Homeಮುಖಪುಟಗೋಡ್ಸೆಯನ್ನು ಬೆಂಬಲಿಸಿತೆ ಬಿಜೆಪಿ? ತಮಿಳು ನಾಡಿನಲ್ಲಿ ಭುಗಿಲೆದ್ದ ವಿವಾದ

ಗೋಡ್ಸೆಯನ್ನು ಬೆಂಬಲಿಸಿತೆ ಬಿಜೆಪಿ? ತಮಿಳು ನಾಡಿನಲ್ಲಿ ಭುಗಿಲೆದ್ದ ವಿವಾದ

ದೇಶದ ಮೊಟ್ಟ ಮೊದಲ ಭಯೋತ್ಪಾದಕ ನಾಥುರಾಂ ಗೋಡ್ಸೆ ಒಬ್ಬ ಹಿಂದೂವಾಗಿದ್ದ ಎಂಬ ಕಮಲ್ ಹಾಸನ್ ಹೇಳಿಕೆಯ ವಿರುದ್ಧ ದೂರು ನೀಡಿದ ಬಿಜೆಪಿ

- Advertisement -
- Advertisement -

| ನಾನುಗೌರಿ ಡೆಸ್ಕ್ |

‘ನಾಥುರಾಂ ಗೂಡ್ಸೆಯನ್ನು ಬಿಜೆಪಿ ಬಹಿರಂಗವಾಗಿ ಬೆಂಬಲಿಸಿದೆ’ ಎಂದು ತಮಿಳುನಾಡಿನಲ್ಲಿ ಹಲವು ಸಂಘಟನೆಗಳು ಮತ್ತು ಪಕ್ಷಗಳು ಆಪಾದಿಸಿವೆ. ಇದುವರೆಗೂ ನಾಥುರಾಂ ಗೋಡ್ಸೆ ನಮ್ಮವನಲ್ಲ ಎನ್ನುತ್ತಿದ್ದ ಬಿಜೆಪಿ ಇಂದು ಆತನ ಪರವಾಗಿ ವಕಾಲತ್ತು ವಹಿಸುತ್ತಿರುವುದೇಕೆ ಎಂದು ಪ್ರಶ್ನಿಸಿಲಾಗಿದೆ

ನಡೆದಿದಿಷ್ಟು..
ಕಮಲ್ ಹಾಸನ್‍ರವರ ಎಂಎನ್‍ಎಂ – ಮಕ್ಕಳ್ ನೀದಿ ಮಯ್ಯಂ ಪಕ್ಷದ ಪರವಾಗಿ ಉಪಚುನವಾಣೆಯಲ್ಲಿ ಪ್ರಚಾರ ಮಾಡುತ್ತಿದ್ದಾಗ ಒಂದು ಹೇಳಿಕೆಯನ್ನು ನೀಡಿದ್ದರು. ಅದರಲ್ಲಿ ನಮ್ಮ ದೇಶದ ಮೊಟ್ಟ ಮೊದಲ ಭಯೋತ್ಪಾದಕ ಒಬ್ಬ ಹಿಂದೂವಾಗಿದ್ದ ಆತ ನಾಥುರಾಂ ಗೋಡ್ಸೆ ಅಲ್ಲದೇ ಬೇರೆ ಯಾರು ಅಲ್ಲ ಎಂದು ಕಮಲ್ ಹಾಸನ್ ಹೇಳಿಕೆ ನೀಡಿದ್ದರು. ಎಲ್ಲಾ ಕಡೆ ಈ ಹೇಳಿಕೆ ಹರಿದಾಡಿತ್ತು.

