Homeಕರ್ನಾಟಕಕರಸೇವಕನ ಬಂಧನಕ್ಕೆ ಬಿಜೆಪಿ ವಿರೋಧ; ನ್ಯಾಯಾಲಯದ ಸೂಚನೆಯಂತೆ ಕ್ರಮ ಎಂದ ಸಿಎಂ

ಕರಸೇವಕನ ಬಂಧನಕ್ಕೆ ಬಿಜೆಪಿ ವಿರೋಧ; ನ್ಯಾಯಾಲಯದ ಸೂಚನೆಯಂತೆ ಕ್ರಮ ಎಂದ ಸಿಎಂ

- Advertisement -
- Advertisement -

ಮೂರು ದಶಕಗಳ ಹಿಂದಿನ ಬಾಬರಿ ಮಸೀದಿ ಧ್ವಂಸ, ರಾಮಜನ್ಮ ಭೂಮಿ ಗಲಾಟೆ ವೇಳೆ ಹುಬ್ಬಳ್ಳಿಯಲ್ಲಿ ಹಿಂಸಾಚಾರ ಪ್ರಕರಣದಲ್ಲಿ ಭಾಗಿಯಾಗಿದ್ದ ಓರ್ವ ಆರೋಪಿಯನ್ನು ಹುಬ್ಬಳ್ಳಿ ಪೊಲೀಸರು ಸೋಮವಾರ ಬಂಧಿಸಿದ್ದು, ಹಳೆ ಪ್ರಕರಣ ಮರುಜೀವ ಪಡೆದುಕೊಂಡಿದೆ. ಡಿ.5, 1992ರಂದು ಹುಬ್ಬಳ್ಳಿ ನಗರದಲ್ಲಿ ಸಂಭವಿಸಿದ್ದ ಗಲಭೆಯ ಸಂದರ್ಭ ಮಳಿಗೆಗಳಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 8 ಜನರ ವಿರುದ್ಧ ಹುಬ್ಬಳ್ಳಿಯ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಇದೆ ವಿಚಾರ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದ್ದು, ಕಾಂಗ್ರೆಸ್-ಬಿಜೆಪಿ ನಡುವೆ ಮಾತಿನ ವಿನಿಮಯ ನಡೆಯುತ್ತಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ನಾಯಕರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದು, ಗೃಹ ಇಲಾಖೆ ಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.

ಈ ಕುರಿತು ತಮ್ಮ ಹೇಳಿಕೆ ಬಿಡುಗಡೆ ಮಾಡಿರುವ ಸಿದ್ದರಾಮಯ್ಯ, ‘ಹುಬ್ಬಳ್ಳಿಯ ಕರಸೇವಕರ ಬಂಧನದಲ್ಲಿ ಸರ್ಕಾರ ದ್ವೇಷದ ರಾಜಕಾರಣ ಮಾಡಿಲ್ಲ, ನಿರಪರಾಧಿಗಳನ್ನು ಕೂಡಾ ಬಂಧಿಸಿಲ್ಲ. ಹಳೆಯ ಪ್ರಕರಣಗಳನ್ನು ವಿಲೇವಾರಿ ಮಾಡಬೇಕೆಂಬ ಗೃಹ ಇಲಾಖೆಯ ಸೂಚನೆಯಂತೆ ಪೊಲೀಸರು ಕ್ರಮ ಕೈಕೊಂಡಿದ್ದಾರೆ’ ಎಂದು ಹೇಳಿದ್ದಾರೆ.

‘ಬಂಧಿತರಲ್ಲಿ ಕೆಲವರು ಹಳೆಯ ಪ್ರಕರಣಗಳಲ್ಲಿ ಆರೋಪಿಗಳಾಗಿದ್ದ ಕರಸೇವಕರು ಇದ್ದಿರಬಹುದು. ರಾಜ್ಯ ಸರ್ಕಾರ ಕರಸೇವಕರನ್ನೇ ಗುರಿಯಾಗಿಟ್ಟುಕೊಂಡು ಕ್ರಮಕೈಗೊಂಡಿಲ್ಲ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಸೂಚನೆ ಏನಿದೆ ಅದರಂತೆ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಸ್ಪಷ್ಟನೆ ನೀಡಿದ್ದಾರೆ.

