Homeಮುಖಪುಟಬಿಜೆಪಿ ಬಡ ರಾಜ್ಯಗಳ ಬೆನ್ನೆಲುಬು ಮುರಿದು; ನಿಂಬೆಯಂತೆ ಹಿಂಡಿದೆ: ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್

ಬಿಜೆಪಿ ಬಡ ರಾಜ್ಯಗಳ ಬೆನ್ನೆಲುಬು ಮುರಿದು; ನಿಂಬೆಯಂತೆ ಹಿಂಡಿದೆ: ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್

- Advertisement -
- Advertisement -

ಬಿಜೆಪಿ ಪಕ್ಷವು ಸುಮಾರು ಎರಡು ದಶಕಗಳಿಂದ ರಾಜ್ಯವನ್ನು “ನಿಂಬೆಹಣ್ಣಿನಂತೆ ಹಿಸುಕಿ” ಮತ್ತು ಬಡ ರಾಜ್ಯಗಳ ಬೆನ್ನೆಲುಬುಗಳನ್ನು “ಮುರಿದುಹಾಕಿದೆ” ಎಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಶನಿವಾರ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಶಾಸಕರು, ಸಂಸದರನ್ನು ಬೇಟೆಯಾಡಿ  ಸರ್ಕಾರಗಳನ್ನು ಉರುಳಿಸಿ “ಡಬಲ್ ಎಂಜಿನ್ ಸರ್ಕಾರಗಳನ್ನು” ರಚಿಸುತ್ತಾ, ದೇಶದ ಒಕ್ಕೂಟ ರಚನೆಯನ್ನು “ನಾಶಗೊಳಿಸುತ್ತಿದೆ” ಎಂದು ಅವರು ಆರೋಪಿಸಿದ್ದಾರೆ. ಬಿಜೆಪಿ ಬಡ ರಾಜ್ಯಗಳ

“ಬಿಜೆಪಿ ಕಳೆದ 20 ವರ್ಷಗಳಲ್ಲಿ ಜಾರ್ಖಂಡ್ ಅನ್ನು ನಿಂಬೆಹಣ್ಣಿನಂತೆ ಹಿಂಡಿದೆ. ಆದರೆ, ಈಗಲಾದರೂ ಅದು ಕೊನೆಗೊಳ್ಳಬೇಕು. ನಾವು ಹಸುವಿಗೆ ಆಹಾರವನ್ನು ನೀಡುತ್ತೇವೆ, ಆದರೆ ಅದರಿಂದ ಹಾಲು ಪಡೆಯುವುದು ಅವರು. ಜಾರ್ಖಂಡ್‌ನ ಸಂಪತ್ತನ್ನು ಅವರು ಲೂಟಿ ಮಾಡುತ್ತಿದ್ದಾರೆ. ಜಾರ್ಖಂಡ್ ಖನಿಜಗಳಿಂದ ಸಮೃದ್ಧವಾಗಿದ್ದರೂ, ಸಂಪನ್ಮೂಲಗಳು ಇದ್ದರೂ ರಾಜ್ಯವು ಅತ್ಯಂತ ಬಡ ರಾಜ್ಯಗಳಲ್ಲಿ ಒಂದಾಗಿದೆ. ಇದು ಒಂದು ವಿರೋಧಾಭಾಸವಾಗಿದ್ದು, ಇದಕ್ಕೆ ಇನ್ನು ಮುಂದೆ ಅನುಮತಿ ನೀಡಬಾರದು” ಎಂದು ಜಾರ್ಖಂಡ್ ಮುಖ್ಯಮಂತ್ರಿ ಸೊರೆನ್ ಪಿಟಿಐಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಕಲ್ಲಿದ್ದಲು, ಕಬ್ಬಿಣದ ಅದಿರು, ಬಾಕ್ಸೈಟ್, ಡಾಲಮೈಟ್‌ಗಳಂತಹ ಸಂಪನ್ಮೂಲಗಳು ನಮ್ಮಲ್ಲಿ ಹೇರಳವಾಗಿದೆ. ಆದರೆ ಜಾರ್ಖಂಡ್‌ನಂತಹ ರಾಜ್ಯಗಳ ಬೆನ್ನೆಲುಬುಗಳನ್ನು ಮುರಿದ ಕೇಂದ್ರ ಸರ್ಕಾರ, ಜಿಎಸ್‌ಟಿ ಮೂಲಕ ನಮ್ಮ ಆದಾಯ ಸಂಗ್ರಹಕ್ಕೆ ಅಡ್ಡಿ ಮಾಡಿದೆ. ಅವರು ನಮ್ಮ ಹಣಕಾಸಿನ ಅಗತ್ಯಗಳನ್ನು ಪರಿಹರಿಸಲು ಕೂಡಾ ಏನೂ ಮಾಡಿಲ್ಲ” ಅವರು ಆರೋಪಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪದೇ ಪದೇ ಪತ್ರ ಬರೆದರೂ ರಾಜ್ಯಕ್ಕೆ ನೀಡಬೇಕಿರುವ 1.36 ಲಕ್ಷ ಕೋಟಿ ಕಲ್ಲಿದ್ದಲು ಬಾಕಿಯನ್ನು ಇನ್ನೂ ಪಾವತಿಸಿಲ್ಲ ಎಂದು ಸೋರೆನ್ ಹೇಳಿದ್ದಾರೆ. ಬಿಜೆಪಿಯು ವಿಭಜನೆಯ ರಾಜಕೀಯ, ಹಿಂದೂ-ಮುಸ್ಲಿಂ ಧ್ರುವೀಕರಣ ಮತ್ತು ಕೋಮು ದ್ವೇಷದ ಅಜೆಂಡಾದಲ್ಲಿ ಸ್ಥಿರವಾಗಿ ಕಾರ್ಯನಿರ್ವಹಿಸುತ್ತಿದೆ” ಎಂದು ಅವರು ಆರೋಪಿಸಿದ್ದಾರೆ. ಆರೋಗ್ಯಕರ ರಾಜಕೀಯ ಸ್ಪರ್ಧೆಯನ್ನು ಅಳಿಸಿಹಾಕುತ್ತಿರುವುದು ಈ ದೇಶದ ದೌರ್ಭಾಗ್ಯ ಎಂದು ಅವರು ಪ್ರತಿಪಾದಿಸಿದ್ದಾರೆ.

