Homeಕರ್ನಾಟಕಬಿಜೆಪಿಗರ ತಲೆಯಲ್ಲಿ ಏನೂ ಇಲ್ಲ, ಅವರಿಗೆ ಸಂಸದೀಯ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲ: ಸಿಎಂ

ಬಿಜೆಪಿಗರ ತಲೆಯಲ್ಲಿ ಏನೂ ಇಲ್ಲ, ಅವರಿಗೆ ಸಂಸದೀಯ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲ: ಸಿಎಂ

- Advertisement -
- Advertisement -

‘ಬಜೆಟ್ ಓದಲು ಶುರುವಾಗುವ ಮೊದಲೇ ಬಿಜೆಪಿ ಏನಿಲ್ಲಾ ಏನಿಲ್ಲಾ ಅಂತ ರಾಗ ಎಳೆದರು, ಅವರ ತಲೆಯಲ್ಲಿ ಏನೂ ಇಲ್ಲ ಎಂದು ತೋರಿಸಿದ್ದಾರೆ. ಬಡವರ ಕೊಳ್ಳುವ ಶಕ್ತಿ ಹೆಚ್ಚಾಗುವ ಗುರಿ ಇಟ್ಟುಕೊಂಡು ಯೋಜನೆಗಳನ್ನು ರೂಪಿಸಿದ್ದೇವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು 2024-25ನೇ ಸಾಲಿನ ಆಯವ್ಯಯವನ್ನು ಮಂಡಿಸಿದ ನಂತರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ‘ರಾಜ್ಯದ ಬಡವರು, ಮಹಿಳೆಯರು, ಯುವಕರು, ಪರಿಶಿಷ್ಟ ಜಾತಿ , ವರ್ಗದವರು, ಅಲ್ಪಸಂಖ್ಯಾತರಿಗೆ ಕೊಂಡುಕೊಳ್ಳುವ ಶಕ್ತಿ ಹೆಚ್ಚು ಮಾಡುವ ಪ್ರಯತ್ನ ಹಾಗೂ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ನೀಡುವ ಪ್ರಯತ್ನವೂ ಬಜೆಟ್ ನಲ್ಲಿ ಆಗಿದೆ’ ಎಂದು ತಿಳಿಸಿದರು.

‘ದೇಶದಲ್ಲಿ ನಿರುದ್ಯೋಗ, ಹಣದುಬ್ಬರುದ ಸಮಸ್ಯೆಗಳಿಂದ ಬಡವರು ಜೀವನ ಸಾಗಿಸುವುದು ಕಷ್ಟವಾಗಿದೆ. ಬಡವರ ಕೊಳ್ಳುವ ಶಕ್ತಿಯನ್ನು ಹೆಚ್ಚು ಮಾಡಲು ಗ್ಯಾರಂಟಿ ಯೋಜನೆಗಳನ್ನು ರೂಪಿಸಲಾಗಿದೆ. ಈ ಆರ್ಥಿಕ ವರ್ಷದಲ್ಲಿ ನಾವು ಅಧಿಕಾರಕ್ಕೆ ಬಂದು 9 ತಿಂಗಳಾಗುವ ಮೊದಲೇ ನಾವು ಜನತೆಗೆ ಕೊಟ್ಟಿದ್ದ ಭರವಸೆಗಳನ್ನು ಈಡೇರಿಸಲಾಗಿದೆ. ಇದರೊಂದಿಗೆ ಕೃಷಿ, ನೀರಾವರಿ, ಲೋಕೋಪಯೋಗಿ, ಇಂಧನ, ಗ್ರಾಮೀಣಾಭಿವೃದ್ಧಿ, ಬರಗಾಲ ಎಲ್ಲವನ್ನೂ ಸಮರ್ಥವಾಗಿ ನಿಭಾಯಿಸುವ ದೃಷ್ಟಿಯಿಂದ ಹಾಗೂ ಅಭಿವೃದ್ಧಿಗೆ ಹಣ ಕೊಡುವ ಕೆಲಸವನ್ನೂ ಮಾಡಲಾಗಿದೆ’ ಎಂದು ವಿವರಿಸಿದರು.

