Homeಮುಖಪುಟಗೋಡ್ಸೆಯನ್ನು ಬೆಂಬಲಿಸಿತೆ ಬಿಜೆಪಿ? ತಮಿಳು ನಾಡಿನಲ್ಲಿ ಭುಗಿಲೆದ್ದ ವಿವಾದ

ಗೋಡ್ಸೆಯನ್ನು ಬೆಂಬಲಿಸಿತೆ ಬಿಜೆಪಿ? ತಮಿಳು ನಾಡಿನಲ್ಲಿ ಭುಗಿಲೆದ್ದ ವಿವಾದ

ದೇಶದ ಮೊಟ್ಟ ಮೊದಲ ಭಯೋತ್ಪಾದಕ ನಾಥುರಾಂ ಗೋಡ್ಸೆ ಒಬ್ಬ ಹಿಂದೂವಾಗಿದ್ದ ಎಂಬ ಕಮಲ್ ಹಾಸನ್ ಹೇಳಿಕೆಯ ವಿರುದ್ಧ ದೂರು ನೀಡಿದ ಬಿಜೆಪಿ

- Advertisement -
- Advertisement -

| ನಾನುಗೌರಿ ಡೆಸ್ಕ್ |

‘ನಾಥುರಾಂ ಗೂಡ್ಸೆಯನ್ನು ಬಿಜೆಪಿ ಬಹಿರಂಗವಾಗಿ ಬೆಂಬಲಿಸಿದೆ’ ಎಂದು ತಮಿಳುನಾಡಿನಲ್ಲಿ ಹಲವು ಸಂಘಟನೆಗಳು ಮತ್ತು ಪಕ್ಷಗಳು ಆಪಾದಿಸಿವೆ. ಇದುವರೆಗೂ ನಾಥುರಾಂ ಗೋಡ್ಸೆ ನಮ್ಮವನಲ್ಲ ಎನ್ನುತ್ತಿದ್ದ ಬಿಜೆಪಿ ಇಂದು ಆತನ ಪರವಾಗಿ ವಕಾಲತ್ತು ವಹಿಸುತ್ತಿರುವುದೇಕೆ ಎಂದು ಪ್ರಶ್ನಿಸಿಲಾಗಿದೆ

ನಡೆದಿದಿಷ್ಟು..
ಕಮಲ್ ಹಾಸನ್‍ರವರ ಎಂಎನ್‍ಎಂ – ಮಕ್ಕಳ್ ನೀದಿ ಮಯ್ಯಂ ಪಕ್ಷದ ಪರವಾಗಿ ಉಪಚುನವಾಣೆಯಲ್ಲಿ ಪ್ರಚಾರ ಮಾಡುತ್ತಿದ್ದಾಗ ಒಂದು ಹೇಳಿಕೆಯನ್ನು ನೀಡಿದ್ದರು. ಅದರಲ್ಲಿ ನಮ್ಮ ದೇಶದ ಮೊಟ್ಟ ಮೊದಲ ಭಯೋತ್ಪಾದಕ ಒಬ್ಬ ಹಿಂದೂವಾಗಿದ್ದ ಆತ ನಾಥುರಾಂ ಗೋಡ್ಸೆ ಅಲ್ಲದೇ ಬೇರೆ ಯಾರು ಅಲ್ಲ ಎಂದು ಕಮಲ್ ಹಾಸನ್ ಹೇಳಿಕೆ ನೀಡಿದ್ದರು. ಎಲ್ಲಾ ಕಡೆ ಈ ಹೇಳಿಕೆ ಹರಿದಾಡಿತ್ತು.

