Homeಮುಖಪುಟಗೋಡ್ಸೆಯನ್ನು ಬೆಂಬಲಿಸಿತೆ ಬಿಜೆಪಿ? ತಮಿಳು ನಾಡಿನಲ್ಲಿ ಭುಗಿಲೆದ್ದ ವಿವಾದ

ಗೋಡ್ಸೆಯನ್ನು ಬೆಂಬಲಿಸಿತೆ ಬಿಜೆಪಿ? ತಮಿಳು ನಾಡಿನಲ್ಲಿ ಭುಗಿಲೆದ್ದ ವಿವಾದ

ದೇಶದ ಮೊಟ್ಟ ಮೊದಲ ಭಯೋತ್ಪಾದಕ ನಾಥುರಾಂ ಗೋಡ್ಸೆ ಒಬ್ಬ ಹಿಂದೂವಾಗಿದ್ದ ಎಂಬ ಕಮಲ್ ಹಾಸನ್ ಹೇಳಿಕೆಯ ವಿರುದ್ಧ ದೂರು ನೀಡಿದ ಬಿಜೆಪಿ

- Advertisement -
- Advertisement -

| ನಾನುಗೌರಿ ಡೆಸ್ಕ್ |

‘ನಾಥುರಾಂ ಗೂಡ್ಸೆಯನ್ನು ಬಿಜೆಪಿ ಬಹಿರಂಗವಾಗಿ ಬೆಂಬಲಿಸಿದೆ’ ಎಂದು ತಮಿಳುನಾಡಿನಲ್ಲಿ ಹಲವು ಸಂಘಟನೆಗಳು ಮತ್ತು ಪಕ್ಷಗಳು ಆಪಾದಿಸಿವೆ. ಇದುವರೆಗೂ ನಾಥುರಾಂ ಗೋಡ್ಸೆ ನಮ್ಮವನಲ್ಲ ಎನ್ನುತ್ತಿದ್ದ ಬಿಜೆಪಿ ಇಂದು ಆತನ ಪರವಾಗಿ ವಕಾಲತ್ತು ವಹಿಸುತ್ತಿರುವುದೇಕೆ ಎಂದು ಪ್ರಶ್ನಿಸಿಲಾಗಿದೆ

ನಡೆದಿದಿಷ್ಟು..
ಕಮಲ್ ಹಾಸನ್‍ರವರ ಎಂಎನ್‍ಎಂ – ಮಕ್ಕಳ್ ನೀದಿ ಮಯ್ಯಂ ಪಕ್ಷದ ಪರವಾಗಿ ಉಪಚುನವಾಣೆಯಲ್ಲಿ ಪ್ರಚಾರ ಮಾಡುತ್ತಿದ್ದಾಗ ಒಂದು ಹೇಳಿಕೆಯನ್ನು ನೀಡಿದ್ದರು. ಅದರಲ್ಲಿ ನಮ್ಮ ದೇಶದ ಮೊಟ್ಟ ಮೊದಲ ಭಯೋತ್ಪಾದಕ ಒಬ್ಬ ಹಿಂದೂವಾಗಿದ್ದ ಆತ ನಾಥುರಾಂ ಗೋಡ್ಸೆ ಅಲ್ಲದೇ ಬೇರೆ ಯಾರು ಅಲ್ಲ ಎಂದು ಕಮಲ್ ಹಾಸನ್ ಹೇಳಿಕೆ ನೀಡಿದ್ದರು. ಎಲ್ಲಾ ಕಡೆ ಈ ಹೇಳಿಕೆ ಹರಿದಾಡಿತ್ತು.

