Homeಕರ್ನಾಟಕಕಾಂಗ್ರೆಸ್ ವಿರುದ್ಧ ಅವಹೇಳನಾಕಾರಿ ಪೋಸ್ಟ್‌ ಮಾಡಿದ ಬಿಜೆಪಿ; ಕ್ರಮ ತೆಗೆದುಕೊಳ್ಳುತ್ತಾ ಸಿದ್ದರಾಮಯ್ಯ ಸರ್ಕಾರ?

ಕಾಂಗ್ರೆಸ್ ವಿರುದ್ಧ ಅವಹೇಳನಾಕಾರಿ ಪೋಸ್ಟ್‌ ಮಾಡಿದ ಬಿಜೆಪಿ; ಕ್ರಮ ತೆಗೆದುಕೊಳ್ಳುತ್ತಾ ಸಿದ್ದರಾಮಯ್ಯ ಸರ್ಕಾರ?

- Advertisement -
- Advertisement -

ರಾಜ್ಯಸಭಾ ಚುನವಣಾ ಫಲಿತಾಂಶದ ನಂತರ ವಿಧಾನಸೌಧದಲ್ಲಿ ನಡೆದ ಸಂಭ್ರಮಾಚರಣೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ನಾಸಿರ್ ಹುಸೇನ್ ಪರ ಅವರ ಅಭಿಮಾನಿಗಳು ಘೋಷಣೆ ಕೂಗಿದ್ದರು. ‘ನಾಸಿರ್ ಸಾಬ್ ಝಿಂದಾಬಾದ್’ ಎಂದು ಕೂಗಿದ್ದನ್ನು, ಕೆಲ ಗೋದಿ ಮೀಡಿಯಾಗಳು ಮತ್ತು ಬಿಜೆಪಿಗರು ‘ಪಾಕಿಸ್ತಾನ್ ಝಿಂದಾಬಾದ್..’ ಎಂದು ಅಪಪ್ರಚಾರ ಮಾಡಿದ್ದಾರೆ. ಈ ವಿಚಾರದಲ್ಲಿ ಬಿಜೆಪಿ ಸುಳ್ಳು ಹರಡಿದ್ದೂ ಅಲ್ಲದೆ, ‘ಭಾರತದಲ್ಲಿ ಪಾ”ಕೈ”ಸ್ತಾನವನ್ನು ಬೆಂಬಲಿಸುವವರ “ಕೈ”ಗಳನ್ನು ಹೆಡೆಮುರಿ ಕಟ್ಟಿ’ ಎಂದು ಎಕ್ಸ್‌ನಲ್ಲಿ ಕಾಂಗ್ರೆಸ್ ಪಕ್ಷದ ಚಿನ್ಹೆಯನ್ನು ವಿಕೃತವಾಗಿ ಎಡಿಟ್ ಮಾಡಿ ಪೋಸ್ಟ್‌ ಮಾಡಿದೆ.

ಈ ಪೋಸ್ಟ್‌ ಡಿಲೀಟ್ ಮಾಡುವಂತೆ ಕಾಂಗ್ರೆಸ್‌ ಕೊಟ್ಟಿರುವ ಎಚ್ಚರಿಕೆಗೆ ಬಿಜೆಪಿ ಸೊಪ್ಪು ಹಾಕಿಲ್ಲ, ‘ಅಯೋಗ್ಯ ಬಿಜೆಪಿ ಈ ಅವಹೇಳನಕಾರಿ ಪೋಸ್ಟ್ ಡಿಲೀಟ್ ಮಾಡದಿದ್ದರೆ ಕಾಂಗ್ರೆಸ್ ಪಕ್ಷ ಕಠಿಣ ಕಾನೂನು ಕ್ರಮ ಜರುಗಿಸುವುದು ನಿಶ್ಚಿತ’ ಎಂದು ಕರ್ನಾಟಕ ಕಾಂಗ್ರೆಸ್‌ ಸಾಮಾಜಿಕ ಜಾಲತಾಣದಲ್ಲಿ ಎಚ್ಚರಿಕೆ ನೀಡಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ, ‘ನೀವು ದೂರು ದಾಖಲಿಸುವುದು ಪಾಕಿಸ್ಥಾನದಲ್ಲೋ ಅಥವಾ ಭಾರತದಲ್ಲೋ?’ ಎಂದು ಹುಂಬತನ ತೋರಿದೆ.

