Homeಮುಖಪುಟಗೋಡ್ಸೆಯನ್ನು ಬೆಂಬಲಿಸಿತೆ ಬಿಜೆಪಿ? ತಮಿಳು ನಾಡಿನಲ್ಲಿ ಭುಗಿಲೆದ್ದ ವಿವಾದ

ಗೋಡ್ಸೆಯನ್ನು ಬೆಂಬಲಿಸಿತೆ ಬಿಜೆಪಿ? ತಮಿಳು ನಾಡಿನಲ್ಲಿ ಭುಗಿಲೆದ್ದ ವಿವಾದ

ದೇಶದ ಮೊಟ್ಟ ಮೊದಲ ಭಯೋತ್ಪಾದಕ ನಾಥುರಾಂ ಗೋಡ್ಸೆ ಒಬ್ಬ ಹಿಂದೂವಾಗಿದ್ದ ಎಂಬ ಕಮಲ್ ಹಾಸನ್ ಹೇಳಿಕೆಯ ವಿರುದ್ಧ ದೂರು ನೀಡಿದ ಬಿಜೆಪಿ

- Advertisement -
- Advertisement -

| ನಾನುಗೌರಿ ಡೆಸ್ಕ್ |

‘ನಾಥುರಾಂ ಗೂಡ್ಸೆಯನ್ನು ಬಿಜೆಪಿ ಬಹಿರಂಗವಾಗಿ ಬೆಂಬಲಿಸಿದೆ’ ಎಂದು ತಮಿಳುನಾಡಿನಲ್ಲಿ ಹಲವು ಸಂಘಟನೆಗಳು ಮತ್ತು ಪಕ್ಷಗಳು ಆಪಾದಿಸಿವೆ. ಇದುವರೆಗೂ ನಾಥುರಾಂ ಗೋಡ್ಸೆ ನಮ್ಮವನಲ್ಲ ಎನ್ನುತ್ತಿದ್ದ ಬಿಜೆಪಿ ಇಂದು ಆತನ ಪರವಾಗಿ ವಕಾಲತ್ತು ವಹಿಸುತ್ತಿರುವುದೇಕೆ ಎಂದು ಪ್ರಶ್ನಿಸಿಲಾಗಿದೆ

ನಡೆದಿದಿಷ್ಟು..
ಕಮಲ್ ಹಾಸನ್‍ರವರ ಎಂಎನ್‍ಎಂ – ಮಕ್ಕಳ್ ನೀದಿ ಮಯ್ಯಂ ಪಕ್ಷದ ಪರವಾಗಿ ಉಪಚುನವಾಣೆಯಲ್ಲಿ ಪ್ರಚಾರ ಮಾಡುತ್ತಿದ್ದಾಗ ಒಂದು ಹೇಳಿಕೆಯನ್ನು ನೀಡಿದ್ದರು. ಅದರಲ್ಲಿ ನಮ್ಮ ದೇಶದ ಮೊಟ್ಟ ಮೊದಲ ಭಯೋತ್ಪಾದಕ ಒಬ್ಬ ಹಿಂದೂವಾಗಿದ್ದ ಆತ ನಾಥುರಾಂ ಗೋಡ್ಸೆ ಅಲ್ಲದೇ ಬೇರೆ ಯಾರು ಅಲ್ಲ ಎಂದು ಕಮಲ್ ಹಾಸನ್ ಹೇಳಿಕೆ ನೀಡಿದ್ದರು. ಎಲ್ಲಾ ಕಡೆ ಈ ಹೇಳಿಕೆ ಹರಿದಾಡಿತ್ತು.