ಈ ಕುರಿತು ತಮಿಳರಸಿ ಸುಂದರ್ ರಾಜನ್ ಎಂಬ ತಮಿಳುನಾಡಿನ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷೆ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಕಮಲ್ ಹಾಸನ್ ರವರು ಧರ್ಮಗಳ ನಡುವೆ ಭೇಧ ಮೂಡಿಸಿ ಪ್ರಚೋದನೆ ಮಾಡುತ್ತಿದ್ದಾರೆಂದು ಅವರು ಆಪಾದಿಸಿದ್ದಾರೆ. ಈ ಕುರಿತು ಚುನಾವಣಾ ಆಯೋಗವು ಯಾವ ಕ್ರಮ ತೆಗೆದುಕೊಂಡಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ನಾಥುರಾಂ ಗೋಡ್ಸೆಯನ್ನು ಈ ದೇಶದ ಮೊಟ್ಟಮೊದಲ ಭಯೋತ್ಪಾದಕ ಎಂದು ಉಲ್ಲೇಖಿಸುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಇದನ್ನು ಹೇಳಿದಾಗ ಬಿಜೆಪಿ ಮತ್ತು ಸಂಘಪರಿವು ನಾಥುರಾಂ ಗೋಡ್ಸೆಯನ್ನು ಪರೋಕ್ಷವಾಗಿ ಸಮರ್ಥಿಸುವ ರೀತಿಯಲ್ಲಿ “ಒಂದೇ ಕೊಲೆಯನ್ನು ಮಾಡಿದವನನ್ನು ಭಯೋತ್ಪಾದಕ ಎಂದು ಕರೆಯಲು ಸಾಧ್ಯವಿಲ್ಲ ಎಂಬ ಸಮರ್ಥನೆ ನೀಡುತ್ತಿದ್ದರು.

ಆದರೆ ಒಬ್ಬ ವ್ಯಕ್ತಿಯನ್ನಾಗಲಿ, ಅಥವಾ ಒಂದು ಗುಂಪಿನನ್ನಾಗಲಿ ಯೋಜಿತವಾದ ರೀತಿಯೊಳಗೆ ಕೊಲೆಯನ್ನು ಎಸಗುವುದು ಭಯೋತ್ಪಾದನೆಯೇ ಸರಿ ಎಂಬುದು ಇತರರ ವಾದವಾಗಿತ್ತು. ಇದೇ ವಾದವನ್ನು ಮುಂದಿಟ್ಟು ಇತರರು ‘ಹಾಗಾದರೆ ಇನ್ನಿತರ ಕೋಮು ಗಲಭೆಗಳಲ್ಲಿ ಆರ್‍ಎಸ್‍ಎಸ್‍ನವರು, ಮತ್ತದರ ಅಂಗಸಂಘಟನೆಗಳು ಭಾಗವಹಿಸಿದ್ದಾಗಲಿ, ಅಥವಾ ಗುಜರಾತ್‍ನಲ್ಲಿ ನಡೆದ ಸಂಘಟಿತ ಯೋಜಿತ ಮಾರಣಹೋಮವಾಗಲಿ ಇದು ಭಯೋತ್ಪಾದನೆಯಲ್ಲವೇ? ಮಾಲೆಂಗಾವ್, ಮೆಕ್ಕಾ, ಸಂಜೋತಾ ಎಕ್ಸ್‍ಪ್ರೆಸ್ ಬಾಂಬ್ ಸ್ಫೋಟ ಪ್ರಕರಣದಂತಹ ಯೋಜಿತ ಕೃತ್ಯಗಳು ಭಯೋತ್ಪಾದನೆಯಲ್ಲವೇ? ಎಂದು ಕೇಳುತ್ತಿವೆ.

ಅದರ ಮುಂದುವರೆದ ಭಾಗವಾಗಿ ಪ್ರಗ್ಯಾ ಠಾಕೂರ್ ಅನ್ನು ಭಯೋತ್ಪಾದನೆಯ ಆರೋಪ ಹೊತ್ತ ವ್ಯಕ್ತಿಯೆಂದು ಹೇಳಲಾಗುತ್ತಿದ್ದು ಮತ್ತು ಆ ಸಂದರ್ಭದಲ್ಲಿಯೂ ಬಿಜೆಪಿ ಮತ್ತು ಆರ್‍ಎಸ್‍ಎಸ್ ಆಕೆಯಿಂದ ಅಂತರವನ್ನು ಕಾಯ್ದುಕೊಂಡಿತ್ತು. ವಾಸ್ತವದಲ್ಲಿ ಪ್ರಗ್ಯಾ ಸಿಂಗ್ ಕುರಿತಂತೆ ಮನಮೋಹನ್ ಸಿಂಗ್ ಸರ್ಕಾರಕ್ಕೆ ಪತ್ರ ಬರೆದಿದ್ದ ಆರ್‍ಎಸ್‍ಎಸ್ ಪದಾಧಿಕಾರಿ ಆಕೆ ತಮ್ಮ ಸಂಘಟನೆಗೆ ಸೇರಿಲ್ಲವೆಂದು, ವಾಸ್ತವದಲ್ಲಿ ನಮ್ಮ ಸಂಘಟನೆಯವರನ್ನೇ ಕೊಲೆಗೈಯಲು ಯೋಜಿಸಿದ್ದಳೆಂದು ದೂರಿದ್ದರು. ಹಾಗಾಗಿ ಎಲ್ಲಾ ಕೋನದಿಂದಲೂ ಪ್ರಗ್ಯಾ ಠಾಕೂರ್ ಭಯೋತ್ಪಾದಕ ಆರೋಪಿ ಎಂದು ಒಪ್ಪಿಕೊಂಡಿದ್ದರು.