ಈ ಕುರಿತು ತಮಿಳರಸಿ ಸುಂದರ್ ರಾಜನ್ ಎಂಬ ತಮಿಳುನಾಡಿನ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷೆ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಕಮಲ್ ಹಾಸನ್ ರವರು ಧರ್ಮಗಳ ನಡುವೆ ಭೇಧ ಮೂಡಿಸಿ ಪ್ರಚೋದನೆ ಮಾಡುತ್ತಿದ್ದಾರೆಂದು ಅವರು ಆಪಾದಿಸಿದ್ದಾರೆ. ಈ ಕುರಿತು ಚುನಾವಣಾ ಆಯೋಗವು ಯಾವ ಕ್ರಮ ತೆಗೆದುಕೊಂಡಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ನಾಥುರಾಂ ಗೋಡ್ಸೆಯನ್ನು ಈ ದೇಶದ ಮೊಟ್ಟಮೊದಲ ಭಯೋತ್ಪಾದಕ ಎಂದು ಉಲ್ಲೇಖಿಸುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಇದನ್ನು ಹೇಳಿದಾಗ ಬಿಜೆಪಿ ಮತ್ತು ಸಂಘಪರಿವು ನಾಥುರಾಂ ಗೋಡ್ಸೆಯನ್ನು ಪರೋಕ್ಷವಾಗಿ ಸಮರ್ಥಿಸುವ ರೀತಿಯಲ್ಲಿ “ಒಂದೇ ಕೊಲೆಯನ್ನು ಮಾಡಿದವನನ್ನು ಭಯೋತ್ಪಾದಕ ಎಂದು ಕರೆಯಲು ಸಾಧ್ಯವಿಲ್ಲ ಎಂಬ ಸಮರ್ಥನೆ ನೀಡುತ್ತಿದ್ದರು.

ಆದರೆ ಒಬ್ಬ ವ್ಯಕ್ತಿಯನ್ನಾಗಲಿ, ಅಥವಾ ಒಂದು ಗುಂಪಿನನ್ನಾಗಲಿ ಯೋಜಿತವಾದ ರೀತಿಯೊಳಗೆ ಕೊಲೆಯನ್ನು ಎಸಗುವುದು ಭಯೋತ್ಪಾದನೆಯೇ ಸರಿ ಎಂಬುದು ಇತರರ ವಾದವಾಗಿತ್ತು. ಇದೇ ವಾದವನ್ನು ಮುಂದಿಟ್ಟು ಇತರರು ‘ಹಾಗಾದರೆ ಇನ್ನಿತರ ಕೋಮು ಗಲಭೆಗಳಲ್ಲಿ ಆರ್‍ಎಸ್‍ಎಸ್‍ನವರು, ಮತ್ತದರ ಅಂಗಸಂಘಟನೆಗಳು ಭಾಗವಹಿಸಿದ್ದಾಗಲಿ, ಅಥವಾ ಗುಜರಾತ್‍ನಲ್ಲಿ ನಡೆದ ಸಂಘಟಿತ ಯೋಜಿತ ಮಾರಣಹೋಮವಾಗಲಿ ಇದು ಭಯೋತ್ಪಾದನೆಯಲ್ಲವೇ? ಮಾಲೆಂಗಾವ್, ಮೆಕ್ಕಾ, ಸಂಜೋತಾ ಎಕ್ಸ್‍ಪ್ರೆಸ್ ಬಾಂಬ್ ಸ್ಫೋಟ ಪ್ರಕರಣದಂತಹ ಯೋಜಿತ ಕೃತ್ಯಗಳು ಭಯೋತ್ಪಾದನೆಯಲ್ಲವೇ? ಎಂದು ಕೇಳುತ್ತಿವೆ.

ಅದರ ಮುಂದುವರೆದ ಭಾಗವಾಗಿ ಪ್ರಗ್ಯಾ ಠಾಕೂರ್ ಅನ್ನು ಭಯೋತ್ಪಾದನೆಯ ಆರೋಪ ಹೊತ್ತ ವ್ಯಕ್ತಿಯೆಂದು ಹೇಳಲಾಗುತ್ತಿದ್ದು ಮತ್ತು ಆ ಸಂದರ್ಭದಲ್ಲಿಯೂ ಬಿಜೆಪಿ ಮತ್ತು ಆರ್‍ಎಸ್‍ಎಸ್ ಆಕೆಯಿಂದ ಅಂತರವನ್ನು ಕಾಯ್ದುಕೊಂಡಿತ್ತು. ವಾಸ್ತವದಲ್ಲಿ ಪ್ರಗ್ಯಾ ಸಿಂಗ್ ಕುರಿತಂತೆ ಮನಮೋಹನ್ ಸಿಂಗ್ ಸರ್ಕಾರಕ್ಕೆ ಪತ್ರ ಬರೆದಿದ್ದ ಆರ್‍ಎಸ್‍ಎಸ್ ಪದಾಧಿಕಾರಿ ಆಕೆ ತಮ್ಮ ಸಂಘಟನೆಗೆ ಸೇರಿಲ್ಲವೆಂದು, ವಾಸ್ತವದಲ್ಲಿ ನಮ್ಮ ಸಂಘಟನೆಯವರನ್ನೇ ಕೊಲೆಗೈಯಲು ಯೋಜಿಸಿದ್ದಳೆಂದು ದೂರಿದ್ದರು. ಹಾಗಾಗಿ ಎಲ್ಲಾ ಕೋನದಿಂದಲೂ ಪ್ರಗ್ಯಾ ಠಾಕೂರ್ ಭಯೋತ್ಪಾದಕ ಆರೋಪಿ ಎಂದು ಒಪ್ಪಿಕೊಂಡಿದ್ದರು.

