Homeಕರ್ನಾಟಕಅಡಿಕೆ ಬೆಳೆಗಾರರಿಗೆ ಬಿಜೆಪಿಯ ನಂಬಿಕೆದ್ರೋಹ

ಅಡಿಕೆ ಬೆಳೆಗಾರರಿಗೆ ಬಿಜೆಪಿಯ ನಂಬಿಕೆದ್ರೋಹ

- Advertisement -
- Advertisement -

ಅಡಿಕೆ ಆರೋಗ್ಯಕ್ಕೆ ಹಾನಿಕಾರಕವಾ? ಕ್ಯಾನ್ಸರ್‍ಕಾರಕವಾ? ಕೇಂದ್ರ ಬಿಜೆಪಿ ಸರ್ಕಾರದ ಆರೋಗ್ಯ ಇಲಾಖೆಯ ಸಹಾಯಕ ಮಂತ್ರಿ ಅಶ್ವಿನಿಕುಮಾರ್ ಚೌಬೆ ಲೋಕಸಭೆಯಲ್ಲೇ ಇಂತದ್ದೊಂದು ಹೇಳಿಕೆ ನೀಡಿ ಅಡಿಕೆ ಬೆಳೆಗಾರರ ಮೇಲೆಯೇ ದಾಳಿ ಮಾಡಿದೆ. ಅಡಿಕೆಯ ಮಾನಾಪಮಾನ ಸುದ್ದಿಯಾಗುತ್ತಿದ್ದಂತೆಯೇ ಅಮಾಯಕ ಅಡಿಕೆ ಬೆಳೆಗಾರರು ಬೆಚ್ಚಿಬಿದ್ದಿದ್ದಾರೆ.

ಇದೇ ತಿಂಗಳ 12ರಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಅಡಿಕೆ ಕಾರ್ಸಿನೋಜೆನಿಕ್ (ಕ್ಯಾನ್ಸರ್‍ಕಾರಕ) ಎಂದು ಲೋಕಸಭೆಯಲ್ಲಿ ತಿಳಿಸಿದೆ! ಈ ಸಂಗತಿ ತಿಳಿಯುತ್ತಿದ್ದಂತೆಯೇ ಅಡಿಕೆ ಬೆಳೆಗಾರರು ಕಂಗಾಲಾಗಿದ್ದಾರೆ. ಕೇಂದ್ರ ಬಜೆಟ್ ನಂತರ ಅಡಿಕೆ ಧಾರಣೆ ಏರಿಕೆಯಾಗಿ ಮಾರುಕಟ್ಟೆ ಸ್ಥಿರತೆಯತ್ತ ಸಾಗಬಹುದೆಂದು ನಿರೀಕ್ಷಿಸಿದ್ದ ರೈತರು ಅಸ್ಥಿರತೆ ಭಯದಿಂದ ಹೌಹಾರಿದ್ದಾರೆ. ತಾನೆಂಥ ದ್ರೋಹಿಗಳನ್ನು ಸಂಸದರಾಗಿ ಮತ್ತೆ-ಮತ್ತೆ ಗೆಲ್ಲಿಸಿ ಕಳಿಸುತ್ತಿದ್ದೇವೆಂದು ಹಣೆಹಣೆ ಚಚ್ಚಿಕೊಳ್ಳುತ್ತಿದ್ದಾರೆ!!