ಅಭಿವೃದ್ಧಿಗೂ ಅನುದಾನ

2024-25 ನೇ ಸಾಲಿಗೆ 3,71,383 ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಲಾಗಿದೆ. ಕಳೆದ ವರ್ಷ ಬಜೆಟ್ ಗಾತ್ರ 3,27,747 ಕೋಟಿ ರೂ.ಇತ್ತು. ಕಳೆದ ಬಜೆಟ್ ಗಿಂತ 46,636 ಕೋಟಿ ರೂ. ಹೆಚ್ಚಾಗಿದೆ. ಜುಲೈನಲ್ಲಿ ಮಂಡಿಸಿದ ಬಜೆಟ್ ಗಾತ್ರಕ್ಕಿಂತ ಬೆಳವಣಿಗೆಯಲ್ಲಿ ಶೇ. 13 ರಷ್ಟು ಬೆಳವಣಿಗೆಯಾಗಿದೆ. ಆರ್ಥಿಕವಾಗಿ ದಿವಾಳಿಯಾಗಿದೆ , ಗ್ಯಾರಂಟಿ ಜಾರಿಯಿಂದಾಗಿ ಮತ್ತು ಮಹಿಳೆಯರು , ಬಡವರಿಗೆ ಅವಮಾನವಾಗುವ ರೀತಿಯಲ್ಲಿ ‘ಬಿಟ್ಟಿ ಗ್ಯಾರಂಟಿ’ ಎಂಬ ಟೀಕೆ ಬಂದಿದೆ. ಈ ವರ್ಷ 36,000 ಕೋಟಿ ರೂ. ಗ್ಯಾರಂಟಿಗಳಿಗೆ ಕೊಟ್ಟಿದ್ದರೂ ಕೂಡ ಅಭಿವೃದ್ಧಿಗೂ ಅನುದಾನವನ್ನು ಮೀಸಲಿರಿಸಿದ್ದೇವೆ. ಬರಗಾಲ ನಡುವೆಯೂ 240 ತಾಲ್ಲೂಕುಗಳಲ್ಲಿ 223 ತಾಲ್ಲೂಕುಗಳು ಬರಪೀಡಿತವಾಗಿದ್ದು , ಸುಮಾರು 35,000 ಕೋಟಿ ರೂ. ಆಹಾರದ ಉತ್ಪಾದನೆಯಲ್ಲಿ ನಷ್ಟವಾಗಿದೆ. 18171 ಕೋಟಿ ರೂ.ಗಳನ್ನು ಎನ್ ಡಿ ಆರ್ ಎಫ್ ಮಾರ್ಗಸೂಚಿಗಳ ಪ್ರಕಾರ ಬರಪರಿಹಾರವನ್ನು ಕೇಂದ್ರ ಸರ್ಕಾರವನ್ನು ಕೋರಲಾಗಿದೆ. ಎನ್.ಡಿ.ಆರ್ ಎಫ್ ಅನುದಾನ ನಿಗದಿ ಮಾಡುವುದು ಹಣಕಾಸು ಆಯೋಗದವರು. ಅದು ರಾಜ್ಯದಿಂದ ಸಂಗ್ರಹಿಸಿರುವ ಹಣ. ಕೇಂದ್ರ ಸರ್ಕಾರದ ಅನುದಾನವಲ್ಲ. ಐದು ತಿಂಗಳಾದರೂ ಒಂದು ರೂಪಾಯಿಯನ್ನೂ ಬಿಡುಗಡೆ ಮಾಡಿಲ್ಲ, ಸಭೆಯನ್ನೂ ಕರೆದಿಲ್ಲ ಎಂದು ವಿವರಿಸಿದರು.

