Homeಮುಖಪುಟಗೋಡ್ಸೆಯನ್ನು ಬೆಂಬಲಿಸಿತೆ ಬಿಜೆಪಿ? ತಮಿಳು ನಾಡಿನಲ್ಲಿ ಭುಗಿಲೆದ್ದ ವಿವಾದ

ಗೋಡ್ಸೆಯನ್ನು ಬೆಂಬಲಿಸಿತೆ ಬಿಜೆಪಿ? ತಮಿಳು ನಾಡಿನಲ್ಲಿ ಭುಗಿಲೆದ್ದ ವಿವಾದ

ದೇಶದ ಮೊಟ್ಟ ಮೊದಲ ಭಯೋತ್ಪಾದಕ ನಾಥುರಾಂ ಗೋಡ್ಸೆ ಒಬ್ಬ ಹಿಂದೂವಾಗಿದ್ದ ಎಂಬ ಕಮಲ್ ಹಾಸನ್ ಹೇಳಿಕೆಯ ವಿರುದ್ಧ ದೂರು ನೀಡಿದ ಬಿಜೆಪಿ

- Advertisement -
- Advertisement -

| ನಾನುಗೌರಿ ಡೆಸ್ಕ್ |

‘ನಾಥುರಾಂ ಗೂಡ್ಸೆಯನ್ನು ಬಿಜೆಪಿ ಬಹಿರಂಗವಾಗಿ ಬೆಂಬಲಿಸಿದೆ’ ಎಂದು ತಮಿಳುನಾಡಿನಲ್ಲಿ ಹಲವು ಸಂಘಟನೆಗಳು ಮತ್ತು ಪಕ್ಷಗಳು ಆಪಾದಿಸಿವೆ. ಇದುವರೆಗೂ ನಾಥುರಾಂ ಗೋಡ್ಸೆ ನಮ್ಮವನಲ್ಲ ಎನ್ನುತ್ತಿದ್ದ ಬಿಜೆಪಿ ಇಂದು ಆತನ ಪರವಾಗಿ ವಕಾಲತ್ತು ವಹಿಸುತ್ತಿರುವುದೇಕೆ ಎಂದು ಪ್ರಶ್ನಿಸಿಲಾಗಿದೆ

ನಡೆದಿದಿಷ್ಟು..
ಕಮಲ್ ಹಾಸನ್‍ರವರ ಎಂಎನ್‍ಎಂ – ಮಕ್ಕಳ್ ನೀದಿ ಮಯ್ಯಂ ಪಕ್ಷದ ಪರವಾಗಿ ಉಪಚುನವಾಣೆಯಲ್ಲಿ ಪ್ರಚಾರ ಮಾಡುತ್ತಿದ್ದಾಗ ಒಂದು ಹೇಳಿಕೆಯನ್ನು ನೀಡಿದ್ದರು. ಅದರಲ್ಲಿ ನಮ್ಮ ದೇಶದ ಮೊಟ್ಟ ಮೊದಲ ಭಯೋತ್ಪಾದಕ ಒಬ್ಬ ಹಿಂದೂವಾಗಿದ್ದ ಆತ ನಾಥುರಾಂ ಗೋಡ್ಸೆ ಅಲ್ಲದೇ ಬೇರೆ ಯಾರು ಅಲ್ಲ ಎಂದು ಕಮಲ್ ಹಾಸನ್ ಹೇಳಿಕೆ ನೀಡಿದ್ದರು. ಎಲ್ಲಾ ಕಡೆ ಈ ಹೇಳಿಕೆ ಹರಿದಾಡಿತ್ತು.

