Homeಕರ್ನಾಟಕಅಡಿಕೆ ಬೆಳೆಗಾರರಿಗೆ ಬಿಜೆಪಿಯ ನಂಬಿಕೆದ್ರೋಹ

ಅಡಿಕೆ ಬೆಳೆಗಾರರಿಗೆ ಬಿಜೆಪಿಯ ನಂಬಿಕೆದ್ರೋಹ

- Advertisement -
- Advertisement -

ಅಡಿಕೆ ಆರೋಗ್ಯಕ್ಕೆ ಹಾನಿಕಾರಕವಾ? ಕ್ಯಾನ್ಸರ್‍ಕಾರಕವಾ? ಕೇಂದ್ರ ಬಿಜೆಪಿ ಸರ್ಕಾರದ ಆರೋಗ್ಯ ಇಲಾಖೆಯ ಸಹಾಯಕ ಮಂತ್ರಿ ಅಶ್ವಿನಿಕುಮಾರ್ ಚೌಬೆ ಲೋಕಸಭೆಯಲ್ಲೇ ಇಂತದ್ದೊಂದು ಹೇಳಿಕೆ ನೀಡಿ ಅಡಿಕೆ ಬೆಳೆಗಾರರ ಮೇಲೆಯೇ ದಾಳಿ ಮಾಡಿದೆ. ಅಡಿಕೆಯ ಮಾನಾಪಮಾನ ಸುದ್ದಿಯಾಗುತ್ತಿದ್ದಂತೆಯೇ ಅಮಾಯಕ ಅಡಿಕೆ ಬೆಳೆಗಾರರು ಬೆಚ್ಚಿಬಿದ್ದಿದ್ದಾರೆ.

ಇದೇ ತಿಂಗಳ 12ರಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಅಡಿಕೆ ಕಾರ್ಸಿನೋಜೆನಿಕ್ (ಕ್ಯಾನ್ಸರ್‍ಕಾರಕ) ಎಂದು ಲೋಕಸಭೆಯಲ್ಲಿ ತಿಳಿಸಿದೆ! ಈ ಸಂಗತಿ ತಿಳಿಯುತ್ತಿದ್ದಂತೆಯೇ ಅಡಿಕೆ ಬೆಳೆಗಾರರು ಕಂಗಾಲಾಗಿದ್ದಾರೆ. ಕೇಂದ್ರ ಬಜೆಟ್ ನಂತರ ಅಡಿಕೆ ಧಾರಣೆ ಏರಿಕೆಯಾಗಿ ಮಾರುಕಟ್ಟೆ ಸ್ಥಿರತೆಯತ್ತ ಸಾಗಬಹುದೆಂದು ನಿರೀಕ್ಷಿಸಿದ್ದ ರೈತರು ಅಸ್ಥಿರತೆ ಭಯದಿಂದ ಹೌಹಾರಿದ್ದಾರೆ. ತಾನೆಂಥ ದ್ರೋಹಿಗಳನ್ನು ಸಂಸದರಾಗಿ ಮತ್ತೆ-ಮತ್ತೆ ಗೆಲ್ಲಿಸಿ ಕಳಿಸುತ್ತಿದ್ದೇವೆಂದು ಹಣೆಹಣೆ ಚಚ್ಚಿಕೊಳ್ಳುತ್ತಿದ್ದಾರೆ!!

