Homeಮುಖಪುಟಗೋಡ್ಸೆಯನ್ನು ಬೆಂಬಲಿಸಿತೆ ಬಿಜೆಪಿ? ತಮಿಳು ನಾಡಿನಲ್ಲಿ ಭುಗಿಲೆದ್ದ ವಿವಾದ

ಗೋಡ್ಸೆಯನ್ನು ಬೆಂಬಲಿಸಿತೆ ಬಿಜೆಪಿ? ತಮಿಳು ನಾಡಿನಲ್ಲಿ ಭುಗಿಲೆದ್ದ ವಿವಾದ

ದೇಶದ ಮೊಟ್ಟ ಮೊದಲ ಭಯೋತ್ಪಾದಕ ನಾಥುರಾಂ ಗೋಡ್ಸೆ ಒಬ್ಬ ಹಿಂದೂವಾಗಿದ್ದ ಎಂಬ ಕಮಲ್ ಹಾಸನ್ ಹೇಳಿಕೆಯ ವಿರುದ್ಧ ದೂರು ನೀಡಿದ ಬಿಜೆಪಿ

- Advertisement -
- Advertisement -

| ನಾನುಗೌರಿ ಡೆಸ್ಕ್ |

‘ನಾಥುರಾಂ ಗೂಡ್ಸೆಯನ್ನು ಬಿಜೆಪಿ ಬಹಿರಂಗವಾಗಿ ಬೆಂಬಲಿಸಿದೆ’ ಎಂದು ತಮಿಳುನಾಡಿನಲ್ಲಿ ಹಲವು ಸಂಘಟನೆಗಳು ಮತ್ತು ಪಕ್ಷಗಳು ಆಪಾದಿಸಿವೆ. ಇದುವರೆಗೂ ನಾಥುರಾಂ ಗೋಡ್ಸೆ ನಮ್ಮವನಲ್ಲ ಎನ್ನುತ್ತಿದ್ದ ಬಿಜೆಪಿ ಇಂದು ಆತನ ಪರವಾಗಿ ವಕಾಲತ್ತು ವಹಿಸುತ್ತಿರುವುದೇಕೆ ಎಂದು ಪ್ರಶ್ನಿಸಿಲಾಗಿದೆ

ನಡೆದಿದಿಷ್ಟು..
ಕಮಲ್ ಹಾಸನ್‍ರವರ ಎಂಎನ್‍ಎಂ – ಮಕ್ಕಳ್ ನೀದಿ ಮಯ್ಯಂ ಪಕ್ಷದ ಪರವಾಗಿ ಉಪಚುನವಾಣೆಯಲ್ಲಿ ಪ್ರಚಾರ ಮಾಡುತ್ತಿದ್ದಾಗ ಒಂದು ಹೇಳಿಕೆಯನ್ನು ನೀಡಿದ್ದರು. ಅದರಲ್ಲಿ ನಮ್ಮ ದೇಶದ ಮೊಟ್ಟ ಮೊದಲ ಭಯೋತ್ಪಾದಕ ಒಬ್ಬ ಹಿಂದೂವಾಗಿದ್ದ ಆತ ನಾಥುರಾಂ ಗೋಡ್ಸೆ ಅಲ್ಲದೇ ಬೇರೆ ಯಾರು ಅಲ್ಲ ಎಂದು ಕಮಲ್ ಹಾಸನ್ ಹೇಳಿಕೆ ನೀಡಿದ್ದರು. ಎಲ್ಲಾ ಕಡೆ ಈ ಹೇಳಿಕೆ ಹರಿದಾಡಿತ್ತು.

