Homeಕರ್ನಾಟಕಮಂಡ್ಯ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಖಾತೆ ತೆರೆದ ಬಿಜೆಪಿ: ಪಕ್ಷ ಪ್ರಾಬಲ್ಯವಿರದ ಕಡೆ ಗೆಲುವು

ಮಂಡ್ಯ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಖಾತೆ ತೆರೆದ ಬಿಜೆಪಿ: ಪಕ್ಷ ಪ್ರಾಬಲ್ಯವಿರದ ಕಡೆ ಗೆಲುವು

- Advertisement -
- Advertisement -

ಇದನ್ನು ಬಿಜೆಪಿ ಬಹುದೊಡ್ಡ ಸಾಧನೆಯೆಂದೇ ಹೇಳಬೇಕು. ಉಪಚುನಾವಣೆಯ 15 ಕ್ಷೇತ್ರಗಳಲ್ಲಿ 13 ಕಡೆ ಅದು ತನ್ನ ಪಾರಮ್ಯ ಮೆರೆದಿದೆ. ಅದರಲ್ಲಿ ವಿಶೇಷವಾದ ಕ್ಷೇತ್ರಗಳೆಂದರೆ ಮಂಡ್ಯ ಜಿಲ್ಲೆಯ ಕೆ.ಆರ್‌ ಪೇಟೆ ಮತ್ತು ಚಿಕ್ಕಬಳ್ಳಾಪುರಗಳಾಗಿವೆ.

ಏಕೆಂದರೆ ಈ ಎರಡೂ ಜಿಲ್ಲೆಗಳಲ್ಲಿ ಇದುವರೆಗೂ ಬಿಜೆಪಿ ಒಂದು ವಿಧಾನಸಭಾವನ್ನು ಗೆಲ್ಲಲ್ಲು ಸಾಧ್ಯವಾಗಿರಲಿಲ್ಲ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರವನ್ನು ಬಿಜೆಪಿ ಗೆದ್ದುಕೊಂಡರೂ, ವಿಧಾನ ಸಭಾ ಕ್ಷೇತ್ರಗಳಲ್ಲಿ ಗೆಲುವು ಮಾತ್ರವಲ್ಲ ಠೇವಣಿ ಸಹ ಪಡೆಯಲಾಗುತ್ತಿರಲಿಲ್ಲ. ಆದರೆ ಈ ಉಪಚುನಾವಣೆ ಆ ಸಾಧ್ಯತೆಯನ್ನು ಬಿಜೆಪಿ ತೆರೆದಿಟ್ಟಿದೆ.

ಕಳೆದ ಲೋಕಸಭಾ ಚುನಾವಣೆಯಲ್ಲಿಯೇ ಇದಕ್ಕೆ ಅಡಿಪಾಯವನ್ನು ಬಿಜೆಪಿ ಹಾಕಿಕೊಂಡಿತ್ತು. ಮಂಡ್ಯದಲ್ಲಿ ಬಿಜೆಪಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸದೇ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್‌ರಿಗೆ ಬೆಂಬಲಿ ನೀಡುವ ಮೂಲಕ ತನ್ನ ಬೇಸ್‌ ಗಟ್ಟಿಗೊಳಿಸಲು ಮುಂದಾಗಿತ್ತು.

ಅಷ್ಟು ಮಾತ್ರವಲ್ಲದೇ ಇದು ಮುಖ್ಯಮಂತ್ರಿ ಯಡಿಯೂರಪ್ಪನವರ ಸ್ವಗ್ರಾಮ ಇರುವ ಕ್ಷೇತ್ರವಾಗಿದೆ. ಹಾಗಾಗಿ ಅವರು ಇದನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಲ್ಲದೇ ತುಂಬಾ ಭಾವನಾತ್ಮಕವಾಗಿ ಮಾತನಾಡಿ ನನ್ನ ಕ್ಷೇತ್ರದಲ್ಲಿ ನಾನು ಒಂದನ್ನು ಗೆಲ್ಲಲ್ಲು ಸಾಧ್ಯವಾಗಿಲ್ಲ ಎಂದು ಮಾತನ್ನಾಡಿದ್ದರು.