ಗುಜರಾತ್ (ಗುಟ್ಕಾ ಮಾಫಿಯಾ ಇರುವುದೇ ಇಲ್ಲಿ)ನ ಖೇಡಾ ಕ್ಷೇತ್ರದ ಸಂಸದ ದೇವುಸಿಂಗ್ ಚೌಹಾಣ್-ಅಡಿಕೆ ಸೇವನೆ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆಂಬ ವರದಿಗಳು ಇರುವುದು ನಿಜವಾ? ಎಂಬ ಪ್ರಶ್ನೆ ಆರೋಗ್ಯ ಮಂತ್ರಿಗೆ ಕೇಳಿದ್ದರು. ಈ ಪ್ರಶ್ನೆಗೆ ಪಾರ್ಲಿಮೆಂಟ್‍ನಲ್ಲಿ ಉತ್ತರಿಸಿರುವ ಆರೋಗ್ಯ ಇಲಾಖೆಯ ಸಹಾಯಕ ಮಂತ್ರಿ ಅಶ್ವಿನಿಕುಮಾರ್ ಚೌಬೆ-ಅಡಿಕೆ ದೇಹದ ವಿವಿಧ ಅಂಗಗಳ ಮೇಲೆ ದುಷ್ಪರಿಣಾಮ ಬೀರುತ್ತದೆ. ಬಾಯಿ, ಅನ್ನನಾಳ, ಗಂಟಲು ಮತ್ತಿತರ ಅಂಗಗಳಿಗೆ ಕ್ಯಾನ್ಸರ್ ತಗಲುವಂತೆ ಅಡಿಕೆ ಮಾಡುತ್ತದೆಂದು ಕೆಲವು ಅಧ್ಯಯನದಿಂದ ತಿಳಿದುಬಂದಿದೆಯೆಂದು ಹೇಳಿದ್ದಾರೆ. ಮಂತ್ರಿಗಳ ಈ ಮಾತಿಂದ ಅಡಿಕೆ ಮಾರುಕಟ್ಟೆಯಲ್ಲಿ ಸಣ್ಣ ತಲ್ಲಣ ಶುರುವಾಗಿದೆ.

ಕರ್ನಾಟಕದಲ್ಲಿ ಪ್ರತಿ ವರ್ಷ ನಾಲ್ಕು ಲಕ್ಷ ಟನ್ ಅಡಿಕೆ ಬೆಳೆಯಲಾಗುತ್ತಿದೆ. ಇದು ದೇಶದಲ್ಲಿ ಉತ್ಪಾದನೆಯಾಗುವ ಒಟ್ಟೂ ಅಡಿಕೆಯಲ್ಲಿ ಶೇಕಡಾ ಅರ್ಧದಷ್ಟು! ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ ಜಿಲ್ಲೆಯಲ್ಲಿ ಅಡಿಕೆ ಜೀವನಾಧಾರ ವಾಣಿಜ್ಯ ಬೆಳೆ. ಮಲೆನಾಡಿನ ತೋಟಿಗರು ಬದುಕು ಕಟ್ಟಿಕೊಂಡಿರುವುದೇ ಅಡಿಕೆ ವಹಿವಾಟಿನ ಮೇಲೆ. ಹೀಗಾಗಿ ತೋಟಿಗರು ಕೇಂದ್ರ ಸರ್ಕಾರದ ನಡೆಯಿಂದ ಸಹಜವಾಗಿಯೇ ಆತಂಕಗೊಂಡಿದ್ದಾರೆ. ಅಡಿಕೆ ಬಗ್ಗೆ ಹಲವು ಸಲ ವಿವಾದ ಎದ್ದಿದೆ. ಹಾಗಂತ ಆಗೆಲ್ಲ ಅಡಿಕೆ ಧಾರಣೆ ಮೇಲೆ ಕೆಟ್ಟ ಪರಿಣಾಮವಾಗಿ ಮಾರುಕಟ್ಟೆಯೇನೂ ಕುಸಿದಿಲ್ಲ. ಆದರೆ ದಲ್ಲಾಳಿಗಳು-ಮಧ್ಯವರ್ತಿಗಳು ಈ ಗೊಂದಲದ ಲಾಭ ಎತ್ತಿದ್ದಾರೆ. ಇದರಲ್ಲಿ ರಾಜಕಾರಣಿಗಳೂ ಹಿಂದೆ ಬಿದ್ದವರಲ್ಲ!

