Homeಮುಖಪುಟಗೋಡ್ಸೆಯನ್ನು ಬೆಂಬಲಿಸಿತೆ ಬಿಜೆಪಿ? ತಮಿಳು ನಾಡಿನಲ್ಲಿ ಭುಗಿಲೆದ್ದ ವಿವಾದ

ಗೋಡ್ಸೆಯನ್ನು ಬೆಂಬಲಿಸಿತೆ ಬಿಜೆಪಿ? ತಮಿಳು ನಾಡಿನಲ್ಲಿ ಭುಗಿಲೆದ್ದ ವಿವಾದ

ದೇಶದ ಮೊಟ್ಟ ಮೊದಲ ಭಯೋತ್ಪಾದಕ ನಾಥುರಾಂ ಗೋಡ್ಸೆ ಒಬ್ಬ ಹಿಂದೂವಾಗಿದ್ದ ಎಂಬ ಕಮಲ್ ಹಾಸನ್ ಹೇಳಿಕೆಯ ವಿರುದ್ಧ ದೂರು ನೀಡಿದ ಬಿಜೆಪಿ

- Advertisement -
- Advertisement -

| ನಾನುಗೌರಿ ಡೆಸ್ಕ್ |

‘ನಾಥುರಾಂ ಗೂಡ್ಸೆಯನ್ನು ಬಿಜೆಪಿ ಬಹಿರಂಗವಾಗಿ ಬೆಂಬಲಿಸಿದೆ’ ಎಂದು ತಮಿಳುನಾಡಿನಲ್ಲಿ ಹಲವು ಸಂಘಟನೆಗಳು ಮತ್ತು ಪಕ್ಷಗಳು ಆಪಾದಿಸಿವೆ. ಇದುವರೆಗೂ ನಾಥುರಾಂ ಗೋಡ್ಸೆ ನಮ್ಮವನಲ್ಲ ಎನ್ನುತ್ತಿದ್ದ ಬಿಜೆಪಿ ಇಂದು ಆತನ ಪರವಾಗಿ ವಕಾಲತ್ತು ವಹಿಸುತ್ತಿರುವುದೇಕೆ ಎಂದು ಪ್ರಶ್ನಿಸಿಲಾಗಿದೆ

ನಡೆದಿದಿಷ್ಟು..
ಕಮಲ್ ಹಾಸನ್‍ರವರ ಎಂಎನ್‍ಎಂ – ಮಕ್ಕಳ್ ನೀದಿ ಮಯ್ಯಂ ಪಕ್ಷದ ಪರವಾಗಿ ಉಪಚುನವಾಣೆಯಲ್ಲಿ ಪ್ರಚಾರ ಮಾಡುತ್ತಿದ್ದಾಗ ಒಂದು ಹೇಳಿಕೆಯನ್ನು ನೀಡಿದ್ದರು. ಅದರಲ್ಲಿ ನಮ್ಮ ದೇಶದ ಮೊಟ್ಟ ಮೊದಲ ಭಯೋತ್ಪಾದಕ ಒಬ್ಬ ಹಿಂದೂವಾಗಿದ್ದ ಆತ ನಾಥುರಾಂ ಗೋಡ್ಸೆ ಅಲ್ಲದೇ ಬೇರೆ ಯಾರು ಅಲ್ಲ ಎಂದು ಕಮಲ್ ಹಾಸನ್ ಹೇಳಿಕೆ ನೀಡಿದ್ದರು. ಎಲ್ಲಾ ಕಡೆ ಈ ಹೇಳಿಕೆ ಹರಿದಾಡಿತ್ತು.