ಈ ಕುರಿತು ತಮಿಳರಸಿ ಸುಂದರ್ ರಾಜನ್ ಎಂಬ ತಮಿಳುನಾಡಿನ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷೆ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಕಮಲ್ ಹಾಸನ್ ರವರು ಧರ್ಮಗಳ ನಡುವೆ ಭೇಧ ಮೂಡಿಸಿ ಪ್ರಚೋದನೆ ಮಾಡುತ್ತಿದ್ದಾರೆಂದು ಅವರು ಆಪಾದಿಸಿದ್ದಾರೆ. ಈ ಕುರಿತು ಚುನಾವಣಾ ಆಯೋಗವು ಯಾವ ಕ್ರಮ ತೆಗೆದುಕೊಂಡಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ನಾಥುರಾಂ ಗೋಡ್ಸೆಯನ್ನು ಈ ದೇಶದ ಮೊಟ್ಟಮೊದಲ ಭಯೋತ್ಪಾದಕ ಎಂದು ಉಲ್ಲೇಖಿಸುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಇದನ್ನು ಹೇಳಿದಾಗ ಬಿಜೆಪಿ ಮತ್ತು ಸಂಘಪರಿವು ನಾಥುರಾಂ ಗೋಡ್ಸೆಯನ್ನು ಪರೋಕ್ಷವಾಗಿ ಸಮರ್ಥಿಸುವ ರೀತಿಯಲ್ಲಿ “ಒಂದೇ ಕೊಲೆಯನ್ನು ಮಾಡಿದವನನ್ನು ಭಯೋತ್ಪಾದಕ ಎಂದು ಕರೆಯಲು ಸಾಧ್ಯವಿಲ್ಲ ಎಂಬ ಸಮರ್ಥನೆ ನೀಡುತ್ತಿದ್ದರು.

ಆದರೆ ಒಬ್ಬ ವ್ಯಕ್ತಿಯನ್ನಾಗಲಿ, ಅಥವಾ ಒಂದು ಗುಂಪಿನನ್ನಾಗಲಿ ಯೋಜಿತವಾದ ರೀತಿಯೊಳಗೆ ಕೊಲೆಯನ್ನು ಎಸಗುವುದು ಭಯೋತ್ಪಾದನೆಯೇ ಸರಿ ಎಂಬುದು ಇತರರ ವಾದವಾಗಿತ್ತು. ಇದೇ ವಾದವನ್ನು ಮುಂದಿಟ್ಟು ಇತರರು ‘ಹಾಗಾದರೆ ಇನ್ನಿತರ ಕೋಮು ಗಲಭೆಗಳಲ್ಲಿ ಆರ್‍ಎಸ್‍ಎಸ್‍ನವರು, ಮತ್ತದರ ಅಂಗಸಂಘಟನೆಗಳು ಭಾಗವಹಿಸಿದ್ದಾಗಲಿ, ಅಥವಾ ಗುಜರಾತ್‍ನಲ್ಲಿ ನಡೆದ ಸಂಘಟಿತ ಯೋಜಿತ ಮಾರಣಹೋಮವಾಗಲಿ ಇದು ಭಯೋತ್ಪಾದನೆಯಲ್ಲವೇ? ಮಾಲೆಂಗಾವ್, ಮೆಕ್ಕಾ, ಸಂಜೋತಾ ಎಕ್ಸ್‍ಪ್ರೆಸ್ ಬಾಂಬ್ ಸ್ಫೋಟ ಪ್ರಕರಣದಂತಹ ಯೋಜಿತ ಕೃತ್ಯಗಳು ಭಯೋತ್ಪಾದನೆಯಲ್ಲವೇ? ಎಂದು ಕೇಳುತ್ತಿವೆ.

ಅದರ ಮುಂದುವರೆದ ಭಾಗವಾಗಿ ಪ್ರಗ್ಯಾ ಠಾಕೂರ್ ಅನ್ನು ಭಯೋತ್ಪಾದನೆಯ ಆರೋಪ ಹೊತ್ತ ವ್ಯಕ್ತಿಯೆಂದು ಹೇಳಲಾಗುತ್ತಿದ್ದು ಮತ್ತು ಆ ಸಂದರ್ಭದಲ್ಲಿಯೂ ಬಿಜೆಪಿ ಮತ್ತು ಆರ್‍ಎಸ್‍ಎಸ್ ಆಕೆಯಿಂದ ಅಂತರವನ್ನು ಕಾಯ್ದುಕೊಂಡಿತ್ತು. ವಾಸ್ತವದಲ್ಲಿ ಪ್ರಗ್ಯಾ ಸಿಂಗ್ ಕುರಿತಂತೆ ಮನಮೋಹನ್ ಸಿಂಗ್ ಸರ್ಕಾರಕ್ಕೆ ಪತ್ರ ಬರೆದಿದ್ದ ಆರ್‍ಎಸ್‍ಎಸ್ ಪದಾಧಿಕಾರಿ ಆಕೆ ತಮ್ಮ ಸಂಘಟನೆಗೆ ಸೇರಿಲ್ಲವೆಂದು, ವಾಸ್ತವದಲ್ಲಿ ನಮ್ಮ ಸಂಘಟನೆಯವರನ್ನೇ ಕೊಲೆಗೈಯಲು ಯೋಜಿಸಿದ್ದಳೆಂದು ದೂರಿದ್ದರು. ಹಾಗಾಗಿ ಎಲ್ಲಾ ಕೋನದಿಂದಲೂ ಪ್ರಗ್ಯಾ ಠಾಕೂರ್ ಭಯೋತ್ಪಾದಕ ಆರೋಪಿ ಎಂದು ಒಪ್ಪಿಕೊಂಡಿದ್ದರು.

