Homeಕರ್ನಾಟಕಅಡಿಕೆ ಬೆಳೆಗಾರರಿಗೆ ಬಿಜೆಪಿಯ ನಂಬಿಕೆದ್ರೋಹ

ಅಡಿಕೆ ಬೆಳೆಗಾರರಿಗೆ ಬಿಜೆಪಿಯ ನಂಬಿಕೆದ್ರೋಹ

- Advertisement -
- Advertisement -

ಅಡಿಕೆ ಆರೋಗ್ಯಕ್ಕೆ ಹಾನಿಕಾರಕವಾ? ಕ್ಯಾನ್ಸರ್‍ಕಾರಕವಾ? ಕೇಂದ್ರ ಬಿಜೆಪಿ ಸರ್ಕಾರದ ಆರೋಗ್ಯ ಇಲಾಖೆಯ ಸಹಾಯಕ ಮಂತ್ರಿ ಅಶ್ವಿನಿಕುಮಾರ್ ಚೌಬೆ ಲೋಕಸಭೆಯಲ್ಲೇ ಇಂತದ್ದೊಂದು ಹೇಳಿಕೆ ನೀಡಿ ಅಡಿಕೆ ಬೆಳೆಗಾರರ ಮೇಲೆಯೇ ದಾಳಿ ಮಾಡಿದೆ. ಅಡಿಕೆಯ ಮಾನಾಪಮಾನ ಸುದ್ದಿಯಾಗುತ್ತಿದ್ದಂತೆಯೇ ಅಮಾಯಕ ಅಡಿಕೆ ಬೆಳೆಗಾರರು ಬೆಚ್ಚಿಬಿದ್ದಿದ್ದಾರೆ.

ಇದೇ ತಿಂಗಳ 12ರಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಅಡಿಕೆ ಕಾರ್ಸಿನೋಜೆನಿಕ್ (ಕ್ಯಾನ್ಸರ್‍ಕಾರಕ) ಎಂದು ಲೋಕಸಭೆಯಲ್ಲಿ ತಿಳಿಸಿದೆ! ಈ ಸಂಗತಿ ತಿಳಿಯುತ್ತಿದ್ದಂತೆಯೇ ಅಡಿಕೆ ಬೆಳೆಗಾರರು ಕಂಗಾಲಾಗಿದ್ದಾರೆ. ಕೇಂದ್ರ ಬಜೆಟ್ ನಂತರ ಅಡಿಕೆ ಧಾರಣೆ ಏರಿಕೆಯಾಗಿ ಮಾರುಕಟ್ಟೆ ಸ್ಥಿರತೆಯತ್ತ ಸಾಗಬಹುದೆಂದು ನಿರೀಕ್ಷಿಸಿದ್ದ ರೈತರು ಅಸ್ಥಿರತೆ ಭಯದಿಂದ ಹೌಹಾರಿದ್ದಾರೆ. ತಾನೆಂಥ ದ್ರೋಹಿಗಳನ್ನು ಸಂಸದರಾಗಿ ಮತ್ತೆ-ಮತ್ತೆ ಗೆಲ್ಲಿಸಿ ಕಳಿಸುತ್ತಿದ್ದೇವೆಂದು ಹಣೆಹಣೆ ಚಚ್ಚಿಕೊಳ್ಳುತ್ತಿದ್ದಾರೆ!!