ಈ ಕುರಿತು ತಮಿಳರಸಿ ಸುಂದರ್ ರಾಜನ್ ಎಂಬ ತಮಿಳುನಾಡಿನ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷೆ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಕಮಲ್ ಹಾಸನ್ ರವರು ಧರ್ಮಗಳ ನಡುವೆ ಭೇಧ ಮೂಡಿಸಿ ಪ್ರಚೋದನೆ ಮಾಡುತ್ತಿದ್ದಾರೆಂದು ಅವರು ಆಪಾದಿಸಿದ್ದಾರೆ. ಈ ಕುರಿತು ಚುನಾವಣಾ ಆಯೋಗವು ಯಾವ ಕ್ರಮ ತೆಗೆದುಕೊಂಡಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ನಾಥುರಾಂ ಗೋಡ್ಸೆಯನ್ನು ಈ ದೇಶದ ಮೊಟ್ಟಮೊದಲ ಭಯೋತ್ಪಾದಕ ಎಂದು ಉಲ್ಲೇಖಿಸುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಇದನ್ನು ಹೇಳಿದಾಗ ಬಿಜೆಪಿ ಮತ್ತು ಸಂಘಪರಿವು ನಾಥುರಾಂ ಗೋಡ್ಸೆಯನ್ನು ಪರೋಕ್ಷವಾಗಿ ಸಮರ್ಥಿಸುವ ರೀತಿಯಲ್ಲಿ “ಒಂದೇ ಕೊಲೆಯನ್ನು ಮಾಡಿದವನನ್ನು ಭಯೋತ್ಪಾದಕ ಎಂದು ಕರೆಯಲು ಸಾಧ್ಯವಿಲ್ಲ ಎಂಬ ಸಮರ್ಥನೆ ನೀಡುತ್ತಿದ್ದರು.

ಆದರೆ ಒಬ್ಬ ವ್ಯಕ್ತಿಯನ್ನಾಗಲಿ, ಅಥವಾ ಒಂದು ಗುಂಪಿನನ್ನಾಗಲಿ ಯೋಜಿತವಾದ ರೀತಿಯೊಳಗೆ ಕೊಲೆಯನ್ನು ಎಸಗುವುದು ಭಯೋತ್ಪಾದನೆಯೇ ಸರಿ ಎಂಬುದು ಇತರರ ವಾದವಾಗಿತ್ತು. ಇದೇ ವಾದವನ್ನು ಮುಂದಿಟ್ಟು ಇತರರು ‘ಹಾಗಾದರೆ ಇನ್ನಿತರ ಕೋಮು ಗಲಭೆಗಳಲ್ಲಿ ಆರ್‍ಎಸ್‍ಎಸ್‍ನವರು, ಮತ್ತದರ ಅಂಗಸಂಘಟನೆಗಳು ಭಾಗವಹಿಸಿದ್ದಾಗಲಿ, ಅಥವಾ ಗುಜರಾತ್‍ನಲ್ಲಿ ನಡೆದ ಸಂಘಟಿತ ಯೋಜಿತ ಮಾರಣಹೋಮವಾಗಲಿ ಇದು ಭಯೋತ್ಪಾದನೆಯಲ್ಲವೇ? ಮಾಲೆಂಗಾವ್, ಮೆಕ್ಕಾ, ಸಂಜೋತಾ ಎಕ್ಸ್‍ಪ್ರೆಸ್ ಬಾಂಬ್ ಸ್ಫೋಟ ಪ್ರಕರಣದಂತಹ ಯೋಜಿತ ಕೃತ್ಯಗಳು ಭಯೋತ್ಪಾದನೆಯಲ್ಲವೇ? ಎಂದು ಕೇಳುತ್ತಿವೆ.

ಅದರ ಮುಂದುವರೆದ ಭಾಗವಾಗಿ ಪ್ರಗ್ಯಾ ಠಾಕೂರ್ ಅನ್ನು ಭಯೋತ್ಪಾದನೆಯ ಆರೋಪ ಹೊತ್ತ ವ್ಯಕ್ತಿಯೆಂದು ಹೇಳಲಾಗುತ್ತಿದ್ದು ಮತ್ತು ಆ ಸಂದರ್ಭದಲ್ಲಿಯೂ ಬಿಜೆಪಿ ಮತ್ತು ಆರ್‍ಎಸ್‍ಎಸ್ ಆಕೆಯಿಂದ ಅಂತರವನ್ನು ಕಾಯ್ದುಕೊಂಡಿತ್ತು. ವಾಸ್ತವದಲ್ಲಿ ಪ್ರಗ್ಯಾ ಸಿಂಗ್ ಕುರಿತಂತೆ ಮನಮೋಹನ್ ಸಿಂಗ್ ಸರ್ಕಾರಕ್ಕೆ ಪತ್ರ ಬರೆದಿದ್ದ ಆರ್‍ಎಸ್‍ಎಸ್ ಪದಾಧಿಕಾರಿ ಆಕೆ ತಮ್ಮ ಸಂಘಟನೆಗೆ ಸೇರಿಲ್ಲವೆಂದು, ವಾಸ್ತವದಲ್ಲಿ ನಮ್ಮ ಸಂಘಟನೆಯವರನ್ನೇ ಕೊಲೆಗೈಯಲು ಯೋಜಿಸಿದ್ದಳೆಂದು ದೂರಿದ್ದರು. ಹಾಗಾಗಿ ಎಲ್ಲಾ ಕೋನದಿಂದಲೂ ಪ್ರಗ್ಯಾ ಠಾಕೂರ್ ಭಯೋತ್ಪಾದಕ ಆರೋಪಿ ಎಂದು ಒಪ್ಪಿಕೊಂಡಿದ್ದರು.

