Homeಕರ್ನಾಟಕಮಂಡ್ಯ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಖಾತೆ ತೆರೆದ ಬಿಜೆಪಿ: ಪಕ್ಷ ಪ್ರಾಬಲ್ಯವಿರದ ಕಡೆ ಗೆಲುವು

ಮಂಡ್ಯ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಖಾತೆ ತೆರೆದ ಬಿಜೆಪಿ: ಪಕ್ಷ ಪ್ರಾಬಲ್ಯವಿರದ ಕಡೆ ಗೆಲುವು

- Advertisement -
- Advertisement -

ಇದನ್ನು ಬಿಜೆಪಿ ಬಹುದೊಡ್ಡ ಸಾಧನೆಯೆಂದೇ ಹೇಳಬೇಕು. ಉಪಚುನಾವಣೆಯ 15 ಕ್ಷೇತ್ರಗಳಲ್ಲಿ 13 ಕಡೆ ಅದು ತನ್ನ ಪಾರಮ್ಯ ಮೆರೆದಿದೆ. ಅದರಲ್ಲಿ ವಿಶೇಷವಾದ ಕ್ಷೇತ್ರಗಳೆಂದರೆ ಮಂಡ್ಯ ಜಿಲ್ಲೆಯ ಕೆ.ಆರ್‌ ಪೇಟೆ ಮತ್ತು ಚಿಕ್ಕಬಳ್ಳಾಪುರಗಳಾಗಿವೆ.

ಏಕೆಂದರೆ ಈ ಎರಡೂ ಜಿಲ್ಲೆಗಳಲ್ಲಿ ಇದುವರೆಗೂ ಬಿಜೆಪಿ ಒಂದು ವಿಧಾನಸಭಾವನ್ನು ಗೆಲ್ಲಲ್ಲು ಸಾಧ್ಯವಾಗಿರಲಿಲ್ಲ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರವನ್ನು ಬಿಜೆಪಿ ಗೆದ್ದುಕೊಂಡರೂ, ವಿಧಾನ ಸಭಾ ಕ್ಷೇತ್ರಗಳಲ್ಲಿ ಗೆಲುವು ಮಾತ್ರವಲ್ಲ ಠೇವಣಿ ಸಹ ಪಡೆಯಲಾಗುತ್ತಿರಲಿಲ್ಲ. ಆದರೆ ಈ ಉಪಚುನಾವಣೆ ಆ ಸಾಧ್ಯತೆಯನ್ನು ಬಿಜೆಪಿ ತೆರೆದಿಟ್ಟಿದೆ.

ಕಳೆದ ಲೋಕಸಭಾ ಚುನಾವಣೆಯಲ್ಲಿಯೇ ಇದಕ್ಕೆ ಅಡಿಪಾಯವನ್ನು ಬಿಜೆಪಿ ಹಾಕಿಕೊಂಡಿತ್ತು. ಮಂಡ್ಯದಲ್ಲಿ ಬಿಜೆಪಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸದೇ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್‌ರಿಗೆ ಬೆಂಬಲಿ ನೀಡುವ ಮೂಲಕ ತನ್ನ ಬೇಸ್‌ ಗಟ್ಟಿಗೊಳಿಸಲು ಮುಂದಾಗಿತ್ತು.

ಅಷ್ಟು ಮಾತ್ರವಲ್ಲದೇ ಇದು ಮುಖ್ಯಮಂತ್ರಿ ಯಡಿಯೂರಪ್ಪನವರ ಸ್ವಗ್ರಾಮ ಇರುವ ಕ್ಷೇತ್ರವಾಗಿದೆ. ಹಾಗಾಗಿ ಅವರು ಇದನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಲ್ಲದೇ ತುಂಬಾ ಭಾವನಾತ್ಮಕವಾಗಿ ಮಾತನಾಡಿ ನನ್ನ ಕ್ಷೇತ್ರದಲ್ಲಿ ನಾನು ಒಂದನ್ನು ಗೆಲ್ಲಲ್ಲು ಸಾಧ್ಯವಾಗಿಲ್ಲ ಎಂದು ಮಾತನ್ನಾಡಿದ್ದರು.

