Homeಕರ್ನಾಟಕಕರಸೇವಕನ ಬಂಧನಕ್ಕೆ ಬಿಜೆಪಿ ವಿರೋಧ; ನ್ಯಾಯಾಲಯದ ಸೂಚನೆಯಂತೆ ಕ್ರಮ ಎಂದ ಸಿಎಂ

ಕರಸೇವಕನ ಬಂಧನಕ್ಕೆ ಬಿಜೆಪಿ ವಿರೋಧ; ನ್ಯಾಯಾಲಯದ ಸೂಚನೆಯಂತೆ ಕ್ರಮ ಎಂದ ಸಿಎಂ

- Advertisement -
- Advertisement -

ಮೂರು ದಶಕಗಳ ಹಿಂದಿನ ಬಾಬರಿ ಮಸೀದಿ ಧ್ವಂಸ, ರಾಮಜನ್ಮ ಭೂಮಿ ಗಲಾಟೆ ವೇಳೆ ಹುಬ್ಬಳ್ಳಿಯಲ್ಲಿ ಹಿಂಸಾಚಾರ ಪ್ರಕರಣದಲ್ಲಿ ಭಾಗಿಯಾಗಿದ್ದ ಓರ್ವ ಆರೋಪಿಯನ್ನು ಹುಬ್ಬಳ್ಳಿ ಪೊಲೀಸರು ಸೋಮವಾರ ಬಂಧಿಸಿದ್ದು, ಹಳೆ ಪ್ರಕರಣ ಮರುಜೀವ ಪಡೆದುಕೊಂಡಿದೆ. ಡಿ.5, 1992ರಂದು ಹುಬ್ಬಳ್ಳಿ ನಗರದಲ್ಲಿ ಸಂಭವಿಸಿದ್ದ ಗಲಭೆಯ ಸಂದರ್ಭ ಮಳಿಗೆಗಳಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 8 ಜನರ ವಿರುದ್ಧ ಹುಬ್ಬಳ್ಳಿಯ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಇದೆ ವಿಚಾರ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದ್ದು, ಕಾಂಗ್ರೆಸ್-ಬಿಜೆಪಿ ನಡುವೆ ಮಾತಿನ ವಿನಿಮಯ ನಡೆಯುತ್ತಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ನಾಯಕರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದು, ಗೃಹ ಇಲಾಖೆ ಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.

ಈ ಕುರಿತು ತಮ್ಮ ಹೇಳಿಕೆ ಬಿಡುಗಡೆ ಮಾಡಿರುವ ಸಿದ್ದರಾಮಯ್ಯ, ‘ಹುಬ್ಬಳ್ಳಿಯ ಕರಸೇವಕರ ಬಂಧನದಲ್ಲಿ ಸರ್ಕಾರ ದ್ವೇಷದ ರಾಜಕಾರಣ ಮಾಡಿಲ್ಲ, ನಿರಪರಾಧಿಗಳನ್ನು ಕೂಡಾ ಬಂಧಿಸಿಲ್ಲ. ಹಳೆಯ ಪ್ರಕರಣಗಳನ್ನು ವಿಲೇವಾರಿ ಮಾಡಬೇಕೆಂಬ ಗೃಹ ಇಲಾಖೆಯ ಸೂಚನೆಯಂತೆ ಪೊಲೀಸರು ಕ್ರಮ ಕೈಕೊಂಡಿದ್ದಾರೆ’ ಎಂದು ಹೇಳಿದ್ದಾರೆ.

‘ಬಂಧಿತರಲ್ಲಿ ಕೆಲವರು ಹಳೆಯ ಪ್ರಕರಣಗಳಲ್ಲಿ ಆರೋಪಿಗಳಾಗಿದ್ದ ಕರಸೇವಕರು ಇದ್ದಿರಬಹುದು. ರಾಜ್ಯ ಸರ್ಕಾರ ಕರಸೇವಕರನ್ನೇ ಗುರಿಯಾಗಿಟ್ಟುಕೊಂಡು ಕ್ರಮಕೈಗೊಂಡಿಲ್ಲ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಸೂಚನೆ ಏನಿದೆ ಅದರಂತೆ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಸ್ಪಷ್ಟನೆ ನೀಡಿದ್ದಾರೆ.