ಈ ಕುರಿತು ತಮಿಳರಸಿ ಸುಂದರ್ ರಾಜನ್ ಎಂಬ ತಮಿಳುನಾಡಿನ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷೆ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಕಮಲ್ ಹಾಸನ್ ರವರು ಧರ್ಮಗಳ ನಡುವೆ ಭೇಧ ಮೂಡಿಸಿ ಪ್ರಚೋದನೆ ಮಾಡುತ್ತಿದ್ದಾರೆಂದು ಅವರು ಆಪಾದಿಸಿದ್ದಾರೆ. ಈ ಕುರಿತು ಚುನಾವಣಾ ಆಯೋಗವು ಯಾವ ಕ್ರಮ ತೆಗೆದುಕೊಂಡಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ನಾಥುರಾಂ ಗೋಡ್ಸೆಯನ್ನು ಈ ದೇಶದ ಮೊಟ್ಟಮೊದಲ ಭಯೋತ್ಪಾದಕ ಎಂದು ಉಲ್ಲೇಖಿಸುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಇದನ್ನು ಹೇಳಿದಾಗ ಬಿಜೆಪಿ ಮತ್ತು ಸಂಘಪರಿವು ನಾಥುರಾಂ ಗೋಡ್ಸೆಯನ್ನು ಪರೋಕ್ಷವಾಗಿ ಸಮರ್ಥಿಸುವ ರೀತಿಯಲ್ಲಿ “ಒಂದೇ ಕೊಲೆಯನ್ನು ಮಾಡಿದವನನ್ನು ಭಯೋತ್ಪಾದಕ ಎಂದು ಕರೆಯಲು ಸಾಧ್ಯವಿಲ್ಲ ಎಂಬ ಸಮರ್ಥನೆ ನೀಡುತ್ತಿದ್ದರು.

ಆದರೆ ಒಬ್ಬ ವ್ಯಕ್ತಿಯನ್ನಾಗಲಿ, ಅಥವಾ ಒಂದು ಗುಂಪಿನನ್ನಾಗಲಿ ಯೋಜಿತವಾದ ರೀತಿಯೊಳಗೆ ಕೊಲೆಯನ್ನು ಎಸಗುವುದು ಭಯೋತ್ಪಾದನೆಯೇ ಸರಿ ಎಂಬುದು ಇತರರ ವಾದವಾಗಿತ್ತು. ಇದೇ ವಾದವನ್ನು ಮುಂದಿಟ್ಟು ಇತರರು ‘ಹಾಗಾದರೆ ಇನ್ನಿತರ ಕೋಮು ಗಲಭೆಗಳಲ್ಲಿ ಆರ್‍ಎಸ್‍ಎಸ್‍ನವರು, ಮತ್ತದರ ಅಂಗಸಂಘಟನೆಗಳು ಭಾಗವಹಿಸಿದ್ದಾಗಲಿ, ಅಥವಾ ಗುಜರಾತ್‍ನಲ್ಲಿ ನಡೆದ ಸಂಘಟಿತ ಯೋಜಿತ ಮಾರಣಹೋಮವಾಗಲಿ ಇದು ಭಯೋತ್ಪಾದನೆಯಲ್ಲವೇ? ಮಾಲೆಂಗಾವ್, ಮೆಕ್ಕಾ, ಸಂಜೋತಾ ಎಕ್ಸ್‍ಪ್ರೆಸ್ ಬಾಂಬ್ ಸ್ಫೋಟ ಪ್ರಕರಣದಂತಹ ಯೋಜಿತ ಕೃತ್ಯಗಳು ಭಯೋತ್ಪಾದನೆಯಲ್ಲವೇ? ಎಂದು ಕೇಳುತ್ತಿವೆ.

ಅದರ ಮುಂದುವರೆದ ಭಾಗವಾಗಿ ಪ್ರಗ್ಯಾ ಠಾಕೂರ್ ಅನ್ನು ಭಯೋತ್ಪಾದನೆಯ ಆರೋಪ ಹೊತ್ತ ವ್ಯಕ್ತಿಯೆಂದು ಹೇಳಲಾಗುತ್ತಿದ್ದು ಮತ್ತು ಆ ಸಂದರ್ಭದಲ್ಲಿಯೂ ಬಿಜೆಪಿ ಮತ್ತು ಆರ್‍ಎಸ್‍ಎಸ್ ಆಕೆಯಿಂದ ಅಂತರವನ್ನು ಕಾಯ್ದುಕೊಂಡಿತ್ತು. ವಾಸ್ತವದಲ್ಲಿ ಪ್ರಗ್ಯಾ ಸಿಂಗ್ ಕುರಿತಂತೆ ಮನಮೋಹನ್ ಸಿಂಗ್ ಸರ್ಕಾರಕ್ಕೆ ಪತ್ರ ಬರೆದಿದ್ದ ಆರ್‍ಎಸ್‍ಎಸ್ ಪದಾಧಿಕಾರಿ ಆಕೆ ತಮ್ಮ ಸಂಘಟನೆಗೆ ಸೇರಿಲ್ಲವೆಂದು, ವಾಸ್ತವದಲ್ಲಿ ನಮ್ಮ ಸಂಘಟನೆಯವರನ್ನೇ ಕೊಲೆಗೈಯಲು ಯೋಜಿಸಿದ್ದಳೆಂದು ದೂರಿದ್ದರು. ಹಾಗಾಗಿ ಎಲ್ಲಾ ಕೋನದಿಂದಲೂ ಪ್ರಗ್ಯಾ ಠಾಕೂರ್ ಭಯೋತ್ಪಾದಕ ಆರೋಪಿ ಎಂದು ಒಪ್ಪಿಕೊಂಡಿದ್ದರು.

