Homeಮುಖಪುಟಬಿಜೆಪಿ ಬಡ ರಾಜ್ಯಗಳ ಬೆನ್ನೆಲುಬು ಮುರಿದು; ನಿಂಬೆಯಂತೆ ಹಿಂಡಿದೆ: ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್

ಬಿಜೆಪಿ ಬಡ ರಾಜ್ಯಗಳ ಬೆನ್ನೆಲುಬು ಮುರಿದು; ನಿಂಬೆಯಂತೆ ಹಿಂಡಿದೆ: ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್

- Advertisement -
- Advertisement -

ಬಿಜೆಪಿ ಪಕ್ಷವು ಸುಮಾರು ಎರಡು ದಶಕಗಳಿಂದ ರಾಜ್ಯವನ್ನು “ನಿಂಬೆಹಣ್ಣಿನಂತೆ ಹಿಸುಕಿ” ಮತ್ತು ಬಡ ರಾಜ್ಯಗಳ ಬೆನ್ನೆಲುಬುಗಳನ್ನು “ಮುರಿದುಹಾಕಿದೆ” ಎಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಶನಿವಾರ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಶಾಸಕರು, ಸಂಸದರನ್ನು ಬೇಟೆಯಾಡಿ  ಸರ್ಕಾರಗಳನ್ನು ಉರುಳಿಸಿ “ಡಬಲ್ ಎಂಜಿನ್ ಸರ್ಕಾರಗಳನ್ನು” ರಚಿಸುತ್ತಾ, ದೇಶದ ಒಕ್ಕೂಟ ರಚನೆಯನ್ನು “ನಾಶಗೊಳಿಸುತ್ತಿದೆ” ಎಂದು ಅವರು ಆರೋಪಿಸಿದ್ದಾರೆ. ಬಿಜೆಪಿ ಬಡ ರಾಜ್ಯಗಳ

“ಬಿಜೆಪಿ ಕಳೆದ 20 ವರ್ಷಗಳಲ್ಲಿ ಜಾರ್ಖಂಡ್ ಅನ್ನು ನಿಂಬೆಹಣ್ಣಿನಂತೆ ಹಿಂಡಿದೆ. ಆದರೆ, ಈಗಲಾದರೂ ಅದು ಕೊನೆಗೊಳ್ಳಬೇಕು. ನಾವು ಹಸುವಿಗೆ ಆಹಾರವನ್ನು ನೀಡುತ್ತೇವೆ, ಆದರೆ ಅದರಿಂದ ಹಾಲು ಪಡೆಯುವುದು ಅವರು. ಜಾರ್ಖಂಡ್‌ನ ಸಂಪತ್ತನ್ನು ಅವರು ಲೂಟಿ ಮಾಡುತ್ತಿದ್ದಾರೆ. ಜಾರ್ಖಂಡ್ ಖನಿಜಗಳಿಂದ ಸಮೃದ್ಧವಾಗಿದ್ದರೂ, ಸಂಪನ್ಮೂಲಗಳು ಇದ್ದರೂ ರಾಜ್ಯವು ಅತ್ಯಂತ ಬಡ ರಾಜ್ಯಗಳಲ್ಲಿ ಒಂದಾಗಿದೆ. ಇದು ಒಂದು ವಿರೋಧಾಭಾಸವಾಗಿದ್ದು, ಇದಕ್ಕೆ ಇನ್ನು ಮುಂದೆ ಅನುಮತಿ ನೀಡಬಾರದು” ಎಂದು ಜಾರ್ಖಂಡ್ ಮುಖ್ಯಮಂತ್ರಿ ಸೊರೆನ್ ಪಿಟಿಐಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಕಲ್ಲಿದ್ದಲು, ಕಬ್ಬಿಣದ ಅದಿರು, ಬಾಕ್ಸೈಟ್, ಡಾಲಮೈಟ್‌ಗಳಂತಹ ಸಂಪನ್ಮೂಲಗಳು ನಮ್ಮಲ್ಲಿ ಹೇರಳವಾಗಿದೆ. ಆದರೆ ಜಾರ್ಖಂಡ್‌ನಂತಹ ರಾಜ್ಯಗಳ ಬೆನ್ನೆಲುಬುಗಳನ್ನು ಮುರಿದ ಕೇಂದ್ರ ಸರ್ಕಾರ, ಜಿಎಸ್‌ಟಿ ಮೂಲಕ ನಮ್ಮ ಆದಾಯ ಸಂಗ್ರಹಕ್ಕೆ ಅಡ್ಡಿ ಮಾಡಿದೆ. ಅವರು ನಮ್ಮ ಹಣಕಾಸಿನ ಅಗತ್ಯಗಳನ್ನು ಪರಿಹರಿಸಲು ಕೂಡಾ ಏನೂ ಮಾಡಿಲ್ಲ” ಅವರು ಆರೋಪಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪದೇ ಪದೇ ಪತ್ರ ಬರೆದರೂ ರಾಜ್ಯಕ್ಕೆ ನೀಡಬೇಕಿರುವ 1.36 ಲಕ್ಷ ಕೋಟಿ ಕಲ್ಲಿದ್ದಲು ಬಾಕಿಯನ್ನು ಇನ್ನೂ ಪಾವತಿಸಿಲ್ಲ ಎಂದು ಸೋರೆನ್ ಹೇಳಿದ್ದಾರೆ. ಬಿಜೆಪಿಯು ವಿಭಜನೆಯ ರಾಜಕೀಯ, ಹಿಂದೂ-ಮುಸ್ಲಿಂ ಧ್ರುವೀಕರಣ ಮತ್ತು ಕೋಮು ದ್ವೇಷದ ಅಜೆಂಡಾದಲ್ಲಿ ಸ್ಥಿರವಾಗಿ ಕಾರ್ಯನಿರ್ವಹಿಸುತ್ತಿದೆ” ಎಂದು ಅವರು ಆರೋಪಿಸಿದ್ದಾರೆ. ಆರೋಗ್ಯಕರ ರಾಜಕೀಯ ಸ್ಪರ್ಧೆಯನ್ನು ಅಳಿಸಿಹಾಕುತ್ತಿರುವುದು ಈ ದೇಶದ ದೌರ್ಭಾಗ್ಯ ಎಂದು ಅವರು ಪ್ರತಿಪಾದಿಸಿದ್ದಾರೆ.