ರಾಜ್ಯ ಸರ್ಕಾರದ ಕ್ರಮವನ್ನು ಟೀಕಿಸಿರುವ ಬಿಜೆಪಿ ರಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ‘ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ಹೋರಾಡಿದವರನ್ನು ಜೈಲಿಗಟ್ಟುವ ಕಾಂಗ್ರೆಸ್ ಸರ್ಕಾರದ ಕ್ರಮ ಹಿಂದೂ ದ್ವೇಷಿ ಹಾಗೂ ರಾಮ ಮಂದಿರ ನಿರ್ಮಾಣದ ವಿರೋಧಿ ಮನಸ್ಥಿತಿಯನ್ನು ಸಾಬೀತು ಪಡಿಸಿದೆ. ಹುಬ್ಬಳ್ಳಿಯಲ್ಲಿ ರಾಮಮಂದಿರ ಹೋರಾಟದಲ್ಲಿ ಭಾಗಿಯಾಗಿದ್ದ ಕರಸೇವಕ ಶ್ರೀಕಾಂತ್ ಪೂಜಾರಿ ಅವರನ್ನು 31 ವರ್ಷಗಳ ಬಳಿಕ ಬಂಧನ ಹಾಗೂ ಉಳಿದ ಹೋರಾಟಗಾರರನ್ನು ಬಂಧಿಸಲು ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ಕ್ರಮ ಕಾನೂನಿನ ಹೆಸರಲ್ಲಿ ರಾಮ ಭಕ್ತರ ಮೇಲೆ ಸೇಡು ತೀರಿಸಿಕೊಳ್ಳುವ ವಿಕೃತ ಮನಸ್ಥಿತಿಯನ್ನು ಪ್ರತಿಬಿಂಬಿಸಿದೆ’ ಎಂದು ಕಿಡಿಕಾರಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ‘ರಾಜ್ಯದಲ್ಲಿ ಸಾವಿರಾರು ಗಂಭೀರ ಕ್ರಿಮಿನಲ್ ಹಾಗೂ ದೇಶ ದ್ರೋಹಿ ಪ್ರಕರಣಗಳು ಮಂದಗತಿಯ ತನಿಖೆಯಿಂದ ದಶಕಗಳಿಂದಲೂ ಧೂಳು ಹಿಡಿಯುತ್ತಿವೆ. ಇದ್ಯಾವುದರತ್ತಲೂ ಗಮನ ಹರಿಸದೇ ರಾಮ ಭಕ್ತರನ್ನೇ ಗುರಿಯನ್ನಾಗಿಸಿಕೊಂಡಿರುವ ಸಿದ್ದರಾಮಯ್ಯ ಅವರ ಸರ್ಕಾರ ಸಮಾಜಕ್ಕೆ ಯಾವ ಸಂದೇಶ ಕೊಡಲು ಹೊರಟಿದೆ? ಶ್ರೀರಾಮ ಮಂದಿರ ನಿರ್ಮಾಣದ ವಿರುದ್ಧ ಪಿತೂರಿ ನಡೆಸಿದವರು ಏನಾದರು? ರಾಮಭಕ್ತರ ಮೇಲೆ ದೌರ್ಜನ್ಯ ನಡೆಸಿದ ಸರ್ಕಾರಗಳು ಏನಾದವು ಎಂಬುದನ್ನು ಇನ್ನೂ ಬುದ್ದಿ ಕಲಿಯದ ಕಾಂಗ್ರೆಸ್ಸಿಗರು ಇತಿಹಾಸವನ್ನೊಮ್ಮೆ ಮೆಲುಕು ಹಾಕಲಿ’ ಎಂದಿದ್ದಾರೆ.

ಕರಸೇವಕರ ಬಂಧನ ಖಂಡನೀಯ: ಬೊಮ್ಮಾಯಿ

‘ರಾಮಮಂದಿರ ಉದ್ಘಾಟನೆಗೆ ಸಿದ್ದವಾಗಿರುವ ಈ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ 30 ವರ್ಷದ ಹಳೆಯ ಪ್ರಕರಣವನ್ನು ಕೆದಕಿ ಹುಬ್ಬಳ್ಳಿಯ ಹಿಂದೂ ಕರಸೇವಕರ ಬಂಧನ ಮಾಡಿರುವುದು ಅತ್ಯಂತ ಖಂಡನೀಯ. ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣ ಆಗುತ್ತಿರುವಂತ್ತಿರುವುದು ಕಾಂಗ್ರೆಸ್ ನವರಿಗೆ ಸಹಿಸಲು ಆಗುತ್ತಿಲ್ಲ’ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.

ತಮ್ಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ಇಡೀ ದೇಶದ ಜನ ಸಂಭ್ರಮಿಸುತ್ತಿರುವ ಈ ಸಂದರ್ಭದಲ್ಲಿ ಹಿಂದೂ ಕಾರ್ಯಕರ್ತರನ್ನು ಬಂಧಿಸುವುದರ ಹಿಂದಿನ ಉದ್ದೇಶ ಏನು? ಇಡೀ ದೇಶವೇ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಬೆಂಬಲ ಕೊಡುತ್ತಿರುವ ಸಂದರ್ಭದಲ್ಲಿ ಈ ರೀತಿ ನಡೆಯುತ್ತಿದೆ. ರಾಜ್ಯದಲ್ಲಿ ಕಾನೂನು ಪಾಲನೆ ಮಾಡುವವರೇ ಕಾನೂನು ಉಲ್ಲಂಘನೆ ಮಾಡುತ್ತಿರುವುದಕ್ಕೆ ಇದು ಸ್ಪಷ್ಪ ನಿದರ್ಶನ’ ಎಂದಿದ್ದಾರೆ.

‘ಈಗಾಗಲೇ ರಾಮ ಜನ್ಮಭೂಮಿಯಲ್ಲಿ ಮಂದಿರ ನಿರ್ಮಾಣಕ್ಕೆ ವಿರೋಧ ಮಾಡಿರುವುದಕ್ಕೆ ಕಾಂಗ್ರೆಸ್ ಗೆ ಸಂಸತ್ತಿನಲ್ಲಿ ಪ್ರತಿಪಕ್ಷದ ಸ್ಥಾನವೂ ಇಲ್ಲದಂತಾಗಿದೆ. ಈ ರೀತಿಯ ದ್ವೇಷದ ರಾಜಕಾರಣದಿಂದ ರಾಜ್ಯದಲ್ಲಿಯೂ ಕಾಂಗ್ರೆಸ್ ಅಂತ್ಯ ಕಾಣುವುದೂ ನಿಶ್ಚಿತ’ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ; 1992ರ ಹುಬ್ಬಳ್ಳಿ ಹಿಂಸಾಚಾರ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...