Homeಕರ್ನಾಟಕಅಡಿಕೆ ಬೆಳೆಗಾರರಿಗೆ ಬಿಜೆಪಿಯ ನಂಬಿಕೆದ್ರೋಹ

ಅಡಿಕೆ ಬೆಳೆಗಾರರಿಗೆ ಬಿಜೆಪಿಯ ನಂಬಿಕೆದ್ರೋಹ

- Advertisement -
- Advertisement -

ಅಡಿಕೆ ಆರೋಗ್ಯಕ್ಕೆ ಹಾನಿಕಾರಕವಾ? ಕ್ಯಾನ್ಸರ್‍ಕಾರಕವಾ? ಕೇಂದ್ರ ಬಿಜೆಪಿ ಸರ್ಕಾರದ ಆರೋಗ್ಯ ಇಲಾಖೆಯ ಸಹಾಯಕ ಮಂತ್ರಿ ಅಶ್ವಿನಿಕುಮಾರ್ ಚೌಬೆ ಲೋಕಸಭೆಯಲ್ಲೇ ಇಂತದ್ದೊಂದು ಹೇಳಿಕೆ ನೀಡಿ ಅಡಿಕೆ ಬೆಳೆಗಾರರ ಮೇಲೆಯೇ ದಾಳಿ ಮಾಡಿದೆ. ಅಡಿಕೆಯ ಮಾನಾಪಮಾನ ಸುದ್ದಿಯಾಗುತ್ತಿದ್ದಂತೆಯೇ ಅಮಾಯಕ ಅಡಿಕೆ ಬೆಳೆಗಾರರು ಬೆಚ್ಚಿಬಿದ್ದಿದ್ದಾರೆ.

ಇದೇ ತಿಂಗಳ 12ರಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಅಡಿಕೆ ಕಾರ್ಸಿನೋಜೆನಿಕ್ (ಕ್ಯಾನ್ಸರ್‍ಕಾರಕ) ಎಂದು ಲೋಕಸಭೆಯಲ್ಲಿ ತಿಳಿಸಿದೆ! ಈ ಸಂಗತಿ ತಿಳಿಯುತ್ತಿದ್ದಂತೆಯೇ ಅಡಿಕೆ ಬೆಳೆಗಾರರು ಕಂಗಾಲಾಗಿದ್ದಾರೆ. ಕೇಂದ್ರ ಬಜೆಟ್ ನಂತರ ಅಡಿಕೆ ಧಾರಣೆ ಏರಿಕೆಯಾಗಿ ಮಾರುಕಟ್ಟೆ ಸ್ಥಿರತೆಯತ್ತ ಸಾಗಬಹುದೆಂದು ನಿರೀಕ್ಷಿಸಿದ್ದ ರೈತರು ಅಸ್ಥಿರತೆ ಭಯದಿಂದ ಹೌಹಾರಿದ್ದಾರೆ. ತಾನೆಂಥ ದ್ರೋಹಿಗಳನ್ನು ಸಂಸದರಾಗಿ ಮತ್ತೆ-ಮತ್ತೆ ಗೆಲ್ಲಿಸಿ ಕಳಿಸುತ್ತಿದ್ದೇವೆಂದು ಹಣೆಹಣೆ ಚಚ್ಚಿಕೊಳ್ಳುತ್ತಿದ್ದಾರೆ!!