ಈ ಕುರಿತು ತಮಿಳರಸಿ ಸುಂದರ್ ರಾಜನ್ ಎಂಬ ತಮಿಳುನಾಡಿನ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷೆ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಕಮಲ್ ಹಾಸನ್ ರವರು ಧರ್ಮಗಳ ನಡುವೆ ಭೇಧ ಮೂಡಿಸಿ ಪ್ರಚೋದನೆ ಮಾಡುತ್ತಿದ್ದಾರೆಂದು ಅವರು ಆಪಾದಿಸಿದ್ದಾರೆ. ಈ ಕುರಿತು ಚುನಾವಣಾ ಆಯೋಗವು ಯಾವ ಕ್ರಮ ತೆಗೆದುಕೊಂಡಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ನಾಥುರಾಂ ಗೋಡ್ಸೆಯನ್ನು ಈ ದೇಶದ ಮೊಟ್ಟಮೊದಲ ಭಯೋತ್ಪಾದಕ ಎಂದು ಉಲ್ಲೇಖಿಸುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಇದನ್ನು ಹೇಳಿದಾಗ ಬಿಜೆಪಿ ಮತ್ತು ಸಂಘಪರಿವು ನಾಥುರಾಂ ಗೋಡ್ಸೆಯನ್ನು ಪರೋಕ್ಷವಾಗಿ ಸಮರ್ಥಿಸುವ ರೀತಿಯಲ್ಲಿ “ಒಂದೇ ಕೊಲೆಯನ್ನು ಮಾಡಿದವನನ್ನು ಭಯೋತ್ಪಾದಕ ಎಂದು ಕರೆಯಲು ಸಾಧ್ಯವಿಲ್ಲ ಎಂಬ ಸಮರ್ಥನೆ ನೀಡುತ್ತಿದ್ದರು.

ಆದರೆ ಒಬ್ಬ ವ್ಯಕ್ತಿಯನ್ನಾಗಲಿ, ಅಥವಾ ಒಂದು ಗುಂಪಿನನ್ನಾಗಲಿ ಯೋಜಿತವಾದ ರೀತಿಯೊಳಗೆ ಕೊಲೆಯನ್ನು ಎಸಗುವುದು ಭಯೋತ್ಪಾದನೆಯೇ ಸರಿ ಎಂಬುದು ಇತರರ ವಾದವಾಗಿತ್ತು. ಇದೇ ವಾದವನ್ನು ಮುಂದಿಟ್ಟು ಇತರರು ‘ಹಾಗಾದರೆ ಇನ್ನಿತರ ಕೋಮು ಗಲಭೆಗಳಲ್ಲಿ ಆರ್‍ಎಸ್‍ಎಸ್‍ನವರು, ಮತ್ತದರ ಅಂಗಸಂಘಟನೆಗಳು ಭಾಗವಹಿಸಿದ್ದಾಗಲಿ, ಅಥವಾ ಗುಜರಾತ್‍ನಲ್ಲಿ ನಡೆದ ಸಂಘಟಿತ ಯೋಜಿತ ಮಾರಣಹೋಮವಾಗಲಿ ಇದು ಭಯೋತ್ಪಾದನೆಯಲ್ಲವೇ? ಮಾಲೆಂಗಾವ್, ಮೆಕ್ಕಾ, ಸಂಜೋತಾ ಎಕ್ಸ್‍ಪ್ರೆಸ್ ಬಾಂಬ್ ಸ್ಫೋಟ ಪ್ರಕರಣದಂತಹ ಯೋಜಿತ ಕೃತ್ಯಗಳು ಭಯೋತ್ಪಾದನೆಯಲ್ಲವೇ? ಎಂದು ಕೇಳುತ್ತಿವೆ.

ಅದರ ಮುಂದುವರೆದ ಭಾಗವಾಗಿ ಪ್ರಗ್ಯಾ ಠಾಕೂರ್ ಅನ್ನು ಭಯೋತ್ಪಾದನೆಯ ಆರೋಪ ಹೊತ್ತ ವ್ಯಕ್ತಿಯೆಂದು ಹೇಳಲಾಗುತ್ತಿದ್ದು ಮತ್ತು ಆ ಸಂದರ್ಭದಲ್ಲಿಯೂ ಬಿಜೆಪಿ ಮತ್ತು ಆರ್‍ಎಸ್‍ಎಸ್ ಆಕೆಯಿಂದ ಅಂತರವನ್ನು ಕಾಯ್ದುಕೊಂಡಿತ್ತು. ವಾಸ್ತವದಲ್ಲಿ ಪ್ರಗ್ಯಾ ಸಿಂಗ್ ಕುರಿತಂತೆ ಮನಮೋಹನ್ ಸಿಂಗ್ ಸರ್ಕಾರಕ್ಕೆ ಪತ್ರ ಬರೆದಿದ್ದ ಆರ್‍ಎಸ್‍ಎಸ್ ಪದಾಧಿಕಾರಿ ಆಕೆ ತಮ್ಮ ಸಂಘಟನೆಗೆ ಸೇರಿಲ್ಲವೆಂದು, ವಾಸ್ತವದಲ್ಲಿ ನಮ್ಮ ಸಂಘಟನೆಯವರನ್ನೇ ಕೊಲೆಗೈಯಲು ಯೋಜಿಸಿದ್ದಳೆಂದು ದೂರಿದ್ದರು. ಹಾಗಾಗಿ ಎಲ್ಲಾ ಕೋನದಿಂದಲೂ ಪ್ರಗ್ಯಾ ಠಾಕೂರ್ ಭಯೋತ್ಪಾದಕ ಆರೋಪಿ ಎಂದು ಒಪ್ಪಿಕೊಂಡಿದ್ದರು.