ಗುಜರಾತ್ (ಗುಟ್ಕಾ ಮಾಫಿಯಾ ಇರುವುದೇ ಇಲ್ಲಿ)ನ ಖೇಡಾ ಕ್ಷೇತ್ರದ ಸಂಸದ ದೇವುಸಿಂಗ್ ಚೌಹಾಣ್-ಅಡಿಕೆ ಸೇವನೆ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆಂಬ ವರದಿಗಳು ಇರುವುದು ನಿಜವಾ? ಎಂಬ ಪ್ರಶ್ನೆ ಆರೋಗ್ಯ ಮಂತ್ರಿಗೆ ಕೇಳಿದ್ದರು. ಈ ಪ್ರಶ್ನೆಗೆ ಪಾರ್ಲಿಮೆಂಟ್‍ನಲ್ಲಿ ಉತ್ತರಿಸಿರುವ ಆರೋಗ್ಯ ಇಲಾಖೆಯ ಸಹಾಯಕ ಮಂತ್ರಿ ಅಶ್ವಿನಿಕುಮಾರ್ ಚೌಬೆ-ಅಡಿಕೆ ದೇಹದ ವಿವಿಧ ಅಂಗಗಳ ಮೇಲೆ ದುಷ್ಪರಿಣಾಮ ಬೀರುತ್ತದೆ. ಬಾಯಿ, ಅನ್ನನಾಳ, ಗಂಟಲು ಮತ್ತಿತರ ಅಂಗಗಳಿಗೆ ಕ್ಯಾನ್ಸರ್ ತಗಲುವಂತೆ ಅಡಿಕೆ ಮಾಡುತ್ತದೆಂದು ಕೆಲವು ಅಧ್ಯಯನದಿಂದ ತಿಳಿದುಬಂದಿದೆಯೆಂದು ಹೇಳಿದ್ದಾರೆ. ಮಂತ್ರಿಗಳ ಈ ಮಾತಿಂದ ಅಡಿಕೆ ಮಾರುಕಟ್ಟೆಯಲ್ಲಿ ಸಣ್ಣ ತಲ್ಲಣ ಶುರುವಾಗಿದೆ.

ಕರ್ನಾಟಕದಲ್ಲಿ ಪ್ರತಿ ವರ್ಷ ನಾಲ್ಕು ಲಕ್ಷ ಟನ್ ಅಡಿಕೆ ಬೆಳೆಯಲಾಗುತ್ತಿದೆ. ಇದು ದೇಶದಲ್ಲಿ ಉತ್ಪಾದನೆಯಾಗುವ ಒಟ್ಟೂ ಅಡಿಕೆಯಲ್ಲಿ ಶೇಕಡಾ ಅರ್ಧದಷ್ಟು! ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ ಜಿಲ್ಲೆಯಲ್ಲಿ ಅಡಿಕೆ ಜೀವನಾಧಾರ ವಾಣಿಜ್ಯ ಬೆಳೆ. ಮಲೆನಾಡಿನ ತೋಟಿಗರು ಬದುಕು ಕಟ್ಟಿಕೊಂಡಿರುವುದೇ ಅಡಿಕೆ ವಹಿವಾಟಿನ ಮೇಲೆ. ಹೀಗಾಗಿ ತೋಟಿಗರು ಕೇಂದ್ರ ಸರ್ಕಾರದ ನಡೆಯಿಂದ ಸಹಜವಾಗಿಯೇ ಆತಂಕಗೊಂಡಿದ್ದಾರೆ. ಅಡಿಕೆ ಬಗ್ಗೆ ಹಲವು ಸಲ ವಿವಾದ ಎದ್ದಿದೆ. ಹಾಗಂತ ಆಗೆಲ್ಲ ಅಡಿಕೆ ಧಾರಣೆ ಮೇಲೆ ಕೆಟ್ಟ ಪರಿಣಾಮವಾಗಿ ಮಾರುಕಟ್ಟೆಯೇನೂ ಕುಸಿದಿಲ್ಲ. ಆದರೆ ದಲ್ಲಾಳಿಗಳು-ಮಧ್ಯವರ್ತಿಗಳು ಈ ಗೊಂದಲದ ಲಾಭ ಎತ್ತಿದ್ದಾರೆ. ಇದರಲ್ಲಿ ರಾಜಕಾರಣಿಗಳೂ ಹಿಂದೆ ಬಿದ್ದವರಲ್ಲ!

