ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಅವರು ಬಿಜೆಪಿ ವಿರುದ್ಧ ತೀವ್ರವಾಗಿ ಟೀಕೆಯನ್ನು ಮಾಡಿದ್ದು, ಹರಿಯಾಣದ ನುಹ್ನಲ್ಲಿ ಹಿಂಸಾಚಾರ ನಡೆದಂತೆ, ವಿಧಾನಸಭಾ ಚುನಾವಣೆಗೆ ಮುನ್ನ ಮಧ್ಯಪ್ರದೇಶದಲ್ಲಿ ಬಿಜೆಪಿ “ಕೋಮು ಗಲಭೆಗಳನ್ನು” ಹುಟ್ಟುಹಾಕಲು ಯೋಜಿಸುತ್ತಿದೆ ಎಂದು ದಿಗ್ವಿಜಯ ಸಿಂಗ್ ಆರೋಪಿಸಿದ್ದಾರೆ.
ಭೋಪಾಲ್ನಲ್ಲಿ ವಕೀಲರ ಸಭೆಯನ್ನುದ್ದೇಶಿಸಿ ಮಾತನಾಡಿದ ಸಿಂಗ್ ಅವರು, ಈ ಜನರು ಹರಿಯಾಣದ ನುಹ್ನಲ್ಲಿ ಕೋಮುಗಲಭೆಗೆ ಕಾರಣವಾದ ರೀತಿಯಲ್ಲಿ, ಮಧ್ಯಪ್ರದೇಶದಲ್ಲಿ ಕೂಡ ಗಲಭೆಗೆ ಪ್ರಚೋದಿಸಲು ಅವರು ಯತ್ನಿಸುತ್ತಿದ್ದಾರೆ ಎಂದು ಸಿಂಗ್ ಹೇಳಿದ್ದಾರೆ.
ಮುಂದಿನ ವಿಧಾನಸಬೆಯಲ್ಲಿ ಬಿಜೆಪಿ ಸೋಲು ನಿಶ್ಚಿತವಾಗಿದ್ದು ಅದಕ್ಕಾಗಿ ಮಧ್ಯಪ್ರದೇಶದಲ್ಲಿ ಬಿಜೆಪಿ ಗಲಭೆಗಳನ್ನು ಸೃಷ್ಟಿಸಲು ಯೋಜಿಸುತ್ತಿದೆ ಎಂದು ಸಿಂಗ್ ಹೇಳಿದರು.
ರಾಜ್ಯದಲ್ಲಿ ಶಿವರಾಜ್ ಸಿಂಗ್ ಚೌಹಾಣ್ ಸರ್ಕಾರದ ವಿರುದ್ಧ ಸಾಕಷ್ಟು ಅಸಮಾಧಾನ ಇರುವುದು ಬಿಜೆಪಿಗೆ ಸ್ವಯಂ ಗೊತ್ತಿದೆ ಎಂದು ಅವರು ಹೇಳಿದ್ದಾರೆ.ಮುಂದಿನ ಚುನಾವನೆಯಲ್ಲಿ ಗೆಲುವನ್ನು ಸಾಧಿಸಿ ನಾವು ರಾಜ್ಯದಲ್ಲಿ ಮುಂದಿನ ಸರ್ಕಾರವನ್ನು ರಚಿಸಲಿದ್ದೇವೆ ಎಂದು ಅವರು ಹೇಳಿದ್ದಾರೆ.
ಈ ತಿಂಗಳ ಆರಂಭದಲ್ಲಿ ಹರಿಯಾಣದ ನುಹ್ನಲ್ಲಿ ನಡೆದ ಘರ್ಷಣೆಯಲ್ಲಿ ಇಬ್ಬರು ಗೃಹ ರಕ್ಷಕರು, ಮಸೀದಿಯ ಇಮಾಮ್ ಸೇರಿದಂತೆ ಕನಿಷ್ಠ ಆರು ಜನರು ಸಾವನ್ನಪ್ಪಿದ್ದರು.
ವಿಶ್ವ ಹಿಂದೂ ಪರಿಷತ್ ಮೆರವಣಿಗೆಯ ಬಳಿಕ ಘರ್ಷಣೆ ಪ್ರಾರಂಭವಾಯಿತು ಮತ್ತು ನಂತರ ಗುರುಗ್ರಾಮ್, ಪಲ್ವಾಲ್ ಮತ್ತು ಹರಿಯಾಣದ ಇತರ ಜಿಲ್ಲೆಗಳಿಗೆ ಹರಡಿತ್ತು. ಹಲವಾರು ವಾಹನಗಳು,ಅಂಗಡಿಗಳಿಗೆ ಉದ್ರಿಕ್ತರ ಗುಂಪು ಬೆಂಕಿ ಹಚ್ಚಿದ್ದವು.
ಇದನ್ನು ಓದಿ: ಸೂಫಿ ಸಂತರಿಗೆ ಮರುನಾಮಕರಣ ಮಾಡಿದ ಸಂಘಪರಿವಾರ: ಮುಸ್ಲಿಮರಿಂದ ಉಪವಾಸ ಸತ್ಯಾಗ್ರಹ