ಈ ಕುರಿತು ತಮಿಳರಸಿ ಸುಂದರ್ ರಾಜನ್ ಎಂಬ ತಮಿಳುನಾಡಿನ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷೆ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಕಮಲ್ ಹಾಸನ್ ರವರು ಧರ್ಮಗಳ ನಡುವೆ ಭೇಧ ಮೂಡಿಸಿ ಪ್ರಚೋದನೆ ಮಾಡುತ್ತಿದ್ದಾರೆಂದು ಅವರು ಆಪಾದಿಸಿದ್ದಾರೆ. ಈ ಕುರಿತು ಚುನಾವಣಾ ಆಯೋಗವು ಯಾವ ಕ್ರಮ ತೆಗೆದುಕೊಂಡಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ನಾಥುರಾಂ ಗೋಡ್ಸೆಯನ್ನು ಈ ದೇಶದ ಮೊಟ್ಟಮೊದಲ ಭಯೋತ್ಪಾದಕ ಎಂದು ಉಲ್ಲೇಖಿಸುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಇದನ್ನು ಹೇಳಿದಾಗ ಬಿಜೆಪಿ ಮತ್ತು ಸಂಘಪರಿವು ನಾಥುರಾಂ ಗೋಡ್ಸೆಯನ್ನು ಪರೋಕ್ಷವಾಗಿ ಸಮರ್ಥಿಸುವ ರೀತಿಯಲ್ಲಿ “ಒಂದೇ ಕೊಲೆಯನ್ನು ಮಾಡಿದವನನ್ನು ಭಯೋತ್ಪಾದಕ ಎಂದು ಕರೆಯಲು ಸಾಧ್ಯವಿಲ್ಲ ಎಂಬ ಸಮರ್ಥನೆ ನೀಡುತ್ತಿದ್ದರು.

ಆದರೆ ಒಬ್ಬ ವ್ಯಕ್ತಿಯನ್ನಾಗಲಿ, ಅಥವಾ ಒಂದು ಗುಂಪಿನನ್ನಾಗಲಿ ಯೋಜಿತವಾದ ರೀತಿಯೊಳಗೆ ಕೊಲೆಯನ್ನು ಎಸಗುವುದು ಭಯೋತ್ಪಾದನೆಯೇ ಸರಿ ಎಂಬುದು ಇತರರ ವಾದವಾಗಿತ್ತು. ಇದೇ ವಾದವನ್ನು ಮುಂದಿಟ್ಟು ಇತರರು ‘ಹಾಗಾದರೆ ಇನ್ನಿತರ ಕೋಮು ಗಲಭೆಗಳಲ್ಲಿ ಆರ್‍ಎಸ್‍ಎಸ್‍ನವರು, ಮತ್ತದರ ಅಂಗಸಂಘಟನೆಗಳು ಭಾಗವಹಿಸಿದ್ದಾಗಲಿ, ಅಥವಾ ಗುಜರಾತ್‍ನಲ್ಲಿ ನಡೆದ ಸಂಘಟಿತ ಯೋಜಿತ ಮಾರಣಹೋಮವಾಗಲಿ ಇದು ಭಯೋತ್ಪಾದನೆಯಲ್ಲವೇ? ಮಾಲೆಂಗಾವ್, ಮೆಕ್ಕಾ, ಸಂಜೋತಾ ಎಕ್ಸ್‍ಪ್ರೆಸ್ ಬಾಂಬ್ ಸ್ಫೋಟ ಪ್ರಕರಣದಂತಹ ಯೋಜಿತ ಕೃತ್ಯಗಳು ಭಯೋತ್ಪಾದನೆಯಲ್ಲವೇ? ಎಂದು ಕೇಳುತ್ತಿವೆ.