ಅಡಿಕೆ ತೋಟಿಗರಲ್ಲಿ ಅಲ್ಲೋಲಕಲ್ಲೋಲ ಮಾಡಿದ್ದು 2011ರಲ್ಲಿ. ಆಗ ಕೇಂದ್ರದಲ್ಲಿ ಯುಪಿಎ-2 ಅಧಿಕಾರದಲ್ಲಿತ್ತು. ಆರೋಗ್ಯಕ್ಕೆ ಹಾನಿಕರವಾದ ಅಂಶಗಳು ಅಡಿಕೆಯಲ್ಲಿದೆಯೆಂದು ಅಂದು ಕೇಂದ್ರ ಸರ್ಕಾರ ಸುಪ್ರೀಮ್ ಕೋರ್ಟ್‍ಗೆ ಅಫಿಡವಿಟ್ ಸಲ್ಲಿಸಿತ್ತು. ಇದನ್ನು ಬಿಜೆಪಿಗರು ರಾಜಕೀಯಕ್ಕೆ ಬಳಸಿಕೊಂಡು ಕಾಂಗ್ರೆಸ್ ಅಡಿಕೆ ಬೆಳಗಾರರ ಶತ್ರುವೆಂದು ಬಿಂಬಿಸಿತು. ಅಡಿಕೆ ನಿಷೇಧಕ್ಕೆ ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಪುಕಾರು ಹಬ್ಬಿಸಿ ವ್ಯವಸ್ಥಿತವಾಗಿ ಅಡಿಕೆ ಬೆಳೆಗಾರರು ಕಾಂಗ್ರೆಸ್ ವಿರುದ್ದ ತಿರುಗಿಬೀಳುವಂತೆ ಮಾಡಲಾಯಿತು.
ಅಡಿಕೆ ನಿಷೇಧಿಸುವ ಯೋಚನೆಯಿಲ್ಲ ಎಂದು ಯುಪಿಎ ಸರ್ಕಾರ ಸ್ಪಷ್ಟಪಡಿಸಿತಾದರು ಬಿಜೆಪಿ ಅಪಪ್ರಚಾರದ ಮುಂದೆ ಅದು ಬೆಳೆಗಾರರನ್ನು ಇಂಪ್ರೆಸ್ ಮಾಡಲೇ ಇಲ್ಲ. ಅತ್ತ ಕಾಂಗ್ರೆಸ್ ಆಡಳಿತಗಾರರಿಂದ ರೈತರ ಮನಸ್ಸು ಗೆಲ್ಲುವ ಕೆಲಸವೂ ಆಗಲಿಲ್ಲ. ಅಂದರೆ ಸುಪ್ರೀಂ ಕೋರ್ಟ್‍ಗೆ- “ಅಡಿಕೆ ಆರೋಗ್ಯಕ್ಕೆ ಹಾನಿಕರ” ಎಂದು ಸರ್ಕಾರ ಸಲ್ಲಿಸಿದ್ದ ಅಫಿಡವಿಟ್ ಹಿಂಪಡೆವ ಪ್ರಕ್ರಿಯೆ ಶುರುವಾಗಲೇ ಇಲ್ಲ. ಇದು ಬಿಜೆಪಿಗೆ 2014ರ ಪಾರ್ಲಿಮೆಂಟ್ ಇಲೆಕ್ಷನ್‍ನಲ್ಲಿ ವರವಾಗಿ ಪರಿಣಮಿಸಿತು, ಅಡಿಕೆ ಕೃಷಿ ಪ್ರದೇಶದಲ್ಲಿ!!