ಬಿಜೆಪಿಗೆ ಸಂಸದೀಯ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲ

‘ಬಿಜೆಪಿಯವರು ಬಾಯಿಗೆ ಬಂದಂತೆ ಮಾತನಾಡುತ್ತಾರೆ. ವಿಧಾನಸಭೆಯಲ್ಲಿ ಬಜೆಟ್ ಮಂಡಿಸುವಾಗ ವಾಕ್ ಔಟ್ ಮಾಡಿದ ನಿದರ್ಶನ ಇಲ್ಲ. ಬಜೆಟ್ ಓದಲು ಪ್ರಾರಂಭ ಮಾಡಿದ ಕೂಡಲೇ ಸುನೀಲ್ ಕುಮಾರ್ ಅವರು ಏನಿಲ್ಲ ಏನಿಲ್ಲ ಎಂದು ಘೋಷಣೆ ಕೂಗುತ್ತಿದ್ದರು. ಬಿಜೆಪಿಗೆ ಸಂಸದೀಯ, ಪ್ರಜಾಪ್ರಭುತ್ವ ಹಾಗೂ ಸಂವಿಧಾನಾತ್ಮಕ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲ. ಅವರ ತಲೆ ತುಂಬ ರಾಜಕೀಯ ಮಂಜು ತುಂಬಿದೆ. ಕಾಮಾಲೆ ರೋಗಿಗಳಿಗೆ ಕಂಡಿದ್ದೆಲ್ಲಾ ಹಳದಿಯಂತೆ ಆಗಿದೆ. ರಾಜಕೀಯ ಹೇಳಿಕೆ ಬೇಡ ಎನ್ನುವುದಿಲ್ಲ. ಆದರೆ, ಟೀಕೆಗಳು ಆರೋಗ್ಯಕರವಾಗಿರಬೇಕು. ಟೀಕೆ ಮಾಡುವ ಸಲುವಾಗಿಯೇ ಟೀಕೆ ಮಾಡುತ್ತಾರೆ; ಪ್ಲಕಾರ್ಡ್ ಹಿಡಿದಿದ್ದರು. ಬಜೆಟ್ ಕೇಳಬಾರದು ಎಂದು ಯೋಚಿಸಿಕೊಂಡೇ ಬಂದಿದ್ದರು. ನಾನು ವಸ್ತುಸ್ಥಿತಿಯನ್ನು ಹೇಳಿದರೆ ಅವರಿಗೆ ಅದು ನುಂಗಲಾರದ ತುತ್ತು. ಸತ್ಯ ಹೇಳಿದರೆ ತಡೆದುಕೊಳ್ಳಲು ಆಗುವುದಿಲ್ಲ ಎಂದರು.

ಕನ್ನಡಿಗರಿಗೆ ಅನ್ಯಾಯವಾದರೂ ಸುಮ್ಮನಿರಬೇಕೇ?

‘ಕೇಂದ್ರದಿಂದ ರಾಜ್ಯಕ್ಕಾದ ಅನ್ಯಾಯವನ್ನು ಜನರಿಗೆ ಹೇಳುವುದು ನನ್ನ ಕರ್ತವ್ಯ ಹಾಗೂ ಜವಾಬ್ದಾರಿ. ಅವರು ಕೂಡ ಕೋಲೆಬಸವನ ಹಾಗೆ ತಲೆ ಅಲ್ಲಾಡಿಸದೇ ಕೇಂದ್ರದವರನ್ನು ಕೇಳಬೇಕಿತ್ತು. ಕೋಲಾರ ಸಂಸದ ಮುನಿಸ್ವಾಮಿಯವರು ಅವರು ಸಂಸತ್ತಿನಲ್ಲಿ ಒಂದು ದಿನವೂ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಬಾಯಿಬಿಡಲಿಲ್ಲ. ಐದು ವರ್ಷದಲ್ಲಿ ಒಂದು ಬಾರಿಯಾದರೂ ಮಾತನಾಡಿದ್ದಾರಾ? ಅವರು ಸಂಸದರಾಗಲು ಲಾಯಕ್ಕೇ? ಕೇಂದ್ರ ಸರ್ಕಾರದಿಂದ ನ್ಯಾಯಯುತವಾದದ್ದು ಕೇಳಲು ಇವರಿಗೆ ಸಾಧ್ಯವಿಲ್ಲ ಎಂದರೇ ಏನು ಸೂಚಿಸುತ್ತದೆ. ನಾನು ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದಾಗ , ಕೇಂದ್ರದ ಅನುದಾನವನ್ನು ಪಡೆಯಿರಿ ಎಂದು ಒತ್ತಾಯಿಸಿದ್ದೆ. 15 ನೇ ಹಣಕಾಸು ಆಯೋಗದವರು ವಿಶೇಷ ಅನುದಾನ ₹5495 ಕೋಟಿ ವಿಶೇಷ ಅನುದಾನ ಪಡೆಯಲು ಹೇಳಿದ್ದೆ. ಬೆಂಗಳೂರು ಅಭಿವೃದ್ಧಿಗೆ ₹6000 ಕೋಟಿ ಕೊಟ್ಟಿದ್ದಾರೆ; ಅದನ್ನು ಪಡೆಯಿರಿ ಎಂದು ಹೇಳಿದ್ದೆ. ಒಟ್ಟು ₹11495 ಕೋಟಿ ಶಿಫಾರಸು ಮಾಡಿರುವುದನ್ನು ಒತ್ತಾಯ ಮಾಡಿ ಎಂದು ಅವರಿಗೆ ಒತ್ತಾಯಿಸಿದ್ದೆ. ಕನ್ನಡಿಗರಿಗೆ ಅನ್ಯಾಯವಾದರೂ ಸುಮ್ಮನಿರಬೇಕೇ? ಭದ್ರಾ ಮೇಲ್ದಂಡೆಗೆ 2023-24 ಕೇಂದ್ರ ಬಜೆಟ್ ನಲ್ಲಿ ₹5300 ಕೋಟಿ ಕೊಡುತ್ತೇವೆ ಎಂದಿದ್ದರು. ಅದನ್ನೇ ಇಲ್ಲಿನ ಬಜೆಟ್ ನಲ್ಲಿ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿ ನರೇಂದ್ರ ಮೋದಿಗೆ ಧನ್ಯವಾದಗಳನ್ನು ಅರ್ಪಿಸಿದ್ದರು. ರಾಷ್ಟ್ರೀಯ ಯೋಜನೆಯಾಗಲಿದೆ ಎಂದು ಹೇಳಿದವರು ಇವರೇ, ಆದರೆ ಇನ್ನೂ ಆಗಿಲ್ಲವೆಂದರೆ ಅವರಿಗೆ ಕೋಪ ಏಕೆ? ಇದು ಕನ್ನಡ ಜನರಿಗೆ ಮಾಡುತ್ತಿರುವ ದ್ರೋಹ. ಇದು ಪ್ರಜಾಪ್ರಭುತ್ವದ ವಿರೋಧವಲ್ಲವೇ’ ಎಂದು ಪ್ರಶ್ನಿಸಿದರು.