ಅದರ ಮುಂದುವರೆದ ಭಾಗವಾಗಿ ಪ್ರಗ್ಯಾ ಠಾಕೂರ್ ಅನ್ನು ಭಯೋತ್ಪಾದನೆಯ ಆರೋಪ ಹೊತ್ತ ವ್ಯಕ್ತಿಯೆಂದು ಹೇಳಲಾಗುತ್ತಿದ್ದು ಮತ್ತು ಆ ಸಂದರ್ಭದಲ್ಲಿಯೂ ಬಿಜೆಪಿ ಮತ್ತು ಆರ್‍ಎಸ್‍ಎಸ್ ಆಕೆಯಿಂದ ಅಂತರವನ್ನು ಕಾಯ್ದುಕೊಂಡಿತ್ತು. ವಾಸ್ತವದಲ್ಲಿ ಪ್ರಗ್ಯಾ ಸಿಂಗ್ ಕುರಿತಂತೆ ಮನಮೋಹನ್ ಸಿಂಗ್ ಸರ್ಕಾರಕ್ಕೆ ಪತ್ರ ಬರೆದಿದ್ದ ಆರ್‍ಎಸ್‍ಎಸ್ ಪದಾಧಿಕಾರಿ ಆಕೆ ತಮ್ಮ ಸಂಘಟನೆಗೆ ಸೇರಿಲ್ಲವೆಂದು, ವಾಸ್ತವದಲ್ಲಿ ನಮ್ಮ ಸಂಘಟನೆಯವರನ್ನೇ ಕೊಲೆಗೈಯಲು ಯೋಜಿಸಿದ್ದಳೆಂದು ದೂರಿದ್ದರು. ಹಾಗಾಗಿ ಎಲ್ಲಾ ಕೋನದಿಂದಲೂ ಪ್ರಗ್ಯಾ ಠಾಕೂರ್ ಭಯೋತ್ಪಾದಕ ಆರೋಪಿ ಎಂದು ಒಪ್ಪಿಕೊಂಡಿದ್ದರು.

ಆದರೆ ಈಗ ಆಕೆಯನ್ನು ಸಮರ್ಥಿಸಿಕೊಳ್ಳುತ್ತಾ ಆಕೆಗೆ ಎಂಪಿ ಟಿಕೆಟ್ ನೀಡಿರುವ ಬಿಜೆಪಿ ಈಗ ಇನ್ನು ಒಂದು ಹೆಜ್ಜೆ ಮುಂದೆ ಹೋಗಿ ನಾಥುರಾಂ ಗೋಡ್ಸೆಯನ್ನು ಸಹ ಸಮರ್ಥಿಸಿಕೊಳ್ಳುತ್ತಿರುವುದು ಕಂಡುಬರುತ್ತಿದೆ. “ಒಂದು ವೇಳೆ ನಾಥುರಾಂ ಗೋಡ್ಸೆ ವಿಚಾರದಲ್ಲಿ ಭಯೋತ್ಪಾದಕ, ಹಿಂದೂ ಭಯೋತ್ಪಾದಕ ಎನ್ನುವ ಕಮಲ್ ಹಾಸನ್‍ರವರ ನಿಲುವು ಒಪ್ಪಿಗೆ ಇಲ್ಲದಿದ್ದರೂ ನಾಥುರಾಂ ಗೋಡ್ಸೆಯ ಕೃತ್ಯವನ್ನು ತಾವು ಖಂಡಿಸುತ್ತೇವೆಂದು ಬಿಜೆಪಿ ಎಂದೂ, ಎಲ್ಲಿಯೂ ಹೇಳಿಲ್ಲವೇಕೆಂದು ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ಕಾರ್ಯದರ್ಶಿ ಕೆ.ಎಲ್ ಅಶೋಕ್ ಪ್ರಶ್ನಿಸಿದ್ದಾರೆ.

ಗಾಂಧಿ ಹುತಾತ್ಮರಾದ ಜನವರಿ 30ರಂದು ಹಿಂದೂ ಮಹಾಸಭಾದ ನಾಯಕಿಯೊಬ್ಬಳು ಗಾಂಧಿ ಪ್ರತಿಕೃತಿಗೆ ಗುಂಡು ಹಾರಿಸಿದ ವಿಡಿಯೋ ಮತ್ತು ಮಹಾರಾಷ್ಟ್ರದಲ್ಲಿ ಬಿಜೆಪಿ ಕಾರ್ಯಕರ್ತರು ಗೋಡ್ಸೆ ಪ್ರತಿಮೆ ಮತ್ತು ಮಂದಿರ ನಿರ್ಮಾಣ ಮಾಡಿದ್ದನ್ನು ಈ ಸಂದರ್ಭದಲ್ಲಿ ಸ್ಮರಿಸಬಹುದೇನೋ.

