Homeಮುಖಪುಟಕೇಜ್ರಿವಾಲ್‌ ಮನೆಗೆ ಹಾನಿ ಮಾಡಿದ ಕಾರ್ಯಕರ್ತರಿಗೆ ಬಿಜೆಪಿ ಸನ್ಮಾನ

ಕೇಜ್ರಿವಾಲ್‌ ಮನೆಗೆ ಹಾನಿ ಮಾಡಿದ ಕಾರ್ಯಕರ್ತರಿಗೆ ಬಿಜೆಪಿ ಸನ್ಮಾನ

- Advertisement -
- Advertisement -

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸವನ್ನು ಧ್ವಂಸಗೊಳಿಸಿದ ಆರೋಪದಲ್ಲಿ ಬಂಧಿತರಾಗಿ ಬಳಿಕ ಜಾಮೀನನ ಮೇಲೆ ಬಿಡುಗಡೆಯಾಗಿರುವ ಬಿಜೆಪಿ ಯುವ ಮೋರ್ಚಾದ ಎಂಟು ಮಂದಿಗೆ ಭಾರತೀಯ ಜನತಾ ಪಕ್ಷದ ದೆಹಲಿ ಘಟಕವು ಶುಕ್ರವಾರ ಸನ್ಮಾನಿಸಿದೆ.

ದುಷ್ಕೃತ್ಯದಲ್ಲಿ ಭಾಗಿಯಾದ ಎಂಟು ಮಂದಿಯನ್ನು ‘ಕ್ರಾಂತಿಕಾರಿಗಳು’ ಎಂದು ಕರೆದಿರುವ ದೆಹಲಿ ಬಿಜೆಪಿ ಅಧ್ಯಕ್ಷ ಆದೇಶ್‌ ಗುಪ್ತಾ, ಪಕ್ಷದ ಕಚೇರಿಯಲ್ಲಿ ಹೂಮಾಲೆಯೊಂದಿಗೆ ಕಾರ್ಯಕರ್ತರನ್ನು ಸನ್ಮಾನಿಸಿದ ನಂತರ ಫೋಟೋವನ್ನು ಟ್ವೀಟ್ ಮಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಹಿಂದೂ ವಿರೋಧಿ ಕೇಜ್ರಿವಾಲ್ ವಿರುದ್ಧ ಪ್ರತಿಭಟನೆ ನಡೆಸಿ ಜೈಲಿಗೆ ಹೋದ ಯುವಮೊರ್ಚಾದ ಎಂಟು ಕಾರ್ಯಕರ್ತರು 14 ದಿನಗಳ ನಂತರ ನ್ಯಾಯಾಲಯದಿಂದ ಜಾಮೀನು ಪಡೆದರು. ಇಂದು ಪಕ್ಷದ ಕಚೇರಿಯಲ್ಲಿ ಈ ಯುವ ಕ್ರಾಂತಿಕಾರಿಗಳನ್ನು ಸ್ವಾಗತಿಸಲಾಯಿತು. ನಮ್ಮ ಪ್ರತಿಯೊಬ್ಬ ಕಾರ್ಯಕರ್ತರು ಹಿಂದೂ ವಿರೋಧಿ ಶಕ್ತಿಗಳ ವಿರುದ್ಧ ಹೋರಾಡುತ್ತಲೇ ಇರುತ್ತಾರೆ” ಎಂದು ಗುಪ್ತಾ ಟ್ವೀಟ್ ಮಾಡಿದ್ದಾರೆ.

ಪ್ರತಿಭಟನೆಯ ವೇಳೆ ಬಿಜೆಪಿ ಕಾರ್ಯಕರ್ತರು ಕೇಜ್ರಿವಾಲ್ ಅವರ ಮನೆಯ ಸಿಸಿಟಿವಿ ಕ್ಯಾಮೆರಾಗಳು ಮತ್ತು ತಡೆಗೋಡೆಗಳನ್ನು ಹಾನಿ ಮಾಡಿದ್ದಾರೆಂದು ಆರೋಪಿಸಲಾಗಿದೆ. ‘ಕಾಶ್ಮೀರ್‌ ಫೈಲ್ಸ್‌’ ಸಿನಿಮಾಕ್ಕೆ ತೆರಿಗೆ ವಿನಾಯಿತಿಯನ್ನು ವಿರೋಧಿಸಿದ್ದ ಕೇಜ್ರಿವಾಲ್‌, ‘ಕಾಶ್ಮೀರ ಫೈಲ್ಸ್’ ಹೆಸರಲ್ಲಿ ನಿರ್ಮಾಪಕರು ಹಣ ದೋಚುತ್ತಿರುವುದನ್ನು ಉಲ್ಲೇಖಿಸಿದ್ದರು.