ಆದರೆ ಈಗ ಆಕೆಯನ್ನು ಸಮರ್ಥಿಸಿಕೊಳ್ಳುತ್ತಾ ಆಕೆಗೆ ಎಂಪಿ ಟಿಕೆಟ್ ನೀಡಿರುವ ಬಿಜೆಪಿ ಈಗ ಇನ್ನು ಒಂದು ಹೆಜ್ಜೆ ಮುಂದೆ ಹೋಗಿ ನಾಥುರಾಂ ಗೋಡ್ಸೆಯನ್ನು ಸಹ ಸಮರ್ಥಿಸಿಕೊಳ್ಳುತ್ತಿರುವುದು ಕಂಡುಬರುತ್ತಿದೆ. “ಒಂದು ವೇಳೆ ನಾಥುರಾಂ ಗೋಡ್ಸೆ ವಿಚಾರದಲ್ಲಿ ಭಯೋತ್ಪಾದಕ, ಹಿಂದೂ ಭಯೋತ್ಪಾದಕ ಎನ್ನುವ ಕಮಲ್ ಹಾಸನ್‍ರವರ ನಿಲುವು ಒಪ್ಪಿಗೆ ಇಲ್ಲದಿದ್ದರೂ ನಾಥುರಾಂ ಗೋಡ್ಸೆಯ ಕೃತ್ಯವನ್ನು ತಾವು ಖಂಡಿಸುತ್ತೇವೆಂದು ಬಿಜೆಪಿ ಎಂದೂ, ಎಲ್ಲಿಯೂ ಹೇಳಿಲ್ಲವೇಕೆಂದು ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ಕಾರ್ಯದರ್ಶಿ ಕೆ.ಎಲ್ ಅಶೋಕ್ ಪ್ರಶ್ನಿಸಿದ್ದಾರೆ.

ಗಾಂಧಿ ಹುತಾತ್ಮರಾದ ಜನವರಿ 30ರಂದು ಹಿಂದೂ ಮಹಾಸಭಾದ ನಾಯಕಿಯೊಬ್ಬಳು ಗಾಂಧಿ ಪ್ರತಿಕೃತಿಗೆ ಗುಂಡು ಹಾರಿಸಿದ ವಿಡಿಯೋ ಮತ್ತು ಮಹಾರಾಷ್ಟ್ರದಲ್ಲಿ ಬಿಜೆಪಿ ಕಾರ್ಯಕರ್ತರು ಗೋಡ್ಸೆ ಪ್ರತಿಮೆ ಮತ್ತು ಮಂದಿರ ನಿರ್ಮಾಣ ಮಾಡಿದ್ದನ್ನು ಈ ಸಂದರ್ಭದಲ್ಲಿ ಸ್ಮರಿಸಬಹುದೇನೋ.

ತಮಿಳುನಾಡಿನಲ್ಲಿ ನಡೆದ ಈ ವಿವಾದವು ಮುಂದೆ ಯಾವ ತಿರುವನ್ನು ಪಡೆದುಕೊಳ್ಳುತ್ತದೆ ಎಂಬುದು ಕುತೂಹಲ ಮೂಡಿಸಿದೆ.

ಮೋದಿಗೆ ಬೃಂದಾ, ಪ್ರಿಯಾಂಕಾ, ಅಂಜಲಿ, ಶಬನಂ ಮತ್ತಿತರರ ಸವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...