“ಅವರಿಗೆ ಅಭಿವೃದ್ಧಿ, ಉದ್ಯೋಗ ಅಥವಾ ಆರ್ಥಿಕ ಸಮೃದ್ಧಿಯ ಯಾವುದೇ ಅಜೆಂಡಾವಿಲ್ಲ. ಅವರಿಗೆ ತಿಳಿದಿರುವ ಏಕೈಕ ಅಜೆಂಡಾ ವಿಭಜನೆಯಾಗಿದೆ. ಅವರು ವಿಭಜಕ ರಾಜಕೀಯದ ಬಗ್ಗೆ ಮಾತನಾಡುತ್ತಾ, ಕೋಮು ದ್ವೇಷವನ್ನು ಬೆಳೆಸುತ್ತಾರೆ. ಹಿಂದೂ-ಮುಸ್ಲಿಂ ಧ್ರುವೀಕರಣವನ್ನು ಉತ್ತೇಜಿಸುತ್ತಾರೆ” ಅವರು ಆರೋಪಿಸಿದ್ದಾರೆ. ಬಿಜೆಪಿ ಬಡ ರಾಜ್ಯಗಳ

“ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ, ಬುಡಕಟ್ಟು ಮುಖ್ಯಮಂತ್ರಿಯೊಬ್ಬ ಐದು ವರ್ಷಗಳ ಅಧಿಕಾರಾವಧಿಯನ್ನು ಪೂರ್ಣಗೊಳಿಸುವುದು ಜೀರ್ಣಿಸಿಕೊಳ್ಳಲು ಸಾಧ್ಯವಾಗಲಿಲ್ಲ” ಎಂದು ಸೊರೆನ್ ಪ್ರತಿಪಾದಿಸಿದ್ದು, ಅದಕ್ಕಾಗಿಯೆ ಅವರ ಸರ್ಕಾರವನ್ನು ದುರ್ಬಲಗೊಳಿಸಲು ಸಮಯಕ್ಕಿಂತ ಮುಂಚಿತವಾಗಿ ಚುನಾವಣೆಗಳನ್ನು ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಟ್ರಂಪ್ ಗೆಲುವಿನ ಬೆನ್ನಲ್ಲೇ ಬೈಡೆನ್ ಪೌರತ್ವ ನೀತಿ ರದ್ದು : ವಲಸಿಗರಿಗೆ ಆತಂಕ

ಟ್ರಂಪ್ ಗೆಲುವಿನ ಬೆನ್ನಲ್ಲೇ ಬೈಡೆನ್ ಪೌರತ್ವ ನೀತಿ ರದ್ದು : ವಲಸಿಗರಿಗೆ ಆತಂಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...