ಇದನ್ನೂ ಓದಿರಿ: ಎಎಪಿ ದಿಗ್ವಿಜಯಕ್ಕೆ ಹೆದರಿ, ದೆಹಲಿ ಮುನ್ಸಿಪಾಲ್‌ ಚುನಾವಣೆ ಮುಂದೂಡಲು ಬಯಸುತ್ತಿದೆಯೇ ಬಿಜೆಪಿ?

ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ನೇತೃತ್ವದಲ್ಲಿ ದಾಳಿ ನಡೆದಿದೆ ಎಂದು ಆರೋಪಿಸಲಾಗಿದೆ. “ಪಂಜಾಬ್‌ನಲ್ಲಿ ಸೋತ ನಂತರ ಬಿಜೆಪಿಯು ಕೇಜ್ರಿವಾಲ್‌ರನ್ನು ಕೊಲ್ಲಲು ಬಯಸುತ್ತಿದೆ” ಎಂದು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದರು.

“ಎಎಪಿ ಸಮಾಜದ ಎಲ್ಲಾ ವರ್ಗಗಳಿಂದ ಬೆಂಬಲ ಪಡೆಯುತ್ತಿರುವುದರಿಂದ ಬಿಜೆಪಿ ಪ್ಯಾನಿಕ್ ಮೋಡ್‌ನಲ್ಲಿದೆ. ಬಿಜೆಪಿಯ ಗೂಂಡಾಗಳಿಂದ ಕೇಜ್ರಿವಾಲ್-ಜಿ ಮೇಲಾದ ದಾಳಿಯು ಭಾರತದ ಜನರ ಮೇಲಿನ ದಾಳಿಯಾಗಿದೆ. ಜನರು ಬಿಜೆಪಿಗೆ ತಕ್ಕ ಪ್ರತ್ಯುತ್ತರ ನೀಡಲಿದ್ದಾರೆ” ಎಂದು ಪ್ರತಿಕ್ರಿಯೆ ನೀಡಿದ್ದರು.

ಪ್ರತಿಭಟನೆಯ ನಂತರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸೂರ್ಯ, “ಅವರು (ಕೇಜ್ರಿವಾಲ್) ಕಾಶ್ಮೀರಿ ಪಂಡಿತರ ಹತ್ಯಾಕಾಂಡವನ್ನು ಅಸತ್ಯ ಎಂದು ಲೇವಡಿ ಮಾಡಿದರು. ಬೇಷರತ್ ಕ್ಷಮೆಯಾಚಿಸಬೇಕು ಎಂದು ನಾವು ಒತ್ತಾಯಿಸುತ್ತೇವೆ. ಅವರು ಕ್ಷಮೆಯಾಚಿಸುವವರೆಗೂ ನಮ್ಮ ಪ್ರತಿಭಟನೆಗಳು ಮುಂದುವರೆಯುತ್ತವೆ” ಎಂದಿದ್ದರು.

“ಈ ಪ್ರತಿಭಟನೆಯು ಚಲನಚಿತ್ರದ ಪರವಾಗಿ ಅಥವಾ ‘ದಿ ಕಾಶ್ಮೀರ ಫೈಲ್ಸ್’ ಬಗ್ಗೆ ಅಲ್ಲ. ಈ ಪ್ರತಿಭಟನೆಯು ಕಾಶ್ಮೀರದಲ್ಲಿನ ಹಿಂದೂಗಳ ನರಮೇಧವನ್ನು ನಿರಾಕರಿಸುವ ಕೇಜ್ರಿವಾಲ್ ಅವರ ಅಮಾನವೀಯ ಮನಸ್ಥಿತಿಯ ವಿರುದ್ಧವಾಗಿದೆ” ಎಂದು ಸೂರ್ಯ ಹೇಳಿದ್ದರು.

ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರನ್ನು ಮಾರ್ಚ್ 31ರಂದು ಬಂಧಿಸಲಾಯಿತು. ನಂತರ ಕಾರ್ಯಕರ್ತರು ಜಾಮೀನು ಅರ್ಜಿಗಾಗಿ ವಿಚಾರಣಾ ನ್ಯಾಯಾಲಯವನ್ನು ಸಂಪರ್ಕಿಸಿದ್ದರು. ಅರ್ಜಿ ತಿರಸ್ಕೃತವಾದ ಕಾರಣ ಅವರು ದೆಹಲಿ ಹೈಕೋರ್ಟ್‌ನ ಮೊರೆ ಹೋಗಿದ್ದರು.