ಉತ್ತರ ಕನ್ನಡದ ಅನಂತ್ ಕುಮಾರ್ ಹೆಗಡೆ, ಶಿವಮೊಗ್ಗೆಯ ರಾಘು, ಉಡುಪಿ-ಚಿಕ್ಕಮಗಳೂರಿನ ಬೇಬಿಯಕ್ಕ ಯಾನೆ ಶೋಭಾ ಕರಂದ್ಲಾಜೆ, ದಾವಣಗೆರೆಯ ಸಿದ್ದೇಶ್ವರ್, ಮಂಗಳೂರಿನ ನಳಿನ್ ಕಟೀಲು ಅಡಿಕೆ ಬೆಳೆಗಾರರ ಬಚಾಯಿಸುವ ಭರವಸೆ ಕೊಟ್ಟೇ ಗೆದ್ದು ಸಂಸದರಾದರು.
ಗೆಲ್ಲುತ್ತಿದ್ದಂತೆಯೇ ಈ ಪಂಚ ಪ್ರಚಂಡರಿಗೆ ಅಡಿಕೆ ಬೆಳೆಗಾರರು ಮರೆತೇ ಹೋದದ್ದು ದುರಂತ! ತಮ್ಮದೇ ಎನ್‍ಡಿಎ ಸರ್ಕಾರ ಅಧಿಕಾರದಲ್ಲಿದ್ದರು ಅಡಿಕೆ ಮಾರಕ ಎಂದು ಸುಪ್ರೀಮ್‍ಗೆ ಸಲ್ಲಿಕೆಯಾಗಿದ್ದ ಅಫಿಡವಿಟ್ ವಾಪಸ್ ಪಡೆಯುವ ಪ್ರಯತ್ನವನ್ನೇ ಇವರ್ಯಾರು ಮಾಡಲಿಲ್ಲ. ಸಂಸತ್‍ನಲ್ಲಿ ಅಡಿಕೆ ಬೆಳೆ ಏರಿಯಾದ ಯಾವ ಸಂಸದನೂ ತೋಟಗಾರಿಕೆ ಬಗ್ಗೆ ಉಸಿರೆತ್ತಲಿಲ್ಲ. ಕಾನೂನಿಗೆ ತಿದ್ದುಪಡಿ ತಂದು ಅಡಿಕೆಯನ್ನು ತಂಬಾಕು ಪಟ್ಟಿಯಿಂದ ಹೊರತರುವ ಹೊಣೆ ತಮ್ಮದೆಂದು ಆಶ್ವಾಸನೆ ಕೊಟ್ಟು ಗೆದ್ದಿದ್ದ ಕೃತಜ್ಞೆಯೂ ಇವರಿಗಿಲ್ಲವಾಯಿತು. ಅಡಿಕೆ ಬೆಳೆಗಾರರ ಯಾಮಾರಿಸಿ ಸಂಸದರಾಗಿದ್ದವರ ಉದಾಸೀನದ ಒಟ್ಟೂ ಪರಿಣಾಮವೆಂಬಂತೆ 2017ರ ಡಿಸೆಂಬರ್‍ನಲ್ಲಿ ಅಂದಿನ ಆರೋಗ್ಯಮಂತ್ರಿಣಿ ಅನುಪ್ರಿಯಾ ಪಟೇಲ್ ಅಡಿಕೆಯು ಬಾಯಿಕ್ಯಾನ್ಸರ್ ತರುತ್ತದೆಂದು ಲೋಕಸಭೆಯಲ್ಲೇ ಯಾವ ಮುಲಾಜಿಲ್ಲದೆ ಹೇಳಿಬಿಟ್ಟರು.

ಆಗಲೂ ಅನಂತ್ಮಾಣಿ, ಶೋಭಕ್ಕ, ಕಟೀಲು, ಬಸ್‍ಸ್ಟ್ಯಾಂಡ್ ರಾಘು, ಸುಫಾರಿ ಸರದಾರ ಸಿದ್ದೇಶ್ವರ್ ತಲೆ ಕೆಡಿಸಿಕೊಳ್ಳಲೇ ಇಲ್ಲ. 2019ರ ಚುನಾವಣೆ ವೇಳೆಗೆ ಧರ್ಮ ಮತು ಪಾಕಿಸ್ತಾನ್ ದುಷ್ಮನಿಯನ್ನು ಮುಂದೆ ಮಾಡಿದ್ದರಿಂದ ಯಾಮಾರಿದ ಜನ ಈ ಪಂಚರನ್ನೇ ಮತ್ತೆ ಸಂಸತ್ತಿಗೆ ಕಳಿಸಿದ್ದಾರೆ. ಈ ಬಾರಿಯಾದರೂ ತಮ್ಮ ನೋವಿಗೆ ಸ್ಪಂದಿಸಬಹುದೆಂದು ಭಾವಿಸಿದ್ದ ತೋಟಿಗರಿಗೆ ಮತ್ತದೇ ಆಘಾತ ಆಗಿದೆ!!
ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಆ ಮಾತು ಹೇಳುತ್ತಿದ್ದಂತೆಯೇ ಅಡಿಕೆ ಬೆಳೆ ಪ್ರದೇಶದ ಮಂದಿ ತಮ್ಮ ಸಂಸದರಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಗಡಿಬಿಡಿಗೆ ಬಿದ್ದಿರುವ ಶೋಭಕ್ಕ, ಕಟೀಲು, ಸಿದ್ದೇಶ್ವರ ತಂಡ ಕೇಂದ್ರ ಆರೋಗ್ಯ ಮಂತ್ರಿ ಹರ್ಷವರ್ಧನ್ ಭೇಟಿ ಮಾಡಿದ ಫೋಟೋ ಹೊರಹಾಕಿ ಮುಖ ಉಳಿಸಿಕೊಳ್ಳಲು ತಿಪ್ಪರಲಾಗ ಹಾಕುತ್ತಿದೆ.

