Homeಮುಖಪುಟಬಿಜೆಪಿ ಬಡ ರಾಜ್ಯಗಳ ಬೆನ್ನೆಲುಬು ಮುರಿದು; ನಿಂಬೆಯಂತೆ ಹಿಂಡಿದೆ: ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್

ಬಿಜೆಪಿ ಬಡ ರಾಜ್ಯಗಳ ಬೆನ್ನೆಲುಬು ಮುರಿದು; ನಿಂಬೆಯಂತೆ ಹಿಂಡಿದೆ: ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್

- Advertisement -
- Advertisement -

ಬಿಜೆಪಿ ಪಕ್ಷವು ಸುಮಾರು ಎರಡು ದಶಕಗಳಿಂದ ರಾಜ್ಯವನ್ನು “ನಿಂಬೆಹಣ್ಣಿನಂತೆ ಹಿಸುಕಿ” ಮತ್ತು ಬಡ ರಾಜ್ಯಗಳ ಬೆನ್ನೆಲುಬುಗಳನ್ನು “ಮುರಿದುಹಾಕಿದೆ” ಎಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಶನಿವಾರ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಶಾಸಕರು, ಸಂಸದರನ್ನು ಬೇಟೆಯಾಡಿ  ಸರ್ಕಾರಗಳನ್ನು ಉರುಳಿಸಿ “ಡಬಲ್ ಎಂಜಿನ್ ಸರ್ಕಾರಗಳನ್ನು” ರಚಿಸುತ್ತಾ, ದೇಶದ ಒಕ್ಕೂಟ ರಚನೆಯನ್ನು “ನಾಶಗೊಳಿಸುತ್ತಿದೆ” ಎಂದು ಅವರು ಆರೋಪಿಸಿದ್ದಾರೆ. ಬಿಜೆಪಿ ಬಡ ರಾಜ್ಯಗಳ

“ಬಿಜೆಪಿ ಕಳೆದ 20 ವರ್ಷಗಳಲ್ಲಿ ಜಾರ್ಖಂಡ್ ಅನ್ನು ನಿಂಬೆಹಣ್ಣಿನಂತೆ ಹಿಂಡಿದೆ. ಆದರೆ, ಈಗಲಾದರೂ ಅದು ಕೊನೆಗೊಳ್ಳಬೇಕು. ನಾವು ಹಸುವಿಗೆ ಆಹಾರವನ್ನು ನೀಡುತ್ತೇವೆ, ಆದರೆ ಅದರಿಂದ ಹಾಲು ಪಡೆಯುವುದು ಅವರು. ಜಾರ್ಖಂಡ್‌ನ ಸಂಪತ್ತನ್ನು ಅವರು ಲೂಟಿ ಮಾಡುತ್ತಿದ್ದಾರೆ. ಜಾರ್ಖಂಡ್ ಖನಿಜಗಳಿಂದ ಸಮೃದ್ಧವಾಗಿದ್ದರೂ, ಸಂಪನ್ಮೂಲಗಳು ಇದ್ದರೂ ರಾಜ್ಯವು ಅತ್ಯಂತ ಬಡ ರಾಜ್ಯಗಳಲ್ಲಿ ಒಂದಾಗಿದೆ. ಇದು ಒಂದು ವಿರೋಧಾಭಾಸವಾಗಿದ್ದು, ಇದಕ್ಕೆ ಇನ್ನು ಮುಂದೆ ಅನುಮತಿ ನೀಡಬಾರದು” ಎಂದು ಜಾರ್ಖಂಡ್ ಮುಖ್ಯಮಂತ್ರಿ ಸೊರೆನ್ ಪಿಟಿಐಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಕಲ್ಲಿದ್ದಲು, ಕಬ್ಬಿಣದ ಅದಿರು, ಬಾಕ್ಸೈಟ್, ಡಾಲಮೈಟ್‌ಗಳಂತಹ ಸಂಪನ್ಮೂಲಗಳು ನಮ್ಮಲ್ಲಿ ಹೇರಳವಾಗಿದೆ. ಆದರೆ ಜಾರ್ಖಂಡ್‌ನಂತಹ ರಾಜ್ಯಗಳ ಬೆನ್ನೆಲುಬುಗಳನ್ನು ಮುರಿದ ಕೇಂದ್ರ ಸರ್ಕಾರ, ಜಿಎಸ್‌ಟಿ ಮೂಲಕ ನಮ್ಮ ಆದಾಯ ಸಂಗ್ರಹಕ್ಕೆ ಅಡ್ಡಿ ಮಾಡಿದೆ. ಅವರು ನಮ್ಮ ಹಣಕಾಸಿನ ಅಗತ್ಯಗಳನ್ನು ಪರಿಹರಿಸಲು ಕೂಡಾ ಏನೂ ಮಾಡಿಲ್ಲ” ಅವರು ಆರೋಪಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪದೇ ಪದೇ ಪತ್ರ ಬರೆದರೂ ರಾಜ್ಯಕ್ಕೆ ನೀಡಬೇಕಿರುವ 1.36 ಲಕ್ಷ ಕೋಟಿ ಕಲ್ಲಿದ್ದಲು ಬಾಕಿಯನ್ನು ಇನ್ನೂ ಪಾವತಿಸಿಲ್ಲ ಎಂದು ಸೋರೆನ್ ಹೇಳಿದ್ದಾರೆ. ಬಿಜೆಪಿಯು ವಿಭಜನೆಯ ರಾಜಕೀಯ, ಹಿಂದೂ-ಮುಸ್ಲಿಂ ಧ್ರುವೀಕರಣ ಮತ್ತು ಕೋಮು ದ್ವೇಷದ ಅಜೆಂಡಾದಲ್ಲಿ ಸ್ಥಿರವಾಗಿ ಕಾರ್ಯನಿರ್ವಹಿಸುತ್ತಿದೆ” ಎಂದು ಅವರು ಆರೋಪಿಸಿದ್ದಾರೆ. ಆರೋಗ್ಯಕರ ರಾಜಕೀಯ ಸ್ಪರ್ಧೆಯನ್ನು ಅಳಿಸಿಹಾಕುತ್ತಿರುವುದು ಈ ದೇಶದ ದೌರ್ಭಾಗ್ಯ ಎಂದು ಅವರು ಪ್ರತಿಪಾದಿಸಿದ್ದಾರೆ.