ಅಡಿಕೆ ತೋಟಿಗರಲ್ಲಿ ಅಲ್ಲೋಲಕಲ್ಲೋಲ ಮಾಡಿದ್ದು 2011ರಲ್ಲಿ. ಆಗ ಕೇಂದ್ರದಲ್ಲಿ ಯುಪಿಎ-2 ಅಧಿಕಾರದಲ್ಲಿತ್ತು. ಆರೋಗ್ಯಕ್ಕೆ ಹಾನಿಕರವಾದ ಅಂಶಗಳು ಅಡಿಕೆಯಲ್ಲಿದೆಯೆಂದು ಅಂದು ಕೇಂದ್ರ ಸರ್ಕಾರ ಸುಪ್ರೀಮ್ ಕೋರ್ಟ್‍ಗೆ ಅಫಿಡವಿಟ್ ಸಲ್ಲಿಸಿತ್ತು. ಇದನ್ನು ಬಿಜೆಪಿಗರು ರಾಜಕೀಯಕ್ಕೆ ಬಳಸಿಕೊಂಡು ಕಾಂಗ್ರೆಸ್ ಅಡಿಕೆ ಬೆಳಗಾರರ ಶತ್ರುವೆಂದು ಬಿಂಬಿಸಿತು. ಅಡಿಕೆ ನಿಷೇಧಕ್ಕೆ ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಪುಕಾರು ಹಬ್ಬಿಸಿ ವ್ಯವಸ್ಥಿತವಾಗಿ ಅಡಿಕೆ ಬೆಳೆಗಾರರು ಕಾಂಗ್ರೆಸ್ ವಿರುದ್ದ ತಿರುಗಿಬೀಳುವಂತೆ ಮಾಡಲಾಯಿತು.
ಅಡಿಕೆ ನಿಷೇಧಿಸುವ ಯೋಚನೆಯಿಲ್ಲ ಎಂದು ಯುಪಿಎ ಸರ್ಕಾರ ಸ್ಪಷ್ಟಪಡಿಸಿತಾದರು ಬಿಜೆಪಿ ಅಪಪ್ರಚಾರದ ಮುಂದೆ ಅದು ಬೆಳೆಗಾರರನ್ನು ಇಂಪ್ರೆಸ್ ಮಾಡಲೇ ಇಲ್ಲ. ಅತ್ತ ಕಾಂಗ್ರೆಸ್ ಆಡಳಿತಗಾರರಿಂದ ರೈತರ ಮನಸ್ಸು ಗೆಲ್ಲುವ ಕೆಲಸವೂ ಆಗಲಿಲ್ಲ. ಅಂದರೆ ಸುಪ್ರೀಂ ಕೋರ್ಟ್‍ಗೆ- “ಅಡಿಕೆ ಆರೋಗ್ಯಕ್ಕೆ ಹಾನಿಕರ” ಎಂದು ಸರ್ಕಾರ ಸಲ್ಲಿಸಿದ್ದ ಅಫಿಡವಿಟ್ ಹಿಂಪಡೆವ ಪ್ರಕ್ರಿಯೆ ಶುರುವಾಗಲೇ ಇಲ್ಲ. ಇದು ಬಿಜೆಪಿಗೆ 2014ರ ಪಾರ್ಲಿಮೆಂಟ್ ಇಲೆಕ್ಷನ್‍ನಲ್ಲಿ ವರವಾಗಿ ಪರಿಣಮಿಸಿತು, ಅಡಿಕೆ ಕೃಷಿ ಪ್ರದೇಶದಲ್ಲಿ!!

