Homeಮುಖಪುಟಕೇಜ್ರಿವಾಲ್‌ ಮನೆಗೆ ಹಾನಿ ಮಾಡಿದ ಕಾರ್ಯಕರ್ತರಿಗೆ ಬಿಜೆಪಿ ಸನ್ಮಾನ

ಕೇಜ್ರಿವಾಲ್‌ ಮನೆಗೆ ಹಾನಿ ಮಾಡಿದ ಕಾರ್ಯಕರ್ತರಿಗೆ ಬಿಜೆಪಿ ಸನ್ಮಾನ

- Advertisement -
- Advertisement -

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸವನ್ನು ಧ್ವಂಸಗೊಳಿಸಿದ ಆರೋಪದಲ್ಲಿ ಬಂಧಿತರಾಗಿ ಬಳಿಕ ಜಾಮೀನನ ಮೇಲೆ ಬಿಡುಗಡೆಯಾಗಿರುವ ಬಿಜೆಪಿ ಯುವ ಮೋರ್ಚಾದ ಎಂಟು ಮಂದಿಗೆ ಭಾರತೀಯ ಜನತಾ ಪಕ್ಷದ ದೆಹಲಿ ಘಟಕವು ಶುಕ್ರವಾರ ಸನ್ಮಾನಿಸಿದೆ.

ದುಷ್ಕೃತ್ಯದಲ್ಲಿ ಭಾಗಿಯಾದ ಎಂಟು ಮಂದಿಯನ್ನು ‘ಕ್ರಾಂತಿಕಾರಿಗಳು’ ಎಂದು ಕರೆದಿರುವ ದೆಹಲಿ ಬಿಜೆಪಿ ಅಧ್ಯಕ್ಷ ಆದೇಶ್‌ ಗುಪ್ತಾ, ಪಕ್ಷದ ಕಚೇರಿಯಲ್ಲಿ ಹೂಮಾಲೆಯೊಂದಿಗೆ ಕಾರ್ಯಕರ್ತರನ್ನು ಸನ್ಮಾನಿಸಿದ ನಂತರ ಫೋಟೋವನ್ನು ಟ್ವೀಟ್ ಮಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಹಿಂದೂ ವಿರೋಧಿ ಕೇಜ್ರಿವಾಲ್ ವಿರುದ್ಧ ಪ್ರತಿಭಟನೆ ನಡೆಸಿ ಜೈಲಿಗೆ ಹೋದ ಯುವಮೊರ್ಚಾದ ಎಂಟು ಕಾರ್ಯಕರ್ತರು 14 ದಿನಗಳ ನಂತರ ನ್ಯಾಯಾಲಯದಿಂದ ಜಾಮೀನು ಪಡೆದರು. ಇಂದು ಪಕ್ಷದ ಕಚೇರಿಯಲ್ಲಿ ಈ ಯುವ ಕ್ರಾಂತಿಕಾರಿಗಳನ್ನು ಸ್ವಾಗತಿಸಲಾಯಿತು. ನಮ್ಮ ಪ್ರತಿಯೊಬ್ಬ ಕಾರ್ಯಕರ್ತರು ಹಿಂದೂ ವಿರೋಧಿ ಶಕ್ತಿಗಳ ವಿರುದ್ಧ ಹೋರಾಡುತ್ತಲೇ ಇರುತ್ತಾರೆ” ಎಂದು ಗುಪ್ತಾ ಟ್ವೀಟ್ ಮಾಡಿದ್ದಾರೆ.

ಪ್ರತಿಭಟನೆಯ ವೇಳೆ ಬಿಜೆಪಿ ಕಾರ್ಯಕರ್ತರು ಕೇಜ್ರಿವಾಲ್ ಅವರ ಮನೆಯ ಸಿಸಿಟಿವಿ ಕ್ಯಾಮೆರಾಗಳು ಮತ್ತು ತಡೆಗೋಡೆಗಳನ್ನು ಹಾನಿ ಮಾಡಿದ್ದಾರೆಂದು ಆರೋಪಿಸಲಾಗಿದೆ. ‘ಕಾಶ್ಮೀರ್‌ ಫೈಲ್ಸ್‌’ ಸಿನಿಮಾಕ್ಕೆ ತೆರಿಗೆ ವಿನಾಯಿತಿಯನ್ನು ವಿರೋಧಿಸಿದ್ದ ಕೇಜ್ರಿವಾಲ್‌, ‘ಕಾಶ್ಮೀರ ಫೈಲ್ಸ್’ ಹೆಸರಲ್ಲಿ ನಿರ್ಮಾಪಕರು ಹಣ ದೋಚುತ್ತಿರುವುದನ್ನು ಉಲ್ಲೇಖಿಸಿದ್ದರು.

