Homeಕರ್ನಾಟಕವರುಣಾದಲ್ಲಿ ದಲಿತ ಹುಡುಗನ ಕೊಂದು, ಕುರುಬರ ತಲೆಗೆ ಕಟ್ಟಲು ಬಿಜೆಪಿ ಯೋಜಿಸಿದೆ: ವಿಶ್ವನಾಥ್

ವರುಣಾದಲ್ಲಿ ದಲಿತ ಹುಡುಗನ ಕೊಂದು, ಕುರುಬರ ತಲೆಗೆ ಕಟ್ಟಲು ಬಿಜೆಪಿ ಯೋಜಿಸಿದೆ: ವಿಶ್ವನಾಥ್

- Advertisement -
- Advertisement -

ವರುಣಾದಲ್ಲಿ ದಲಿತ ಹುಡುಗನ ಕೊಲೆ ಮಾಡಿ, ಅದನ್ನು ಕುರುಬರ ತಲೆಗೆ ಕಟ್ಟುವ ಹುನ್ನಾರವನ್ನು ಬಿಜೆಪಿ ಮಾಡಿದೆ ಎಂದು ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್ ಹೇಳಿದ್ದಾರೆ.

ವರುಣಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಿರುಗುಂದದಲ್ಲಿ ಕಾಂಗ್ರೆಸ್ ಪರ ಪ್ರಚಾರ ನಡೆಸಿರುವ ವೇಳೆ ಮಾತನಾಡಿರುವ ಅವರು, ‘’ವರುಣ ಕ್ಷೇತ್ರದಲ್ಲಿ ಗೆಲ್ಲಲೇಬೇಕೆಂಬ ಹಠಕ್ಕೆ ಬಿದ್ದಿರುವ ಬಿಜೆಪಿ ಚುನಾವಣೆಗೆ ಒಂದೆರಡು ದಿನ ಬಾಕಿ ಇರುವಾಗಲೆ ದಲಿತ ಹುಡುಗನ ಹತ್ಯೆ ಮಾಡಿ ಅದನ್ನು ಕುರುಬರ ತಲೆಗೆ ಕಟ್ಟುವ ಹುನ್ನಾರ ಮಾಡುತ್ತಿದೆ’’ ಎಂದು ಎಚ್ಚರಿಕೆ ನೀಡಿದ್ದಾರೆ.

ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ  ಅವರು ಸಿದ್ದರಾಮಯ್ಯನವರ ಪರ ಪ್ರಚಾರ ಮಾಡುತ್ತಿದ್ದಾರೆ. ವರುಣ ಕ್ಷೇತ್ರದಲ್ಲಿ ಮಾತನಾಡಿದ್ದು, ‘`ನಾನು ಲೋಕಸಭಾ ಸದಸ್ಯ ಆಗಿದ್ದವನು. ನನಗೆ ಹಲವಾರು ಅಧಿಕಾರಿಗಳ ಸಂಪರ್ಕವಿದೆ. ಸಿದ್ದರಾಮಯ್ಯ ವಿರುದ್ಧ ಕುತಂತ್ರ ನಡೆಯುತ್ತಿದೆ’’ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

‘’1978ರಲ್ಲಿ ಇದೇ ರೀತಿ ಆಗಿತ್ತು. ಹೀಗಾಗಿ ಕಾಂಗ್ರೆಸ್ಸಿನವರು ಬಹಳ ಜಾಗೂರೂಕರಾಗಿ ಕೆಲಸ ಮಾಡಬೇಕು. ದಲಿತ ವೋಟುಗಳು ಯಾವುದೇ ಕಾರಣಕ್ಕೂ ವಿಭಜನೆಯಾಗಲ್ಲ. ದಲಿತರು ಕಾಂಗ್ರೆಸ್ ಪರ ನಿಲ್ಲಲಿದ್ದಾರೆ. ಚುನಾವಣೆಯಲ್ಲಿ ಯೋಚನೆ ಮಾಡಿ ಬಹಳ ಹುಷಾರಾಗಿ ಕೆಲಸ ಮಾಡಿದಲ್ಲಿ ಸಿದ್ದರಾಮಯ್ಯ ಗೆಲಲ್ಲಿದ್ದಾರೆ’’ ಎಂದು ಭವಿಷ್ಯ ನುಡಿದಿದ್ದಾರೆ.