ಸುಪ್ರೀಮ್ ಕೋರ್ಟ್‍ಗೆ ಅಡಿಕೆ ಆರೋಗ್ಯಕ್ಕೆ ಹಾನಿಕಾರಕ ಎಂದು ಸಲ್ಲಿಸಲಾಗಿರುವ ಅಫಿಡವಿಟ್ ಹಿಂಪಡೆಯುವ ಭರವಸೆ ಆರೋಗ್ಯ ಮಂತ್ರಿಗಳು ಕೊಟ್ಟಿದ್ದಾರೆಂದು ನಳಿನ್-ಶೋಭಾ ಗ್ಯಾಂಗು ಹೇಳುತ್ತಿದೆ. ಸ್ವತಃ ವೈದ್ಯರಾಗಿರುವ ಹರ್ಷವರ್ಧನ್ ಅಷ್ಟು ಸುಲಭಕ್ಕೆ ನಳಿನ್-ಶೋಭಾ ವಗೈರೆಗಳ ಮಾತಿಗೆ ಸೊಪ್ಪು ಹಾಕುವ ಪೈಕಿ ಅಲ್ಲ. ಎನ್‍ಡಿಎ-1 ಸರ್ಕಾರದಲ್ಲಿ ಆರೋಗ್ಯ ಮಂತ್ರಿಯಾಗಿದ್ದಾಗ ಸಿಗರೇಟು ಲಾಬಿ ಎದುರು ಹಾಕಿಕೊಂಡಿದ್ದಕ್ಕೆ ಹರ್ಷವರ್ಧನ್ ಆ ಖಾತೆಯೇ ಬಿಡಬೇಕಾಗಿ ಬಂದಿತ್ತು. ಮನವಿಕೊಟ್ಟು ಕೈತೊಳೆದುಕೊಂಡಿರುವ ನಳಿನ್-ಶೋಭಾ ಗ್ಯಾಂಗು ಅಡಿಕೆ ಬೆಳೆಗಾರರಿಗೆ ನೆಮ್ಮದಿ ಸಿಗುವ ತನಕ ಹೋರಾಡುತ್ತಾರೆಂಬ ನಂಬಿಕೆ ಯಾರಿಗೂ ಇಲ್ಲ. ವಿಜಯಾ ಬ್ಯಾಂಕ್‍ನ್ನು ಸುಖಾಸುಮ್ಮನೆ ಗುಜರಾತಿ ಮಾರ್ವಾಡಿಗಳ ಬ್ಯಾಂಕ್ ಆಫ್ ಬರೋಡಾದಲ್ಲಿ ವಿಲೀನ ಮಾಡುವುದು ತಡೆಯಲಾಗದ ನಳಿನ್‍ನಷ್ಟೇ “ಕೆಚ್ಚು” ಇರುವ ಶೋಭಾ, ಮಾಣಿ, ರಾಘು, ಸಿದ್ದೇಶ್ವರ್‍ಗಳಿಗೆ ಗುಟ್ಕಾ ಮಾಫಿಯಾಕ್ಕೆ ತಿರುಗಿನಿಲ್ಲುವ ತಾಕತ್ತು ಅದೆಲ್ಲಿಂದ ಬಂದೀತು? ಹಾಗಂತ ಅಡಿಕೆ ವಲಯ ಮಾತಾಡಿಕೊಳ್ಳುತ್ತಿದೆ!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...