ತಮಿಳುನಾಡಿನಲ್ಲಿ ನಡೆದ ಈ ವಿವಾದವು ಮುಂದೆ ಯಾವ ತಿರುವನ್ನು ಪಡೆದುಕೊಳ್ಳುತ್ತದೆ ಎಂಬುದು ಕುತೂಹಲ ಮೂಡಿಸಿದೆ.

ಮೋದಿಗೆ ಬೃಂದಾ, ಪ್ರಿಯಾಂಕಾ, ಅಂಜಲಿ, ಶಬನಂ ಮತ್ತಿತರರ ಸವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಪೃಶ್ಯ ಅಲೆಮಾರಿ ಸಮುದಾಯಗಳನ್ನು ಪ್ರವರ್ಗ ಸಿಗೆ ಸೇರಿಸಿದ್ದನ್ನು ಕೋರ್ಟ್‌ನಲ್ಲಿ ಸಮರ್ಥಿಸಿಕೊಂಡ ರಾಜ್ಯ ಸರ್ಕಾರ

ಆಗಸ್ಟ್‌ 18 2025ರಂದು ರಾಜ್ಯ ಸರ್ಕಾರ ಒಳಮೀಸಲಾತಿ ವರ್ಗೀಕರಣ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟವು ಕರ್ನಾಟಕ ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿಯನ್ನು ದಾಖಲಿಸಿತ್ತು. ರಾಜ್ಯ ಸರ್ಕಾರ...

ಐದು ವರ್ಷಗಳಲ್ಲಿ ಸುಮಾರು ಒಂಬತ್ತು ಲಕ್ಷ ಜನರು ಪೌರತ್ವ ತ್ಯಜಿಸಿದ್ದಾರೆ: ಎಂಇಎ

ಕಳೆದ ಐದು ವರ್ಷಗಳಲ್ಲಿ ಸುಮಾರು ಒಂಬತ್ತು ಲಕ್ಷ ಜನರು ತಮ್ಮ ಭಾರತೀಯ ಪೌರತ್ವವನ್ನು ತ್ಯಜಿಸಿದ್ದಾರೆ. ಜಾಗತಿಕ ಚಲನಶೀಲತೆ ಹೆಚ್ಚಾದಂತೆ ಮತ್ತು ವೈಯಕ್ತಿಕ ಆಯ್ಕೆಗಳು ವಲಸೆ ಪ್ರವೃತ್ತಿಯನ್ನು ರೂಪಿಸುತ್ತಿರುವುದರಿಂದ ವಾರ್ಷಿಕವಾಗಿ ಸಂಖ್ಯೆಗಳು ಗಮನಾರ್ಹವಾಗಿ ಬದಲಾಗಿವೆ...

ನಟ ದಿಲೀಪ್ ಖುಲಾಸೆ: ನ್ಯಾಯಾಲಯದ ಕಲಾಪವನ್ನು ವಿರೂಪಗೊಳಿಸಬೇಡಿ ಎಂದು ಮಾಧ್ಯಮ ಮತ್ತು ವಕೀಲರಿಗೆ ಎಚ್ಚರಿಕೆ ನೀಡಿದ ನ್ಯಾಯಾದೀಶೆ ಹನಿ ವರ್ಗೀಸ್ 

2017 ರಲ್ಲಿ ದಕ್ಷಿಣ ಭಾರತದ ನಟಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಲಯಾಳಂ ನಟ ದಿಲೀಪ್ ಅವರನ್ನು ಖುಲಾಸೆಗೊಳಿಸಿದ ಎರ್ನಾಕುಲಂ ಪ್ರಧಾನ ಸೆಷನ್ಸ್ ನ್ಯಾಯಾಧೀಶೆ ಹನಿ ಎಂ ವರ್ಗೀಸ್, ತಮ್ಮ ತೀರ್ಪಿನ...