ಗುಜರಾತ್ (ಗುಟ್ಕಾ ಮಾಫಿಯಾ ಇರುವುದೇ ಇಲ್ಲಿ)ನ ಖೇಡಾ ಕ್ಷೇತ್ರದ ಸಂಸದ ದೇವುಸಿಂಗ್ ಚೌಹಾಣ್-ಅಡಿಕೆ ಸೇವನೆ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆಂಬ ವರದಿಗಳು ಇರುವುದು ನಿಜವಾ? ಎಂಬ ಪ್ರಶ್ನೆ ಆರೋಗ್ಯ ಮಂತ್ರಿಗೆ ಕೇಳಿದ್ದರು. ಈ ಪ್ರಶ್ನೆಗೆ ಪಾರ್ಲಿಮೆಂಟ್‍ನಲ್ಲಿ ಉತ್ತರಿಸಿರುವ ಆರೋಗ್ಯ ಇಲಾಖೆಯ ಸಹಾಯಕ ಮಂತ್ರಿ ಅಶ್ವಿನಿಕುಮಾರ್ ಚೌಬೆ-ಅಡಿಕೆ ದೇಹದ ವಿವಿಧ ಅಂಗಗಳ ಮೇಲೆ ದುಷ್ಪರಿಣಾಮ ಬೀರುತ್ತದೆ. ಬಾಯಿ, ಅನ್ನನಾಳ, ಗಂಟಲು ಮತ್ತಿತರ ಅಂಗಗಳಿಗೆ ಕ್ಯಾನ್ಸರ್ ತಗಲುವಂತೆ ಅಡಿಕೆ ಮಾಡುತ್ತದೆಂದು ಕೆಲವು ಅಧ್ಯಯನದಿಂದ ತಿಳಿದುಬಂದಿದೆಯೆಂದು ಹೇಳಿದ್ದಾರೆ. ಮಂತ್ರಿಗಳ ಈ ಮಾತಿಂದ ಅಡಿಕೆ ಮಾರುಕಟ್ಟೆಯಲ್ಲಿ ಸಣ್ಣ ತಲ್ಲಣ ಶುರುವಾಗಿದೆ.

ಕರ್ನಾಟಕದಲ್ಲಿ ಪ್ರತಿ ವರ್ಷ ನಾಲ್ಕು ಲಕ್ಷ ಟನ್ ಅಡಿಕೆ ಬೆಳೆಯಲಾಗುತ್ತಿದೆ. ಇದು ದೇಶದಲ್ಲಿ ಉತ್ಪಾದನೆಯಾಗುವ ಒಟ್ಟೂ ಅಡಿಕೆಯಲ್ಲಿ ಶೇಕಡಾ ಅರ್ಧದಷ್ಟು! ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ ಜಿಲ್ಲೆಯಲ್ಲಿ ಅಡಿಕೆ ಜೀವನಾಧಾರ ವಾಣಿಜ್ಯ ಬೆಳೆ. ಮಲೆನಾಡಿನ ತೋಟಿಗರು ಬದುಕು ಕಟ್ಟಿಕೊಂಡಿರುವುದೇ ಅಡಿಕೆ ವಹಿವಾಟಿನ ಮೇಲೆ. ಹೀಗಾಗಿ ತೋಟಿಗರು ಕೇಂದ್ರ ಸರ್ಕಾರದ ನಡೆಯಿಂದ ಸಹಜವಾಗಿಯೇ ಆತಂಕಗೊಂಡಿದ್ದಾರೆ. ಅಡಿಕೆ ಬಗ್ಗೆ ಹಲವು ಸಲ ವಿವಾದ ಎದ್ದಿದೆ. ಹಾಗಂತ ಆಗೆಲ್ಲ ಅಡಿಕೆ ಧಾರಣೆ ಮೇಲೆ ಕೆಟ್ಟ ಪರಿಣಾಮವಾಗಿ ಮಾರುಕಟ್ಟೆಯೇನೂ ಕುಸಿದಿಲ್ಲ. ಆದರೆ ದಲ್ಲಾಳಿಗಳು-ಮಧ್ಯವರ್ತಿಗಳು ಈ ಗೊಂದಲದ ಲಾಭ ಎತ್ತಿದ್ದಾರೆ. ಇದರಲ್ಲಿ ರಾಜಕಾರಣಿಗಳೂ ಹಿಂದೆ ಬಿದ್ದವರಲ್ಲ!