ಆದರೆ ಈಗ ಆಕೆಯನ್ನು ಸಮರ್ಥಿಸಿಕೊಳ್ಳುತ್ತಾ ಆಕೆಗೆ ಎಂಪಿ ಟಿಕೆಟ್ ನೀಡಿರುವ ಬಿಜೆಪಿ ಈಗ ಇನ್ನು ಒಂದು ಹೆಜ್ಜೆ ಮುಂದೆ ಹೋಗಿ ನಾಥುರಾಂ ಗೋಡ್ಸೆಯನ್ನು ಸಹ ಸಮರ್ಥಿಸಿಕೊಳ್ಳುತ್ತಿರುವುದು ಕಂಡುಬರುತ್ತಿದೆ. “ಒಂದು ವೇಳೆ ನಾಥುರಾಂ ಗೋಡ್ಸೆ ವಿಚಾರದಲ್ಲಿ ಭಯೋತ್ಪಾದಕ, ಹಿಂದೂ ಭಯೋತ್ಪಾದಕ ಎನ್ನುವ ಕಮಲ್ ಹಾಸನ್‍ರವರ ನಿಲುವು ಒಪ್ಪಿಗೆ ಇಲ್ಲದಿದ್ದರೂ ನಾಥುರಾಂ ಗೋಡ್ಸೆಯ ಕೃತ್ಯವನ್ನು ತಾವು ಖಂಡಿಸುತ್ತೇವೆಂದು ಬಿಜೆಪಿ ಎಂದೂ, ಎಲ್ಲಿಯೂ ಹೇಳಿಲ್ಲವೇಕೆಂದು ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ಕಾರ್ಯದರ್ಶಿ ಕೆ.ಎಲ್ ಅಶೋಕ್ ಪ್ರಶ್ನಿಸಿದ್ದಾರೆ.

ಗಾಂಧಿ ಹುತಾತ್ಮರಾದ ಜನವರಿ 30ರಂದು ಹಿಂದೂ ಮಹಾಸಭಾದ ನಾಯಕಿಯೊಬ್ಬಳು ಗಾಂಧಿ ಪ್ರತಿಕೃತಿಗೆ ಗುಂಡು ಹಾರಿಸಿದ ವಿಡಿಯೋ ಮತ್ತು ಮಹಾರಾಷ್ಟ್ರದಲ್ಲಿ ಬಿಜೆಪಿ ಕಾರ್ಯಕರ್ತರು ಗೋಡ್ಸೆ ಪ್ರತಿಮೆ ಮತ್ತು ಮಂದಿರ ನಿರ್ಮಾಣ ಮಾಡಿದ್ದನ್ನು ಈ ಸಂದರ್ಭದಲ್ಲಿ ಸ್ಮರಿಸಬಹುದೇನೋ.

ತಮಿಳುನಾಡಿನಲ್ಲಿ ನಡೆದ ಈ ವಿವಾದವು ಮುಂದೆ ಯಾವ ತಿರುವನ್ನು ಪಡೆದುಕೊಳ್ಳುತ್ತದೆ ಎಂಬುದು ಕುತೂಹಲ ಮೂಡಿಸಿದೆ.

ಮೋದಿಗೆ ಬೃಂದಾ, ಪ್ರಿಯಾಂಕಾ, ಅಂಜಲಿ, ಶಬನಂ ಮತ್ತಿತರರ ಸವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...