Homeಮುಖಪುಟಗೋಡ್ಸೆಯನ್ನು ಬೆಂಬಲಿಸಿತೆ ಬಿಜೆಪಿ? ತಮಿಳು ನಾಡಿನಲ್ಲಿ ಭುಗಿಲೆದ್ದ ವಿವಾದ

ಗೋಡ್ಸೆಯನ್ನು ಬೆಂಬಲಿಸಿತೆ ಬಿಜೆಪಿ? ತಮಿಳು ನಾಡಿನಲ್ಲಿ ಭುಗಿಲೆದ್ದ ವಿವಾದ

ದೇಶದ ಮೊಟ್ಟ ಮೊದಲ ಭಯೋತ್ಪಾದಕ ನಾಥುರಾಂ ಗೋಡ್ಸೆ ಒಬ್ಬ ಹಿಂದೂವಾಗಿದ್ದ ಎಂಬ ಕಮಲ್ ಹಾಸನ್ ಹೇಳಿಕೆಯ ವಿರುದ್ಧ ದೂರು ನೀಡಿದ ಬಿಜೆಪಿ

- Advertisement -
- Advertisement -

| ನಾನುಗೌರಿ ಡೆಸ್ಕ್ |

‘ನಾಥುರಾಂ ಗೂಡ್ಸೆಯನ್ನು ಬಿಜೆಪಿ ಬಹಿರಂಗವಾಗಿ ಬೆಂಬಲಿಸಿದೆ’ ಎಂದು ತಮಿಳುನಾಡಿನಲ್ಲಿ ಹಲವು ಸಂಘಟನೆಗಳು ಮತ್ತು ಪಕ್ಷಗಳು ಆಪಾದಿಸಿವೆ. ಇದುವರೆಗೂ ನಾಥುರಾಂ ಗೋಡ್ಸೆ ನಮ್ಮವನಲ್ಲ ಎನ್ನುತ್ತಿದ್ದ ಬಿಜೆಪಿ ಇಂದು ಆತನ ಪರವಾಗಿ ವಕಾಲತ್ತು ವಹಿಸುತ್ತಿರುವುದೇಕೆ ಎಂದು ಪ್ರಶ್ನಿಸಿಲಾಗಿದೆ

ನಡೆದಿದಿಷ್ಟು..
ಕಮಲ್ ಹಾಸನ್‍ರವರ ಎಂಎನ್‍ಎಂ – ಮಕ್ಕಳ್ ನೀದಿ ಮಯ್ಯಂ ಪಕ್ಷದ ಪರವಾಗಿ ಉಪಚುನವಾಣೆಯಲ್ಲಿ ಪ್ರಚಾರ ಮಾಡುತ್ತಿದ್ದಾಗ ಒಂದು ಹೇಳಿಕೆಯನ್ನು ನೀಡಿದ್ದರು. ಅದರಲ್ಲಿ ನಮ್ಮ ದೇಶದ ಮೊಟ್ಟ ಮೊದಲ ಭಯೋತ್ಪಾದಕ ಒಬ್ಬ ಹಿಂದೂವಾಗಿದ್ದ ಆತ ನಾಥುರಾಂ ಗೋಡ್ಸೆ ಅಲ್ಲದೇ ಬೇರೆ ಯಾರು ಅಲ್ಲ ಎಂದು ಕಮಲ್ ಹಾಸನ್ ಹೇಳಿಕೆ ನೀಡಿದ್ದರು. ಎಲ್ಲಾ ಕಡೆ ಈ ಹೇಳಿಕೆ ಹರಿದಾಡಿತ್ತು.