ಅಡಿಕೆ ತೋಟಿಗರಲ್ಲಿ ಅಲ್ಲೋಲಕಲ್ಲೋಲ ಮಾಡಿದ್ದು 2011ರಲ್ಲಿ. ಆಗ ಕೇಂದ್ರದಲ್ಲಿ ಯುಪಿಎ-2 ಅಧಿಕಾರದಲ್ಲಿತ್ತು. ಆರೋಗ್ಯಕ್ಕೆ ಹಾನಿಕರವಾದ ಅಂಶಗಳು ಅಡಿಕೆಯಲ್ಲಿದೆಯೆಂದು ಅಂದು ಕೇಂದ್ರ ಸರ್ಕಾರ ಸುಪ್ರೀಮ್ ಕೋರ್ಟ್‍ಗೆ ಅಫಿಡವಿಟ್ ಸಲ್ಲಿಸಿತ್ತು. ಇದನ್ನು ಬಿಜೆಪಿಗರು ರಾಜಕೀಯಕ್ಕೆ ಬಳಸಿಕೊಂಡು ಕಾಂಗ್ರೆಸ್ ಅಡಿಕೆ ಬೆಳಗಾರರ ಶತ್ರುವೆಂದು ಬಿಂಬಿಸಿತು. ಅಡಿಕೆ ನಿಷೇಧಕ್ಕೆ ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಪುಕಾರು ಹಬ್ಬಿಸಿ ವ್ಯವಸ್ಥಿತವಾಗಿ ಅಡಿಕೆ ಬೆಳೆಗಾರರು ಕಾಂಗ್ರೆಸ್ ವಿರುದ್ದ ತಿರುಗಿಬೀಳುವಂತೆ ಮಾಡಲಾಯಿತು.
ಅಡಿಕೆ ನಿಷೇಧಿಸುವ ಯೋಚನೆಯಿಲ್ಲ ಎಂದು ಯುಪಿಎ ಸರ್ಕಾರ ಸ್ಪಷ್ಟಪಡಿಸಿತಾದರು ಬಿಜೆಪಿ ಅಪಪ್ರಚಾರದ ಮುಂದೆ ಅದು ಬೆಳೆಗಾರರನ್ನು ಇಂಪ್ರೆಸ್ ಮಾಡಲೇ ಇಲ್ಲ. ಅತ್ತ ಕಾಂಗ್ರೆಸ್ ಆಡಳಿತಗಾರರಿಂದ ರೈತರ ಮನಸ್ಸು ಗೆಲ್ಲುವ ಕೆಲಸವೂ ಆಗಲಿಲ್ಲ. ಅಂದರೆ ಸುಪ್ರೀಂ ಕೋರ್ಟ್‍ಗೆ- “ಅಡಿಕೆ ಆರೋಗ್ಯಕ್ಕೆ ಹಾನಿಕರ” ಎಂದು ಸರ್ಕಾರ ಸಲ್ಲಿಸಿದ್ದ ಅಫಿಡವಿಟ್ ಹಿಂಪಡೆವ ಪ್ರಕ್ರಿಯೆ ಶುರುವಾಗಲೇ ಇಲ್ಲ. ಇದು ಬಿಜೆಪಿಗೆ 2014ರ ಪಾರ್ಲಿಮೆಂಟ್ ಇಲೆಕ್ಷನ್‍ನಲ್ಲಿ ವರವಾಗಿ ಪರಿಣಮಿಸಿತು, ಅಡಿಕೆ ಕೃಷಿ ಪ್ರದೇಶದಲ್ಲಿ!!