ಗುಜರಾತ್ (ಗುಟ್ಕಾ ಮಾಫಿಯಾ ಇರುವುದೇ ಇಲ್ಲಿ)ನ ಖೇಡಾ ಕ್ಷೇತ್ರದ ಸಂಸದ ದೇವುಸಿಂಗ್ ಚೌಹಾಣ್-ಅಡಿಕೆ ಸೇವನೆ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆಂಬ ವರದಿಗಳು ಇರುವುದು ನಿಜವಾ? ಎಂಬ ಪ್ರಶ್ನೆ ಆರೋಗ್ಯ ಮಂತ್ರಿಗೆ ಕೇಳಿದ್ದರು. ಈ ಪ್ರಶ್ನೆಗೆ ಪಾರ್ಲಿಮೆಂಟ್‍ನಲ್ಲಿ ಉತ್ತರಿಸಿರುವ ಆರೋಗ್ಯ ಇಲಾಖೆಯ ಸಹಾಯಕ ಮಂತ್ರಿ ಅಶ್ವಿನಿಕುಮಾರ್ ಚೌಬೆ-ಅಡಿಕೆ ದೇಹದ ವಿವಿಧ ಅಂಗಗಳ ಮೇಲೆ ದುಷ್ಪರಿಣಾಮ ಬೀರುತ್ತದೆ. ಬಾಯಿ, ಅನ್ನನಾಳ, ಗಂಟಲು ಮತ್ತಿತರ ಅಂಗಗಳಿಗೆ ಕ್ಯಾನ್ಸರ್ ತಗಲುವಂತೆ ಅಡಿಕೆ ಮಾಡುತ್ತದೆಂದು ಕೆಲವು ಅಧ್ಯಯನದಿಂದ ತಿಳಿದುಬಂದಿದೆಯೆಂದು ಹೇಳಿದ್ದಾರೆ. ಮಂತ್ರಿಗಳ ಈ ಮಾತಿಂದ ಅಡಿಕೆ ಮಾರುಕಟ್ಟೆಯಲ್ಲಿ ಸಣ್ಣ ತಲ್ಲಣ ಶುರುವಾಗಿದೆ.

ಕರ್ನಾಟಕದಲ್ಲಿ ಪ್ರತಿ ವರ್ಷ ನಾಲ್ಕು ಲಕ್ಷ ಟನ್ ಅಡಿಕೆ ಬೆಳೆಯಲಾಗುತ್ತಿದೆ. ಇದು ದೇಶದಲ್ಲಿ ಉತ್ಪಾದನೆಯಾಗುವ ಒಟ್ಟೂ ಅಡಿಕೆಯಲ್ಲಿ ಶೇಕಡಾ ಅರ್ಧದಷ್ಟು! ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ ಜಿಲ್ಲೆಯಲ್ಲಿ ಅಡಿಕೆ ಜೀವನಾಧಾರ ವಾಣಿಜ್ಯ ಬೆಳೆ. ಮಲೆನಾಡಿನ ತೋಟಿಗರು ಬದುಕು ಕಟ್ಟಿಕೊಂಡಿರುವುದೇ ಅಡಿಕೆ ವಹಿವಾಟಿನ ಮೇಲೆ. ಹೀಗಾಗಿ ತೋಟಿಗರು ಕೇಂದ್ರ ಸರ್ಕಾರದ ನಡೆಯಿಂದ ಸಹಜವಾಗಿಯೇ ಆತಂಕಗೊಂಡಿದ್ದಾರೆ. ಅಡಿಕೆ ಬಗ್ಗೆ ಹಲವು ಸಲ ವಿವಾದ ಎದ್ದಿದೆ. ಹಾಗಂತ ಆಗೆಲ್ಲ ಅಡಿಕೆ ಧಾರಣೆ ಮೇಲೆ ಕೆಟ್ಟ ಪರಿಣಾಮವಾಗಿ ಮಾರುಕಟ್ಟೆಯೇನೂ ಕುಸಿದಿಲ್ಲ. ಆದರೆ ದಲ್ಲಾಳಿಗಳು-ಮಧ್ಯವರ್ತಿಗಳು ಈ ಗೊಂದಲದ ಲಾಭ ಎತ್ತಿದ್ದಾರೆ. ಇದರಲ್ಲಿ ರಾಜಕಾರಣಿಗಳೂ ಹಿಂದೆ ಬಿದ್ದವರಲ್ಲ!

