Homeಮುಖಪುಟಫ್ಯಾಸಿಸ್ಟ್ RSSನ ಭಾಗವಾದ ಬಿಜೆಪಿ ಪ್ರಜಾಪ್ರಭುತ್ವವನ್ನು ಹಾಳುಮಾಡುತ್ತಿದೆ: ರಾಹುಲ್ ಗಾಂಧಿ

ಫ್ಯಾಸಿಸ್ಟ್ RSSನ ಭಾಗವಾದ ಬಿಜೆಪಿ ಪ್ರಜಾಪ್ರಭುತ್ವವನ್ನು ಹಾಳುಮಾಡುತ್ತಿದೆ: ರಾಹುಲ್ ಗಾಂಧಿ

- Advertisement -
- Advertisement -

ಫ್ಯಾಸಿಸ್ಟ್ ಆರ್‌ಎಸ್‌ಎಸ್‌ನ ಭಾಗವಾಗಿರುವ ಬಿಜೆಪಿ, ಅಧಿಕಾರಕ್ಕೆ ಬಂದು ಪ್ರಜಾಪ್ರಭುತ್ವವನ್ನೇ ಬುಡಮೇಲು ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ಧಾರೆ. ಸೋಮವಾರ ಸಂಜೆ ಲಂಡನ್ ಮೂಲದ ಚಿಂತಕರ ಚಾಥಮ್ ಹೌಸ್‌ನಲ್ಲಿ ನಡೆದ ಸಂವಾದದಲ್ಲಿ ನಡೆದ ಸಂವಾದದಲ್ಲಿ ಈ ಹೇಳಿಕೆ ನೀಡಿದ್ದಾರೆ.

”ಭಾರತದ ಸಂಸ್ಥೆಗಳನ್ನು ಸಂಪೂರ್ಣವಾಗಿ ಹಿಡಿತಕ್ಕೆ ತಗೆದುಕೊಂಡಿರುವ ಆರ್‌ಎಸ್‌ಎಸ್, ದೇಶದ ಪ್ರಜಾಸತ್ತಾತ್ಮಕ ಸ್ವರೂಪವನ್ನೇ ಬದಲಾಯಿಸಿದೆ” ಎಂದು ರಾಹುಲ್ ಹೇಳಿದ್ದಾರೆ.

ನೋಟು ಅಮಾನ್ಯೀಕರಣ, ಕಿಸಾನ್ ಮಸೂದೆ, ಜಿಎಸ್‌ಟಿ ಹೇರಿಕೆ ಮತ್ತು ಚೀನಾದ ಆಕ್ರಮಣದ ಕುರಿತಾದ ಚರ್ಚೆಗಳನ್ನು ನಡೆಸಲು ಪ್ರತಿಪಕ್ಷಗಳಿಗೆ ಯಾವುದೇ ಅವಕಾಶ ಇಲ್ಲದಂತಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಭಾರತ್ ಜೋಡೋ ಯಾತ್ರೆಯ ಬಗ್ಗೆ ಮಾತನಾಡುತ್ತಾ, ”ನಮ್ಮ ಯಾತ್ರಾ ಭಾರತದ ಜನರನ್ನು ತಲುಪಲು ನಮಗೆ ಸಂವಹನದ ಮಾರ್ಗವಾಗಿತ್ತು” ಎಂದು ರಾಹುಲ್ ಹೇಳಿದರು.

ಇದನ್ನೂ ಓದಿ: ಭಾರತ ಮೌನವಾಗಿರಬೇಕೆಂದು ಬಿಜೆಪಿ ಬಯಸುತ್ತಿದೆ: ಲಂಡನ್‌ ಸಂವಾದದಲ್ಲಿ ರಾಹುಲ್ ಹೇಳಿಕೆ

“ಒಂಬತ್ತು ವರ್ಷಗಳ ಕಾಲ ಅಜಾಗರೂಕತೆಯಿಂದ ಅಧಿಕಾರ ಅನುಭವಿಸಿದ ಬಿಜೆಪಿಯು ಕುರುಡಾಗಿದೆ. ಕೇಸರಿ ಪಕ್ಷಕ್ಕೆ ಸಾರ್ವಜನಿಕರ ಅಭಿಪ್ರಾಯಗಳನ್ನು ಕೇಳುವ ಆಸಕ್ತಿ ಇಲ್ಲದಾಗಿದೆ” ಎಂದು ರಾಹುಲ್ ಗಾಂಧಿ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು “ಪ್ರತಿಪಕ್ಷಗಳ ವಿರುದ್ಧ ಏಜೆನ್ಸಿಗಳು ಮತ್ತು ಸ್ಪೈವೇರ್‌ಗಳನ್ನು ಬಳಸುತ್ತಾ ಆರಾಮಾಗಿದ್ದಾರೆ. ಇದು ನಮ್ಮ ಸರ್ಕಾರವಿದ್ದಾಗ ಹೇಗಿತ್ತೋ ಅದರ ಸಂಪೂರ್ಣ ವಿರುದ್ಧವಾದ ಚಿತ್ರಣವಾಗಿದೆ” ಎಂದು ಅವರು ಹೇಳಿದರು.

“ಪ್ರಜಾಸತ್ತಾತ್ಮಕ ರೀತಿಯಲ್ಲಿ ನಮ್ಮ ಸಮಾಜವನ್ನು ನಿರ್ಮಿಸಲಾಗಿದೆ. ಚೀನೀಯರು ಅದೇ ಮಾದರಿಯನ್ನು ಅನುಸರಿಸುವುದಿಲ್ಲ ಮತ್ತು (ಅವರು) ಅದನ್ನು ತಮ್ಮ ದೊಡ್ಡ ಸವಾಲಾಗಿ ನೋಡುತ್ತಾರೆ. ‘ಸಮೃದ್ಧಿಯೊಂದಿಗೆ ಉತ್ಪಾದಕತೆ’ ಎಂಬ ನಮ್ಮದೇ ಆದ ದೃಷ್ಟಿಕೋನವನ್ನು ನಾವು ಜಗತ್ತಿಗೆ ನೀಡಬೇಕಾಗಿದೆ” ಎಂದು ರಾಹುಲ್ ಗಾಂಧಿ ಪ್ರತಿಪಾದಿಸಿದರು.

ಪ್ರಜಾಪ್ರಭುತ್ವ ಮಾದರಿಯ ಕಲ್ಪನೆಯು ದಾಳಿಗೊಳಗಾಗುತ್ತಿದೆ ಮತ್ತು ”ನಮ್ಮ (ಭಾರತದ) ಪ್ರಜಾಪ್ರಭುತ್ವ ಮಾದರಿ ಕುಸಿದರೆ ಬೇರೆ ದೇಶಗಳ ಪ್ರಜಾಪ್ರಭುತ್ವವು ಅಪಾಯವನ್ನು ಎದುರಿಸುತ್ತವೆ” ಎಂದು ಕಾಂಗ್ರೆಸ್ ನಾಯಕ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...