ಉತ್ತರ ಕನ್ನಡದ ಅನಂತ್ ಕುಮಾರ್ ಹೆಗಡೆ, ಶಿವಮೊಗ್ಗೆಯ ರಾಘು, ಉಡುಪಿ-ಚಿಕ್ಕಮಗಳೂರಿನ ಬೇಬಿಯಕ್ಕ ಯಾನೆ ಶೋಭಾ ಕರಂದ್ಲಾಜೆ, ದಾವಣಗೆರೆಯ ಸಿದ್ದೇಶ್ವರ್, ಮಂಗಳೂರಿನ ನಳಿನ್ ಕಟೀಲು ಅಡಿಕೆ ಬೆಳೆಗಾರರ ಬಚಾಯಿಸುವ ಭರವಸೆ ಕೊಟ್ಟೇ ಗೆದ್ದು ಸಂಸದರಾದರು.
ಗೆಲ್ಲುತ್ತಿದ್ದಂತೆಯೇ ಈ ಪಂಚ ಪ್ರಚಂಡರಿಗೆ ಅಡಿಕೆ ಬೆಳೆಗಾರರು ಮರೆತೇ ಹೋದದ್ದು ದುರಂತ! ತಮ್ಮದೇ ಎನ್‍ಡಿಎ ಸರ್ಕಾರ ಅಧಿಕಾರದಲ್ಲಿದ್ದರು ಅಡಿಕೆ ಮಾರಕ ಎಂದು ಸುಪ್ರೀಮ್‍ಗೆ ಸಲ್ಲಿಕೆಯಾಗಿದ್ದ ಅಫಿಡವಿಟ್ ವಾಪಸ್ ಪಡೆಯುವ ಪ್ರಯತ್ನವನ್ನೇ ಇವರ್ಯಾರು ಮಾಡಲಿಲ್ಲ. ಸಂಸತ್‍ನಲ್ಲಿ ಅಡಿಕೆ ಬೆಳೆ ಏರಿಯಾದ ಯಾವ ಸಂಸದನೂ ತೋಟಗಾರಿಕೆ ಬಗ್ಗೆ ಉಸಿರೆತ್ತಲಿಲ್ಲ. ಕಾನೂನಿಗೆ ತಿದ್ದುಪಡಿ ತಂದು ಅಡಿಕೆಯನ್ನು ತಂಬಾಕು ಪಟ್ಟಿಯಿಂದ ಹೊರತರುವ ಹೊಣೆ ತಮ್ಮದೆಂದು ಆಶ್ವಾಸನೆ ಕೊಟ್ಟು ಗೆದ್ದಿದ್ದ ಕೃತಜ್ಞೆಯೂ ಇವರಿಗಿಲ್ಲವಾಯಿತು. ಅಡಿಕೆ ಬೆಳೆಗಾರರ ಯಾಮಾರಿಸಿ ಸಂಸದರಾಗಿದ್ದವರ ಉದಾಸೀನದ ಒಟ್ಟೂ ಪರಿಣಾಮವೆಂಬಂತೆ 2017ರ ಡಿಸೆಂಬರ್‍ನಲ್ಲಿ ಅಂದಿನ ಆರೋಗ್ಯಮಂತ್ರಿಣಿ ಅನುಪ್ರಿಯಾ ಪಟೇಲ್ ಅಡಿಕೆಯು ಬಾಯಿಕ್ಯಾನ್ಸರ್ ತರುತ್ತದೆಂದು ಲೋಕಸಭೆಯಲ್ಲೇ ಯಾವ ಮುಲಾಜಿಲ್ಲದೆ ಹೇಳಿಬಿಟ್ಟರು.

ಆಗಲೂ ಅನಂತ್ಮಾಣಿ, ಶೋಭಕ್ಕ, ಕಟೀಲು, ಬಸ್‍ಸ್ಟ್ಯಾಂಡ್ ರಾಘು, ಸುಫಾರಿ ಸರದಾರ ಸಿದ್ದೇಶ್ವರ್ ತಲೆ ಕೆಡಿಸಿಕೊಳ್ಳಲೇ ಇಲ್ಲ. 2019ರ ಚುನಾವಣೆ ವೇಳೆಗೆ ಧರ್ಮ ಮತು ಪಾಕಿಸ್ತಾನ್ ದುಷ್ಮನಿಯನ್ನು ಮುಂದೆ ಮಾಡಿದ್ದರಿಂದ ಯಾಮಾರಿದ ಜನ ಈ ಪಂಚರನ್ನೇ ಮತ್ತೆ ಸಂಸತ್ತಿಗೆ ಕಳಿಸಿದ್ದಾರೆ. ಈ ಬಾರಿಯಾದರೂ ತಮ್ಮ ನೋವಿಗೆ ಸ್ಪಂದಿಸಬಹುದೆಂದು ಭಾವಿಸಿದ್ದ ತೋಟಿಗರಿಗೆ ಮತ್ತದೇ ಆಘಾತ ಆಗಿದೆ!!
ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಆ ಮಾತು ಹೇಳುತ್ತಿದ್ದಂತೆಯೇ ಅಡಿಕೆ ಬೆಳೆ ಪ್ರದೇಶದ ಮಂದಿ ತಮ್ಮ ಸಂಸದರಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಗಡಿಬಿಡಿಗೆ ಬಿದ್ದಿರುವ ಶೋಭಕ್ಕ, ಕಟೀಲು, ಸಿದ್ದೇಶ್ವರ ತಂಡ ಕೇಂದ್ರ ಆರೋಗ್ಯ ಮಂತ್ರಿ ಹರ್ಷವರ್ಧನ್ ಭೇಟಿ ಮಾಡಿದ ಫೋಟೋ ಹೊರಹಾಕಿ ಮುಖ ಉಳಿಸಿಕೊಳ್ಳಲು ತಿಪ್ಪರಲಾಗ ಹಾಕುತ್ತಿದೆ.