ಉತ್ತರ ಕನ್ನಡದ ಅನಂತ್ ಕುಮಾರ್ ಹೆಗಡೆ, ಶಿವಮೊಗ್ಗೆಯ ರಾಘು, ಉಡುಪಿ-ಚಿಕ್ಕಮಗಳೂರಿನ ಬೇಬಿಯಕ್ಕ ಯಾನೆ ಶೋಭಾ ಕರಂದ್ಲಾಜೆ, ದಾವಣಗೆರೆಯ ಸಿದ್ದೇಶ್ವರ್, ಮಂಗಳೂರಿನ ನಳಿನ್ ಕಟೀಲು ಅಡಿಕೆ ಬೆಳೆಗಾರರ ಬಚಾಯಿಸುವ ಭರವಸೆ ಕೊಟ್ಟೇ ಗೆದ್ದು ಸಂಸದರಾದರು.
ಗೆಲ್ಲುತ್ತಿದ್ದಂತೆಯೇ ಈ ಪಂಚ ಪ್ರಚಂಡರಿಗೆ ಅಡಿಕೆ ಬೆಳೆಗಾರರು ಮರೆತೇ ಹೋದದ್ದು ದುರಂತ! ತಮ್ಮದೇ ಎನ್‍ಡಿಎ ಸರ್ಕಾರ ಅಧಿಕಾರದಲ್ಲಿದ್ದರು ಅಡಿಕೆ ಮಾರಕ ಎಂದು ಸುಪ್ರೀಮ್‍ಗೆ ಸಲ್ಲಿಕೆಯಾಗಿದ್ದ ಅಫಿಡವಿಟ್ ವಾಪಸ್ ಪಡೆಯುವ ಪ್ರಯತ್ನವನ್ನೇ ಇವರ್ಯಾರು ಮಾಡಲಿಲ್ಲ. ಸಂಸತ್‍ನಲ್ಲಿ ಅಡಿಕೆ ಬೆಳೆ ಏರಿಯಾದ ಯಾವ ಸಂಸದನೂ ತೋಟಗಾರಿಕೆ ಬಗ್ಗೆ ಉಸಿರೆತ್ತಲಿಲ್ಲ. ಕಾನೂನಿಗೆ ತಿದ್ದುಪಡಿ ತಂದು ಅಡಿಕೆಯನ್ನು ತಂಬಾಕು ಪಟ್ಟಿಯಿಂದ ಹೊರತರುವ ಹೊಣೆ ತಮ್ಮದೆಂದು ಆಶ್ವಾಸನೆ ಕೊಟ್ಟು ಗೆದ್ದಿದ್ದ ಕೃತಜ್ಞೆಯೂ ಇವರಿಗಿಲ್ಲವಾಯಿತು. ಅಡಿಕೆ ಬೆಳೆಗಾರರ ಯಾಮಾರಿಸಿ ಸಂಸದರಾಗಿದ್ದವರ ಉದಾಸೀನದ ಒಟ್ಟೂ ಪರಿಣಾಮವೆಂಬಂತೆ 2017ರ ಡಿಸೆಂಬರ್‍ನಲ್ಲಿ ಅಂದಿನ ಆರೋಗ್ಯಮಂತ್ರಿಣಿ ಅನುಪ್ರಿಯಾ ಪಟೇಲ್ ಅಡಿಕೆಯು ಬಾಯಿಕ್ಯಾನ್ಸರ್ ತರುತ್ತದೆಂದು ಲೋಕಸಭೆಯಲ್ಲೇ ಯಾವ ಮುಲಾಜಿಲ್ಲದೆ ಹೇಳಿಬಿಟ್ಟರು.

ಆಗಲೂ ಅನಂತ್ಮಾಣಿ, ಶೋಭಕ್ಕ, ಕಟೀಲು, ಬಸ್‍ಸ್ಟ್ಯಾಂಡ್ ರಾಘು, ಸುಫಾರಿ ಸರದಾರ ಸಿದ್ದೇಶ್ವರ್ ತಲೆ ಕೆಡಿಸಿಕೊಳ್ಳಲೇ ಇಲ್ಲ. 2019ರ ಚುನಾವಣೆ ವೇಳೆಗೆ ಧರ್ಮ ಮತು ಪಾಕಿಸ್ತಾನ್ ದುಷ್ಮನಿಯನ್ನು ಮುಂದೆ ಮಾಡಿದ್ದರಿಂದ ಯಾಮಾರಿದ ಜನ ಈ ಪಂಚರನ್ನೇ ಮತ್ತೆ ಸಂಸತ್ತಿಗೆ ಕಳಿಸಿದ್ದಾರೆ. ಈ ಬಾರಿಯಾದರೂ ತಮ್ಮ ನೋವಿಗೆ ಸ್ಪಂದಿಸಬಹುದೆಂದು ಭಾವಿಸಿದ್ದ ತೋಟಿಗರಿಗೆ ಮತ್ತದೇ ಆಘಾತ ಆಗಿದೆ!!
ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಆ ಮಾತು ಹೇಳುತ್ತಿದ್ದಂತೆಯೇ ಅಡಿಕೆ ಬೆಳೆ ಪ್ರದೇಶದ ಮಂದಿ ತಮ್ಮ ಸಂಸದರಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಗಡಿಬಿಡಿಗೆ ಬಿದ್ದಿರುವ ಶೋಭಕ್ಕ, ಕಟೀಲು, ಸಿದ್ದೇಶ್ವರ ತಂಡ ಕೇಂದ್ರ ಆರೋಗ್ಯ ಮಂತ್ರಿ ಹರ್ಷವರ್ಧನ್ ಭೇಟಿ ಮಾಡಿದ ಫೋಟೋ ಹೊರಹಾಕಿ ಮುಖ ಉಳಿಸಿಕೊಳ್ಳಲು ತಿಪ್ಪರಲಾಗ ಹಾಕುತ್ತಿದೆ.

