Homeಕರ್ನಾಟಕಮಂಡ್ಯ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಖಾತೆ ತೆರೆದ ಬಿಜೆಪಿ: ಪಕ್ಷ ಪ್ರಾಬಲ್ಯವಿರದ ಕಡೆ ಗೆಲುವು

ಮಂಡ್ಯ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಖಾತೆ ತೆರೆದ ಬಿಜೆಪಿ: ಪಕ್ಷ ಪ್ರಾಬಲ್ಯವಿರದ ಕಡೆ ಗೆಲುವು

- Advertisement -
- Advertisement -

ಇದನ್ನು ಬಿಜೆಪಿ ಬಹುದೊಡ್ಡ ಸಾಧನೆಯೆಂದೇ ಹೇಳಬೇಕು. ಉಪಚುನಾವಣೆಯ 15 ಕ್ಷೇತ್ರಗಳಲ್ಲಿ 13 ಕಡೆ ಅದು ತನ್ನ ಪಾರಮ್ಯ ಮೆರೆದಿದೆ. ಅದರಲ್ಲಿ ವಿಶೇಷವಾದ ಕ್ಷೇತ್ರಗಳೆಂದರೆ ಮಂಡ್ಯ ಜಿಲ್ಲೆಯ ಕೆ.ಆರ್‌ ಪೇಟೆ ಮತ್ತು ಚಿಕ್ಕಬಳ್ಳಾಪುರಗಳಾಗಿವೆ.

ಏಕೆಂದರೆ ಈ ಎರಡೂ ಜಿಲ್ಲೆಗಳಲ್ಲಿ ಇದುವರೆಗೂ ಬಿಜೆಪಿ ಒಂದು ವಿಧಾನಸಭಾವನ್ನು ಗೆಲ್ಲಲ್ಲು ಸಾಧ್ಯವಾಗಿರಲಿಲ್ಲ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರವನ್ನು ಬಿಜೆಪಿ ಗೆದ್ದುಕೊಂಡರೂ, ವಿಧಾನ ಸಭಾ ಕ್ಷೇತ್ರಗಳಲ್ಲಿ ಗೆಲುವು ಮಾತ್ರವಲ್ಲ ಠೇವಣಿ ಸಹ ಪಡೆಯಲಾಗುತ್ತಿರಲಿಲ್ಲ. ಆದರೆ ಈ ಉಪಚುನಾವಣೆ ಆ ಸಾಧ್ಯತೆಯನ್ನು ಬಿಜೆಪಿ ತೆರೆದಿಟ್ಟಿದೆ.

ಕಳೆದ ಲೋಕಸಭಾ ಚುನಾವಣೆಯಲ್ಲಿಯೇ ಇದಕ್ಕೆ ಅಡಿಪಾಯವನ್ನು ಬಿಜೆಪಿ ಹಾಕಿಕೊಂಡಿತ್ತು. ಮಂಡ್ಯದಲ್ಲಿ ಬಿಜೆಪಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸದೇ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್‌ರಿಗೆ ಬೆಂಬಲಿ ನೀಡುವ ಮೂಲಕ ತನ್ನ ಬೇಸ್‌ ಗಟ್ಟಿಗೊಳಿಸಲು ಮುಂದಾಗಿತ್ತು.

ಅಷ್ಟು ಮಾತ್ರವಲ್ಲದೇ ಇದು ಮುಖ್ಯಮಂತ್ರಿ ಯಡಿಯೂರಪ್ಪನವರ ಸ್ವಗ್ರಾಮ ಇರುವ ಕ್ಷೇತ್ರವಾಗಿದೆ. ಹಾಗಾಗಿ ಅವರು ಇದನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಲ್ಲದೇ ತುಂಬಾ ಭಾವನಾತ್ಮಕವಾಗಿ ಮಾತನಾಡಿ ನನ್ನ ಕ್ಷೇತ್ರದಲ್ಲಿ ನಾನು ಒಂದನ್ನು ಗೆಲ್ಲಲ್ಲು ಸಾಧ್ಯವಾಗಿಲ್ಲ ಎಂದು ಮಾತನ್ನಾಡಿದ್ದರು.