ರಾಜ್ಯ ಸರ್ಕಾರದ ಕ್ರಮವನ್ನು ಟೀಕಿಸಿರುವ ಬಿಜೆಪಿ ರಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ‘ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ಹೋರಾಡಿದವರನ್ನು ಜೈಲಿಗಟ್ಟುವ ಕಾಂಗ್ರೆಸ್ ಸರ್ಕಾರದ ಕ್ರಮ ಹಿಂದೂ ದ್ವೇಷಿ ಹಾಗೂ ರಾಮ ಮಂದಿರ ನಿರ್ಮಾಣದ ವಿರೋಧಿ ಮನಸ್ಥಿತಿಯನ್ನು ಸಾಬೀತು ಪಡಿಸಿದೆ. ಹುಬ್ಬಳ್ಳಿಯಲ್ಲಿ ರಾಮಮಂದಿರ ಹೋರಾಟದಲ್ಲಿ ಭಾಗಿಯಾಗಿದ್ದ ಕರಸೇವಕ ಶ್ರೀಕಾಂತ್ ಪೂಜಾರಿ ಅವರನ್ನು 31 ವರ್ಷಗಳ ಬಳಿಕ ಬಂಧನ ಹಾಗೂ ಉಳಿದ ಹೋರಾಟಗಾರರನ್ನು ಬಂಧಿಸಲು ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ಕ್ರಮ ಕಾನೂನಿನ ಹೆಸರಲ್ಲಿ ರಾಮ ಭಕ್ತರ ಮೇಲೆ ಸೇಡು ತೀರಿಸಿಕೊಳ್ಳುವ ವಿಕೃತ ಮನಸ್ಥಿತಿಯನ್ನು ಪ್ರತಿಬಿಂಬಿಸಿದೆ’ ಎಂದು ಕಿಡಿಕಾರಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ‘ರಾಜ್ಯದಲ್ಲಿ ಸಾವಿರಾರು ಗಂಭೀರ ಕ್ರಿಮಿನಲ್ ಹಾಗೂ ದೇಶ ದ್ರೋಹಿ ಪ್ರಕರಣಗಳು ಮಂದಗತಿಯ ತನಿಖೆಯಿಂದ ದಶಕಗಳಿಂದಲೂ ಧೂಳು ಹಿಡಿಯುತ್ತಿವೆ. ಇದ್ಯಾವುದರತ್ತಲೂ ಗಮನ ಹರಿಸದೇ ರಾಮ ಭಕ್ತರನ್ನೇ ಗುರಿಯನ್ನಾಗಿಸಿಕೊಂಡಿರುವ ಸಿದ್ದರಾಮಯ್ಯ ಅವರ ಸರ್ಕಾರ ಸಮಾಜಕ್ಕೆ ಯಾವ ಸಂದೇಶ ಕೊಡಲು ಹೊರಟಿದೆ? ಶ್ರೀರಾಮ ಮಂದಿರ ನಿರ್ಮಾಣದ ವಿರುದ್ಧ ಪಿತೂರಿ ನಡೆಸಿದವರು ಏನಾದರು? ರಾಮಭಕ್ತರ ಮೇಲೆ ದೌರ್ಜನ್ಯ ನಡೆಸಿದ ಸರ್ಕಾರಗಳು ಏನಾದವು ಎಂಬುದನ್ನು ಇನ್ನೂ ಬುದ್ದಿ ಕಲಿಯದ ಕಾಂಗ್ರೆಸ್ಸಿಗರು ಇತಿಹಾಸವನ್ನೊಮ್ಮೆ ಮೆಲುಕು ಹಾಕಲಿ’ ಎಂದಿದ್ದಾರೆ.

ಕರಸೇವಕರ ಬಂಧನ ಖಂಡನೀಯ: ಬೊಮ್ಮಾಯಿ

‘ರಾಮಮಂದಿರ ಉದ್ಘಾಟನೆಗೆ ಸಿದ್ದವಾಗಿರುವ ಈ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ 30 ವರ್ಷದ ಹಳೆಯ ಪ್ರಕರಣವನ್ನು ಕೆದಕಿ ಹುಬ್ಬಳ್ಳಿಯ ಹಿಂದೂ ಕರಸೇವಕರ ಬಂಧನ ಮಾಡಿರುವುದು ಅತ್ಯಂತ ಖಂಡನೀಯ. ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣ ಆಗುತ್ತಿರುವಂತ್ತಿರುವುದು ಕಾಂಗ್ರೆಸ್ ನವರಿಗೆ ಸಹಿಸಲು ಆಗುತ್ತಿಲ್ಲ’ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.

ತಮ್ಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ಇಡೀ ದೇಶದ ಜನ ಸಂಭ್ರಮಿಸುತ್ತಿರುವ ಈ ಸಂದರ್ಭದಲ್ಲಿ ಹಿಂದೂ ಕಾರ್ಯಕರ್ತರನ್ನು ಬಂಧಿಸುವುದರ ಹಿಂದಿನ ಉದ್ದೇಶ ಏನು? ಇಡೀ ದೇಶವೇ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಬೆಂಬಲ ಕೊಡುತ್ತಿರುವ ಸಂದರ್ಭದಲ್ಲಿ ಈ ರೀತಿ ನಡೆಯುತ್ತಿದೆ. ರಾಜ್ಯದಲ್ಲಿ ಕಾನೂನು ಪಾಲನೆ ಮಾಡುವವರೇ ಕಾನೂನು ಉಲ್ಲಂಘನೆ ಮಾಡುತ್ತಿರುವುದಕ್ಕೆ ಇದು ಸ್ಪಷ್ಪ ನಿದರ್ಶನ’ ಎಂದಿದ್ದಾರೆ.

‘ಈಗಾಗಲೇ ರಾಮ ಜನ್ಮಭೂಮಿಯಲ್ಲಿ ಮಂದಿರ ನಿರ್ಮಾಣಕ್ಕೆ ವಿರೋಧ ಮಾಡಿರುವುದಕ್ಕೆ ಕಾಂಗ್ರೆಸ್ ಗೆ ಸಂಸತ್ತಿನಲ್ಲಿ ಪ್ರತಿಪಕ್ಷದ ಸ್ಥಾನವೂ ಇಲ್ಲದಂತಾಗಿದೆ. ಈ ರೀತಿಯ ದ್ವೇಷದ ರಾಜಕಾರಣದಿಂದ ರಾಜ್ಯದಲ್ಲಿಯೂ ಕಾಂಗ್ರೆಸ್ ಅಂತ್ಯ ಕಾಣುವುದೂ ನಿಶ್ಚಿತ’ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ; 1992ರ ಹುಬ್ಬಳ್ಳಿ ಹಿಂಸಾಚಾರ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...