಾರೆ ಎಂದು, ಖಾಲಿದ್ ಸ್ನೇಹಿತೆ ಬನೋಜ್ಯೋತ್ಸ್ನಾ...

ಮಧ್ಯಪ್ರದೇಶ| ಹಸು ಮೇಯಿಸುವ ವಿಚಾರಕ್ಕೆ ಜಗಳ; ದಲಿತ ಕುಟುಂಬದ ಮೇಲೆ ಗುಂಡು ಹಾರಿಸಿದ ಗುಂಪು

ದಲಿತ ಕುಟುಂಬವೊಂದರ ಹೊಲದಲ್ಲಿ ಪ್ರಬಲ ಜಾತಿ ಜನರ ಹಸುಗಳು ಮೇಯಿಸುವುದನ್ನು ವಿರೋಧಿಸದ್ದಕ್ಕೆ ದಲಿತ ಕುಟುಂಬದ ಮೇಲೆ ಗುಂಡು ಹಾರಿಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ದಾಳಿಕೋರರು ಮನಬಂದಂತೆ ಗುಂಡು ಹಾರಿಸಿ ನಂತರ ದಲಿತ...

ಬಳ್ಳಾರಿ | ರೆಡ್ಡಿ ಬಣಗಳ ನಡುವೆ ಘರ್ಷಣೆ : ಗುಂಡಿನ ದಾಳಿಗೆ ಕಾಂಗ್ರೆಸ್ ಕಾರ್ಯಕರ್ತ ಬಲಿ

ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಅಂಗವಾಗಿ ಗುರುವಾರ (ಜ.1) ರಾತ್ರಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿ ರೆಡ್ಡಿ ಬಣಗಳ ನಡುವೆ ಘರ್ಷಣೆ ಉಂಟಾಗಿದ್ದು, ಈ ವೇಳೆ ಕಾಂಗ್ರೆಸ್ ಕಾರ್ಯಕರ್ತನೋರ್ವ ಗುಂಡು ತಗುಲಿ ಮೃತಪಟ್ಟ...