Homeಕರ್ನಾಟಕವರುಣಾದಲ್ಲಿ ದಲಿತ ಹುಡುಗನ ಕೊಂದು, ಕುರುಬರ ತಲೆಗೆ ಕಟ್ಟಲು ಬಿಜೆಪಿ ಯೋಜಿಸಿದೆ: ವಿಶ್ವನಾಥ್

ವರುಣಾದಲ್ಲಿ ದಲಿತ ಹುಡುಗನ ಕೊಂದು, ಕುರುಬರ ತಲೆಗೆ ಕಟ್ಟಲು ಬಿಜೆಪಿ ಯೋಜಿಸಿದೆ: ವಿಶ್ವನಾಥ್

- Advertisement -
- Advertisement -

ವರುಣಾದಲ್ಲಿ ದಲಿತ ಹುಡುಗನ ಕೊಲೆ ಮಾಡಿ, ಅದನ್ನು ಕುರುಬರ ತಲೆಗೆ ಕಟ್ಟುವ ಹುನ್ನಾರವನ್ನು ಬಿಜೆಪಿ ಮಾಡಿದೆ ಎಂದು ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್ ಹೇಳಿದ್ದಾರೆ.

ವರುಣಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಿರುಗುಂದದಲ್ಲಿ ಕಾಂಗ್ರೆಸ್ ಪರ ಪ್ರಚಾರ ನಡೆಸಿರುವ ವೇಳೆ ಮಾತನಾಡಿರುವ ಅವರು, ‘’ವರುಣ ಕ್ಷೇತ್ರದಲ್ಲಿ ಗೆಲ್ಲಲೇಬೇಕೆಂಬ ಹಠಕ್ಕೆ ಬಿದ್ದಿರುವ ಬಿಜೆಪಿ ಚುನಾವಣೆಗೆ ಒಂದೆರಡು ದಿನ ಬಾಕಿ ಇರುವಾಗಲೆ ದಲಿತ ಹುಡುಗನ ಹತ್ಯೆ ಮಾಡಿ ಅದನ್ನು ಕುರುಬರ ತಲೆಗೆ ಕಟ್ಟುವ ಹುನ್ನಾರ ಮಾಡುತ್ತಿದೆ’’ ಎಂದು ಎಚ್ಚರಿಕೆ ನೀಡಿದ್ದಾರೆ.

ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ  ಅವರು ಸಿದ್ದರಾಮಯ್ಯನವರ ಪರ ಪ್ರಚಾರ ಮಾಡುತ್ತಿದ್ದಾರೆ. ವರುಣ ಕ್ಷೇತ್ರದಲ್ಲಿ ಮಾತನಾಡಿದ್ದು, ‘`ನಾನು ಲೋಕಸಭಾ ಸದಸ್ಯ ಆಗಿದ್ದವನು. ನನಗೆ ಹಲವಾರು ಅಧಿಕಾರಿಗಳ ಸಂಪರ್ಕವಿದೆ. ಸಿದ್ದರಾಮಯ್ಯ ವಿರುದ್ಧ ಕುತಂತ್ರ ನಡೆಯುತ್ತಿದೆ’’ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

‘’1978ರಲ್ಲಿ ಇದೇ ರೀತಿ ಆಗಿತ್ತು. ಹೀಗಾಗಿ ಕಾಂಗ್ರೆಸ್ಸಿನವರು ಬಹಳ ಜಾಗೂರೂಕರಾಗಿ ಕೆಲಸ ಮಾಡಬೇಕು. ದಲಿತ ವೋಟುಗಳು ಯಾವುದೇ ಕಾರಣಕ್ಕೂ ವಿಭಜನೆಯಾಗಲ್ಲ. ದಲಿತರು ಕಾಂಗ್ರೆಸ್ ಪರ ನಿಲ್ಲಲಿದ್ದಾರೆ. ಚುನಾವಣೆಯಲ್ಲಿ ಯೋಚನೆ ಮಾಡಿ ಬಹಳ ಹುಷಾರಾಗಿ ಕೆಲಸ ಮಾಡಿದಲ್ಲಿ ಸಿದ್ದರಾಮಯ್ಯ ಗೆಲಲ್ಲಿದ್ದಾರೆ’’ ಎಂದು ಭವಿಷ್ಯ ನುಡಿದಿದ್ದಾರೆ.