ರಾಜಕೀಯ ಮಂಜು ಕವಿದಿದೆ

‘ಕೇಂದ್ರ ಹಣಕಾಸು ಸಚಿವೆ ಹಾಗೂ ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಜೆಟ್ ಬಾಷಣದ ಭಾಗವನ್ನು ಓದಿ ಹೇಳಿದ ಮುಖ್ಯಮಂತ್ರಿಗಳು, ಪ್ಲಕಾರ್ಡ್ ಹಿಡಿದು ಬಂದರೆ ಕರ್ನಾಟಕದ ಜನರಿಗೆ ಮಾಡುವ ದ್ರೋಹ ಎಂದರು. ಇದು ಪ್ರಜಾಪ್ರಭುತ್ವ ವಿರೋಧಿ ಅಲ್ಲವೇ ? ನಾನು ಈ ವರ್ಷ ಗ್ಯಾರಂಟಿಗಳಿಗೆ ₹36000 ಕೋಟಿ ಕೊಟ್ಟಿಲ್ಲ ಎಂದು ಸಾಬೀತು ಪಡಿಸಲಿ. ಅಭಿವೃದ್ಧಿ ಕೆಲಸಗಳಿಗೆ ಅನುದಾನ ನೀಡಿಲ್ಲ ಎಂದು ಸಾಬೀತು ಮಾಡಲಿ; ಚರ್ಚೆ ಮಾಡಬಹುದಿತ್ತು. ಅದಕ್ಕೆ ಇವರ ತಲೆಯಲ್ಲಿ ಏನೂ ಇಲ್ಲ, ರಾಜಕೀಯ ಮಂಜು ಕವಿದಿದೆ. ಕನ್ನಡಿಗರ ಜನದ್ರೋಹದ ಕೆಲಸ ಮಾಡಿದ್ದಾರೆ’ ಎಂದರು.

‘ಸಾಲ ಮಾಡಿರುವುದಾಗಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳುತ್ತಾರೆ. ನಾನು ಸ್ವಾತಂತ್ರ್ಯ ಬಂದಾಗಿನಿಂದ ಹಣಕಾಸಿನ ಮಂತ್ರಿಯಾಗಿರುವವರೆಗೆ ಈ ರಾಜ್ಯದ ಮೇಲೆ ₹2,46,000 ಕೋಟಿ ಸಾಲವಿದ್ದು, ನಾನು ಮಾಡಿರುವದು 1.12 ಲಕ್ಷ ಕೋಟಿ ರೂ.ಗಳು ಮಾತ್ರ. ಇವರ ಬಜೆಟ್ ನಲ್ಲಿ ಕಳೆದ ವರ್ಷ 80 ಸಾವಿರ ಕೋಟಿ ರೂ.ಗಳ ಸಾಲ ಮಾಡಿದ್ದಾರೆ’ ಎಂದು ವಿವರಿಸಿದರು.

ಇದನ್ನೂ ಓದಿ; ಬಿಜೆಪಿ-ಜೆಡಿಎಸ್ ಶಾಸಕರಿಂದ ಸಂವಿಧಾನಕ್ಕೆ ಅಪಮಾನ: ಡಿಸಿಎಂ ಡಿ.ಕೆ. ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...