ಕೇವಲ ಮಾತು ಅಷ್ಟು ಮಾತ್ರವಲ್ಲದೇ ಒಕ್ಕಲಿಗ ಮತ ಪ್ರಾಬಲ್ಯವಿರುವ ಇಲ್ಲಿ ಯಡಿಯೂರಪ್ಪ ತನ್ನ ಮಗ ಬಿ.ವೈ ವಿಜಯೇಂದ್ರನ ಜೊತೆಗೆ ಒಕ್ಕಲಿಗರಾದ ಆರ್‌ ಅಶೋಕ್, ಡಿಸಿಎಂ ಅಶ್ವಥ್‌ ನಾರಾಯಣ್‌ಗೌಡ ಮತ್ತು ಶಾಸಕ ಪ್ರೀತಂ ಗೌಡ ಕ್ಷೇತ್ರದಲ್ಲುಳಿದು ಪ್ರಚಾರ ನಡೆಸಿದ್ದರು.

ಸುಮಲತಾ ಅಂಬರೀಶ್‌ ಬೆಂಬಲಿಗರು ಕೂಡ ಬಿಜೆಪಿಗೆ ಬೆಂಬಲ ನೀಡಿದ್ದರು ಎನ್ನಲಾಗುತ್ತಿತ್ತು. ಜೊತೆಗೆ ಇಲ್ಲಿ ಬಿಜೆಪಿ, ಜೆಡಿಎಸ್‌ ಮತ್ತು ಕಾಂಗ್ರೆಸ್‌ ನಡುವೆ ತ್ರಿಕೋನ ಪೈಪೋಟಿ ಇತ್ತು. ಹಾಗಾಗಿ ಇಲ್ಲಿ ಮೂರು ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಬಿಜೆಪಿ ಗೆಲುವು ತನ್ನದಾಗಿಸಿಕೊಂಡಿದೆ.

ಇನ್ನು ಚಿಕ್ಕಬಳ್ಳಾಪುರದಲ್ಲಿ ಬಚ್ಚೇಗೌಡರನ್ನು ಎಂಪಿಯಾಗಿ ಗೆಲ್ಲಿಸಿದ್ದ ಬಿಜೆಪಿ ಈಗ ಮೊದಲ ಶಾಸಕರನ್ನು ಸಹ ಗೆಲ್ಲಿಸಿಕೊಂಡಿದೆ.

ಡಾ.ಕೆ ಸುಧಾಕರ್‌ ಕಾಂಗ್ರೆಸ್‌ನಿಂದ ಹಾರಿಬಂದು ಬಿಜೆಪಿ ಸೇರಿದ್ದರು. ಅದೇ ಸಂದರ್ಭದಲ್ಲಿ ಕನಕಪುರಕ್ಕೆ ನಿಯೋಜನೆಗೊಂಡಿದ್ದ ಮೆಡಿಕಲ್‌ ಕಾಲೇಜನ್ನು ಚಿಕ್ಕಬಳ್ಳಾಪುರಕ್ಕೆ ತಿರುಗಿಸಿದ್ದು, ಜಿಲ್ಲೆಯಲ್ಲಿ ಹೊಸ ತಾಲ್ಲೂಕುಗಳ ಘೋಷಣೆಗಳ ಭರ್ಜರಿ ಭರವಸೆಯನ್ನು ನೀಡಲಾಗಿತ್ತು. ಅವುಗಳ ಹಿನ್ನೆಲೆಯಲ್ಲಿ ಬಿಜೆಪಿ ಸರಾಗವಾಗಿ ಗೆಲುವು ಸಾಧಿಸಿದೆ.

ಒಟ್ಟಿನಲ್ಲಿ ಬಿಜೆಪಿ ತನ್ನ ಪ್ರಾಬಲ್ಯವನ್ನು ಮತ್ತಷ್ಟು ಹೆಚ್ಚಿಸಿಕೊಂಡಿರುವುದನ್ನು ಈ ಉಪಚುನಾವಣೆ ತೋರಿಸಿಕೊಟ್ಟಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...