ಈ ಕುರಿತು ತಮಿಳರಸಿ ಸುಂದರ್ ರಾಜನ್ ಎಂಬ ತಮಿಳುನಾಡಿನ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷೆ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಕಮಲ್ ಹಾಸನ್ ರವರು ಧರ್ಮಗಳ ನಡುವೆ ಭೇಧ ಮೂಡಿಸಿ ಪ್ರಚೋದನೆ ಮಾಡುತ್ತಿದ್ದಾರೆಂದು ಅವರು ಆಪಾದಿಸಿದ್ದಾರೆ. ಈ ಕುರಿತು ಚುನಾವಣಾ ಆಯೋಗವು ಯಾವ ಕ್ರಮ ತೆಗೆದುಕೊಂಡಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ನಾಥುರಾಂ ಗೋಡ್ಸೆಯನ್ನು ಈ ದೇಶದ ಮೊಟ್ಟಮೊದಲ ಭಯೋತ್ಪಾದಕ ಎಂದು ಉಲ್ಲೇಖಿಸುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಇದನ್ನು ಹೇಳಿದಾಗ ಬಿಜೆಪಿ ಮತ್ತು ಸಂಘಪರಿವು ನಾಥುರಾಂ ಗೋಡ್ಸೆಯನ್ನು ಪರೋಕ್ಷವಾಗಿ ಸಮರ್ಥಿಸುವ ರೀತಿಯಲ್ಲಿ “ಒಂದೇ ಕೊಲೆಯನ್ನು ಮಾಡಿದವನನ್ನು ಭಯೋತ್ಪಾದಕ ಎಂದು ಕರೆಯಲು ಸಾಧ್ಯವಿಲ್ಲ ಎಂಬ ಸಮರ್ಥನೆ ನೀಡುತ್ತಿದ್ದರು.

ಆದರೆ ಒಬ್ಬ ವ್ಯಕ್ತಿಯನ್ನಾಗಲಿ, ಅಥವಾ ಒಂದು ಗುಂಪಿನನ್ನಾಗಲಿ ಯೋಜಿತವಾದ ರೀತಿಯೊಳಗೆ ಕೊಲೆಯನ್ನು ಎಸಗುವುದು ಭಯೋತ್ಪಾದನೆಯೇ ಸರಿ ಎಂಬುದು ಇತರರ ವಾದವಾಗಿತ್ತು. ಇದೇ ವಾದವನ್ನು ಮುಂದಿಟ್ಟು ಇತರರು ‘ಹಾಗಾದರೆ ಇನ್ನಿತರ ಕೋಮು ಗಲಭೆಗಳಲ್ಲಿ ಆರ್‍ಎಸ್‍ಎಸ್‍ನವರು, ಮತ್ತದರ ಅಂಗಸಂಘಟನೆಗಳು ಭಾಗವಹಿಸಿದ್ದಾಗಲಿ, ಅಥವಾ ಗುಜರಾತ್‍ನಲ್ಲಿ ನಡೆದ ಸಂಘಟಿತ ಯೋಜಿತ ಮಾರಣಹೋಮವಾಗಲಿ ಇದು ಭಯೋತ್ಪಾದನೆಯಲ್ಲವೇ? ಮಾಲೆಂಗಾವ್, ಮೆಕ್ಕಾ, ಸಂಜೋತಾ ಎಕ್ಸ್‍ಪ್ರೆಸ್ ಬಾಂಬ್ ಸ್ಫೋಟ ಪ್ರಕರಣದಂತಹ ಯೋಜಿತ ಕೃತ್ಯಗಳು ಭಯೋತ್ಪಾದನೆಯಲ್ಲವೇ? ಎಂದು ಕೇಳುತ್ತಿವೆ.

ಅದರ ಮುಂದುವರೆದ ಭಾಗವಾಗಿ ಪ್ರಗ್ಯಾ ಠಾಕೂರ್ ಅನ್ನು ಭಯೋತ್ಪಾದನೆಯ ಆರೋಪ ಹೊತ್ತ ವ್ಯಕ್ತಿಯೆಂದು ಹೇಳಲಾಗುತ್ತಿದ್ದು ಮತ್ತು ಆ ಸಂದರ್ಭದಲ್ಲಿಯೂ ಬಿಜೆಪಿ ಮತ್ತು ಆರ್‍ಎಸ್‍ಎಸ್ ಆಕೆಯಿಂದ ಅಂತರವನ್ನು ಕಾಯ್ದುಕೊಂಡಿತ್ತು. ವಾಸ್ತವದಲ್ಲಿ ಪ್ರಗ್ಯಾ ಸಿಂಗ್ ಕುರಿತಂತೆ ಮನಮೋಹನ್ ಸಿಂಗ್ ಸರ್ಕಾರಕ್ಕೆ ಪತ್ರ ಬರೆದಿದ್ದ ಆರ್‍ಎಸ್‍ಎಸ್ ಪದಾಧಿಕಾರಿ ಆಕೆ ತಮ್ಮ ಸಂಘಟನೆಗೆ ಸೇರಿಲ್ಲವೆಂದು, ವಾಸ್ತವದಲ್ಲಿ ನಮ್ಮ ಸಂಘಟನೆಯವರನ್ನೇ ಕೊಲೆಗೈಯಲು ಯೋಜಿಸಿದ್ದಳೆಂದು ದೂರಿದ್ದರು. ಹಾಗಾಗಿ ಎಲ್ಲಾ ಕೋನದಿಂದಲೂ ಪ್ರಗ್ಯಾ ಠಾಕೂರ್ ಭಯೋತ್ಪಾದಕ ಆರೋಪಿ ಎಂದು ಒಪ್ಪಿಕೊಂಡಿದ್ದರು.