ಇದನ್ನೂ ಓದಿರಿ: ಎಎಪಿ ದಿಗ್ವಿಜಯಕ್ಕೆ ಹೆದರಿ, ದೆಹಲಿ ಮುನ್ಸಿಪಾಲ್‌ ಚುನಾವಣೆ ಮುಂದೂಡಲು ಬಯಸುತ್ತಿದೆಯೇ ಬಿಜೆಪಿ?

ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ನೇತೃತ್ವದಲ್ಲಿ ದಾಳಿ ನಡೆದಿದೆ ಎಂದು ಆರೋಪಿಸಲಾಗಿದೆ. “ಪಂಜಾಬ್‌ನಲ್ಲಿ ಸೋತ ನಂತರ ಬಿಜೆಪಿಯು ಕೇಜ್ರಿವಾಲ್‌ರನ್ನು ಕೊಲ್ಲಲು ಬಯಸುತ್ತಿದೆ” ಎಂದು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದರು.

“ಎಎಪಿ ಸಮಾಜದ ಎಲ್ಲಾ ವರ್ಗಗಳಿಂದ ಬೆಂಬಲ ಪಡೆಯುತ್ತಿರುವುದರಿಂದ ಬಿಜೆಪಿ ಪ್ಯಾನಿಕ್ ಮೋಡ್‌ನಲ್ಲಿದೆ. ಬಿಜೆಪಿಯ ಗೂಂಡಾಗಳಿಂದ ಕೇಜ್ರಿವಾಲ್-ಜಿ ಮೇಲಾದ ದಾಳಿಯು ಭಾರತದ ಜನರ ಮೇಲಿನ ದಾಳಿಯಾಗಿದೆ. ಜನರು ಬಿಜೆಪಿಗೆ ತಕ್ಕ ಪ್ರತ್ಯುತ್ತರ ನೀಡಲಿದ್ದಾರೆ” ಎಂದು ಪ್ರತಿಕ್ರಿಯೆ ನೀಡಿದ್ದರು.

ಪ್ರತಿಭಟನೆಯ ನಂತರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸೂರ್ಯ, “ಅವರು (ಕೇಜ್ರಿವಾಲ್) ಕಾಶ್ಮೀರಿ ಪಂಡಿತರ ಹತ್ಯಾಕಾಂಡವನ್ನು ಅಸತ್ಯ ಎಂದು ಲೇವಡಿ ಮಾಡಿದರು. ಬೇಷರತ್ ಕ್ಷಮೆಯಾಚಿಸಬೇಕು ಎಂದು ನಾವು ಒತ್ತಾಯಿಸುತ್ತೇವೆ. ಅವರು ಕ್ಷಮೆಯಾಚಿಸುವವರೆಗೂ ನಮ್ಮ ಪ್ರತಿಭಟನೆಗಳು ಮುಂದುವರೆಯುತ್ತವೆ” ಎಂದಿದ್ದರು.

“ಈ ಪ್ರತಿಭಟನೆಯು ಚಲನಚಿತ್ರದ ಪರವಾಗಿ ಅಥವಾ ‘ದಿ ಕಾಶ್ಮೀರ ಫೈಲ್ಸ್’ ಬಗ್ಗೆ ಅಲ್ಲ. ಈ ಪ್ರತಿಭಟನೆಯು ಕಾಶ್ಮೀರದಲ್ಲಿನ ಹಿಂದೂಗಳ ನರಮೇಧವನ್ನು ನಿರಾಕರಿಸುವ ಕೇಜ್ರಿವಾಲ್ ಅವರ ಅಮಾನವೀಯ ಮನಸ್ಥಿತಿಯ ವಿರುದ್ಧವಾಗಿದೆ” ಎಂದು ಸೂರ್ಯ ಹೇಳಿದ್ದರು.

ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರನ್ನು ಮಾರ್ಚ್ 31ರಂದು ಬಂಧಿಸಲಾಯಿತು. ನಂತರ ಕಾರ್ಯಕರ್ತರು ಜಾಮೀನು ಅರ್ಜಿಗಾಗಿ ವಿಚಾರಣಾ ನ್ಯಾಯಾಲಯವನ್ನು ಸಂಪರ್ಕಿಸಿದ್ದರು. ಅರ್ಜಿ ತಿರಸ್ಕೃತವಾದ ಕಾರಣ ಅವರು ದೆಹಲಿ ಹೈಕೋರ್ಟ್‌ನ ಮೊರೆ ಹೋಗಿದ್ದರು.