“ಅವರಿಗೆ ಅಭಿವೃದ್ಧಿ, ಉದ್ಯೋಗ ಅಥವಾ ಆರ್ಥಿಕ ಸಮೃದ್ಧಿಯ ಯಾವುದೇ ಅಜೆಂಡಾವಿಲ್ಲ. ಅವರಿಗೆ ತಿಳಿದಿರುವ ಏಕೈಕ ಅಜೆಂಡಾ ವಿಭಜನೆಯಾಗಿದೆ. ಅವರು ವಿಭಜಕ ರಾಜಕೀಯದ ಬಗ್ಗೆ ಮಾತನಾಡುತ್ತಾ, ಕೋಮು ದ್ವೇಷವನ್ನು ಬೆಳೆಸುತ್ತಾರೆ. ಹಿಂದೂ-ಮುಸ್ಲಿಂ ಧ್ರುವೀಕರಣವನ್ನು ಉತ್ತೇಜಿಸುತ್ತಾರೆ” ಅವರು ಆರೋಪಿಸಿದ್ದಾರೆ. ಬಿಜೆಪಿ ಬಡ ರಾಜ್ಯಗಳ

“ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ, ಬುಡಕಟ್ಟು ಮುಖ್ಯಮಂತ್ರಿಯೊಬ್ಬ ಐದು ವರ್ಷಗಳ ಅಧಿಕಾರಾವಧಿಯನ್ನು ಪೂರ್ಣಗೊಳಿಸುವುದು ಜೀರ್ಣಿಸಿಕೊಳ್ಳಲು ಸಾಧ್ಯವಾಗಲಿಲ್ಲ” ಎಂದು ಸೊರೆನ್ ಪ್ರತಿಪಾದಿಸಿದ್ದು, ಅದಕ್ಕಾಗಿಯೆ ಅವರ ಸರ್ಕಾರವನ್ನು ದುರ್ಬಲಗೊಳಿಸಲು ಸಮಯಕ್ಕಿಂತ ಮುಂಚಿತವಾಗಿ ಚುನಾವಣೆಗಳನ್ನು ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಟ್ರಂಪ್ ಗೆಲುವಿನ ಬೆನ್ನಲ್ಲೇ ಬೈಡೆನ್ ಪೌರತ್ವ ನೀತಿ ರದ್ದು : ವಲಸಿಗರಿಗೆ ಆತಂಕ

ಟ್ರಂಪ್ ಗೆಲುವಿನ ಬೆನ್ನಲ್ಲೇ ಬೈಡೆನ್ ಪೌರತ್ವ ನೀತಿ ರದ್ದು : ವಲಸಿಗರಿಗೆ ಆತಂಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...