ಆದರೆ ಈಗ ಆಕೆಯನ್ನು ಸಮರ್ಥಿಸಿಕೊಳ್ಳುತ್ತಾ ಆಕೆಗೆ ಎಂಪಿ ಟಿಕೆಟ್ ನೀಡಿರುವ ಬಿಜೆಪಿ ಈಗ ಇನ್ನು ಒಂದು ಹೆಜ್ಜೆ ಮುಂದೆ ಹೋಗಿ ನಾಥುರಾಂ ಗೋಡ್ಸೆಯನ್ನು ಸಹ ಸಮರ್ಥಿಸಿಕೊಳ್ಳುತ್ತಿರುವುದು ಕಂಡುಬರುತ್ತಿದೆ. “ಒಂದು ವೇಳೆ ನಾಥುರಾಂ ಗೋಡ್ಸೆ ವಿಚಾರದಲ್ಲಿ ಭಯೋತ್ಪಾದಕ, ಹಿಂದೂ ಭಯೋತ್ಪಾದಕ ಎನ್ನುವ ಕಮಲ್ ಹಾಸನ್‍ರವರ ನಿಲುವು ಒಪ್ಪಿಗೆ ಇಲ್ಲದಿದ್ದರೂ ನಾಥುರಾಂ ಗೋಡ್ಸೆಯ ಕೃತ್ಯವನ್ನು ತಾವು ಖಂಡಿಸುತ್ತೇವೆಂದು ಬಿಜೆಪಿ ಎಂದೂ, ಎಲ್ಲಿಯೂ ಹೇಳಿಲ್ಲವೇಕೆಂದು ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ಕಾರ್ಯದರ್ಶಿ ಕೆ.ಎಲ್ ಅಶೋಕ್ ಪ್ರಶ್ನಿಸಿದ್ದಾರೆ.

ಗಾಂಧಿ ಹುತಾತ್ಮರಾದ ಜನವರಿ 30ರಂದು ಹಿಂದೂ ಮಹಾಸಭಾದ ನಾಯಕಿಯೊಬ್ಬಳು ಗಾಂಧಿ ಪ್ರತಿಕೃತಿಗೆ ಗುಂಡು ಹಾರಿಸಿದ ವಿಡಿಯೋ ಮತ್ತು ಮಹಾರಾಷ್ಟ್ರದಲ್ಲಿ ಬಿಜೆಪಿ ಕಾರ್ಯಕರ್ತರು ಗೋಡ್ಸೆ ಪ್ರತಿಮೆ ಮತ್ತು ಮಂದಿರ ನಿರ್ಮಾಣ ಮಾಡಿದ್ದನ್ನು ಈ ಸಂದರ್ಭದಲ್ಲಿ ಸ್ಮರಿಸಬಹುದೇನೋ.

ತಮಿಳುನಾಡಿನಲ್ಲಿ ನಡೆದ ಈ ವಿವಾದವು ಮುಂದೆ ಯಾವ ತಿರುವನ್ನು ಪಡೆದುಕೊಳ್ಳುತ್ತದೆ ಎಂಬುದು ಕುತೂಹಲ ಮೂಡಿಸಿದೆ.

ಮೋದಿಗೆ ಬೃಂದಾ, ಪ್ರಿಯಾಂಕಾ, ಅಂಜಲಿ, ಶಬನಂ ಮತ್ತಿತರರ ಸವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...