ಕೇಜ್ರಿವಾಲ್ ಹೇಳಿದ್ದೇನು?

ದೆಹಲಿ ಅಸೆಂಬ್ಲಿಯಲ್ಲಿ ಮಾತನಾಡುವಾಗ ಕೇಜ್ರಿವಾಲ್ ಅವರು ಕಾಶ್ಮೀರ ಫೈಲ್‌ ಸಿನಿಮಾ ಸಂಬಂಧ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದರು. ಸಿನಿಮಾವನ್ನು ತೆರಿಗೆ ಮುಕ್ತಗೊಳಿಸಬೇಕು ಎಂಬ ಬಿಜೆಪಿ ಶಾಸಕರ ಬೇಡಿಕೆಗೆ ಪ್ರತಿಕ್ರಿಯಿಸಿದ ಕೇಜ್ರಿವಾಲ್ ಅವರು, “ನೀವು ಇದಕ್ಕಾಗಿಯೇ ರಾಜಕೀಯ ಸೇರಿದ್ದೀರಾ? ಚಿತ್ರ ನಿರ್ಮಾಪಕರು ಕೋಟಿಗಟ್ಟಲೆ ಹಣ ಗಳಿಸುತ್ತಿದ್ದರೆ, ಬಿಜೆಪಿ ಸದಸ್ಯರು ಸಿನಿಮಾ ಪ್ರಚಾರಕ್ಕೆ ಇಳಿದು ಪೋಸ್ಟರ್‌ಗಳನ್ನು ಅಂಟಿಸಿದ್ದಾರೆ” ಎಂದು ಟೀಕಿಸಿದ್ದರು.

ಇದನ್ನೂ ಓದಿರಿ: ಪಂಜಾಬ್‌: ರಾಜ್ಯಸಭೆ ಅಭ್ಯರ್ಥಿಯಾಗಿ ಕ್ರಿಕೆಟಿಗ ಹರ್ಭಜನ್ ಸಿಂಗ್‌ರನ್ನು ಆಯ್ಕೆ ಮಾಡಿದ ಎಎಪಿ

“ಇದಕ್ಕಾಗಿಯೇ ನೀವು ರಾಜಕೀಯಕ್ಕೆ ಬಂದಿದ್ದೀರಾ? ಸಿನಿಮಾಗಳ ಪೋಸ್ಟರ್ ಹಾಕಲು? ನಿಮ್ಮ ಕೆಲಸದ ಬಗ್ಗೆ ನಿಮ್ಮ ಮಕ್ಕಳಿಗೆ ಕೇಳಿದಾಗ ನೀವು ಏನು ಹೇಳುತ್ತೀರಿ. ಚಿತ್ರ ಕಾ ಪೋಸ್ಟರ್ ಲಗಾತಾ ಹೂಂ? (ನಾನು ಚಲನಚಿತ್ರ ಪೋಸ್ಟರ್‌ಗಳನ್ನು ಹಾಕಿದ್ದೇನೆ) ಎನ್ನುವಿರಾ?” ಎಂದು ಕೇಜ್ರಿವಾಲ್ ಕುಟುಕಿದ್ದರು.

ಮುಂದುವರಿದು, “ನಿಜವಾಗಲೂ ಸಾರ್ವಜನಿಕ ಹಿತಾಸಕ್ತಿಯಿಂದ ಸಿನಿಮಾ ಮಾಡಿದ್ದರೆ ಸಿನಿಮಾ ನಿರ್ಮಾಪಕರು ಯೂಟ್ಯೂಬ್ ನಲ್ಲಿ ಅಪ್ ಲೋಡ್ ಮಾಡಬೇಕು” ಎಂದು ಕೇಜ್ರಿವಾಲ್ ಆಗ್ರಹಿಸಿದ್ದು ಜನರ ಪ್ರಶಂಸೆಗೆ ಪಾತ್ರವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಬಿಜೆಪಿಯು ಗೂಂಡಾಗಿರಿಯನ್ನು ಪ್ರೋತ್ಸಾಹಿಸುತ್ತಿರುವುದು ಕಂಡನಾರ್ಹ.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....