ರಾಜ್‌ಕೋಟ್‌ ಬಾಲಕಿ ಅತ್ಯಾಚಾರ ಪ್ರಕರಣ; ಆಕ್ರೋಶ ಹೊರಹಾಕಿದ ಶಾಸಕ ಜಿಗ್ನೇಶ್‌ ಮೇವಾನಿ; ಕಠಿಣ ಶಿಕ್ಷೆಗೆ ಆಗ್ರಹ

ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಏಳು ವರ್ಷದ ಬಾಲಕಿ ಅತ್ಯಾಚಾರ ಹಾಗೂ ಗಂಭೀರ ಹಲ್ಲೆ ಪ್ರಕರಣಕ್ಕೆ ಸಂಬಧಿಸಿದಂತೆ ಆಕ್ರೋಶ ಹೊರಹಾಕಿರುವ ಕಾಂಗ್ರೆಸ್ ಶಾಸಕ ಜಿಗ್ನೇಶ್‌ ಮೇವಾನಿ; ಆರೋಪಿಯನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ. ಘಟನೆ ಕುರಿತು...

ಯುವ ರೈತರನ್ನು ಮದುವೆಯಾಗುವ ಯುವತಿಯರಿಗೆ ₹5 ಲಕ್ಷ ಪ್ರೋತ್ಸಾಹಧನ ನೀಡಲು BJP ಕಾರ್ಯಕರ್ತರ ಮನವಿ

ಮಂಡ್ಯ:  ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ‘ಶಾದಿ ಭಾಗ್ಯ’ದಂತೆ ರೈತರನ್ನು ಮದುವೆಯಾಗುವ ಯುವತಿಯರಿಗೆ ಸರ್ಕಾರದ ವತಿಯಿಂದ ರೂ.5ಲಕ್ಷ ಪ್ರೋತ್ಸಾಹಧನ ನೀಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ ಅವರ ಮೂಲಕ...

ನಿವೃತ್ತಿ ನಿರ್ಧಾರ ಹಿಂತೆಗೆದುಕೊಂಡ ವಿನೇಶ್ ಫೋಗಟ್; ಲಾಸ್ ಏಂಜಲೀಸ್ ಒಲಿಂಪಿಕ್ಸ್‌ಗೆ ತಯಾರಿ

ಕುಸ್ತಿಪಟು ವಿನೇಶ್ ಫೋಗಟ್ ಸ್ಪರ್ಧಾತ್ಮಕ ಕ್ರೀಡೆಗೆ ಮರಳುವುದಾಗಿ ಘೋಷಿಸುವ ಮೂಲಕ ತಮ್ಮ ನಿವೃತ್ತಿ ನಿರ್ಧಾರವನ್ನು ಹಿಂತೆಗೆದುಕೊಂಡಿದ್ದಾರೆ. 2028 ರ ಲಾಸ್ ಏಂಜಲೀಸ್ ಒಲಿಂಪಿಕ್ಸ್ ಅನ್ನು ಗುರಿಯಾಗಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಈ ಕುರಿತ ಹೇಳಿಕೆ ಬಿಡುಗಡೆ ಮಾಡಿರುವ...