“ಅವರಿಗೆ ಅಭಿವೃದ್ಧಿ, ಉದ್ಯೋಗ ಅಥವಾ ಆರ್ಥಿಕ ಸಮೃದ್ಧಿಯ ಯಾವುದೇ ಅಜೆಂಡಾವಿಲ್ಲ. ಅವರಿಗೆ ತಿಳಿದಿರುವ ಏಕೈಕ ಅಜೆಂಡಾ ವಿಭಜನೆಯಾಗಿದೆ. ಅವರು ವಿಭಜಕ ರಾಜಕೀಯದ ಬಗ್ಗೆ ಮಾತನಾಡುತ್ತಾ, ಕೋಮು ದ್ವೇಷವನ್ನು ಬೆಳೆಸುತ್ತಾರೆ. ಹಿಂದೂ-ಮುಸ್ಲಿಂ ಧ್ರುವೀಕರಣವನ್ನು ಉತ್ತೇಜಿಸುತ್ತಾರೆ” ಅವರು ಆರೋಪಿಸಿದ್ದಾರೆ. ಬಿಜೆಪಿ ಬಡ ರಾಜ್ಯಗಳ

“ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ, ಬುಡಕಟ್ಟು ಮುಖ್ಯಮಂತ್ರಿಯೊಬ್ಬ ಐದು ವರ್ಷಗಳ ಅಧಿಕಾರಾವಧಿಯನ್ನು ಪೂರ್ಣಗೊಳಿಸುವುದು ಜೀರ್ಣಿಸಿಕೊಳ್ಳಲು ಸಾಧ್ಯವಾಗಲಿಲ್ಲ” ಎಂದು ಸೊರೆನ್ ಪ್ರತಿಪಾದಿಸಿದ್ದು, ಅದಕ್ಕಾಗಿಯೆ ಅವರ ಸರ್ಕಾರವನ್ನು ದುರ್ಬಲಗೊಳಿಸಲು ಸಮಯಕ್ಕಿಂತ ಮುಂಚಿತವಾಗಿ ಚುನಾವಣೆಗಳನ್ನು ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಟ್ರಂಪ್ ಗೆಲುವಿನ ಬೆನ್ನಲ್ಲೇ ಬೈಡೆನ್ ಪೌರತ್ವ ನೀತಿ ರದ್ದು : ವಲಸಿಗರಿಗೆ ಆತಂಕ

ಟ್ರಂಪ್ ಗೆಲುವಿನ ಬೆನ್ನಲ್ಲೇ ಬೈಡೆನ್ ಪೌರತ್ವ ನೀತಿ ರದ್ದು : ವಲಸಿಗರಿಗೆ ಆತಂಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...