ಕೇಜ್ರಿವಾಲ್ ಹೇಳಿದ್ದೇನು?

ದೆಹಲಿ ಅಸೆಂಬ್ಲಿಯಲ್ಲಿ ಮಾತನಾಡುವಾಗ ಕೇಜ್ರಿವಾಲ್ ಅವರು ಕಾಶ್ಮೀರ ಫೈಲ್‌ ಸಿನಿಮಾ ಸಂಬಂಧ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದರು. ಸಿನಿಮಾವನ್ನು ತೆರಿಗೆ ಮುಕ್ತಗೊಳಿಸಬೇಕು ಎಂಬ ಬಿಜೆಪಿ ಶಾಸಕರ ಬೇಡಿಕೆಗೆ ಪ್ರತಿಕ್ರಿಯಿಸಿದ ಕೇಜ್ರಿವಾಲ್ ಅವರು, “ನೀವು ಇದಕ್ಕಾಗಿಯೇ ರಾಜಕೀಯ ಸೇರಿದ್ದೀರಾ? ಚಿತ್ರ ನಿರ್ಮಾಪಕರು ಕೋಟಿಗಟ್ಟಲೆ ಹಣ ಗಳಿಸುತ್ತಿದ್ದರೆ, ಬಿಜೆಪಿ ಸದಸ್ಯರು ಸಿನಿಮಾ ಪ್ರಚಾರಕ್ಕೆ ಇಳಿದು ಪೋಸ್ಟರ್‌ಗಳನ್ನು ಅಂಟಿಸಿದ್ದಾರೆ” ಎಂದು ಟೀಕಿಸಿದ್ದರು.

ಇದನ್ನೂ ಓದಿರಿ: ಪಂಜಾಬ್‌: ರಾಜ್ಯಸಭೆ ಅಭ್ಯರ್ಥಿಯಾಗಿ ಕ್ರಿಕೆಟಿಗ ಹರ್ಭಜನ್ ಸಿಂಗ್‌ರನ್ನು ಆಯ್ಕೆ ಮಾಡಿದ ಎಎಪಿ

“ಇದಕ್ಕಾಗಿಯೇ ನೀವು ರಾಜಕೀಯಕ್ಕೆ ಬಂದಿದ್ದೀರಾ? ಸಿನಿಮಾಗಳ ಪೋಸ್ಟರ್ ಹಾಕಲು? ನಿಮ್ಮ ಕೆಲಸದ ಬಗ್ಗೆ ನಿಮ್ಮ ಮಕ್ಕಳಿಗೆ ಕೇಳಿದಾಗ ನೀವು ಏನು ಹೇಳುತ್ತೀರಿ. ಚಿತ್ರ ಕಾ ಪೋಸ್ಟರ್ ಲಗಾತಾ ಹೂಂ? (ನಾನು ಚಲನಚಿತ್ರ ಪೋಸ್ಟರ್‌ಗಳನ್ನು ಹಾಕಿದ್ದೇನೆ) ಎನ್ನುವಿರಾ?” ಎಂದು ಕೇಜ್ರಿವಾಲ್ ಕುಟುಕಿದ್ದರು.

ಮುಂದುವರಿದು, “ನಿಜವಾಗಲೂ ಸಾರ್ವಜನಿಕ ಹಿತಾಸಕ್ತಿಯಿಂದ ಸಿನಿಮಾ ಮಾಡಿದ್ದರೆ ಸಿನಿಮಾ ನಿರ್ಮಾಪಕರು ಯೂಟ್ಯೂಬ್ ನಲ್ಲಿ ಅಪ್ ಲೋಡ್ ಮಾಡಬೇಕು” ಎಂದು ಕೇಜ್ರಿವಾಲ್ ಆಗ್ರಹಿಸಿದ್ದು ಜನರ ಪ್ರಶಂಸೆಗೆ ಪಾತ್ರವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಬಿಜೆಪಿಯು ಗೂಂಡಾಗಿರಿಯನ್ನು ಪ್ರೋತ್ಸಾಹಿಸುತ್ತಿರುವುದು ಕಂಡನಾರ್ಹ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...