ಇದಕ್ಕೂ ಮುನ್ನ ಹಿರಿಯ ಸಾಹಿತಿ ದೇವನೂರ ಮಹಾದೇವ ಅವರ ಜತೆಗೂಡಿ ವರುಣ ಕ್ಷೇತ್ರದಲ್ಲಿ ಪ್ರಚಾರದಲ್ಲಿ ಭಾಗವಹಿಸಿದ್ದರು. ವಿಶ್ವನಾಥ್ ಸದ್ಯ ಬಿಜೆಪಿಯಿಂದ ಸಾಂಸ್ಕೃತಿಕ ಕೋಟಾದಡಿ ವಿಧಾನ ಪರಿಷತ್ ಸದಸ್ಯರಾಗಿ ನಾಮನಿರ್ದೇಶನವಾಗಿದ್ದರು. ತದನಂತರ ಪಕ್ಷದ ಆಂತರಿಕ ಜಗಳದಿಂದ ಬಿಜೆಪಿಯಿಂದ ಅಂತರ ಕಾಯ್ದೊಂಡು ಕಾಂಗ್ರೆಸ್ ಜತೆ ಗುರುತಿಸಿಕೊಂಡಿದ್ದಾರೆ.

ಕಾಂಗ್ರೆಸ್ ಪಕ್ಷದ ಹಿರಿ ತಲೆಗಳಲ್ಲಿ ಒಬ್ಬರಾದ ವಿಶ್ವನಾಥ್ ಅವರು, ಕಾಂಗ್ರೆಸ್ ಪಕ್ಷದ ನಾಯಕ ಸಿದ್ದರಾಮಯ್ಯ ಅವರೊಂದಿಗೆ ಮುನಿಸಿಕೊಂಡು ಜೆಡಿಎಸ್ ಸೇರಿ, ಪಕ್ಷದ ರಾಜ್ಯಧ್ಯಕ್ಷರಾಗಿದ್ದರು. ಆದರೆ, ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ಮೈತ್ರಿ ಸರ್ಕಾರದ ಅವಧಿಯಲ್ಲಿ ನಡೆದ ಆಪರೇಷನ್ ಕಮಲದಲ್ಲಿ ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದರು.

2018ರ ಚುನಾವಣೆ ಬೆನ್ನಲ್ಲೇ ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡಿದ್ದವು. ಎರಡು ಪಕ್ಷದಲ್ಲಿ ಹೊಂದಣಿಕೆ ಸರಳವಾಗಿ ಸಾಗಿತ್ತು ಎನ್ನುವುದು ಮೇಲ್ನೋಟಕ್ಕೆ ಕಂಡರೂ ಎರಡೂ ಪಕ್ಷದ ಸದಸ್ಯರಲ್ಲಿ ವೈಮನಸ್ಸು ಮೂಡಿತ್ತು. ನಂತರದ ಬೆಳವಣಿಗೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್‌ನ ಕೆಲವು ನಾಯಕರು ಮೈತ್ರಿ ಸರ್ಕಾರದ ವಿರುದ್ಧ ಬಂಡೆದ್ದಿದ್ದರು. ಪರಿಣಾಮ ಕುಮಾರಸ್ವಾಮಿ ನೇತೃತ್ವದ ಸರ್ಕಾರ ಬಿದ್ದು ಹೋಗಿತ್ತು. ಬಂಡಾಯವೆದ್ದು ಬಿಜೆಪಿ ಸೇರಿದ್ದ ಶಾಸಕರುಗಳಲ್ಲಿ ಹೆಚ್.ವಿಶ್ವನಾಥ್ ಕೂಡ ಒಬ್ಬರಾಗಿದ್ದರು.

ಹುಣಸೂರು ವಿಧಾನಸಭಾ ವಿಧಾನಸಭಾ ಕ್ಷೇತ್ರದಲ್ಲಿ 2019ರಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ, ಕಾಂಗ್ರೆಸ್ ಅಭ್ಯರ್ಥಿ ಎಚ್.ಪಿ.ಮಂಜುನಾಥ್ ಎದುರು ಸೋತಿದ್ದರು. ಬಳಿಕ ಅವರನ್ನು ಎಂಎಲ್ಸಿ ಮಾಡಲಾಗಿತ್ತು. ಬಿಜೆಪಿಯೊಂದಿಗೆ ಮೊದಲಿನಿಂದಲೂ ಸೈದ್ಧಾಂತಿಕ ಭಿನ್ನಾಭಿಪ್ರಾಯ ವ್ಯಕ್ತಪಡಿಸುತ್ತಾ ಬಂದಿರುವ, ಹಳ್ಳಿಹಳ್ಳಿ ಖ್ಯಾತಿಯ ವಿಶ್ವನಾಥ್, ಬಿಜೆಪಿ ನಾಯಕರ ನಿಲುವುಗಳನ್ನು ಕಟುವಾಗಿ ಟೀಕಿಸುತ್ತಾ ಬಂದಿದ್ದಾರೆ. ಅಂತಿಮವಾಗಿ ಮತ್ತೆ ಕಾಂಗ್ರೆಸ್ಸಿಗೆ ಮರಳಿದ್ದು, ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...