ಅಡಿಕೆ ತೋಟಿಗರಲ್ಲಿ ಅಲ್ಲೋಲಕಲ್ಲೋಲ ಮಾಡಿದ್ದು 2011ರಲ್ಲಿ. ಆಗ ಕೇಂದ್ರದಲ್ಲಿ ಯುಪಿಎ-2 ಅಧಿಕಾರದಲ್ಲಿತ್ತು. ಆರೋಗ್ಯಕ್ಕೆ ಹಾನಿಕರವಾದ ಅಂಶಗಳು ಅಡಿಕೆಯಲ್ಲಿದೆಯೆಂದು ಅಂದು ಕೇಂದ್ರ ಸರ್ಕಾರ ಸುಪ್ರೀಮ್ ಕೋರ್ಟ್‍ಗೆ ಅಫಿಡವಿಟ್ ಸಲ್ಲಿಸಿತ್ತು. ಇದನ್ನು ಬಿಜೆಪಿಗರು ರಾಜಕೀಯಕ್ಕೆ ಬಳಸಿಕೊಂಡು ಕಾಂಗ್ರೆಸ್ ಅಡಿಕೆ ಬೆಳಗಾರರ ಶತ್ರುವೆಂದು ಬಿಂಬಿಸಿತು. ಅಡಿಕೆ ನಿಷೇಧಕ್ಕೆ ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಪುಕಾರು ಹಬ್ಬಿಸಿ ವ್ಯವಸ್ಥಿತವಾಗಿ ಅಡಿಕೆ ಬೆಳೆಗಾರರು ಕಾಂಗ್ರೆಸ್ ವಿರುದ್ದ ತಿರುಗಿಬೀಳುವಂತೆ ಮಾಡಲಾಯಿತು.
ಅಡಿಕೆ ನಿಷೇಧಿಸುವ ಯೋಚನೆಯಿಲ್ಲ ಎಂದು ಯುಪಿಎ ಸರ್ಕಾರ ಸ್ಪಷ್ಟಪಡಿಸಿತಾದರು ಬಿಜೆಪಿ ಅಪಪ್ರಚಾರದ ಮುಂದೆ ಅದು ಬೆಳೆಗಾರರನ್ನು ಇಂಪ್ರೆಸ್ ಮಾಡಲೇ ಇಲ್ಲ. ಅತ್ತ ಕಾಂಗ್ರೆಸ್ ಆಡಳಿತಗಾರರಿಂದ ರೈತರ ಮನಸ್ಸು ಗೆಲ್ಲುವ ಕೆಲಸವೂ ಆಗಲಿಲ್ಲ. ಅಂದರೆ ಸುಪ್ರೀಂ ಕೋರ್ಟ್‍ಗೆ- “ಅಡಿಕೆ ಆರೋಗ್ಯಕ್ಕೆ ಹಾನಿಕರ” ಎಂದು ಸರ್ಕಾರ ಸಲ್ಲಿಸಿದ್ದ ಅಫಿಡವಿಟ್ ಹಿಂಪಡೆವ ಪ್ರಕ್ರಿಯೆ ಶುರುವಾಗಲೇ ಇಲ್ಲ. ಇದು ಬಿಜೆಪಿಗೆ 2014ರ ಪಾರ್ಲಿಮೆಂಟ್ ಇಲೆಕ್ಷನ್‍ನಲ್ಲಿ ವರವಾಗಿ ಪರಿಣಮಿಸಿತು, ಅಡಿಕೆ ಕೃಷಿ ಪ್ರದೇಶದಲ್ಲಿ!!