ಕೇವಲ ಮಾತು ಅಷ್ಟು ಮಾತ್ರವಲ್ಲದೇ ಒಕ್ಕಲಿಗ ಮತ ಪ್ರಾಬಲ್ಯವಿರುವ ಇಲ್ಲಿ ಯಡಿಯೂರಪ್ಪ ತನ್ನ ಮಗ ಬಿ.ವೈ ವಿಜಯೇಂದ್ರನ ಜೊತೆಗೆ ಒಕ್ಕಲಿಗರಾದ ಆರ್‌ ಅಶೋಕ್, ಡಿಸಿಎಂ ಅಶ್ವಥ್‌ ನಾರಾಯಣ್‌ಗೌಡ ಮತ್ತು ಶಾಸಕ ಪ್ರೀತಂ ಗೌಡ ಕ್ಷೇತ್ರದಲ್ಲುಳಿದು ಪ್ರಚಾರ ನಡೆಸಿದ್ದರು.

ಸುಮಲತಾ ಅಂಬರೀಶ್‌ ಬೆಂಬಲಿಗರು ಕೂಡ ಬಿಜೆಪಿಗೆ ಬೆಂಬಲ ನೀಡಿದ್ದರು ಎನ್ನಲಾಗುತ್ತಿತ್ತು. ಜೊತೆಗೆ ಇಲ್ಲಿ ಬಿಜೆಪಿ, ಜೆಡಿಎಸ್‌ ಮತ್ತು ಕಾಂಗ್ರೆಸ್‌ ನಡುವೆ ತ್ರಿಕೋನ ಪೈಪೋಟಿ ಇತ್ತು. ಹಾಗಾಗಿ ಇಲ್ಲಿ ಮೂರು ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಬಿಜೆಪಿ ಗೆಲುವು ತನ್ನದಾಗಿಸಿಕೊಂಡಿದೆ.

ಇನ್ನು ಚಿಕ್ಕಬಳ್ಳಾಪುರದಲ್ಲಿ ಬಚ್ಚೇಗೌಡರನ್ನು ಎಂಪಿಯಾಗಿ ಗೆಲ್ಲಿಸಿದ್ದ ಬಿಜೆಪಿ ಈಗ ಮೊದಲ ಶಾಸಕರನ್ನು ಸಹ ಗೆಲ್ಲಿಸಿಕೊಂಡಿದೆ.

ಡಾ.ಕೆ ಸುಧಾಕರ್‌ ಕಾಂಗ್ರೆಸ್‌ನಿಂದ ಹಾರಿಬಂದು ಬಿಜೆಪಿ ಸೇರಿದ್ದರು. ಅದೇ ಸಂದರ್ಭದಲ್ಲಿ ಕನಕಪುರಕ್ಕೆ ನಿಯೋಜನೆಗೊಂಡಿದ್ದ ಮೆಡಿಕಲ್‌ ಕಾಲೇಜನ್ನು ಚಿಕ್ಕಬಳ್ಳಾಪುರಕ್ಕೆ ತಿರುಗಿಸಿದ್ದು, ಜಿಲ್ಲೆಯಲ್ಲಿ ಹೊಸ ತಾಲ್ಲೂಕುಗಳ ಘೋಷಣೆಗಳ ಭರ್ಜರಿ ಭರವಸೆಯನ್ನು ನೀಡಲಾಗಿತ್ತು. ಅವುಗಳ ಹಿನ್ನೆಲೆಯಲ್ಲಿ ಬಿಜೆಪಿ ಸರಾಗವಾಗಿ ಗೆಲುವು ಸಾಧಿಸಿದೆ.

ಒಟ್ಟಿನಲ್ಲಿ ಬಿಜೆಪಿ ತನ್ನ ಪ್ರಾಬಲ್ಯವನ್ನು ಮತ್ತಷ್ಟು ಹೆಚ್ಚಿಸಿಕೊಂಡಿರುವುದನ್ನು ಈ ಉಪಚುನಾವಣೆ ತೋರಿಸಿಕೊಟ್ಟಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...