‘ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದ ನೆಹರು, ಮೊಘಲ್ ಆಕ್ರಮಣಕಾರರನ್ನು ವೈಭವೀಕರಿಸುತ್ತಿದ್ದರು’: ಬಿಜೆಪಿ ಆರೋಪ

ನವದೆಹಲಿ: ಸೋಮನಾಥ ದೇವಾಲಯವನ್ನು ಹಿಂದೆ ಘಜ್ನಿ ಮಹಮ್ಮದ್ ಮತ್ತು ಅಲಾವುದ್ದೀನ್ ಖಿಲ್ಜಿ ಲೂಟಿ ಮಾಡಿದ್ದರು ಆದರೆ ಸ್ವತಂತ್ರ ಭಾರತದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಭಗವಾನ್ ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದರು ಎಂದು...

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವುದಾಗಿ ಆರೋಪ: ಆಕೆ ತನ್ನನ್ನು ತಾನು ವಿವಸ್ತ್ರಗೊಳಿಸಿಕೊಂಡಿದ್ದಾಳೆ ಎಂದ ಪೊಲೀಸ್ ಕಮಿಷನರ್

ಹುಬ್ಬಳ್ಳಿ: ಪೊಲೀಸ್ ವ್ಯಾನ್ ಒಳಗೆ ಪೂರ್ಣ ಬಟ್ಟೆಯಿಲ್ಲದೆ ಮಹಿಳೆಯೊಬ್ಬರ ವಿಡಿಯೋ ವೈರಲ್ ಆದ ನಂತರ, ಬಿಜೆಪಿ ನಾಯಕರು ಪೊಲೀಸರು ಅವಳನ್ನು ಬಂಧಿಸುವಾಗ ಆಕೆಯ ಬಟ್ಟೆಗಳನ್ನು ಬಿಚ್ಚಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಜನವರಿ 5...

ಬಿಜೆಪಿಯೊಂದಿಗೆ ಕೈಜೋಡಿಸಿದ ಗೌಡರೊಂದಿಗಿನ ಸಂಬಂಧ ಕಡಿದುಕೊಳ್ಳಲು ನಿರ್ಧರಿಸಿದ ಕೇರಳ ಜೆಡಿಎಸ್; ಹೊಸ ಪಕ್ಷದೊಂದಿಗೆ ವಿಲೀನ

ಜನತಾ ದಳ (ಜಾತ್ಯತೀತ) ದ ಕೇರಳ ಘಟಕವು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನೇತೃತ್ವದ ರಾಷ್ಟ್ರೀಯ ನಾಯಕತ್ವದೊಂದಿಗೆ ಸಂಬಂಧವನ್ನು ಕಡಿದುಕೊಂಡು ಹೊಸ ರಾಜಕೀಯ ಪಕ್ಷದೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದೆ. ಈ ನಿರ್ಧಾರದ ಕುರಿತು ಶೀಘ್ರದಲ್ಲೇ ಅಧಿಕೃತ...

‘ಚೀನಾ, ರಷ್ಯಾ, ಕ್ಯೂಬಾ, ಇರಾನ್‌ಗಳನ್ನು ಹೊರಗಿಡಿ’: ವೆನೆಜುವೆಲಾಗೆ ಟ್ರಂಪ್ ತಂಡದ ಹೊಸ ತೈಲ ಎಚ್ಚರಿಕೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ವೆನೆಜುವೆಲಾದ ಮಧ್ಯಂತರ ಅಧ್ಯಕ್ಷ ಡೆಲ್ಸಿ ರೊಡ್ರಿಗಸ್ ನೇತೃತ್ವದ ಹೊಸ ಆಡಳಿತಕ್ಕೆ ಚೀನಾ, ರಷ್ಯಾ, ಇರಾನ್ ಮತ್ತು ಕ್ಯೂಬಾ ಜೊತೆಗಿನ ಆರ್ಥಿಕ ಸಂಬಂಧಗಳನ್ನು "ಕಿತ್ತುಹಾಕಬೇಕು" ಮತ್ತು "ಕಡಿತಗೊಳಿಸಬೇಕು" ಎಂದು...