ಆದರೆ ಈಗ ಆಕೆಯನ್ನು ಸಮರ್ಥಿಸಿಕೊಳ್ಳುತ್ತಾ ಆಕೆಗೆ ಎಂಪಿ ಟಿಕೆಟ್ ನೀಡಿರುವ ಬಿಜೆಪಿ ಈಗ ಇನ್ನು ಒಂದು ಹೆಜ್ಜೆ ಮುಂದೆ ಹೋಗಿ ನಾಥುರಾಂ ಗೋಡ್ಸೆಯನ್ನು ಸಹ ಸಮರ್ಥಿಸಿಕೊಳ್ಳುತ್ತಿರುವುದು ಕಂಡುಬರುತ್ತಿದೆ. “ಒಂದು ವೇಳೆ ನಾಥುರಾಂ ಗೋಡ್ಸೆ ವಿಚಾರದಲ್ಲಿ ಭಯೋತ್ಪಾದಕ, ಹಿಂದೂ ಭಯೋತ್ಪಾದಕ ಎನ್ನುವ ಕಮಲ್ ಹಾಸನ್‍ರವರ ನಿಲುವು ಒಪ್ಪಿಗೆ ಇಲ್ಲದಿದ್ದರೂ ನಾಥುರಾಂ ಗೋಡ್ಸೆಯ ಕೃತ್ಯವನ್ನು ತಾವು ಖಂಡಿಸುತ್ತೇವೆಂದು ಬಿಜೆಪಿ ಎಂದೂ, ಎಲ್ಲಿಯೂ ಹೇಳಿಲ್ಲವೇಕೆಂದು ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ಕಾರ್ಯದರ್ಶಿ ಕೆ.ಎಲ್ ಅಶೋಕ್ ಪ್ರಶ್ನಿಸಿದ್ದಾರೆ.

ಗಾಂಧಿ ಹುತಾತ್ಮರಾದ ಜನವರಿ 30ರಂದು ಹಿಂದೂ ಮಹಾಸಭಾದ ನಾಯಕಿಯೊಬ್ಬಳು ಗಾಂಧಿ ಪ್ರತಿಕೃತಿಗೆ ಗುಂಡು ಹಾರಿಸಿದ ವಿಡಿಯೋ ಮತ್ತು ಮಹಾರಾಷ್ಟ್ರದಲ್ಲಿ ಬಿಜೆಪಿ ಕಾರ್ಯಕರ್ತರು ಗೋಡ್ಸೆ ಪ್ರತಿಮೆ ಮತ್ತು ಮಂದಿರ ನಿರ್ಮಾಣ ಮಾಡಿದ್ದನ್ನು ಈ ಸಂದರ್ಭದಲ್ಲಿ ಸ್ಮರಿಸಬಹುದೇನೋ.

ತಮಿಳುನಾಡಿನಲ್ಲಿ ನಡೆದ ಈ ವಿವಾದವು ಮುಂದೆ ಯಾವ ತಿರುವನ್ನು ಪಡೆದುಕೊಳ್ಳುತ್ತದೆ ಎಂಬುದು ಕುತೂಹಲ ಮೂಡಿಸಿದೆ.

ಮೋದಿಗೆ ಬೃಂದಾ, ಪ್ರಿಯಾಂಕಾ, ಅಂಜಲಿ, ಶಬನಂ ಮತ್ತಿತರರ ಸವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...