ಸುಪ್ರೀಮ್ ಕೋರ್ಟ್‍ಗೆ ಅಡಿಕೆ ಆರೋಗ್ಯಕ್ಕೆ ಹಾನಿಕಾರಕ ಎಂದು ಸಲ್ಲಿಸಲಾಗಿರುವ ಅಫಿಡವಿಟ್ ಹಿಂಪಡೆಯುವ ಭರವಸೆ ಆರೋಗ್ಯ ಮಂತ್ರಿಗಳು ಕೊಟ್ಟಿದ್ದಾರೆಂದು ನಳಿನ್-ಶೋಭಾ ಗ್ಯಾಂಗು ಹೇಳುತ್ತಿದೆ. ಸ್ವತಃ ವೈದ್ಯರಾಗಿರುವ ಹರ್ಷವರ್ಧನ್ ಅಷ್ಟು ಸುಲಭಕ್ಕೆ ನಳಿನ್-ಶೋಭಾ ವಗೈರೆಗಳ ಮಾತಿಗೆ ಸೊಪ್ಪು ಹಾಕುವ ಪೈಕಿ ಅಲ್ಲ. ಎನ್‍ಡಿಎ-1 ಸರ್ಕಾರದಲ್ಲಿ ಆರೋಗ್ಯ ಮಂತ್ರಿಯಾಗಿದ್ದಾಗ ಸಿಗರೇಟು ಲಾಬಿ ಎದುರು ಹಾಕಿಕೊಂಡಿದ್ದಕ್ಕೆ ಹರ್ಷವರ್ಧನ್ ಆ ಖಾತೆಯೇ ಬಿಡಬೇಕಾಗಿ ಬಂದಿತ್ತು. ಮನವಿಕೊಟ್ಟು ಕೈತೊಳೆದುಕೊಂಡಿರುವ ನಳಿನ್-ಶೋಭಾ ಗ್ಯಾಂಗು ಅಡಿಕೆ ಬೆಳೆಗಾರರಿಗೆ ನೆಮ್ಮದಿ ಸಿಗುವ ತನಕ ಹೋರಾಡುತ್ತಾರೆಂಬ ನಂಬಿಕೆ ಯಾರಿಗೂ ಇಲ್ಲ. ವಿಜಯಾ ಬ್ಯಾಂಕ್‍ನ್ನು ಸುಖಾಸುಮ್ಮನೆ ಗುಜರಾತಿ ಮಾರ್ವಾಡಿಗಳ ಬ್ಯಾಂಕ್ ಆಫ್ ಬರೋಡಾದಲ್ಲಿ ವಿಲೀನ ಮಾಡುವುದು ತಡೆಯಲಾಗದ ನಳಿನ್‍ನಷ್ಟೇ “ಕೆಚ್ಚು” ಇರುವ ಶೋಭಾ, ಮಾಣಿ, ರಾಘು, ಸಿದ್ದೇಶ್ವರ್‍ಗಳಿಗೆ ಗುಟ್ಕಾ ಮಾಫಿಯಾಕ್ಕೆ ತಿರುಗಿನಿಲ್ಲುವ ತಾಕತ್ತು ಅದೆಲ್ಲಿಂದ ಬಂದೀತು? ಹಾಗಂತ ಅಡಿಕೆ ವಲಯ ಮಾತಾಡಿಕೊಳ್ಳುತ್ತಿದೆ!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...