ಕಾಂಗ್ರೆಸ್‌ ಪಕ್ಷವನ್ನು ತೀವ್ರವಾಗಿ ಟೀಕಿಸಿರುವ ಬಿಜೆಪಿ, ‘ಹೇಡಿ ರಣಹೇಡಿ ಕಾಂಗ್ರೆಸ್ ಸರ್ಕಾರ! ಪಾಕಿಸ್ಥಾನ ಜಿಂದಾಬಾದ್‌ ಎಂದು ವಿಧಾನಸೌಧದಲ್ಲೇ ಘೋಷಣೆ ಕೂಗಿದ ದೇಶ ದ್ರೋಹಿಗಳ ಹೆಡೆಮುರಿ ಕಟ್ಟುವುದು ಬಿಟ್ಟು ಅವರನ್ನು ರಕ್ಷಣೆ ಮಾಡುತ್ತಿದೆ ಮಜಾವಾದಿ ಸಿದ್ದರಾಮಯ್ಯ ಸರ್ಕಾರ. ತಗಡು ಸರ್ಕಾರದ ಬೇಜವಾಬ್ದಾರಿ, ನಿರ್ಲಕ್ಷ್ಯ, ಓಲೈಕೆ, ದೇಶ ದ್ರೋಹಿಗಳ ರಕ್ಷಣೆ ಮಾಡುತ್ತಿರುವುದನ್ನು ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರೆ, ತುಘಲಕ್‌ ಸರ್ಕಾರ ಲಾಠಿ ಚಾರ್ಜ್‌ ಮಾಡಿ ಹತ್ತಿಕ್ಕುವ ಕೆಲಸ ಮಾಡಿದೆ. ದೇಶ ದ್ರೋಹಿಗಳಿಗೆ ಬಿರಿಯಾನಿ ಹಾಕಿ ದೇಶ ಪ್ರೇಮಿಗಳಿಗೆ ಲಾಠಿ ಏಟು ಕೊಡುವ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ! ಸರ್ಕಾರ ಇದಕ್ಕೆ ಪ್ರತಿಫಲ ಅನುಭವಿಸುವುದು ನಿಶ್ಚಿತ’ ಎಂದು ಅವಹೇಳನಕಾರಿಯಾಗಿ ಮಾತನಾಡಿದೆ.

‘ಘಟನೆ ನಡೆದ ಸ್ಥಳದಲ್ಲಿ ಹಾಜರಿದ್ದ ಹಲವು ಪತ್ರಕರ್ತ ಮಿತ್ರರು ಅಲ್ಲಿ ನಡೆದ ಸತ್ಯವನ್ನು ಹೊರಹಾಕಿದ್ದಾರೆ, ಅಲ್ಲಿ ನಸೀರ್ ಸಾಬ್ ಜಿಂದಾಬಾದ್ ಎಂದಿದ್ದಾರೆಯೇ ಹೊರತು ಪಾಕಿಸ್ತಾನ್ ಜಿಂದಾಬಾದ್ ಎಂದಿಲ್ಲ ಎಂಬ ಸತ್ಯವನ್ನು ಪ್ರತ್ಯಕ್ಷದರ್ಶಿಯಾಗಿ ಜಗತ್ತಿಗೆ ತಿಳಿಸಿದ್ದಾರೆ. ಟೂಲ್ ಕಿಟ್ ಬಿಜೆಪಿ ಈ ಪತ್ರಕರ್ತರ ಮಾತುಗಳಿಗೆ ಕಣ್ಣು ಕಿವಿ ಮುಚ್ಚಿಕೊಂಡಿರುವುದೇಕೆ’ ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.