ಸುಪ್ರೀಮ್ ಕೋರ್ಟ್‍ಗೆ ಅಡಿಕೆ ಆರೋಗ್ಯಕ್ಕೆ ಹಾನಿಕಾರಕ ಎಂದು ಸಲ್ಲಿಸಲಾಗಿರುವ ಅಫಿಡವಿಟ್ ಹಿಂಪಡೆಯುವ ಭರವಸೆ ಆರೋಗ್ಯ ಮಂತ್ರಿಗಳು ಕೊಟ್ಟಿದ್ದಾರೆಂದು ನಳಿನ್-ಶೋಭಾ ಗ್ಯಾಂಗು ಹೇಳುತ್ತಿದೆ. ಸ್ವತಃ ವೈದ್ಯರಾಗಿರುವ ಹರ್ಷವರ್ಧನ್ ಅಷ್ಟು ಸುಲಭಕ್ಕೆ ನಳಿನ್-ಶೋಭಾ ವಗೈರೆಗಳ ಮಾತಿಗೆ ಸೊಪ್ಪು ಹಾಕುವ ಪೈಕಿ ಅಲ್ಲ. ಎನ್‍ಡಿಎ-1 ಸರ್ಕಾರದಲ್ಲಿ ಆರೋಗ್ಯ ಮಂತ್ರಿಯಾಗಿದ್ದಾಗ ಸಿಗರೇಟು ಲಾಬಿ ಎದುರು ಹಾಕಿಕೊಂಡಿದ್ದಕ್ಕೆ ಹರ್ಷವರ್ಧನ್ ಆ ಖಾತೆಯೇ ಬಿಡಬೇಕಾಗಿ ಬಂದಿತ್ತು. ಮನವಿಕೊಟ್ಟು ಕೈತೊಳೆದುಕೊಂಡಿರುವ ನಳಿನ್-ಶೋಭಾ ಗ್ಯಾಂಗು ಅಡಿಕೆ ಬೆಳೆಗಾರರಿಗೆ ನೆಮ್ಮದಿ ಸಿಗುವ ತನಕ ಹೋರಾಡುತ್ತಾರೆಂಬ ನಂಬಿಕೆ ಯಾರಿಗೂ ಇಲ್ಲ. ವಿಜಯಾ ಬ್ಯಾಂಕ್‍ನ್ನು ಸುಖಾಸುಮ್ಮನೆ ಗುಜರಾತಿ ಮಾರ್ವಾಡಿಗಳ ಬ್ಯಾಂಕ್ ಆಫ್ ಬರೋಡಾದಲ್ಲಿ ವಿಲೀನ ಮಾಡುವುದು ತಡೆಯಲಾಗದ ನಳಿನ್‍ನಷ್ಟೇ “ಕೆಚ್ಚು” ಇರುವ ಶೋಭಾ, ಮಾಣಿ, ರಾಘು, ಸಿದ್ದೇಶ್ವರ್‍ಗಳಿಗೆ ಗುಟ್ಕಾ ಮಾಫಿಯಾಕ್ಕೆ ತಿರುಗಿನಿಲ್ಲುವ ತಾಕತ್ತು ಅದೆಲ್ಲಿಂದ ಬಂದೀತು? ಹಾಗಂತ ಅಡಿಕೆ ವಲಯ ಮಾತಾಡಿಕೊಳ್ಳುತ್ತಿದೆ!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...