ಇದಕ್ಕೂ ಮುನ್ನ ಹಿರಿಯ ಸಾಹಿತಿ ದೇವನೂರ ಮಹಾದೇವ ಅವರ ಜತೆಗೂಡಿ ವರುಣ ಕ್ಷೇತ್ರದಲ್ಲಿ ಪ್ರಚಾರದಲ್ಲಿ ಭಾಗವಹಿಸಿದ್ದರು. ವಿಶ್ವನಾಥ್ ಸದ್ಯ ಬಿಜೆಪಿಯಿಂದ ಸಾಂಸ್ಕೃತಿಕ ಕೋಟಾದಡಿ ವಿಧಾನ ಪರಿಷತ್ ಸದಸ್ಯರಾಗಿ ನಾಮನಿರ್ದೇಶನವಾಗಿದ್ದರು. ತದನಂತರ ಪಕ್ಷದ ಆಂತರಿಕ ಜಗಳದಿಂದ ಬಿಜೆಪಿಯಿಂದ ಅಂತರ ಕಾಯ್ದೊಂಡು ಕಾಂಗ್ರೆಸ್ ಜತೆ ಗುರುತಿಸಿಕೊಂಡಿದ್ದಾರೆ.

ಕಾಂಗ್ರೆಸ್ ಪಕ್ಷದ ಹಿರಿ ತಲೆಗಳಲ್ಲಿ ಒಬ್ಬರಾದ ವಿಶ್ವನಾಥ್ ಅವರು, ಕಾಂಗ್ರೆಸ್ ಪಕ್ಷದ ನಾಯಕ ಸಿದ್ದರಾಮಯ್ಯ ಅವರೊಂದಿಗೆ ಮುನಿಸಿಕೊಂಡು ಜೆಡಿಎಸ್ ಸೇರಿ, ಪಕ್ಷದ ರಾಜ್ಯಧ್ಯಕ್ಷರಾಗಿದ್ದರು. ಆದರೆ, ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ಮೈತ್ರಿ ಸರ್ಕಾರದ ಅವಧಿಯಲ್ಲಿ ನಡೆದ ಆಪರೇಷನ್ ಕಮಲದಲ್ಲಿ ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದರು.

2018ರ ಚುನಾವಣೆ ಬೆನ್ನಲ್ಲೇ ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡಿದ್ದವು. ಎರಡು ಪಕ್ಷದಲ್ಲಿ ಹೊಂದಣಿಕೆ ಸರಳವಾಗಿ ಸಾಗಿತ್ತು ಎನ್ನುವುದು ಮೇಲ್ನೋಟಕ್ಕೆ ಕಂಡರೂ ಎರಡೂ ಪಕ್ಷದ ಸದಸ್ಯರಲ್ಲಿ ವೈಮನಸ್ಸು ಮೂಡಿತ್ತು. ನಂತರದ ಬೆಳವಣಿಗೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್‌ನ ಕೆಲವು ನಾಯಕರು ಮೈತ್ರಿ ಸರ್ಕಾರದ ವಿರುದ್ಧ ಬಂಡೆದ್ದಿದ್ದರು. ಪರಿಣಾಮ ಕುಮಾರಸ್ವಾಮಿ ನೇತೃತ್ವದ ಸರ್ಕಾರ ಬಿದ್ದು ಹೋಗಿತ್ತು. ಬಂಡಾಯವೆದ್ದು ಬಿಜೆಪಿ ಸೇರಿದ್ದ ಶಾಸಕರುಗಳಲ್ಲಿ ಹೆಚ್.ವಿಶ್ವನಾಥ್ ಕೂಡ ಒಬ್ಬರಾಗಿದ್ದರು.

ಹುಣಸೂರು ವಿಧಾನಸಭಾ ವಿಧಾನಸಭಾ ಕ್ಷೇತ್ರದಲ್ಲಿ 2019ರಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ, ಕಾಂಗ್ರೆಸ್ ಅಭ್ಯರ್ಥಿ ಎಚ್.ಪಿ.ಮಂಜುನಾಥ್ ಎದುರು ಸೋತಿದ್ದರು. ಬಳಿಕ ಅವರನ್ನು ಎಂಎಲ್ಸಿ ಮಾಡಲಾಗಿತ್ತು. ಬಿಜೆಪಿಯೊಂದಿಗೆ ಮೊದಲಿನಿಂದಲೂ ಸೈದ್ಧಾಂತಿಕ ಭಿನ್ನಾಭಿಪ್ರಾಯ ವ್ಯಕ್ತಪಡಿಸುತ್ತಾ ಬಂದಿರುವ, ಹಳ್ಳಿಹಳ್ಳಿ ಖ್ಯಾತಿಯ ವಿಶ್ವನಾಥ್, ಬಿಜೆಪಿ ನಾಯಕರ ನಿಲುವುಗಳನ್ನು ಕಟುವಾಗಿ ಟೀಕಿಸುತ್ತಾ ಬಂದಿದ್ದಾರೆ. ಅಂತಿಮವಾಗಿ ಮತ್ತೆ ಕಾಂಗ್ರೆಸ್ಸಿಗೆ ಮರಳಿದ್ದು, ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...