‘ಬಿಜೆಪಿಗೆ ಸದಾ ಪಾಕಿಸ್ತಾನದ ಪ್ರೀತಿ, ಪ್ರೇಮ ಉಕ್ಕಿ ಹರಿಯುತ್ತದೆ, ಸದಾ ಪಾಕಿಸ್ತಾನದ ಜಪ ಮಾಡುತ್ತಿರುತ್ತದೆ ಎಂಬುದಕ್ಕೆ ಈ ವಿಡಿಯೋ ಸಾಕ್ಷಿ. ಇಂದು ನಸೀರ್ ಸಾಬ್ ಜಿಂದಾಬಾದ್ ಎಂದಿದ್ದನ್ನು ತಿರುಚಿ ಬೊಬ್ಬೆ ಹೊಡೆಯುತ್ತಿರುವ ಬಿಜೆಪಿ ತನ್ನ ಆಡಳಿತದ ಅವಧಿಯಲ್ಲಿ ಬಿಜೆಪಿ ಕಾರ್ಯಕರ್ತರು ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದ್ದರು, ಅವರನ್ನು ಗಲ್ಲಿಗೆ ಹಾಕಿಲ್ಲವೇಕೆ? ಅವರ ಮೇಲೆ ಪ್ರಕರಣ ದಾಖಲಿಸಿಲ್ಲ ಏಕೆ? ಪಾಕಿಸ್ತಾನಕ್ಕೆ ಹೋಗಿ ಬಿರಿಯಾನಿ ತಿಂದು ಬಂದವರನ್ನು ಏಕಮೇವ ನಾಯಕನೆಂದು ಕೊಂಡಾಡುವ ಬಿಜೆಪಿಗೆ ಕಾಂಗ್ರೆಸ್ ಬಗ್ಗೆ ಮಾತಾಡುವ ನೈತಿಕತೆ ಇಲ್ಲ’ ಎಂದು ಕಾಂಗ್ರೆಸ್‌ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ.

ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳ ಮುಂದೆ ಹೇಳಿಕೆ ಕೊಡುವುದನ್ನು ಬಿಟ್ಟು, ‘ಪಾಕಿಸ್ತಾನ ಝಿಂದಾಬಾದ್..’ ವಿಚಾರದಲ್ಲಿ ಸುಳ್ಳು ಹರಡುತ್ತಿರುವವರ ವಿರುದ್ಧ ಕಾಂಗ್ರೆಸ್‌ ಈವರೆಗೆ ಕ್ರಮ ತೆಗೆದುಕೊಂಡಿಲ್ಲ. ಹಲವು ಮಾಧ್ಯಮಗಳು ಫ್ಯಾಕ್ಟ್‌ ಚೆಕ್ ಮಾಡಿದ್ದು, ಪ್ರತ್ಯಕ್ಷದರ್ಶಿಗಳು ಪಾಕ್ ಪರ ಘೋಷಣೆ ಕೂಗಿಲ್ಲ ಎಂದು ಹೇಳುತ್ತಿದ್ದು, ಈ ವಿಚಾರದಲ್ಲಿ ಹಾದಿ ತಪ್ಪಿಸುತ್ತಿರುವವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಕಾಂಗ್ರೆಸ್ ಸರ್ಕಾರ ಮೀನಾಮೇಷ ಎಣಿಸುತ್ತಿದೆ.

ಇದನ್ನೂ ಓದಿ; ‘ಮಾನವತಾವಾದಿ’ ಸಂವಿಧಾನವನ್ನು ‘ಮನುವಾದಿ’ ಮಾಡಲು ಹೊರಟಿದ್ದಾರೆ: ಪ್ರೊ. ನರೇಂದ್ರ ನಾಯಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...