ಗುಜರಾತ್‌ನ ವಲ್ಸಾದ್‌ನಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿದು ಐವರು ಕಾರ್ಮಿಕರಿಗೆ ಗಾಯ

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಔರಂಗ ನದಿಗೆ ನಿರ್ಮಾಣ ಹಂತದಲ್ಲಿರುವ ಸೇತುವೆಯ ಮೇಲಿನ ಗಿರ್ಡರ್ ಕುಸಿದಿದ್ದು, ಐವರು ಕಾರ್ಮಿಕರು ಗಾಯಗೊಂಡಿದ್ದಾರೆ.  ಹಳೆಯ ಸೇತುವೆಗೆ ಸಮಾನಾಂತರವಾಗಿ ಹೊಸ ಸೇತುವೆಯನ್ನು ನಿರ್ಮಿಸಲಾಗುತ್ತಿರುವ ಕೈಲಾಶ್ ರಸ್ತೆಯಲ್ಲಿ ಶುಕ್ರವಾರ ಬೆಳಿಗ್ಗೆ 8...

ಆಮದು ಸುಂಕ ಹೆಚ್ಚಿಸಿದ ಮೆಕ್ಸಿಕೊ: ಭಾರತದ ವಾಹನ-ಉಕ್ಕು ರಫ್ತಿನ ವೆಚ್ಚ ಹೆಚ್ಚಳ ಸಾಧ್ಯತೆ

ಸ್ಥಳೀಯ ಕೈಗಾರಿಕೆಗಳನ್ನು ರಕ್ಷಿಸುವ ಗುರಿಯ ಭಾಗವಾಗಿ, ಭಾರತ, ಚೀನಾ ಮತ್ತು ದಕ್ಷಿಣ ಕೊರಿಯಾ ಸೇರಿದಂತೆ ಏಷ್ಯಾದ ದೇಶಗಳಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲಿನ ಹೆಚ್ಚಿನ ಸುಂಕ ಹೆಚ್ಚಳ ನಿರ್ಧಾರವನ್ನು ಮೆಕ್ಸಿಕೋ ಅನುಮೋದಿಸಿದೆ. ಮೆಕ್ಸಿಕನ್...

Cognizant ಕಂಪನಿಗೆ 99 ಪೈಸೆಗೆ ಒಂದು ಎಕರೆ ಭೂಮಿ: ವಿಶಾಖಪಟ್ಟಣದಲ್ಲಿ ತಾತ್ಕಾಲಿಕ ಕಛೇರಿ ಉದ್ಘಾಟನೆ

ಕಳೆದ ಜೂನ್‌ ನಲ್ಲಿ ಸುದ್ದಿಗೆ ಗ್ರಾಸವಾಗಿದ್ದ ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ Cognizant ಕಂಪನಿಯು 1582 ಕೋಟಿ ಹೂಡಿಕೆ ಮಾಡಿ 8 ಸಾವಿರ ಉದ್ಯೋಗ ಸೃಷ್ಠಿ ಮಾಡಲಾಗುವುದೆಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸರ್ಕಾರ ಘೋಷಿಸಿತ್ತು....

ಅಲ್ಪಸಂಖ್ಯಾತ ಶಾಲೆಗಳಿಗೆ ಆರ್.ಟಿ.ಇ ಕಾಯ್ದೆಯಿಂದ ವಿನಾಯಿತಿ ತೀರ್ಪಿನ ವಿರುದ್ಧ ಅರ್ಜಿ; ಎನ್.ಜಿ.ಒಗೆ ದಂಡ ವಿಧಿಸಿದ ಸುಪ್ರೀಂ  

ಶಿಕ್ಷಣ ಹಕ್ಕು ಕಾಯ್ದೆಯ (ಆರ್‌ಟಿಇ) ನಿಬಂಧನೆಗಳಿಂದ ಅಲ್ಪಸಂಖ್ಯಾತ ಶಾಲೆಗಳಿಗೆ ವಿನಾಯಿತಿ ನೀಡಿದ್ದ, ತನ್ನ ಹಿಂದಿನ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ರಿಟ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತೀವ್ರವಾಗಿ ಖಂಡಿಸಿದೆ.  ಜಸ್ಟೀಸ್ ಬಿ.ವಿ. ನಾಗರತ್ನ ಮತ್ತು...