ಆದರೆ ಈಗ ಆಕೆಯನ್ನು ಸಮರ್ಥಿಸಿಕೊಳ್ಳುತ್ತಾ ಆಕೆಗೆ ಎಂಪಿ ಟಿಕೆಟ್ ನೀಡಿರುವ ಬಿಜೆಪಿ ಈಗ ಇನ್ನು ಒಂದು ಹೆಜ್ಜೆ ಮುಂದೆ ಹೋಗಿ ನಾಥುರಾಂ ಗೋಡ್ಸೆಯನ್ನು ಸಹ ಸಮರ್ಥಿಸಿಕೊಳ್ಳುತ್ತಿರುವುದು ಕಂಡುಬರುತ್ತಿದೆ. “ಒಂದು ವೇಳೆ ನಾಥುರಾಂ ಗೋಡ್ಸೆ ವಿಚಾರದಲ್ಲಿ ಭಯೋತ್ಪಾದಕ, ಹಿಂದೂ ಭಯೋತ್ಪಾದಕ ಎನ್ನುವ ಕಮಲ್ ಹಾಸನ್‍ರವರ ನಿಲುವು ಒಪ್ಪಿಗೆ ಇಲ್ಲದಿದ್ದರೂ ನಾಥುರಾಂ ಗೋಡ್ಸೆಯ ಕೃತ್ಯವನ್ನು ತಾವು ಖಂಡಿಸುತ್ತೇವೆಂದು ಬಿಜೆಪಿ ಎಂದೂ, ಎಲ್ಲಿಯೂ ಹೇಳಿಲ್ಲವೇಕೆಂದು ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ಕಾರ್ಯದರ್ಶಿ ಕೆ.ಎಲ್ ಅಶೋಕ್ ಪ್ರಶ್ನಿಸಿದ್ದಾರೆ.

ಗಾಂಧಿ ಹುತಾತ್ಮರಾದ ಜನವರಿ 30ರಂದು ಹಿಂದೂ ಮಹಾಸಭಾದ ನಾಯಕಿಯೊಬ್ಬಳು ಗಾಂಧಿ ಪ್ರತಿಕೃತಿಗೆ ಗುಂಡು ಹಾರಿಸಿದ ವಿಡಿಯೋ ಮತ್ತು ಮಹಾರಾಷ್ಟ್ರದಲ್ಲಿ ಬಿಜೆಪಿ ಕಾರ್ಯಕರ್ತರು ಗೋಡ್ಸೆ ಪ್ರತಿಮೆ ಮತ್ತು ಮಂದಿರ ನಿರ್ಮಾಣ ಮಾಡಿದ್ದನ್ನು ಈ ಸಂದರ್ಭದಲ್ಲಿ ಸ್ಮರಿಸಬಹುದೇನೋ.

ತಮಿಳುನಾಡಿನಲ್ಲಿ ನಡೆದ ಈ ವಿವಾದವು ಮುಂದೆ ಯಾವ ತಿರುವನ್ನು ಪಡೆದುಕೊಳ್ಳುತ್ತದೆ ಎಂಬುದು ಕುತೂಹಲ ಮೂಡಿಸಿದೆ.

ಮೋದಿಗೆ ಬೃಂದಾ, ಪ್ರಿಯಾಂಕಾ, ಅಂಜಲಿ, ಶಬನಂ ಮತ್ತಿತರರ ಸವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....