ಆದರೆ ಈಗ ಆಕೆಯನ್ನು ಸಮರ್ಥಿಸಿಕೊಳ್ಳುತ್ತಾ ಆಕೆಗೆ ಎಂಪಿ ಟಿಕೆಟ್ ನೀಡಿರುವ ಬಿಜೆಪಿ ಈಗ ಇನ್ನು ಒಂದು ಹೆಜ್ಜೆ ಮುಂದೆ ಹೋಗಿ ನಾಥುರಾಂ ಗೋಡ್ಸೆಯನ್ನು ಸಹ ಸಮರ್ಥಿಸಿಕೊಳ್ಳುತ್ತಿರುವುದು ಕಂಡುಬರುತ್ತಿದೆ. “ಒಂದು ವೇಳೆ ನಾಥುರಾಂ ಗೋಡ್ಸೆ ವಿಚಾರದಲ್ಲಿ ಭಯೋತ್ಪಾದಕ, ಹಿಂದೂ ಭಯೋತ್ಪಾದಕ ಎನ್ನುವ ಕಮಲ್ ಹಾಸನ್‍ರವರ ನಿಲುವು ಒಪ್ಪಿಗೆ ಇಲ್ಲದಿದ್ದರೂ ನಾಥುರಾಂ ಗೋಡ್ಸೆಯ ಕೃತ್ಯವನ್ನು ತಾವು ಖಂಡಿಸುತ್ತೇವೆಂದು ಬಿಜೆಪಿ ಎಂದೂ, ಎಲ್ಲಿಯೂ ಹೇಳಿಲ್ಲವೇಕೆಂದು ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ಕಾರ್ಯದರ್ಶಿ ಕೆ.ಎಲ್ ಅಶೋಕ್ ಪ್ರಶ್ನಿಸಿದ್ದಾರೆ.

ಗಾಂಧಿ ಹುತಾತ್ಮರಾದ ಜನವರಿ 30ರಂದು ಹಿಂದೂ ಮಹಾಸಭಾದ ನಾಯಕಿಯೊಬ್ಬಳು ಗಾಂಧಿ ಪ್ರತಿಕೃತಿಗೆ ಗುಂಡು ಹಾರಿಸಿದ ವಿಡಿಯೋ ಮತ್ತು ಮಹಾರಾಷ್ಟ್ರದಲ್ಲಿ ಬಿಜೆಪಿ ಕಾರ್ಯಕರ್ತರು ಗೋಡ್ಸೆ ಪ್ರತಿಮೆ ಮತ್ತು ಮಂದಿರ ನಿರ್ಮಾಣ ಮಾಡಿದ್ದನ್ನು ಈ ಸಂದರ್ಭದಲ್ಲಿ ಸ್ಮರಿಸಬಹುದೇನೋ.

ತಮಿಳುನಾಡಿನಲ್ಲಿ ನಡೆದ ಈ ವಿವಾದವು ಮುಂದೆ ಯಾವ ತಿರುವನ್ನು ಪಡೆದುಕೊಳ್ಳುತ್ತದೆ ಎಂಬುದು ಕುತೂಹಲ ಮೂಡಿಸಿದೆ.

ಮೋದಿಗೆ ಬೃಂದಾ, ಪ್ರಿಯಾಂಕಾ, ಅಂಜಲಿ, ಶಬನಂ ಮತ್ತಿತರರ ಸವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...