ಉತ್ತರ ಕನ್ನಡದ ಅನಂತ್ ಕುಮಾರ್ ಹೆಗಡೆ, ಶಿವಮೊಗ್ಗೆಯ ರಾಘು, ಉಡುಪಿ-ಚಿಕ್ಕಮಗಳೂರಿನ ಬೇಬಿಯಕ್ಕ ಯಾನೆ ಶೋಭಾ ಕರಂದ್ಲಾಜೆ, ದಾವಣಗೆರೆಯ ಸಿದ್ದೇಶ್ವರ್, ಮಂಗಳೂರಿನ ನಳಿನ್ ಕಟೀಲು ಅಡಿಕೆ ಬೆಳೆಗಾರರ ಬಚಾಯಿಸುವ ಭರವಸೆ ಕೊಟ್ಟೇ ಗೆದ್ದು ಸಂಸದರಾದರು.
ಗೆಲ್ಲುತ್ತಿದ್ದಂತೆಯೇ ಈ ಪಂಚ ಪ್ರಚಂಡರಿಗೆ ಅಡಿಕೆ ಬೆಳೆಗಾರರು ಮರೆತೇ ಹೋದದ್ದು ದುರಂತ! ತಮ್ಮದೇ ಎನ್‍ಡಿಎ ಸರ್ಕಾರ ಅಧಿಕಾರದಲ್ಲಿದ್ದರು ಅಡಿಕೆ ಮಾರಕ ಎಂದು ಸುಪ್ರೀಮ್‍ಗೆ ಸಲ್ಲಿಕೆಯಾಗಿದ್ದ ಅಫಿಡವಿಟ್ ವಾಪಸ್ ಪಡೆಯುವ ಪ್ರಯತ್ನವನ್ನೇ ಇವರ್ಯಾರು ಮಾಡಲಿಲ್ಲ. ಸಂಸತ್‍ನಲ್ಲಿ ಅಡಿಕೆ ಬೆಳೆ ಏರಿಯಾದ ಯಾವ ಸಂಸದನೂ ತೋಟಗಾರಿಕೆ ಬಗ್ಗೆ ಉಸಿರೆತ್ತಲಿಲ್ಲ. ಕಾನೂನಿಗೆ ತಿದ್ದುಪಡಿ ತಂದು ಅಡಿಕೆಯನ್ನು ತಂಬಾಕು ಪಟ್ಟಿಯಿಂದ ಹೊರತರುವ ಹೊಣೆ ತಮ್ಮದೆಂದು ಆಶ್ವಾಸನೆ ಕೊಟ್ಟು ಗೆದ್ದಿದ್ದ ಕೃತಜ್ಞೆಯೂ ಇವರಿಗಿಲ್ಲವಾಯಿತು. ಅಡಿಕೆ ಬೆಳೆಗಾರರ ಯಾಮಾರಿಸಿ ಸಂಸದರಾಗಿದ್ದವರ ಉದಾಸೀನದ ಒಟ್ಟೂ ಪರಿಣಾಮವೆಂಬಂತೆ 2017ರ ಡಿಸೆಂಬರ್‍ನಲ್ಲಿ ಅಂದಿನ ಆರೋಗ್ಯಮಂತ್ರಿಣಿ ಅನುಪ್ರಿಯಾ ಪಟೇಲ್ ಅಡಿಕೆಯು ಬಾಯಿಕ್ಯಾನ್ಸರ್ ತರುತ್ತದೆಂದು ಲೋಕಸಭೆಯಲ್ಲೇ ಯಾವ ಮುಲಾಜಿಲ್ಲದೆ ಹೇಳಿಬಿಟ್ಟರು.

ಆಗಲೂ ಅನಂತ್ಮಾಣಿ, ಶೋಭಕ್ಕ, ಕಟೀಲು, ಬಸ್‍ಸ್ಟ್ಯಾಂಡ್ ರಾಘು, ಸುಫಾರಿ ಸರದಾರ ಸಿದ್ದೇಶ್ವರ್ ತಲೆ ಕೆಡಿಸಿಕೊಳ್ಳಲೇ ಇಲ್ಲ. 2019ರ ಚುನಾವಣೆ ವೇಳೆಗೆ ಧರ್ಮ ಮತು ಪಾಕಿಸ್ತಾನ್ ದುಷ್ಮನಿಯನ್ನು ಮುಂದೆ ಮಾಡಿದ್ದರಿಂದ ಯಾಮಾರಿದ ಜನ ಈ ಪಂಚರನ್ನೇ ಮತ್ತೆ ಸಂಸತ್ತಿಗೆ ಕಳಿಸಿದ್ದಾರೆ. ಈ ಬಾರಿಯಾದರೂ ತಮ್ಮ ನೋವಿಗೆ ಸ್ಪಂದಿಸಬಹುದೆಂದು ಭಾವಿಸಿದ್ದ ತೋಟಿಗರಿಗೆ ಮತ್ತದೇ ಆಘಾತ ಆಗಿದೆ!!
ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಆ ಮಾತು ಹೇಳುತ್ತಿದ್ದಂತೆಯೇ ಅಡಿಕೆ ಬೆಳೆ ಪ್ರದೇಶದ ಮಂದಿ ತಮ್ಮ ಸಂಸದರಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಗಡಿಬಿಡಿಗೆ ಬಿದ್ದಿರುವ ಶೋಭಕ್ಕ, ಕಟೀಲು, ಸಿದ್ದೇಶ್ವರ ತಂಡ ಕೇಂದ್ರ ಆರೋಗ್ಯ ಮಂತ್ರಿ ಹರ್ಷವರ್ಧನ್ ಭೇಟಿ ಮಾಡಿದ ಫೋಟೋ ಹೊರಹಾಕಿ ಮುಖ ಉಳಿಸಿಕೊಳ್ಳಲು ತಿಪ್ಪರಲಾಗ ಹಾಕುತ್ತಿದೆ.