ಕೇವಲ ಮಾತು ಅಷ್ಟು ಮಾತ್ರವಲ್ಲದೇ ಒಕ್ಕಲಿಗ ಮತ ಪ್ರಾಬಲ್ಯವಿರುವ ಇಲ್ಲಿ ಯಡಿಯೂರಪ್ಪ ತನ್ನ ಮಗ ಬಿ.ವೈ ವಿಜಯೇಂದ್ರನ ಜೊತೆಗೆ ಒಕ್ಕಲಿಗರಾದ ಆರ್‌ ಅಶೋಕ್, ಡಿಸಿಎಂ ಅಶ್ವಥ್‌ ನಾರಾಯಣ್‌ಗೌಡ ಮತ್ತು ಶಾಸಕ ಪ್ರೀತಂ ಗೌಡ ಕ್ಷೇತ್ರದಲ್ಲುಳಿದು ಪ್ರಚಾರ ನಡೆಸಿದ್ದರು.

ಸುಮಲತಾ ಅಂಬರೀಶ್‌ ಬೆಂಬಲಿಗರು ಕೂಡ ಬಿಜೆಪಿಗೆ ಬೆಂಬಲ ನೀಡಿದ್ದರು ಎನ್ನಲಾಗುತ್ತಿತ್ತು. ಜೊತೆಗೆ ಇಲ್ಲಿ ಬಿಜೆಪಿ, ಜೆಡಿಎಸ್‌ ಮತ್ತು ಕಾಂಗ್ರೆಸ್‌ ನಡುವೆ ತ್ರಿಕೋನ ಪೈಪೋಟಿ ಇತ್ತು. ಹಾಗಾಗಿ ಇಲ್ಲಿ ಮೂರು ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಬಿಜೆಪಿ ಗೆಲುವು ತನ್ನದಾಗಿಸಿಕೊಂಡಿದೆ.

ಇನ್ನು ಚಿಕ್ಕಬಳ್ಳಾಪುರದಲ್ಲಿ ಬಚ್ಚೇಗೌಡರನ್ನು ಎಂಪಿಯಾಗಿ ಗೆಲ್ಲಿಸಿದ್ದ ಬಿಜೆಪಿ ಈಗ ಮೊದಲ ಶಾಸಕರನ್ನು ಸಹ ಗೆಲ್ಲಿಸಿಕೊಂಡಿದೆ.

ಡಾ.ಕೆ ಸುಧಾಕರ್‌ ಕಾಂಗ್ರೆಸ್‌ನಿಂದ ಹಾರಿಬಂದು ಬಿಜೆಪಿ ಸೇರಿದ್ದರು. ಅದೇ ಸಂದರ್ಭದಲ್ಲಿ ಕನಕಪುರಕ್ಕೆ ನಿಯೋಜನೆಗೊಂಡಿದ್ದ ಮೆಡಿಕಲ್‌ ಕಾಲೇಜನ್ನು ಚಿಕ್ಕಬಳ್ಳಾಪುರಕ್ಕೆ ತಿರುಗಿಸಿದ್ದು, ಜಿಲ್ಲೆಯಲ್ಲಿ ಹೊಸ ತಾಲ್ಲೂಕುಗಳ ಘೋಷಣೆಗಳ ಭರ್ಜರಿ ಭರವಸೆಯನ್ನು ನೀಡಲಾಗಿತ್ತು. ಅವುಗಳ ಹಿನ್ನೆಲೆಯಲ್ಲಿ ಬಿಜೆಪಿ ಸರಾಗವಾಗಿ ಗೆಲುವು ಸಾಧಿಸಿದೆ.

ಒಟ್ಟಿನಲ್ಲಿ ಬಿಜೆಪಿ ತನ್ನ ಪ್ರಾಬಲ್ಯವನ್ನು ಮತ್ತಷ್ಟು ಹೆಚ್ಚಿಸಿಕೊಂಡಿರುವುದನ್ನು ಈ ಉಪಚುನಾವಣೆ ತೋರಿಸಿಕೊಟ್ಟಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...