ಆದರೆ ಈಗ ಆಕೆಯನ್ನು ಸಮರ್ಥಿಸಿಕೊಳ್ಳುತ್ತಾ ಆಕೆಗೆ ಎಂಪಿ ಟಿಕೆಟ್ ನೀಡಿರುವ ಬಿಜೆಪಿ ಈಗ ಇನ್ನು ಒಂದು ಹೆಜ್ಜೆ ಮುಂದೆ ಹೋಗಿ ನಾಥುರಾಂ ಗೋಡ್ಸೆಯನ್ನು ಸಹ ಸಮರ್ಥಿಸಿಕೊಳ್ಳುತ್ತಿರುವುದು ಕಂಡುಬರುತ್ತಿದೆ. “ಒಂದು ವೇಳೆ ನಾಥುರಾಂ ಗೋಡ್ಸೆ ವಿಚಾರದಲ್ಲಿ ಭಯೋತ್ಪಾದಕ, ಹಿಂದೂ ಭಯೋತ್ಪಾದಕ ಎನ್ನುವ ಕಮಲ್ ಹಾಸನ್‍ರವರ ನಿಲುವು ಒಪ್ಪಿಗೆ ಇಲ್ಲದಿದ್ದರೂ ನಾಥುರಾಂ ಗೋಡ್ಸೆಯ ಕೃತ್ಯವನ್ನು ತಾವು ಖಂಡಿಸುತ್ತೇವೆಂದು ಬಿಜೆಪಿ ಎಂದೂ, ಎಲ್ಲಿಯೂ ಹೇಳಿಲ್ಲವೇಕೆಂದು ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ಕಾರ್ಯದರ್ಶಿ ಕೆ.ಎಲ್ ಅಶೋಕ್ ಪ್ರಶ್ನಿಸಿದ್ದಾರೆ.

ಗಾಂಧಿ ಹುತಾತ್ಮರಾದ ಜನವರಿ 30ರಂದು ಹಿಂದೂ ಮಹಾಸಭಾದ ನಾಯಕಿಯೊಬ್ಬಳು ಗಾಂಧಿ ಪ್ರತಿಕೃತಿಗೆ ಗುಂಡು ಹಾರಿಸಿದ ವಿಡಿಯೋ ಮತ್ತು ಮಹಾರಾಷ್ಟ್ರದಲ್ಲಿ ಬಿಜೆಪಿ ಕಾರ್ಯಕರ್ತರು ಗೋಡ್ಸೆ ಪ್ರತಿಮೆ ಮತ್ತು ಮಂದಿರ ನಿರ್ಮಾಣ ಮಾಡಿದ್ದನ್ನು ಈ ಸಂದರ್ಭದಲ್ಲಿ ಸ್ಮರಿಸಬಹುದೇನೋ.

ತಮಿಳುನಾಡಿನಲ್ಲಿ ನಡೆದ ಈ ವಿವಾದವು ಮುಂದೆ ಯಾವ ತಿರುವನ್ನು ಪಡೆದುಕೊಳ್ಳುತ್ತದೆ ಎಂಬುದು ಕುತೂಹಲ ಮೂಡಿಸಿದೆ.

ಮೋದಿಗೆ ಬೃಂದಾ, ಪ್ರಿಯಾಂಕಾ, ಅಂಜಲಿ, ಶಬನಂ ಮತ್ತಿತರರ ಸವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...