ಸುಪ್ರೀಮ್ ಕೋರ್ಟ್‍ಗೆ ಅಡಿಕೆ ಆರೋಗ್ಯಕ್ಕೆ ಹಾನಿಕಾರಕ ಎಂದು ಸಲ್ಲಿಸಲಾಗಿರುವ ಅಫಿಡವಿಟ್ ಹಿಂಪಡೆಯುವ ಭರವಸೆ ಆರೋಗ್ಯ ಮಂತ್ರಿಗಳು ಕೊಟ್ಟಿದ್ದಾರೆಂದು ನಳಿನ್-ಶೋಭಾ ಗ್ಯಾಂಗು ಹೇಳುತ್ತಿದೆ. ಸ್ವತಃ ವೈದ್ಯರಾಗಿರುವ ಹರ್ಷವರ್ಧನ್ ಅಷ್ಟು ಸುಲಭಕ್ಕೆ ನಳಿನ್-ಶೋಭಾ ವಗೈರೆಗಳ ಮಾತಿಗೆ ಸೊಪ್ಪು ಹಾಕುವ ಪೈಕಿ ಅಲ್ಲ. ಎನ್‍ಡಿಎ-1 ಸರ್ಕಾರದಲ್ಲಿ ಆರೋಗ್ಯ ಮಂತ್ರಿಯಾಗಿದ್ದಾಗ ಸಿಗರೇಟು ಲಾಬಿ ಎದುರು ಹಾಕಿಕೊಂಡಿದ್ದಕ್ಕೆ ಹರ್ಷವರ್ಧನ್ ಆ ಖಾತೆಯೇ ಬಿಡಬೇಕಾಗಿ ಬಂದಿತ್ತು. ಮನವಿಕೊಟ್ಟು ಕೈತೊಳೆದುಕೊಂಡಿರುವ ನಳಿನ್-ಶೋಭಾ ಗ್ಯಾಂಗು ಅಡಿಕೆ ಬೆಳೆಗಾರರಿಗೆ ನೆಮ್ಮದಿ ಸಿಗುವ ತನಕ ಹೋರಾಡುತ್ತಾರೆಂಬ ನಂಬಿಕೆ ಯಾರಿಗೂ ಇಲ್ಲ. ವಿಜಯಾ ಬ್ಯಾಂಕ್‍ನ್ನು ಸುಖಾಸುಮ್ಮನೆ ಗುಜರಾತಿ ಮಾರ್ವಾಡಿಗಳ ಬ್ಯಾಂಕ್ ಆಫ್ ಬರೋಡಾದಲ್ಲಿ ವಿಲೀನ ಮಾಡುವುದು ತಡೆಯಲಾಗದ ನಳಿನ್‍ನಷ್ಟೇ “ಕೆಚ್ಚು” ಇರುವ ಶೋಭಾ, ಮಾಣಿ, ರಾಘು, ಸಿದ್ದೇಶ್ವರ್‍ಗಳಿಗೆ ಗುಟ್ಕಾ ಮಾಫಿಯಾಕ್ಕೆ ತಿರುಗಿನಿಲ್ಲುವ ತಾಕತ್ತು ಅದೆಲ್ಲಿಂದ ಬಂದೀತು? ಹಾಗಂತ ಅಡಿಕೆ ವಲಯ ಮಾತಾಡಿಕೊಳ್ಳುತ್ತಿದೆ!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...